Rajinikanth
ರಜನಿಕಾಂತ್ ಅವರು ಕಾಲಿವುಡ್ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ
ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ
ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಮೆಗಾ ಸ್ಟಾರ್ ಚಿರಂಜೀವಿ, ರಜನಿಕಾಂತ್, ಪವನ್ ಕಲ್ಯಾಣ್, ಖುಷ್ಬೂ ಸುಂದರ್ ಸೇರಿದಂತೆ ಹಲವರು ಆರ್.ಬಿ. ಚೌಧರಿ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.
- Madan Kumar
- Updated on: May 6, 2026
- 7:20 am
Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್?
ನಿರ್ದೇಶಕ ಶಂಕರ್ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ನಟನೆಯ ಹೊಸ ಸಿನಿಮಾದಲ್ಲಿ ಖಳನಾಯಕನ ಪಾತ್ರವನ್ನು ಶಂಕರ್ ಅವರು ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಚಿತ್ರತಂಡ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ.
- Madan Kumar
- Updated on: Apr 26, 2026
- 12:13 pm
‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?
ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ ಆಗಿವೆ ಎಂದು ಹೇಳಲಾಗುತ್ತಿದೆ.
- Madan Kumar
- Updated on: Apr 19, 2026
- 2:14 pm
‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್
ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪೈರಸಿ ಮತ್ತು ವಿಡಿಯೋ ಲೀಕ್ ಹಾವಳಿ ಮುಂದುವರಿದಿದೆ. ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಲೀಕ್ ಬೆನ್ನಲ್ಲೇ ಈಗ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಜೈಲರ್ 2’ ಚಿತ್ರಕ್ಕೂ ಬಿಸಿ ತಟ್ಟಿದೆ. ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ.
- Madan Kumar
- Updated on: Apr 17, 2026
- 9:43 pm
‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು
ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..
- Madan Kumar
- Updated on: Apr 10, 2026
- 10:25 pm
‘ಜನ ನಾಯಗನ್’ ಯಾಕೆ ವಿಳಂಬ ಆಗಿದೆ ಅಂತ ಕೇಳಿದ್ದಕ್ಕೆ ಸೈಲೆಂಟ್ ಆದ ರಜನಿಕಾಂತ್
ಸೂಪರ್ಸ್ಟಾರ್ ರಜನಿಕಾಂತ್ ಅವರು ತಮ್ಮ ಸಿನಿಮಾಗಳ ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಕಮಲ್ ಹಾಸನ್ ಜೊತೆಗಿನ ಸಿನಿಮಾ ಶೂಟಿಂಗ್ ಯಾವಾಗ ಆರಂಭ ಎಂಬುದನ್ನೂ ತಿಳಿಸಿದ್ದಾರೆ. ಆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ಮೌನ ತಾಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
- Madan Kumar
- Updated on: Apr 8, 2026
- 7:05 pm
Rajinikanth: ಯುವಕರಿಗೆ ರಜನಿಕಾಂತ್ ಕಿವಿಮಾತು: ಸೂಪರ್ ಸ್ಟಾರ್ ಹೇಳಿದ್ದೇನು?
Rajinikanth on Youth: ರಜನೀಕಾಂತ್ ಅವರು ಸಿನಿಮಾ ಪರದೆಯ ಮೇಲೆ ನಾಯಕನಷ್ಟೇ ಅಲ್ಲದೆ ಸಾಮಾಜಿಕ ಕಾಳಜಿಯುಳ್ಳ ವ್ಯಕ್ತಿಯೂ ಹೌದು ರಜನೀಕಾಂತ್. ಇತ್ತೀಚೆಗಂತೂ ತಮ್ಮ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಸಹ ರಜನೀಕಾಂತ್ ಅವರು ಸಾಕಷ್ಟು ಸಂದೇಶಗಳನ್ನು, ಕಿವಿಮಾತುಗಳನ್ನು ಹೇಳುತ್ತಾರೆ. ಇದೀಗ ರಜನೀಕಾಂತ್ ಅವರು ಯುವಕರಿಗಾಗಿ ಸಂದೇಶವೊಂದನ್ನು ನೀಡಿದ್ದಾರೆ.
- Manjunatha C
- Updated on: Apr 8, 2026
- 12:56 pm
ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ
‘ಸೂಪರ್ ಸ್ಟಾರ್’ ರಜನಿಕಾಂತ್ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಜನರಿಗೆ ಇನ್ನಷ್ಟು ಕ್ರೇಜ್ ಮೂಡುವಂತಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ರಜನಿ ಅವರ ಮಾತಿನಿಂದ ಚಿತ್ರತಂಡಕ್ಕೆ ಆನೆಬಲ ಬಂದಿದೆ.
- Madan Kumar
- Updated on: Mar 23, 2026
- 10:34 pm
ದಳಪತಿಯಿಂದ ಬಿಜೆಪಿ ದೂರ ಉಳಿದಿದ್ದು ಯಾಕೆ? ರಜನೀ ವಿರುದ್ಧ ಟಿವಿಕೆ ಆಡಿದ ಆ ಒಂದು ಮಾತು ಕಾರಣವಾ?
TVK leader's statement on Rajinikanth made NDA stop reaching to Vijay's party: ದಳಪತಿ ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಎನ್ಡಿಎ ಮೈತ್ರಿ ಮಾಡಿಕೊಳ್ಳಲು ಮುಂದಾಗಿತ್ತು. ಆದರೆ, ಟಿವಿಕೆ ಪಕ್ಷದ ಮುಖಂಡರೊಬ್ಬರು ರಜನೀಕಾಂತ್ ಬಗ್ಗೆ ಆಡಿದ ಆ ಒಂದು ಮಾತು, ಈ ಮೈತ್ರಿ ಸಾಧ್ಯತೆಯನ್ನು ದೂರ ಮಾಡಿತು ಎನ್ನಲಾಗಿದೆ. ಡಿಎಂಕೆ ಬೆದರಿಕೆಗೆ ಬಗ್ಗೆ ರಜನೀ ರಾಜಕೀಯ ಪ್ರವೇಶ ಮಾಡಲಿಲ್ಲ ಎಂದು ಟಿವಿಕೆ ಮುಖಂಡ ಹೇಳಿದ್ದು ಎಐಎಡಿಎಂ, ಬಿಜೆಪಿ ಮುಖಂಡರಿಗೆ ಪಥ್ಯವೆನಿಸಿಲ್ಲ.
- Vijaya Sarathy SN
- Updated on: Mar 17, 2026
- 2:40 pm
ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ
ರಜನಿಕಾಂತ್ 'ಜೈಲರ್ 2' ಶೂಟಿಂಗ್ನಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಅವರ ಕೊನೆಯ ಸಿನಿಮಾ ಕುರಿತು ಚರ್ಚೆ ನಡೆಯುತ್ತಿದೆ. ರಜನಿ ಮಗಳು ಸೌಂದರ್ಯಾ ಇದನ್ನು ನಿರ್ಮಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲು ಸ್ಮರಣೀಯ ಚಿತ್ರ ನೀಡಲು ಅವರು ಬಯಸುತ್ತಾರೆ. ಅಂತಿಮ ಚಿತ್ರವು ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಹತ್ತಿರವಾಗಿದ್ದು, ಓಟಿಟಿ ಹಕ್ಕುಗಳಿಗೂ ಹೆಚ್ಚಿನ ಬೆಲೆ ಬರಬಹುದು.
- Rajesh Duggumane
- Updated on: Feb 18, 2026
- 2:49 pm
ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ
ಮಧುರೈ ಮೂಲದ ಅಭಿಮಾನಿಯೊಬ್ಬ ಈ ರೀತಿಯಲ್ಲಿ ಶಿವರಾತ್ರಿ ಹಬ್ಬವನ್ನು ಆಚರಿಸಿದ್ದಾನೆ. ಆತನ ಮನೆಯೊಳಗೆ ರಜನಿಕಾಂತ್ ಅವರ ದೇವಸ್ಥಾನವನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ರಜನಿ ಫೋಟೋಗೆ ವಿಶೇಷ ಪೂಜೆ ಮಾಡಿದ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..
- Madan Kumar
- Updated on: Feb 15, 2026
- 7:25 am
ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ
ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
- Madan Kumar
- Updated on: Dec 26, 2025
- 4:50 pm