Raj B Shetty
ರಾಜ್ ಬಿ. ಶೆಟ್ಟಿ ಅವರು ಕನ್ನಡದ ಖ್ಯಾತ ನಟ, ನಿರ್ಮಾಪಕ, ಸಂಭಾಷಣಾಕಾರ, ಚಿತ್ರಕಥೆ ಬರಹಗಾರ ಹಾಗೂ ನಿರ್ದೇಶಕ. ಹೀರೋ ಎಂದರೆ ಕಟ್ಟುಮಸ್ತಾದ ದೇಹ ಹೊಂದಿರಬೇಕು, ತಲೆಯ ತುಂಬ ಕೇಶ ರಾಶಿ ಇರಬೇಕು ಎಂಬ ಕಲ್ಪನೆಗೆ ಅವರು ವಿರುದ್ಧವಾಗಿದ್ದಾರೆ. ಆದರೂ ಅವರಿಗೆ ಸಿಕ್ಕ ಜನಪ್ರಿಯತೆ ಕಡಿಮೆ ಏನಿಲ್ಲ. ಅವರು ‘ಫೈವ್ ಲೆಟರ್ಸ್’ ಹೆಸರಿನ ಶಾರ್ಟ್ ಫಿಲ್ಮ್ ನಿರ್ದೇಶನ ಮಾಡಿದರು. 2017ರಲ್ಲಿ ‘ಒಂದು ಮೊಟ್ಟೆಯ ಕಥೆ’ ಹೆಸರಿನ ಸಿನಿಮಾ ಮಾಡಿ ಗಮನ ಸೆಳೆದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಾಜ್ ಹಿಂದಿರುಗಿ ನೋಡಲೇ ಇಲ್ಲ. 2018ರ ‘ಅಮ್ಮಚ್ಚಿ ಎಂಬ ನೆನಪು’ ಚಿತ್ರದಲ್ಲಿ ರಾಜ್ ನಟಿಸಿದರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಮಾಯಾಬಜಾರ್ 2016’ ಮೊದಲಾದ ಚಿತ್ರಗಳಲ್ಲಿ ನಟಿಸಿದರು. ‘ಒಂದು ಮೊಟ್ಟೆಯ ಕಥೆ’ ಜೊತೆಗೆ ‘ಗರುಡ ಗಮನ ವೃಷಭ ವಾಹನ’, ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅವರು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದ್ದು, 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ ಬಿ. ಶೆಟ್ಟಿ ಅವರು ನಟಿಸಿದ ‘ಲ್ಯಾಂಡ್ಲಾರ್ಡ್’ ಚಿತ್ರ ಬಿಡುಗಡೆ ಆಗಿದೆ. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಶೂಟಿಂಗ್ ವೇಳೆ ಬಾಲಕಿ ಜೊತೆ ಮಾತನಾಡಿದ ಒಂದು ವಿಡಿಯೋವನ್ನು ರಾಜ್ ಬಿ. ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
- Madan Kumar
- Updated on: Jan 25, 2026
- 3:22 pm
Landlord Movie Review: ಅಸಮಾನತೆ, ಅನ್ಯಾಯದ ಇತಿಹಾಸ ಕೆದಕಿದ ‘ಲ್ಯಾಂಡ್ಲಾರ್ಡ್’
Landlord Kannada Movie: ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ನಿರ್ಮಾಣದ ‘ಲ್ಯಾಂಡ್ಲಾರ್ಡ್’ ಸಿನಿಮಾಗೆ ಜಡೇಶ್ ಕೆ. ಹಂಪಿ ನಿರ್ದೇಶನ ಮಾಡಿದ್ದಾರೆ. ಉಮಾಶ್ರೀ, ವಿಜಯ್ ಕುಮಾರ್, ರಚಿತಾ ರಾಮ್, ರಿತನ್ಯಾ ವಿಜಯ್, ಶಿಶಿರ್ ಬೈಕಾಡಿ, ರಾಜ್ ಬಿ. ಶೆಟ್ಟಿ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..
- Madan Kumar
- Updated on: Jan 23, 2026
- 3:26 pm
‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು
ಜನವರಿ 23ರಿಂದ ಜೀ5 ಒಟಿಟಿ ಮೂಲಕ ‘45’ ಸಿನಿಮಾ ಪ್ರಸಾರ ಆಗಲಿದೆ. ಶಿವರಾಜ್ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ಈ ಸಿನಿಮಾಗೆ ಎಂ. ರಮೇಶ್ ರೆಡ್ಡಿ ಅವರು ಬಂಡವಾಳ ಹೂಡಿದ್ದಾರೆ.
- Madan Kumar
- Updated on: Jan 15, 2026
- 8:26 pm
ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಟೀಸರ್: ಮತ್ತೊಂದು ಹಿಟ್ ಗ್ಯಾರಂಟಿ
‘ರಕ್ಕಸಪುರದೋಳ್’ ಸಿನಿಮಾಗೆ ರವಿ ಸಾರಂಗ ನಿರ್ದೇಶನ ಮಾಡಿದ್ದು, ರವಿವರ್ಮಾ ಬಂಡವಾಳ ಹೂಡಿದ್ದಾರೆ. ರಾಜ್ ಬಿ. ಶೆಟ್ಟಿ ಅಭಿನಯದ ಈ ಸಿನಿಮಾದಲ್ಲಿ ಸ್ವಾದಿಷ್ಟ ಕೃಷ್ಣ, ಅರ್ಚನಾ ಕೊಟ್ಟಿಗೆ ಕೂಡ ನಟಿಸಿದ್ದಾರೆ. ಫೆಬ್ರವರಿ 6ರಂದು ‘ರಕ್ಕಸಪುರದೋಳ್’ ಸಿನಿಮಾ ರಿಲೀಸ್ ಆಗಲಿದ್ದು, ಈಗ ಟೀಸರ್ ಗಮನ ಸೆಳೆಯುತ್ತಿದೆ.
- Madan Kumar
- Updated on: Dec 29, 2025
- 9:39 pm
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
- Madan Kumar
- Updated on: Dec 26, 2025
- 8:16 pm
‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ?
'ಡೆವಿಲ್' ಸಿನಿಮಾಕ್ಕೆ 'ಮಾರ್ಕ್' ಹಾಗೂ '45' ಚಿತ್ರಗಳಿಂದ ದೊಡ್ಡ ಸ್ಪರ್ಧೆ ಎದುರಾಗಿದೆ. ಈ ಹೊಸ ಕನ್ನಡ ಸಿನಿಮಾಗಳ ಆಗಮನದಿಂದ 'ಡೆವಿಲ್'ಗೆ ಸಿಕ್ಕಿದ್ದ ಚಿತ್ರಮಂದಿರಗಳು ಮತ್ತು ಶೋಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ. ‘ಡೆವಿಲ್’ ಸಿನಿಮಾ ಗಳಿಕೆ ವಿವರ ಶುಕ್ರವಾರ ಸಿಗಲಿದೆ.
- Rajesh Duggumane
- Updated on: Dec 25, 2025
- 7:06 am
‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ
ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..
- Madan Kumar
- Updated on: Dec 24, 2025
- 9:15 pm
ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ
ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ.
- Rajesh Duggumane
- Updated on: Dec 24, 2025
- 10:23 am
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇಬೇಕು’ ಎನ್ನುವ ಮೂಲಕ ಅವರು ಮಾತು ಶುರು ಮಾಡಿದರು. ವಿಡಿಯೋ ನೋಡಿ..
- Madan Kumar
- Updated on: Dec 21, 2025
- 10:22 am
‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ
ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ 'ರಿಚರ್ಡ್ ಆಂಟನಿ' ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ ಬಿ. ಶೆಟ್ಟಿ ನೀಡಿದ ಹೇಳಿಕೆ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. 'ರಿಚರ್ಡ್ ಆಂಟನಿ' ಚಿತ್ರದ ಕೆಲಸಗಳು ಇನ್ನೂ ಆರಂಭವಾಗಿಲ್ಲವೇ ಎಂದು ಪ್ರಶ್ನಿಸುವಂತೆ ಮಾಡಿದೆ. 'ಸಪ್ತ ಸಾಗರದಾಚೆ ಎಲ್ಲೋ' ನಂತರ ರಕ್ಷಿತ್ ಶೆಟ್ಟಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.
- Rajesh Duggumane
- Updated on: Dec 20, 2025
- 2:49 pm
ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ
ರಿಷಬ್ ಶೆಟ್ಟಿ ಜೊತೆ ಭಿನ್ನಾಭಿಪ್ರಾಯದ ವದಂತಿಗಳಿಗೆ ರಾಜ್ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. 'ರಿಷಬ್ ಯಾರನ್ನೂ ದೂರ ತಳ್ಳುವ ವ್ಯಕ್ತಿ ಅಲ್ಲ' ಎಂದು ರಾಜ್ ಹೇಳಿದ್ದಾರೆ. 'ಕಾಂತಾರ: ಚಾಪ್ಟರ್ 1' ಭಾಗವಾಗದಿರುವ ಕಾರಣವನ್ನೂ ವಿವರಿಸಿದ್ದಾರೆ. ಅವರ ಮತ್ತು ರಿಷಬ್ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದು, ಚಿತ್ರರಂಗದ ಒಳಿತಿಗಾಗಿ ಬೇರೆ ಬೇರೆ ಯೋಜನೆಗಳಲ್ಲಿ ಕೆಲಸ ಮಾಡುವುದು ಉತ್ತಮ ಎಂದು ಹೇಳಿದ್ದಾರೆ.
- Rajesh Duggumane
- Updated on: Dec 17, 2025
- 7:34 am
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್ ಬಿ ಶೆಟ್ಟಿ
ರಾಜ್ ಬಿ ಶೆಟ್ಟಿ ಅವರು ಸು ಫ್ರಮ್ ಸೋ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀ್ಕಷೆ ಮೂಡುವಂತೆ ಆಗಿತ್ತು. ಈ ಚಿತ್ರದ ಟ್ರೇಲರ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ‘ಸು ಫ್ರಮ್ ಸೋ’ ಯಶಸ್ಸನ್ನು ರಾಜ್ ಅವರು ಹಸ್ತಾಂತರ ಮಾಡಿದ್ದಾರೆ.
- Shreelaxmi H
- Updated on: Dec 16, 2025
- 8:05 am