Rajinikanth
ರಜನಿಕಾಂತ್ ಅವರು ಕಾಲಿವುಡ್ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ
ರಜನಿಕಾಂತ್ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ
ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಇದು ಸೂಪರ್ಸ್ಟಾರ್ ರಜನಿಕಾಂತ್ ಅವರ 'ಬಾಷಾ' ಚಿತ್ರದಿಂದ ಸ್ಪೂರ್ತಿ ಪಡೆದಿದೆ ಎಂದು ಹೇಳಿದ್ದಾರೆ. 'ಬಾಷಾ' ಕಥೆಯ ಟೆಂಪ್ಲೇಟ್ಗೆ ಮಹಿಳಾ ಪಾತ್ರವನ್ನು ಸೇರಿಸಿ ಹೊಸ ಟ್ವಿಸ್ಟ್ ನೀಡಲಾಗಿದೆ. ಸಾಯಿ ಪಲ್ಲವಿ ಬದಲಿಗೆ ಸಮಂತಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.
- Rajesh Duggumane
- Updated on: Jun 13, 2026
- 8:53 am
‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್
ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಮತ್ತು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜೈಲರ್ 2’ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆಗಳ ದಂಡೇ ಇದೆ. ರಜನಿಕಾಂತ್, ಮೋಹನ್ ಲಾಲ್, ಶಿವರಾಜ್ಕುಮಾರ್, ವಿಜಯ್ ಸೇತುಪತಿ ಬಳಿಕ ಹೃತಿಕ್ ರೋಷನ್ ಕೂಡ ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
- Madan Kumar
- Updated on: Jun 11, 2026
- 8:08 pm
ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್
ನಟ ಆರ್. ಮಾಧವನ್ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅವರು ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯವಾಗಿ ಸೋತಿದ್ದರು. ಆ ಘಟನೆಯ ಬಗ್ಗೆ ಸ್ವತಃ ಆರ್. ಮಾಧವನ್ ಅವರೇ ಮಾತನಾಡಿದ್ದಾರೆ. ಆ ಘಟನೆಯ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Jun 10, 2026
- 4:49 pm
ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್
‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.
- Madan Kumar
- Updated on: Jun 7, 2026
- 2:56 pm
ಹಿಟ್ ಕೊಟ್ಟ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್
ಸೂಪರ್ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ 'ತಲೈವರ್ 173' ಚಿತ್ರದ ನಿರ್ದೇಶಕರ ಬಗ್ಗೆ ಇದ್ದ ಹಲವು ದಿನಗಳ ಕುತೂಹಲಕ್ಕೆ ತೆರೆಬಿದ್ದಿದೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 'ಓ ಮೈ ಕಡವಲೆ' ಖ್ಯಾತಿಯ ಯುವ ನಿರ್ದೇಶಕ ಅಶ್ವಥ್ ಮಾರಿಮುತ್ತು ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಪರೋಕ್ಷವಾಗಿ ಘೋಷಿಸಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದ್ದು, ರಜನಿಕಾಂತ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
- Rajesh Duggumane
- Updated on: Jun 2, 2026
- 2:07 pm
ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?
ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.
- Madan Kumar
- Updated on: May 27, 2026
- 10:34 pm
ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ
ಸೂಪರ್ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರ ದಿನಗಳನ್ನು ಈ ಕಾರ್ಡ್ ನೆನಪಿಸುತ್ತದೆ. ಕೇವಲ 275 ರೂ. ಸಂಬಳದಿಂದ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ತಲೈವಾ ಆಗಿ ಬೆಳೆದ ಅವರ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿದಾಯಕವಾಗಿದೆ.
- Shreelaxmi H
- Updated on: May 27, 2026
- 10:11 am
‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದಕ್ಕೆ ರಜನಿಕಾಂತ್ ಅವರಿಗೆ ಅಸೂಯೆ ಇದೆ ಎಂದು ಕೆಲವರು ಮಾತನಾಡಿಕೊಂಡಿದ್ದರು. ಅಂಥವರಿಗೆ ಸುದ್ದಿಗೋಷ್ಠಿ ಮೂಲಕ ರಜನಿಕಾಂತ್ ಅವರು ತಿರುಗೇಟು ನೀಡಿದ್ದಾರೆ. ಕೇಳಿಬಂದ ಎಲ್ಲ ವದಂತಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..
- Madan Kumar
- Updated on: May 17, 2026
- 1:07 pm
ನನ್ನನ್ನು ಯಾರೂ ಕಣ್ಣೆತ್ತಿ ನೋಡಲಿಲ್ಲ: ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಅನುಭವ ಬಿಚ್ಚಿಟ್ಟ ರಜನಿಕಾಂತ್
ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ತಮಗಾದ ಒಂದು ಅಪರೂಪದ ಅನುಭವವನ್ನು ಹಂಚಿಕೊಂಡಿದ್ದಾರೆ. ರಜನಿಕಾಂತ್ ಅವರಿಗೆ ಅಧ್ಯಾತ್ಮದ ಬಗ್ಗೆ ಆಸಕ್ತಿ ಇದೆ. ಈಗ ಆಶ್ರಮದಲ್ಲಿ ನಡೆದ ಕಾರ್ಯಕ್ರಮದ ಭಾಗವಹಿಸಿರುವ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಆ ಬಗ್ಗೆ ವಿವರ ಇಲ್ಲಿದೆ..
- Madan Kumar
- Updated on: May 13, 2026
- 11:37 am
ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್
ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ರಜನಿಕಾಂತ್ ಅವರಿಗೆ ಪ್ರಶ್ನೆ ಕೇಳಲಾಗಿದೆ. ಆ ಪ್ರಶ್ನೆಗೆ ರಜನಿಕಾಂತ್ ಅವರು ಪ್ರತಿಕ್ರಿಯೆ ನೀಡಿದ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ವಿಡಿಯೋ ವೈರಲ್ ಆಗಿದೆ.
- Madan Kumar
- Updated on: May 12, 2026
- 7:30 pm
ತ್ರಿಶಾಗೆ ಒಲಿದು ಬಂದ ಬಿಗ್ ಆಫರ್; ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿ?
ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಈಗ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಅವರಿಗೆ ದೊಡ್ಡ ಆಫರ್ ಬಂದಿದೆ. ವರದಿಗಳ ಪ್ರಕಾರ, ಕಮಲ್ ಹಾಸನ್ ಮತ್ತು ರಜನಿಕಾಂತ್ ಅಭಿನಯಿಸಲಿರುವ ಹೊಸ ಸಿನಿಮಾಗೆ ತ್ರಿಶಾ ಕೃಷ್ಣನ್ ಅವರು ನಾಯಕಿಯಾಗಿ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದೆ.
- Madan Kumar
- Updated on: May 11, 2026
- 2:10 pm
ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ನಿಧನ: ರಜನಿಕಾಂತ್, ಪವನ್ ಕಲ್ಯಾಣ್, ಚಿರಂಜೀವಿ ಕಂಬನಿ
ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ನಿರ್ಮಾಪಕ ಆರ್.ಬಿ. ಚೌಧರಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಮೆಗಾ ಸ್ಟಾರ್ ಚಿರಂಜೀವಿ, ರಜನಿಕಾಂತ್, ಪವನ್ ಕಲ್ಯಾಣ್, ಖುಷ್ಬೂ ಸುಂದರ್ ಸೇರಿದಂತೆ ಹಲವರು ಆರ್.ಬಿ. ಚೌಧರಿ ಜೊತೆಗಿನ ತಮ್ಮ ಒಡನಾಟವನ್ನು ಸ್ಮರಿಸಿದ್ದಾರೆ.
- Madan Kumar
- Updated on: May 6, 2026
- 7:20 am