AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raj B Shetty

Raj B Shetty

ರಾಜ್ ಬಿ. ಶೆಟ್ಟಿ ಅವರು ಕನ್ನಡದ ಖ್ಯಾತ ನಟ, ನಿರ್ಮಾಪಕ, ಸಂಭಾಷಣಾಕಾರ, ಚಿತ್ರಕಥೆ ಬರಹಗಾರ ಹಾಗೂ ನಿರ್ದೇಶಕ. ಹೀರೋ ಎಂದರೆ ಕಟ್ಟುಮಸ್ತಾದ ದೇಹ ಹೊಂದಿರಬೇಕು, ತಲೆಯ ತುಂಬ ಕೇಶ ರಾಶಿ ಇರಬೇಕು ಎಂಬ ಕಲ್ಪನೆಗೆ ಅವರು ವಿರುದ್ಧವಾಗಿದ್ದಾರೆ. ಆದರೂ ಅವರಿಗೆ ಸಿಕ್ಕ ಜನಪ್ರಿಯತೆ ಕಡಿಮೆ ಏನಿಲ್ಲ. ಅವರು ‘ಫೈವ್ ಲೆಟರ್ಸ್​’ ಹೆಸರಿನ ಶಾರ್ಟ್​ ಫಿಲ್ಮ್ ನಿರ್ದೇಶನ ಮಾಡಿದರು. 2017ರಲ್ಲಿ ‘ಒಂದು ಮೊಟ್ಟೆಯ ಕಥೆ’ ಹೆಸರಿನ ಸಿನಿಮಾ ಮಾಡಿ ಗಮನ ಸೆಳೆದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ರಾಜ್ ಹಿಂದಿರುಗಿ ನೋಡಲೇ ಇಲ್ಲ. 2018ರ ‘ಅಮ್ಮಚ್ಚಿ ಎಂಬ ನೆನಪು’ ಚಿತ್ರದಲ್ಲಿ ರಾಜ್ ನಟಿಸಿದರು. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ‘ಮಾಯಾಬಜಾರ್ 2016’ ಮೊದಲಾದ ಚಿತ್ರಗಳಲ್ಲಿ ನಟಿಸಿದರು. ‘ಒಂದು ಮೊಟ್ಟೆಯ ಕಥೆ’ ಜೊತೆಗೆ ‘ಗರುಡ ಗಮನ ವೃಷಭ ವಾಹನ’, ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಅವರು ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಸೂಪರ್ ಹಿಟ್ ಆಗಿದ್ದು, 100 ಕೋಟಿ ರೂಪಾಯಿ ಕ್ಲಬ್ ಸೇರಿದೆ.

ಇನ್ನೂ ಹೆಚ್ಚು ಓದಿ

‘ಮಾರ್ಕ್’; ‘45’ ಅಬ್ಬರದಲ್ಲಿ ‘ಡೆವಿಲ್​​’ಗೆ ಸಿಕ್ಕ ಚಿತ್ರಮಂದಿರಗಳು ಇಷ್ಟೇನಾ?

'ಡೆವಿಲ್‌' ಸಿನಿಮಾಕ್ಕೆ 'ಮಾರ್ಕ್' ಹಾಗೂ '45' ಚಿತ್ರಗಳಿಂದ ದೊಡ್ಡ ಸ್ಪರ್ಧೆ ಎದುರಾಗಿದೆ. ಈ ಹೊಸ ಕನ್ನಡ ಸಿನಿಮಾಗಳ ಆಗಮನದಿಂದ 'ಡೆವಿಲ್‌'ಗೆ ಸಿಕ್ಕಿದ್ದ ಚಿತ್ರಮಂದಿರಗಳು ಮತ್ತು ಶೋಗಳು ಗಣನೀಯವಾಗಿ ಕಡಿಮೆಯಾಗಿವೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ. ‘ಡೆವಿಲ್’ ಸಿನಿಮಾ ಗಳಿಕೆ ವಿವರ ಶುಕ್ರವಾರ ಸಿಗಲಿದೆ.

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಅರ್ಹತೆ ಅಷ್ಟೇ ಮುಖ್ಯವಾಗಬೇಕು, ಬಡತನವಲ್ಲ; ರಾಜ್ ಮಾತಿಗೆ ಫಿದಾ ಆಗಿ ಕೈ ಮುಗಿದ ಉಪ್ಪಿ

ರಾಜ್ ಬಿ ಶೆಟ್ಟಿ ಅವರು ಚಿತ್ರರಂಗದಲ್ಲಿ ಕೇವಲ ಅರ್ಹತೆ ಮತ್ತು ಪ್ರತಿಭೆ ಮಾತ್ರ ಮುಖ್ಯ ಎಂದು ಒತ್ತಿ ಹೇಳಿದ್ದಾರೆ. 'ಬಡವರ ಮಕ್ಕಳು ಬೆಳೆಯಬೇಕು' ಎಂಬ ಮಾತನ್ನು ವಿರೋಧಿಸಿ, ಕಷ್ಟಪಟ್ಟದ್ದನ್ನು ಟ್ರಂಪ್ ಕಾರ್ಡ್ ಆಗಿ ಬಳಸುವುದನ್ನು ಖಂಡಿಸಿದ್ದಾರೆ. ಕಲಿಯುವ ಮನಸ್ಸಿನ ಬಡತನವೇ ಮುಖ್ಯ ಎಂಬ ಅವರ ಮಾತನ್ನು ಉಪೇಂದ್ರ ಕೂಡ ಬೆಂಬಲಿಸಿದ್ದಾರೆ.

ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ

ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇಬೇಕು’ ಎನ್ನುವ ಮೂಲಕ ಅವರು ಮಾತು ಶುರು ಮಾಡಿದರು. ವಿಡಿಯೋ ನೋಡಿ..

‘ರಿಚರ್ಡ್ ಆಂಟನಿ’ ಸಿನಿಮಾ ಕುರಿತು ರಾಜ್ ನೀಡಿದ ಹೇಳಿಕೆ ಬಗ್ಗೆ ಶುರುವಾಗಿದೆ ಚರ್ಚೆ

ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ 'ರಿಚರ್ಡ್ ಆಂಟನಿ' ಕೆಲಸಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಇತ್ತೀಚೆಗೆ ರಾಜ್ ಬಿ. ಶೆಟ್ಟಿ ನೀಡಿದ ಹೇಳಿಕೆ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. 'ರಿಚರ್ಡ್ ಆಂಟನಿ' ಚಿತ್ರದ ಕೆಲಸಗಳು ಇನ್ನೂ ಆರಂಭವಾಗಿಲ್ಲವೇ ಎಂದು ಪ್ರಶ್ನಿಸುವಂತೆ ಮಾಡಿದೆ. 'ಸಪ್ತ ಸಾಗರದಾಚೆ ಎಲ್ಲೋ' ನಂತರ ರಕ್ಷಿತ್ ಶೆಟ್ಟಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ.

ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ

ರಿಷಬ್ ಶೆಟ್ಟಿ ಜೊತೆ ಭಿನ್ನಾಭಿಪ್ರಾಯದ ವದಂತಿಗಳಿಗೆ ರಾಜ್ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. 'ರಿಷಬ್ ಯಾರನ್ನೂ ದೂರ ತಳ್ಳುವ ವ್ಯಕ್ತಿ ಅಲ್ಲ' ಎಂದು ರಾಜ್ ಹೇಳಿದ್ದಾರೆ. 'ಕಾಂತಾರ: ಚಾಪ್ಟರ್ 1' ಭಾಗವಾಗದಿರುವ ಕಾರಣವನ್ನೂ ವಿವರಿಸಿದ್ದಾರೆ. ಅವರ ಮತ್ತು ರಿಷಬ್ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದು, ಚಿತ್ರರಂಗದ ಒಳಿತಿಗಾಗಿ ಬೇರೆ ಬೇರೆ ಯೋಜನೆಗಳಲ್ಲಿ ಕೆಲಸ ಮಾಡುವುದು ಉತ್ತಮ ಎಂದು ಹೇಳಿದ್ದಾರೆ.

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್ ಬಿ ಶೆಟ್ಟಿ

ರಾಜ್ ಬಿ ಶೆಟ್ಟಿ ಅವರು ಸು ಫ್ರಮ್ ಸೋ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀ್ಕಷೆ ಮೂಡುವಂತೆ ಆಗಿತ್ತು. ಈ ಚಿತ್ರದ ಟ್ರೇಲರ್ ಗಮನ ಸೆಳೆಯುವ ರೀತಿಯಲ್ಲಿ ಇದೆ. ಈಗ ‘ಸು ಫ್ರಮ್ ಸೋ’ ಯಶಸ್ಸನ್ನು ರಾಜ್ ಅವರು ಹಸ್ತಾಂತರ ಮಾಡಿದ್ದಾರೆ.

ಅಂದು ಸುಲೋಚನಾ, ಇಂದು ಶಿವಣ್ಣ; ‘45’ ಟ್ರೇಲರ್​ಗೆ ಭಾರಿ ಮೆಚ್ಚುಗೆ

ನಟ ಶಿವರಾಜ್‌ಕುಮಾರ್ ಅವರ '45' ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಭಾರಿ ಮೆಚ್ಚುಗೆ ಗಳಿಸಿದೆ. ಸೀರೆ ಉಟ್ಟು ಕಾಣಿಸಿಕೊಂಡಿರುವ ಶಿವಣ್ಣನ ಪಾತ್ರ ಎಲ್ಲರ ಗಮನ ಸೆಳೆದಿದೆ. ಈ ಹಿಂದೆ 'ಸು ಫ್ರಮ್ ಸೋ' ಚಿತ್ರದಲ್ಲಿ ಜೆಪಿ ತುಮ್ಮಿನಾಡು ಸೀರೆ ಲುಕ್ ಪ್ರಸಿದ್ಧವಾಗಿತ್ತು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ ‘45’ ಡಿಸೆಂಬರ್ 25ಕ್ಕೆ ತೆರೆಗೆ ಬರಲಿದೆ.

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..

ರಾಜ್ ಬಿ. ಶೆಟ್ಟಿ, ಶಿವರಾಜ್​​ಕುಮಾರ್, ಉಪೇಂದ್ರ ಅವರು ಒಟ್ಟಿಗೆ ನಟಿಸಿದ ‘45’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಸೇರಿದಂತೆ ಇಡೀ ‘45’ ಚಿತ್ರತಂಡ ಭಾಗಿ ಆಗಿದೆ. ಲೈವ್ ವಿಡಿಯೋ ಇಲ್ಲಿದೆ ನೋಡಿ..

ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಎಲ್ಲ ಅಭಿಮಾನಿಗಳು ಬೆಂಗಳೂರಿಗೆ ಬರೋಕೆ ಆಗಲ್ಲ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಈ ರೀತಿ ಮಾಡಲಾಗುತ್ತಿದೆ.

Eko: ಮಲಯಾಳಂ ಸಿನಿಮಾ ಮೂಲಕ ಮತ್ತೊಮ್ಮೆ ಯಶಸ್ಸು ಕಂಡ ರಾಜ್ ಬಿ. ಶೆಟ್ಟಿ

ರಾಜ್ ಬಿ. ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೇ ಮಲಯಾಳಂ ಚಿತ್ರರಂಗದಲ್ಲೂ ಫೇಮಸ್ ಆಗಿದ್ದಾರೆ. ಮಲಯಾಳಂ ಸಿನಿಮಾಗಳನ್ನು ಕರ್ನಾಟಕದಲ್ಲಿ ವಿತರಣೆ ಮಾಡುವ ಮೂಲಕ ರಾಜ್ ಬಿ. ಶೆಟ್ಟಿ ಯಶಸ್ಸು ಕಂಡಿದ್ದಾರೆ. ಅವರ ‘ಲೈಟರ್ ಬುದ್ಧ ಫಿಲ್ಮ್ಸ್’ ಸಂಸ್ಥೆಯು ವಿತರಣೆ ಮಾಡಿರುವ ‘ಇಕೋ’ ಸಿನಿಮಾ ಜನರ ಮೆಚ್ಚುಗೆ ಪಡೆಯುತ್ತಿದೆ.

ಹೆಲ್ಮೆಟ್ ಧರಿಸದೇ ಬೈಕ್ ಓಡಿಸಿದ್ದಕ್ಕೆ ಸ್ಪಷ್ಟನೆ ನೀಡಿದ ರಾಜ್ ಬಿ. ಶೆಟ್ಟಿ

‘ಸು ಫ್ರಮ್ ಸೋ’ ಸಿನಿಮಾ ಬಳಿಕ ರಾಜ್ ಬಿ. ಶೆಟ್ಟಿ ಅವರ ಜನಪ್ರಿಯತೆ ಹೆಚ್ಚಾಗಿದೆ. ಈ ನಡುವೆ ವಿಡಿಯೋ ವೈರಲ್ ಆಯಿತು. ಹೆಲ್ಮೆಟ್ ಧರಿಸದೇ ರಾಜ್ ಶೆಟ್ಟಿ ಬೈಕ್ ಓಡಿಸಿದ್ದನ್ನು ಕೆಲವರು ಟೀಕಿಸಿದ್ದರು. ಅದಕ್ಕೆ ಈಗ ರಾಜ್ ಬಿ. ಶೆಟ್ಟಿ ಅವರು ಸ್ಪಷ್ಟನೆ ನೀಡಿದ್ದಾರೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ