AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth

Rajinikanth

ರಜನಿಕಾಂತ್ ಅವರು ಕಾಲಿವುಡ್​ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ

ಇನ್ನೂ ಹೆಚ್ಚು ಓದಿ

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

‘ಸೂಪರ್‌ ಸ್ಟಾರ್’ ರಜನಿಕಾಂತ್ ಅವರು ‘ಧುರಂಧರ್ 2’ ಚಿತ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿನಿಮಾ ಬಗ್ಗೆ ಜನರಿಗೆ ಇನ್ನಷ್ಟು ಕ್ರೇಜ್ ಮೂಡುವಂತಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಈಗಾಗಲೇ ಮಾತನಾಡಿದ್ದಾರೆ. ರಜನಿ ಅವರ ಮಾತಿನಿಂದ ಚಿತ್ರತಂಡಕ್ಕೆ ಆನೆಬಲ ಬಂದಿದೆ.

ದಳಪತಿಯಿಂದ ಬಿಜೆಪಿ ದೂರ ಉಳಿದಿದ್ದು ಯಾಕೆ? ರಜನೀ ವಿರುದ್ಧ ಟಿವಿಕೆ ಆಡಿದ ಆ ಒಂದು ಮಾತು ಕಾರಣವಾ?

TVK leader's statement on Rajinikanth made NDA stop reaching to Vijay's party: ದಳಪತಿ ವಿಜಯ್ ಅವರ ಟಿವಿಕೆ ಪಕ್ಷದೊಂದಿಗೆ ಎನ್​ಡಿಎ ಮೈತ್ರಿ ಮಾಡಿಕೊಳ್ಳಲು ಮುಂದಾಗಿತ್ತು. ಆದರೆ, ಟಿವಿಕೆ ಪಕ್ಷದ ಮುಖಂಡರೊಬ್ಬರು ರಜನೀಕಾಂತ್ ಬಗ್ಗೆ ಆಡಿದ ಆ ಒಂದು ಮಾತು, ಈ ಮೈತ್ರಿ ಸಾಧ್ಯತೆಯನ್ನು ದೂರ ಮಾಡಿತು ಎನ್ನಲಾಗಿದೆ. ಡಿಎಂಕೆ ಬೆದರಿಕೆಗೆ ಬಗ್ಗೆ ರಜನೀ ರಾಜಕೀಯ ಪ್ರವೇಶ ಮಾಡಲಿಲ್ಲ ಎಂದು ಟಿವಿಕೆ ಮುಖಂಡ ಹೇಳಿದ್ದು ಎಐಎಡಿಎಂ, ಬಿಜೆಪಿ ಮುಖಂಡರಿಗೆ ಪಥ್ಯವೆನಿಸಿಲ್ಲ.

ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ

ರಜನಿಕಾಂತ್ 'ಜೈಲರ್ 2' ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಅವರ ಕೊನೆಯ ಸಿನಿಮಾ ಕುರಿತು ಚರ್ಚೆ ನಡೆಯುತ್ತಿದೆ. ರಜನಿ ಮಗಳು ಸೌಂದರ್ಯಾ ಇದನ್ನು ನಿರ್ಮಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲು ಸ್ಮರಣೀಯ ಚಿತ್ರ ನೀಡಲು ಅವರು ಬಯಸುತ್ತಾರೆ. ಅಂತಿಮ ಚಿತ್ರವು ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಹತ್ತಿರವಾಗಿದ್ದು, ಓಟಿಟಿ ಹಕ್ಕುಗಳಿಗೂ ಹೆಚ್ಚಿನ ಬೆಲೆ ಬರಬಹುದು.

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ

ಮಧುರೈ ಮೂಲದ ಅಭಿಮಾನಿಯೊಬ್ಬ ಈ ರೀತಿಯಲ್ಲಿ ಶಿವರಾತ್ರಿ ಹಬ್ಬವನ್ನು ಆಚರಿಸಿದ್ದಾನೆ. ಆತನ ಮನೆಯೊಳಗೆ ರಜನಿಕಾಂತ್ ಅವರ ದೇವಸ್ಥಾನವನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ರಜನಿ ಫೋಟೋಗೆ ವಿಶೇಷ ಪೂಜೆ ಮಾಡಿದ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ರಜನಿಕಾಂತ್ ಜನ್ಮದಿನ: ಸೂಪರ್​ಸ್ಟಾರ್ ಎಷ್ಟು ಶ್ರೀಮಂತ ಗೊತ್ತಾ?

ಸೂಪರ್‌ಸ್ಟಾರ್ ರಜನಿಕಾಂತ್‌ಗೆ 74ನೇ ಜನ್ಮದಿನ. ಬಸ್ ಕಂಡಕ್ಟರ್‌ನಿಂದ 430 ಕೋಟಿ ಒಡೆಯನಾಗಿ ಬೆಳೆದ ತಲೈವಾ ಜೀವನ ಕಥೆ ಸ್ಫೂರ್ತಿದಾಯಕ. 75ನೇ ವಯಸ್ಸಿನಲ್ಲೂ ಕೋಟಿಗಟ್ಟಲೆ ಸಂಭಾವನೆ ಪಡೆಯುವ ರಜನಿಕಾಂತ್‌ ಅವರ ವೃತ್ತಿಜೀವನ, ಆಸ್ತಿ, ಬ್ಲಾಕ್‌ಬಸ್ಟರ್‌ ಚಿತ್ರಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಅವರ ಜನಪ್ರಿಯತೆ ಇಂದಿಗೂ ಕಡಿಮೆಯಾಗಿಲ್ಲ.

‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್

ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದ ಪಾತ್ರವರ್ಗದಲ್ಲಿ ಕೆಲವು ಬದಲಾವಣೆ ಆಗಿದೆ. ನಂದಮೂರಿ ಬಾಲಕೃಷ್ಣ ಅವರು ಈ ಸಿನಿಮಾದಿಂದ ಹೊರಗೆ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಾಲಯ್ಯ ಅವರ ಬದಲು ವಿಜಯ್ ಸೇತುಪತಿ ಅವರು ‘ಜೈಲರ್ 2’ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ.

ಹೃದಯಾಘಾತ: ಅಣ್ಣನಿಗಾಗಿ ಬೆಂಗಳೂರಿಗೆ ಓಡೋಡಿ ಬಂದಿದ್ದ ರಜನಿಕಾಂತ್ ವಿಡಿಯೋ ವೈರಲ್

ನಟ ರಜನಿಕಾಂತ್ ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ ಸಹೋದರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ 2 ದಿನಗಳ ಕಾಲ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಶನಿವಾರ (ನ.8) ಡಿಸ್ಚಾರ್ಜ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಈಗ ವೈರಲ್ ಆಗುತ್ತಿದೆ.

ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ಬೆಂಗಳೂರಿಗೆ ಬಂದು ಆಸ್ಪತ್ರೆಗೆ ಸೇರಿಸಿದ ತಲೈವಾ

ಖ್ಯಾತ ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತ ಆಗಿದ್ದರಿಂದ ಅವರಿಗೆ ನಾರಾಯಣ ಹೃದಯಾಲಯದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಹೋದರನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ರೆಡಿ ಆದ ರಜನಿಕಾಂತ್?

Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಅವರು ವಯಸ್ಸು ಮತ್ತು ಆರೋಗ್ಯ ಕಾರಣಗಳಿಂದ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ಚಿಂತಿಸುತ್ತಿದ್ದಾರೆ. 74ರ ಹರೆಯದಲ್ಲೂ ಆ್ಯಕ್ಟಿಂಗ್‌ನಲ್ಲಿ ಬ್ಯುಸಿ ಇರುವ ಥಲೈವಾ, 2027ರೊಳಗೆ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ರಜನಿಕಾಂತ್-ಧನುಷ್ ಮನೆಯಲ್ಲಿ ಬಾಂಬ್ ಇಟ್ಟಿದ್ದಾಗಿ ಪೊಲೀಸರಿಗೆ ಬಂತು ಮೇಲ್

ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಮತ್ತು ಧನುಷ್ ಅವರ ಮನೆಗೆ ಬಾಂಬ್ ಇಟ್ಟಿದ್ದಾಗಿ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇಮೇಲ್ ಬಂದಿತ್ತು. ತಕ್ಷಣ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲಿಸಿತು. ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ, ಇದು ಹುಸಿ ಕರೆ ಎಂದು ದೃಢಪಟ್ಟಿದೆ.

ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಕೂಲಿ’ ಸಿನಿಮಾ: ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ

ಲೋಕೇಶ್ ಕನಗರಾಜ್ ನಿರ್ದೇಶನ, ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದ ಕಿರುತೆರೆ ಪ್ರಸಾರಕ್ಕೆ ದಿನಾಂಕ ನಿಗದಿ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಕಿರುತೆರೆಯಲ್ಲಿ ವೀಕ್ಷಿಸಿ ಎಂಜಾಯ್ ಮಾಡಬಹುದು. ಉದಯ ಟಿವಿಯಲ್ಲಿ ಅಕ್ಟೋಬರ್ 19ರಂದು ಸಂಜೆ 6 ಗಂಟೆಗೆ ‘ಕೂಲಿ’ ಸಿನಿಮಾದ ಕನ್ನಡ ವರ್ಷನ್ ಪ್ರಸಾರ ಆಗಲಿದೆ.

ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ