AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth

Rajinikanth

ರಜನಿಕಾಂತ್ ಅವರು ಕಾಲಿವುಡ್​ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ

ಇನ್ನೂ ಹೆಚ್ಚು ಓದಿ

ರಜನಿಕಾಂತ್ ಸಿನಿಮಾಗೆ ನಟಿ ಶ್ರೀಲೀಲಾ ನಾಯಕಿ? ಸತತ ಸೋಲಿನ ಬಳಿಕವೂ ಬಿಗ್ ಆಫರ್

ನಟಿ ಶ್ರೀಲೀಲಾ ಅವರು ಪರಭಾಷೆಯಲ್ಲೂ ಫೇಮಸ್ ಆಗಿದ್ದಾರೆ. ಆದರೆ, ಅವರ ಇತ್ತೀಚಿನ ಸಿನಿಮಾಗಳು ಹಿಟ್ ಆಗಿಲ್ಲ. ಒಂದು ದೊಡ್ಡ ಗೆಲುವಿಗಾಗಿ ಅವರು ಕಾದಿದ್ದಾರೆ. ಈಗ ಅವರಿಗೆ ರಜನಿಕಾಂತ್ ಜೊತೆ ನಟಿಸುವ ಅವಕಾಶ ಸಿಕ್ಕಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ರಜನೀಕಾಂತ್​​ಗಾಗಿ ನಿಯಮ ಮುರಿದ ನಟ ವಿಜಯ್ ಸೇತುಪತಿ

Vijay Sethupathi: ವಿಜಯ್ ಸೇತುಪತಿ ಈ ಮೊದಲೆಲ್ಲ ಹಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದರು. ಸಣ್ಣ-ಪುಟ್ಟ ಸಿನಿಮಾಗಳಲ್ಲಿಯೂ ವಿಜಯ್ ಅವರು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆದರೆ ಕೆಲ ವರ್ಷಗಳಿಂದ ಯಾವುದೇ ಸಿನಿಮಾನಲ್ಲೂ ಅತಿಥಿ ಪಾತ್ರದಲ್ಲಿ ನಟಿಸುವುದಿಲ್ಲ ಎಂದು ನಿಯಮ ಹೇರಿಕೊಂಡಿದ್ದರು. ಆದರೆ ಈಗ ಆ ನಿಯಮವನ್ನು ರಜನೀಕಾಂತ್ ಅವರಿಗಾಗಿ ಮುರಿದಿದ್ದಾರೆ.

ಗಾಯಕಿ ಎಸ್. ಜಾನಕಿ ನಿಧನ: ಕಂಬನಿ ಮಿಡಿದ ಪ್ರಧಾನಿ ಮೋದಿ, ಸಿಎಂ ವಿಜಯ್, ರಜನಿ, ಕಮಲ್

ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಿನಿಮಾ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಖ್ಯಾತ ನಟರಾದ ಕಮಲ್ ಹಾಸನ್, ರಜನಿಕಾಂತ್, ಚಿರಂಜೀವಿ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ

2023ರಲ್ಲಿ ಬಿಡುಗಡೆಯಾಗಿದ್ದ ‘ಜೈಲರ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿತ್ತು. ಆ ಸಿನಿಮಾದ ಯಶಸ್ಸಿನ ಬಳಿಕ ‘ಜೈಲರ್ 2’ ಘೋಷಿಸಲಾಯಿತು. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ರಜನಿಕಾಂತ್ ಜೊತೆ ಅನೇಕ ಘಟಾನುಘಟಿ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ವಿಜಯ್ ಜನ್ಮದಿನಕ್ಕೆ ರಜನಿಕಾಂತ್ ಸಾರ್ವಜನಿಕವಾಗಿ ವಿಶ್ ಮಾಡಿಲ್ಲ ಯಾಕೆ? ಸಿಕ್ತು ಉತ್ತರ

ರಜನಿಕಾಂತ್ ಮತ್ತು ದಳಪತಿ ವಿಜಯ್ ನಡುವೆ ಮುನಿಸು ಇದೆಯಾ ಎಂಬ ಪ್ರಶ್ನೆ ಆಗಾಗ ಎದುರಾಗುತ್ತದೆ. ಅದಕ್ಕೆ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಂ ವಿಜಯ್ ಜನ್ಮದಿನಕ್ಕೆ ರಜನಿಕಾಂತ್ ಅವರು ಯಾಕೆ ವಿಶ್ ಮಾಡಿಲ್ಲ ಎಂಬ ಚರ್ಚೆಗೆ ಈಗ ಸ್ವತಃ ರಜನಿಕಾಂತ್ ಅವರು ಪೂರ್ಣವಿರಾಮ ಇಟ್ಟಿದ್ದಾರೆ.

ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ ‘ಧರ್ಮನ್’

ಸೂಪರ್‌ಸ್ಟಾರ್ ರಜನಿಕಾಂತ್ ಅವರ 173ನೇ ಚಿತ್ರಕ್ಕೆ 'ಧರ್ಮನ್' ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಚಾಕುವಿನೊಂದಿಗೆ ರಗಡ್ ಲುಕ್‌ನಲ್ಲಿ ರಜನಿಕಾಂತ್ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನ, ಅನಿರುದ್ಧ್ ಸಂಗೀತವಿದೆ. 'ಜೈಲರ್ 2' ಮುಗಿದ ನಂತರ 'ಧರ್ಮನ್' ಚಿತ್ರೀಕರಣ ಆರಂಭವಾಗಲಿದೆ.

‘ಕ್ಯಾಬ್​ಗೆ ಕೊಡಲು ರಜನಿ ಬಳಿ ಹಣ ಇರಲಿಲ್ಲ’; ಹಳೆಯ ಘಟನೆ ನೆನೆದ ನಿರ್ದೇಶಕ

ನಿರ್ದೇಶಕ ಕೆ.ಸಿ. ಬೊಕಾಡಿಯಾ ರಜನಿಕಾಂತ್ ಅವರ ಅಪಾರ ಸರಳತೆ ಮತ್ತು ನಮ್ರತೆಯನ್ನು ಶ್ಲಾಘಿಸಿದ್ದಾರೆ. ಸೆಟ್‌ಗೆ ಯಾರೂ ಕರೆತರಲು ಬರದಿದ್ದಾಗ, ರಜನಿಕಾಂತ್ ಸ್ವತಃ ಟ್ಯಾಕ್ಸಿಯಲ್ಲಿ ಬಂದು ಬಾಡಿಗೆ ನೀಡಲು ಕೇಳಿದ ಪ್ರಸಂಗವನ್ನು ಬೊಕಾಡಿಯಾ ಹಂಚಿಕೊಂಡಿದ್ದಾರೆ. ಇಷ್ಟು ದೊಡ್ಡ ಸೂಪರ್‌ಸ್ಟಾರ್‌ಗೂ ಅಹಂ ಇಲ್ಲದಿರುವುದು ಅವರನ್ನು ಎತ್ತರಕ್ಕೆ ಬೆಳೆಸಿದೆ. ಈ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ

ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಇದು ಸೂಪರ್‌ಸ್ಟಾರ್ ರಜನಿಕಾಂತ್ ಅವರ 'ಬಾಷಾ' ಚಿತ್ರದಿಂದ ಸ್ಪೂರ್ತಿ ಪಡೆದಿದೆ ಎಂದು ಹೇಳಿದ್ದಾರೆ. 'ಬಾಷಾ' ಕಥೆಯ ಟೆಂಪ್ಲೇಟ್‌ಗೆ ಮಹಿಳಾ ಪಾತ್ರವನ್ನು ಸೇರಿಸಿ ಹೊಸ ಟ್ವಿಸ್ಟ್ ನೀಡಲಾಗಿದೆ. ಸಾಯಿ ಪಲ್ಲವಿ ಬದಲಿಗೆ ಸಮಂತಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಮತ್ತು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜೈಲರ್ 2’ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆಗಳ ದಂಡೇ ಇದೆ. ರಜನಿಕಾಂತ್, ಮೋಹನ್ ಲಾಲ್, ಶಿವರಾಜ್‌ಕುಮಾರ್, ವಿಜಯ್ ಸೇತುಪತಿ ಬಳಿಕ ಹೃತಿಕ್ ರೋಷನ್ ಕೂಡ ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್

ನಟ ಆರ್. ಮಾಧವನ್ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅವರು ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯವಾಗಿ ಸೋತಿದ್ದರು. ಆ ಘಟನೆಯ ಬಗ್ಗೆ ಸ್ವತಃ ಆರ್. ಮಾಧವನ್ ಅವರೇ ಮಾತನಾಡಿದ್ದಾರೆ. ಆ ಘಟನೆಯ ಬಗ್ಗೆ ಇಲ್ಲಿದೆ ವಿವರ..

ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್

‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.

ಹಿಟ್ ಕೊಟ್ಟ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್

ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ 'ತಲೈವರ್ 173' ಚಿತ್ರದ ನಿರ್ದೇಶಕರ ಬಗ್ಗೆ ಇದ್ದ ಹಲವು ದಿನಗಳ ಕುತೂಹಲಕ್ಕೆ ತೆರೆಬಿದ್ದಿದೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 'ಓ ಮೈ ಕಡವಲೆ' ಖ್ಯಾತಿಯ ಯುವ ನಿರ್ದೇಶಕ ಅಶ್ವಥ್ ಮಾರಿಮುತ್ತು ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಪರೋಕ್ಷವಾಗಿ ಘೋಷಿಸಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದ್ದು, ರಜನಿಕಾಂತ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ