AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth

Rajinikanth

ರಜನಿಕಾಂತ್ ಅವರು ಕಾಲಿವುಡ್​ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ

ಇನ್ನೂ ಹೆಚ್ಚು ಓದಿ

ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?

ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರ ದಿನಗಳನ್ನು ಈ ಕಾರ್ಡ್ ನೆನಪಿಸುತ್ತದೆ. ಕೇವಲ 275 ರೂ. ಸಂಬಳದಿಂದ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ತಲೈವಾ ಆಗಿ ಬೆಳೆದ ಅವರ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿದಾಯಕವಾಗಿದೆ.

‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ

ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದಕ್ಕೆ ರಜನಿಕಾಂತ್ ಅವರಿಗೆ ಅಸೂಯೆ ಇದೆ ಎಂದು ಕೆಲವರು ಮಾತನಾಡಿಕೊಂಡಿದ್ದರು. ಅಂಥವರಿಗೆ ಸುದ್ದಿಗೋಷ್ಠಿ ಮೂಲಕ ರಜನಿಕಾಂತ್ ಅವರು ತಿರುಗೇಟು ನೀಡಿದ್ದಾರೆ. ಕೇಳಿಬಂದ ಎಲ್ಲ ವದಂತಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್

ಸೂಪರ್‌ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ತಮಗಾದ ಒಂದು ಅಪರೂಪದ ಅನುಭವವನ್ನು ಹಂಚಿಕೊಂಡಿದ್ದಾರೆ. ರಜನಿಕಾಂತ್ ಅವರಿಗೆ ಅಧ್ಯಾತ್ಮದ ಬಗ್ಗೆ ಆಸಕ್ತಿ ಇದೆ. ಈಗ ಆಶ್ರಮದಲ್ಲಿ ನಡೆದ ಕಾರ್ಯಕ್ರಮದ ಭಾಗವಹಿಸಿರುವ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ..

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್

ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ರಜನಿಕಾಂತ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆ ಪ್ರಶ್ನೆಗೆ ರಜನಿಕಾಂತ್ ಅವರು ಪ್ರತಿಕ್ರಿಯೆ ನೀಡಿದ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ವಿಡಿಯೋ ವೈರಲ್ ಆಗಿದೆ.

ತ್ರಿಶಾಗೆ ಒಲಿದು ಬಂದ ಬಿಗ್ ಆಫರ್; ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿ?

ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಈಗ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರಿಗೆ ದೊಡ್ಡ ಆಫರ್ ಬಂದಿದೆ. ವರದಿಗಳ ಪ್ರಕಾರ, ಕಮಲ್ ಹಾಸನ್ ಮತ್ತು ರಜನಿಕಾಂತ್ ಅಭಿನಯಿಸಲಿರುವ ಹೊಸ ಸಿನಿಮಾಗೆ ತ್ರಿಶಾ ಕೃಷ್ಣನ್ ಅವರು ನಾಯಕಿಯಾಗಿ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ಹಿರಿಯ ನಿರ್ಮಾಪಕ ಆರ್‌.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ

ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ನಿರ್ಮಾಪಕ ಆರ್​.ಬಿ. ಚೌಧರಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಮೆಗಾ ಸ್ಟಾರ್ ಚಿರಂಜೀವಿ, ರಜನಿಕಾಂತ್, ಪವನ್ ಕಲ್ಯಾಣ್, ಖುಷ್ಬೂ ಸುಂದರ್ ಸೇರಿದಂತೆ ಹಲವರು ಆರ್.ಬಿ. ಚೌಧರಿ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.

Thalaivar 173: ರಜನಿಕಾಂತ್ ಮುಂದಿನ ಸಿನಿಮಾದಲ್ಲಿ ಖ್ಯಾತ ನಿರ್ದೇಶಕ ಶಂಕರ್ ವಿಲನ್?

ನಿರ್ದೇಶಕ ಶಂಕರ್ ಅವರು ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ವಿಲನ್ ಆಗುತ್ತಿದ್ದಾರೆ ಎನ್ನಲಾಗಿದೆ. ರಜನಿಕಾಂತ್ ನಟನೆಯ ಹೊಸ ಸಿನಿಮಾದಲ್ಲಿ ಖಳನಾಯಕನ ಪಾತ್ರವನ್ನು ಶಂಕರ್ ಅವರು ಮಾಡುವ ಸಾಧ್ಯತೆ ಇದೆ ಎಂಬ ಸುದ್ದಿ ಕೇಳಿಬಂದಿದೆ. ಆದರೆ ಚಿತ್ರತಂಡ ಇನ್ನೂ ಅಧಿಕೃತವಾಗಿ ಏನನ್ನೂ ಹೇಳಿಲ್ಲ.

‘ಜೈಲರ್ 2’ ಬಿಡುಗಡೆಗೂ ಮುನ್ನವೇ 160 ಕೋಟಿ ರೂಪಾಯಿ ಒಟಿಟಿ ಡೀಲ್?

ನಟ ರಜನಿಕಾಂತ್ ಅವರು ‘ಜೈಲರ್ 2’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಒಟಿಟಿ ಡೀಲ್ ಬಗ್ಗೆ ದೊಡ್ಡ ಸುದ್ದಿ ಕೇಳಿಬಂದಿದೆ. ಬರೋಬ್ಬರಿ 160 ಕೋಟಿ ರೂಪಾಯಿಗೆ ಈ ಚಿತ್ರದ ಒಟಿಟಿ ಹಕ್ಕುಗಳು ಮಾರಾಟ ಆಗಿವೆ ಎಂದು ಹೇಳಲಾಗುತ್ತಿದೆ.

‘ಜನ ನಾಯಗನ್’ ಬಳಿಕ ‘ಜೈಲರ್ 2’ ಸಿನಿಮಾಗೆ ಲೀಕ್ ಕಾಟ; ವಿಡಿಯೋ ವೈರಲ್

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪೈರಸಿ ಮತ್ತು ವಿಡಿಯೋ ಲೀಕ್ ಹಾವಳಿ ಮುಂದುವರಿದಿದೆ. ದಳಪತಿ ವಿಜಯ್ ಅವರ ‘ಜನ ನಾಯಗನ್’ ಚಿತ್ರದ ಲೀಕ್ ಬೆನ್ನಲ್ಲೇ ಈಗ ಸೂಪರ್ ಸ್ಟಾರ್ ರಜನಿಕಾಂತ್ ಅವರ ‘ಜೈಲರ್ 2’ ಚಿತ್ರಕ್ಕೂ ಬಿಸಿ ತಟ್ಟಿದೆ. ವಿಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ಮಾಣ ಸಂಸ್ಥೆ ಮುಂದಾಗಿದೆ.

‘ಜೈಲರ್ 2’ ಸಿನಿಮಾದಲ್ಲಿ ಪವನ್ ಕಲ್ಯಾಣ್? ಶಾರುಖ್ ಮಾಡಬೇಕಿದ್ದ ಪಾತ್ರ ಈಗ ಪವರ್ ಸ್ಟಾರ್ ಪಾಲು

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾದಲ್ಲಿ ಅಭಿನಯಿಸಲು ಶಾರುಖ್ ಖಾನ್ ಒಪ್ಪಿಕೊಂಡಿಲ್ಲ. ಅವರ ಬದಲಿಗೆ ಪವನ್ ಕಲ್ಯಾಣ್ ಹೆಸರು ಕೇಳಿಬರುತ್ತಿದೆ. ಈ ಸಿನಿಮಾದಲ್ಲಿ ಅನೇಕ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ. ಹಾಗಾಗಿ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಆ ಕುರಿತು ಇಲ್ಲಿದೆ ವಿವರ..

‘ಜನ ನಾಯಗನ್’ ಯಾಕೆ ವಿಳಂಬ ಆಗಿದೆ ಅಂತ ಕೇಳಿದ್ದಕ್ಕೆ ಸೈಲೆಂಟ್ ಆದ ರಜನಿಕಾಂತ್

ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಸಿನಿಮಾಗಳ ಬಗ್ಗೆ ಅಪ್‌ಡೇಟ್ ನೀಡಿದ್ದಾರೆ. ಕಮಲ್ ಹಾಸನ್ ಜೊತೆಗಿನ ಸಿನಿಮಾ ಶೂಟಿಂಗ್ ಯಾವಾಗ ಆರಂಭ ಎಂಬುದನ್ನೂ ತಿಳಿಸಿದ್ದಾರೆ. ಆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ ಬಗ್ಗೆ ಕೇಳಿದ್ದಕ್ಕೆ ಮೌನ ತಾಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ರಾಜೀನಾಮೆ ಬೆನ್ನಲ್ಲೇ ಡಾ.ರಾಜ್​ಕುಮಾರ್ ಮಾತು ನೆನೆದ ಸಿದ್ರಾಮಯ್ಯ
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿದ್ದರಾಮಯ್ಯ ರಾಜೀನಾಮೆಗೆ ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ!
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಎನ್​​ಟಿಆರ್ ಸಮಾಧಿಗೆ ಜೂ ಎನ್​​ಟಿಆರ್ ಭೇಟಿ, ಕಾಲಿಗೆ ಬಿದ್ದ ಅಭಿಮಾನಿ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಕಣ್ಣೀರು ಹಾಕಿದ ಸಿದ್ದರಾಮಯ್ಯ
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ!: ಕಾಂಗ್ರೆಸ್
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಒಂದೇ ಕುಟುಂಬದ ನಾಲ್ವರು ಸಜೀವದಹನ
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಕುಂಭ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ
ಡಿಕೆ ಶಿವಕುಮಾರ್​ಗೆ ಅಭಿನಂದನೆ ತಿಳಿಸಿದ ಸಿಎಂ ಸಿದ್ದರಾಮಯ್ಯ