Rajinikanth
ರಜನಿಕಾಂತ್ ಅವರು ಕಾಲಿವುಡ್ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ
‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್
ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದ ಪಾತ್ರವರ್ಗದಲ್ಲಿ ಕೆಲವು ಬದಲಾವಣೆ ಆಗಿದೆ. ನಂದಮೂರಿ ಬಾಲಕೃಷ್ಣ ಅವರು ಈ ಸಿನಿಮಾದಿಂದ ಹೊರಗೆ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಾಲಯ್ಯ ಅವರ ಬದಲು ವಿಜಯ್ ಸೇತುಪತಿ ಅವರು ‘ಜೈಲರ್ 2’ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ.
- Madan Kumar
- Updated on: Nov 28, 2025
- 9:00 pm
ಹೃದಯಾಘಾತ: ಅಣ್ಣನಿಗಾಗಿ ಬೆಂಗಳೂರಿಗೆ ಓಡೋಡಿ ಬಂದಿದ್ದ ರಜನಿಕಾಂತ್ ವಿಡಿಯೋ ವೈರಲ್
ನಟ ರಜನಿಕಾಂತ್ ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ ಸಹೋದರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ 2 ದಿನಗಳ ಕಾಲ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಶನಿವಾರ (ನ.8) ಡಿಸ್ಚಾರ್ಜ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಈಗ ವೈರಲ್ ಆಗುತ್ತಿದೆ.
- Madan Kumar
- Updated on: Nov 9, 2025
- 11:53 am
ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ಬೆಂಗಳೂರಿಗೆ ಬಂದು ಆಸ್ಪತ್ರೆಗೆ ಸೇರಿಸಿದ ತಲೈವಾ
ಖ್ಯಾತ ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತ ಆಗಿದ್ದರಿಂದ ಅವರಿಗೆ ನಾರಾಯಣ ಹೃದಯಾಲಯದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಹೋದರನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Malatesh Jaggin
- Updated on: Nov 7, 2025
- 10:50 pm
ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ರೆಡಿ ಆದ ರಜನಿಕಾಂತ್?
Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಅವರು ವಯಸ್ಸು ಮತ್ತು ಆರೋಗ್ಯ ಕಾರಣಗಳಿಂದ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ಚಿಂತಿಸುತ್ತಿದ್ದಾರೆ. 74ರ ಹರೆಯದಲ್ಲೂ ಆ್ಯಕ್ಟಿಂಗ್ನಲ್ಲಿ ಬ್ಯುಸಿ ಇರುವ ಥಲೈವಾ, 2027ರೊಳಗೆ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
- Rajesh Duggumane
- Updated on: Nov 1, 2025
- 7:19 pm
ರಜನಿಕಾಂತ್-ಧನುಷ್ ಮನೆಯಲ್ಲಿ ಬಾಂಬ್ ಇಟ್ಟಿದ್ದಾಗಿ ಪೊಲೀಸರಿಗೆ ಬಂತು ಮೇಲ್
ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಮತ್ತು ಧನುಷ್ ಅವರ ಮನೆಗೆ ಬಾಂಬ್ ಇಟ್ಟಿದ್ದಾಗಿ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇಮೇಲ್ ಬಂದಿತ್ತು. ತಕ್ಷಣ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲಿಸಿತು. ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ, ಇದು ಹುಸಿ ಕರೆ ಎಂದು ದೃಢಪಟ್ಟಿದೆ.
- Shreelaxmi H
- Updated on: Oct 29, 2025
- 10:23 am
ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಕೂಲಿ’ ಸಿನಿಮಾ: ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ
ಲೋಕೇಶ್ ಕನಗರಾಜ್ ನಿರ್ದೇಶನ, ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದ ಕಿರುತೆರೆ ಪ್ರಸಾರಕ್ಕೆ ದಿನಾಂಕ ನಿಗದಿ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಕಿರುತೆರೆಯಲ್ಲಿ ವೀಕ್ಷಿಸಿ ಎಂಜಾಯ್ ಮಾಡಬಹುದು. ಉದಯ ಟಿವಿಯಲ್ಲಿ ಅಕ್ಟೋಬರ್ 19ರಂದು ಸಂಜೆ 6 ಗಂಟೆಗೆ ‘ಕೂಲಿ’ ಸಿನಿಮಾದ ಕನ್ನಡ ವರ್ಷನ್ ಪ್ರಸಾರ ಆಗಲಿದೆ.
- Madan Kumar
- Updated on: Oct 15, 2025
- 6:26 pm
ರಜನಿಕಾಂತ್ ಸರಳತೆ ನೋಡಿ; ರಿಷಿಕೇಶದಲ್ಲಿ ರಸ್ತೆ ಬದಿನಿಂತು ಊಟ ಸವಿದ ಸೂಪರ್ ಸ್ಟಾರ್
Rajinikanth In Rishikesh: ನಟ ರಜನಿಕಾಂತ್ 'ಕೂಲಿ' ಸಿನಿಮಾ ಬಳಿಕ ಆಧ್ಯಾತ್ಮಿಕ ವಿರಾಮಕ್ಕಾಗಿ ರಿಷಿಕೇಶಕ್ಕೆ ತೆರಳಿದ್ದಾರೆ. ನೂರಾರು ಕೋಟಿ ಸಂಪಾದಿಸಿದರೂ, ಅಲ್ಲಿ ಸರಳವಾಗಿ ರಸ್ತೆ ಬದಿಯಲ್ಲಿ ಊಟ ಸವಿಯುತ್ತಿದ್ದಾರೆ. ಅವರ ಈ ಫೋಟೋ ವೈರಲ್ ಆಗಿದೆ. ದಯಾನಂದ ಆಶ್ರಮಕ್ಕೆ ಭೇಟಿ ನೀಡಿ, ಗಂಗಾ ನದಿಯಲ್ಲಿ ಧ್ಯಾನ ಮಾಡಿದ್ದಾರೆ.
- Rajesh Duggumane
- Updated on: Oct 6, 2025
- 10:00 am
ನಟ ರಜನಿಕಾಂತ್ ಮೂರ್ತಿಗೆ ಪೂಜೆ ಮಾಡಿ ನವರಾತ್ರಿ ಆಚರಿಸುತ್ತಿರುವ ಅಭಿಮಾನಿ
ದಕ್ಷಿಣ ಭಾರತದಲ್ಲಿ ಸಿನಿಮಾ ಕಲಾವಿದರನ್ನು ದೇವರ ರೀತಿ ಆರಾಧಿಸುವ ಅಭಿಮಾನಿಗಳು ಸಾಕಷ್ಟು ಮಂದಿ ಇದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಸಲುವಾಗಿ ಅಭಿಮಾನಿಯೊಬ್ಬರು ಮಧುರೈನಲ್ಲಿ ದೇವಸ್ಥಾನವನ್ನೇ ಕಟ್ಟಿದ್ದಾರೆ. ಆ ದೇವಸ್ಥಾನದಲ್ಲಿ ರಜನಿಕಾಂತ್ ಫೋಟೋ ಹಾಗೂ ಮೂರ್ತಿಗೆ ಪೂಜೆ ಮಾಡುವ ಮೂಲಕ ನವರಾತ್ರಿ ಹಬ್ಬ ಆಚರಿಸಲಾಗುತ್ತಿದೆ.
- Madan Kumar
- Updated on: Sep 21, 2025
- 8:42 am
‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’: ಆಮಿರ್ ಖಾನ್ಗೆ ಇದೆಯಾ ಈ ಬೇಸರ?
ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.
- Madan Kumar
- Updated on: Sep 14, 2025
- 7:21 am
ಗುರುವಾರ ಅಮೇಜಾನ್ ಪ್ರೈಮ್ನಲ್ಲಿ ರಿಲೀಸ್ ಆಗುತ್ತಿದೆ ಹಿಟ್ ಸಿನಿಮಾ; ಕನ್ನಡದಲ್ಲೂ ಲಭ್ಯ
ತಮಿಳಿನ ಸ್ಟಾರ್ ಹೀರೋ ಚಿತ್ರವು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸೆಪ್ಟೆಂಬರ್ 11 ರಿಂದ ಲಭ್ಯವಾಗಿದೆ. ಈ ಚಿತ್ರವು ಥಿಯೇಟರ್ಗಳಲ್ಲಿ ಮಧ್ಯಮ ಯಶಸ್ಸನ್ನು ಕಂಡಿತ್ತು. ಲೋಕೇಶ್ ಕನಗರಾಜ್ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ಆಮಿರ್ ಖಾನ್, ರಚಿತಾ ರಾಮ್, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. 500 ಕೋಟಿಗೂ ಅಧಿಕ ಬಾಕ್ಸ್ ಆಫೀಸ್ ಸಂಗ್ರಹಿಸಿದ ಈ ಚಿತ್ರ ಒಟಿಟಿಯಲ್ಲಿ ಯಾವ ಮಟ್ಟದ ಪ್ರೇಕ್ಷಕರನ್ನು ಸೆಳೆಯುತ್ತದೆ ಎಂಬ ಕುತೂಹಲ ಮೂಡಿದೆ.
- Rajesh Duggumane
- Updated on: Sep 11, 2025
- 2:31 pm