Rajinikanth
ರಜನಿಕಾಂತ್ ಅವರು ಕಾಲಿವುಡ್ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ
ರಜನಿ ಕೊನೆಯ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ ಆ ವಿಶೇಷ ವ್ಯಕ್ತಿ
ರಜನಿಕಾಂತ್ 'ಜೈಲರ್ 2' ಶೂಟಿಂಗ್ನಲ್ಲಿ ನಿರತರಾಗಿದ್ದಾರೆ. ಇದರ ನಡುವೆ ಅವರ ಕೊನೆಯ ಸಿನಿಮಾ ಕುರಿತು ಚರ್ಚೆ ನಡೆಯುತ್ತಿದೆ. ರಜನಿ ಮಗಳು ಸೌಂದರ್ಯಾ ಇದನ್ನು ನಿರ್ಮಿಸುವ ಸಾಧ್ಯತೆ ಇದೆ. ವೃತ್ತಿ ಜೀವನಕ್ಕೆ ವಿದಾಯ ಹೇಳುವ ಮೊದಲು ಸ್ಮರಣೀಯ ಚಿತ್ರ ನೀಡಲು ಅವರು ಬಯಸುತ್ತಾರೆ. ಅಂತಿಮ ಚಿತ್ರವು ಅಭಿಮಾನಿಗಳಿಗೆ ಭಾವನಾತ್ಮಕವಾಗಿ ಹತ್ತಿರವಾಗಿದ್ದು, ಓಟಿಟಿ ಹಕ್ಕುಗಳಿಗೂ ಹೆಚ್ಚಿನ ಬೆಲೆ ಬರಬಹುದು.
- Rajesh Duggumane
- Updated on: Feb 18, 2026
- 2:49 pm
ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ
ಮಧುರೈ ಮೂಲದ ಅಭಿಮಾನಿಯೊಬ್ಬ ಈ ರೀತಿಯಲ್ಲಿ ಶಿವರಾತ್ರಿ ಹಬ್ಬವನ್ನು ಆಚರಿಸಿದ್ದಾನೆ. ಆತನ ಮನೆಯೊಳಗೆ ರಜನಿಕಾಂತ್ ಅವರ ದೇವಸ್ಥಾನವನ್ನು ನಿರ್ಮಾಣ ಮಾಡಿಕೊಳ್ಳಲಾಗಿದೆ. ಶಿವರಾತ್ರಿ ಪ್ರಯುಕ್ತ ರಜನಿ ಫೋಟೋಗೆ ವಿಶೇಷ ಪೂಜೆ ಮಾಡಿದ ವಿಡಿಯೋ ವೈರಲ್ ಆಗಿದೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..
- Madan Kumar
- Updated on: Feb 15, 2026
- 7:25 am
ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ
ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.
- Madan Kumar
- Updated on: Dec 26, 2025
- 4:50 pm
ರಜನಿಕಾಂತ್ ಜನ್ಮದಿನ: ಸೂಪರ್ಸ್ಟಾರ್ ಎಷ್ಟು ಶ್ರೀಮಂತ ಗೊತ್ತಾ?
ಸೂಪರ್ಸ್ಟಾರ್ ರಜನಿಕಾಂತ್ಗೆ 74ನೇ ಜನ್ಮದಿನ. ಬಸ್ ಕಂಡಕ್ಟರ್ನಿಂದ 430 ಕೋಟಿ ಒಡೆಯನಾಗಿ ಬೆಳೆದ ತಲೈವಾ ಜೀವನ ಕಥೆ ಸ್ಫೂರ್ತಿದಾಯಕ. 75ನೇ ವಯಸ್ಸಿನಲ್ಲೂ ಕೋಟಿಗಟ್ಟಲೆ ಸಂಭಾವನೆ ಪಡೆಯುವ ರಜನಿಕಾಂತ್ ಅವರ ವೃತ್ತಿಜೀವನ, ಆಸ್ತಿ, ಬ್ಲಾಕ್ಬಸ್ಟರ್ ಚಿತ್ರಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಅವರ ಜನಪ್ರಿಯತೆ ಇಂದಿಗೂ ಕಡಿಮೆಯಾಗಿಲ್ಲ.
- Shreelaxmi H
- Updated on: Dec 12, 2025
- 9:15 am
‘ಜೈಲರ್ 2’ ಸಿನಿಮಾದಿಂದ ಬಾಲಯ್ಯ ಔಟ್? ವಿಜಯ್ ಸೇತುಪತಿಗೆ ದೊಡ್ಡ ಚಾನ್ಸ್
ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾದ ಪಾತ್ರವರ್ಗದಲ್ಲಿ ಕೆಲವು ಬದಲಾವಣೆ ಆಗಿದೆ. ನಂದಮೂರಿ ಬಾಲಕೃಷ್ಣ ಅವರು ಈ ಸಿನಿಮಾದಿಂದ ಹೊರಗೆ ನಡೆದಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಾಲಯ್ಯ ಅವರ ಬದಲು ವಿಜಯ್ ಸೇತುಪತಿ ಅವರು ‘ಜೈಲರ್ 2’ ಚಿತ್ರದಲ್ಲಿ ನಟಿಸುತ್ತಾರೆ ಎನ್ನಲಾಗಿದೆ.
- Madan Kumar
- Updated on: Nov 28, 2025
- 9:00 pm
ಹೃದಯಾಘಾತ: ಅಣ್ಣನಿಗಾಗಿ ಬೆಂಗಳೂರಿಗೆ ಓಡೋಡಿ ಬಂದಿದ್ದ ರಜನಿಕಾಂತ್ ವಿಡಿಯೋ ವೈರಲ್
ನಟ ರಜನಿಕಾಂತ್ ಅವರು ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ ಸಹೋದರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ 2 ದಿನಗಳ ಕಾಲ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಶನಿವಾರ (ನ.8) ಡಿಸ್ಚಾರ್ಜ್ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಈಗ ವೈರಲ್ ಆಗುತ್ತಿದೆ.
- Madan Kumar
- Updated on: Nov 9, 2025
- 11:53 am
ರಜನಿಕಾಂತ್ ಅಣ್ಣನಿಗೆ ಹೃದಯಾಘಾತ; ಬೆಂಗಳೂರಿಗೆ ಬಂದು ಆಸ್ಪತ್ರೆಗೆ ಸೇರಿಸಿದ ತಲೈವಾ
ಖ್ಯಾತ ನಟ ರಜನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯಾಘಾತ ಆಗಿದ್ದರಿಂದ ಅವರಿಗೆ ನಾರಾಯಣ ಹೃದಯಾಲಯದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಜನಿಕಾಂತ್ ಅವರು ಬೆಂಗಳೂರಿಗೆ ಬಂದು ಸಹೋದರನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Malatesh Jaggin
- Updated on: Nov 7, 2025
- 10:50 pm
ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ರೆಡಿ ಆದ ರಜನಿಕಾಂತ್?
Rajinikanth: ಸೂಪರ್ ಸ್ಟಾರ್ ರಜನಿಕಾಂತ್ ಅವರು ವಯಸ್ಸು ಮತ್ತು ಆರೋಗ್ಯ ಕಾರಣಗಳಿಂದ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲು ಚಿಂತಿಸುತ್ತಿದ್ದಾರೆ. 74ರ ಹರೆಯದಲ್ಲೂ ಆ್ಯಕ್ಟಿಂಗ್ನಲ್ಲಿ ಬ್ಯುಸಿ ಇರುವ ಥಲೈವಾ, 2027ರೊಳಗೆ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.
- Rajesh Duggumane
- Updated on: Nov 1, 2025
- 7:19 pm
ರಜನಿಕಾಂತ್-ಧನುಷ್ ಮನೆಯಲ್ಲಿ ಬಾಂಬ್ ಇಟ್ಟಿದ್ದಾಗಿ ಪೊಲೀಸರಿಗೆ ಬಂತು ಮೇಲ್
ತಮಿಳಿನ ಖ್ಯಾತ ನಟರಾದ ರಜನಿಕಾಂತ್ ಮತ್ತು ಧನುಷ್ ಅವರ ಮನೆಗೆ ಬಾಂಬ್ ಇಟ್ಟಿದ್ದಾಗಿ ತಮಿಳುನಾಡು ಪೊಲೀಸ್ ಮಹಾನಿರ್ದೇಶಕರಿಗೆ ಇಮೇಲ್ ಬಂದಿತ್ತು. ತಕ್ಷಣ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ತೆರಳಿ ಪರಿಶೀಲಿಸಿತು. ಯಾವುದೇ ಸ್ಫೋಟಕ ಪತ್ತೆಯಾಗದ ಕಾರಣ, ಇದು ಹುಸಿ ಕರೆ ಎಂದು ದೃಢಪಟ್ಟಿದೆ.
- Shreelaxmi H
- Updated on: Oct 29, 2025
- 10:23 am
ಉದಯ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಕೂಲಿ’ ಸಿನಿಮಾ: ದಿನಾಂಕ, ಸಮಯದ ಬಗ್ಗೆ ಇಲ್ಲಿದೆ ಮಾಹಿತಿ
ಲೋಕೇಶ್ ಕನಗರಾಜ್ ನಿರ್ದೇಶನ, ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದ ಕಿರುತೆರೆ ಪ್ರಸಾರಕ್ಕೆ ದಿನಾಂಕ ನಿಗದಿ. ಚಿತ್ರಮಂದಿರದಲ್ಲಿ ಈ ಸಿನಿಮಾವನ್ನು ಮಿಸ್ ಮಾಡಿಕೊಂಡವರು ಈಗ ಕಿರುತೆರೆಯಲ್ಲಿ ವೀಕ್ಷಿಸಿ ಎಂಜಾಯ್ ಮಾಡಬಹುದು. ಉದಯ ಟಿವಿಯಲ್ಲಿ ಅಕ್ಟೋಬರ್ 19ರಂದು ಸಂಜೆ 6 ಗಂಟೆಗೆ ‘ಕೂಲಿ’ ಸಿನಿಮಾದ ಕನ್ನಡ ವರ್ಷನ್ ಪ್ರಸಾರ ಆಗಲಿದೆ.
- Madan Kumar
- Updated on: Oct 15, 2025
- 6:26 pm
ರಜನಿಕಾಂತ್ ಸರಳತೆ ನೋಡಿ; ರಿಷಿಕೇಶದಲ್ಲಿ ರಸ್ತೆ ಬದಿನಿಂತು ಊಟ ಸವಿದ ಸೂಪರ್ ಸ್ಟಾರ್
Rajinikanth In Rishikesh: ನಟ ರಜನಿಕಾಂತ್ 'ಕೂಲಿ' ಸಿನಿಮಾ ಬಳಿಕ ಆಧ್ಯಾತ್ಮಿಕ ವಿರಾಮಕ್ಕಾಗಿ ರಿಷಿಕೇಶಕ್ಕೆ ತೆರಳಿದ್ದಾರೆ. ನೂರಾರು ಕೋಟಿ ಸಂಪಾದಿಸಿದರೂ, ಅಲ್ಲಿ ಸರಳವಾಗಿ ರಸ್ತೆ ಬದಿಯಲ್ಲಿ ಊಟ ಸವಿಯುತ್ತಿದ್ದಾರೆ. ಅವರ ಈ ಫೋಟೋ ವೈರಲ್ ಆಗಿದೆ. ದಯಾನಂದ ಆಶ್ರಮಕ್ಕೆ ಭೇಟಿ ನೀಡಿ, ಗಂಗಾ ನದಿಯಲ್ಲಿ ಧ್ಯಾನ ಮಾಡಿದ್ದಾರೆ.
- Rajesh Duggumane
- Updated on: Oct 6, 2025
- 10:00 am
ನಟ ರಜನಿಕಾಂತ್ ಮೂರ್ತಿಗೆ ಪೂಜೆ ಮಾಡಿ ನವರಾತ್ರಿ ಆಚರಿಸುತ್ತಿರುವ ಅಭಿಮಾನಿ
ದಕ್ಷಿಣ ಭಾರತದಲ್ಲಿ ಸಿನಿಮಾ ಕಲಾವಿದರನ್ನು ದೇವರ ರೀತಿ ಆರಾಧಿಸುವ ಅಭಿಮಾನಿಗಳು ಸಾಕಷ್ಟು ಮಂದಿ ಇದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಸಲುವಾಗಿ ಅಭಿಮಾನಿಯೊಬ್ಬರು ಮಧುರೈನಲ್ಲಿ ದೇವಸ್ಥಾನವನ್ನೇ ಕಟ್ಟಿದ್ದಾರೆ. ಆ ದೇವಸ್ಥಾನದಲ್ಲಿ ರಜನಿಕಾಂತ್ ಫೋಟೋ ಹಾಗೂ ಮೂರ್ತಿಗೆ ಪೂಜೆ ಮಾಡುವ ಮೂಲಕ ನವರಾತ್ರಿ ಹಬ್ಬ ಆಚರಿಸಲಾಗುತ್ತಿದೆ.
- Madan Kumar
- Updated on: Sep 21, 2025
- 8:42 am