Rajinikanth
ರಜನಿಕಾಂತ್ ಅವರು ಕಾಲಿವುಡ್ನ ಸ್ಟಾರ್ ಹೀರೋ. ಅವರು 1950ರ ಡಿಸೆಂಬರ್ 12ರಂದು ಬೆಂಗಳೂರಿನಲ್ಲಿ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಜನಿಸಿದರು. ಆರಂಭದಲ್ಲಿ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದರು. ಆ ಬಳಿಕ ಹೀರೋ ಆಗಬೇಕು ಎಂದು ತಮಿಳುನಾಡಿಗೆ ತೆರಳಿದರು. ತಮಿಳು ಚಲನಚಿತ್ರಗಳಲ್ಲಿನ ವಿವಿಧ ಪಾತ್ರಗಳೊಂದಿಗೆ ಖ್ಯಾತಿಗೆ ಪಡೆದರು. ಕನ್ನಡದಲ್ಲೂ ಅವರು ನಟಿಸಿದ್ದಾರೆ. ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದಾರೆ. ‘ಎಂದಿರನ್’, ‘ಜೈಲರ್’ ಅಂಥ ಸಿನಿಮಾ ಮಾಡಿ ಅವರು ಗಮನ ಸೆಳೆದಿದ್ದಾರೆ. ವೃತ್ತಿಜೀವನವು ನಾಲ್ಕು ದಶಕ ಕಳೆದಿದ್ದಾರೆ. ಪ್ರಪಂಚದಾದ್ಯಂತ ಲಕ್ಷಾಂತರ ಅಭಿಮಾನಿಗಳಿಂದ ಪೂಜಿಸಲ್ಪಟ್ಟ ಅವರನ್ನು ‘ಸೂಪರ್ ಸ್ಟಾರ್’ ಎಂದು ಕರೆಯಲಾಗುತ್ತದೆ. ಅವರು ಆಧ್ಯಾತ್ಮಿಕದ ಕಡೆಗೆ ಆಕರ್ಷಿಸಲ್ಪಟ್ಟಿದ್ದಾರೆ
ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ
2023ರಲ್ಲಿ ಬಿಡುಗಡೆಯಾಗಿದ್ದ ‘ಜೈಲರ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಕಲೆಕ್ಷನ್ ಮಾಡಿತ್ತು. ಆ ಸಿನಿಮಾದ ಯಶಸ್ಸಿನ ಬಳಿಕ ‘ಜೈಲರ್ 2’ ಘೋಷಿಸಲಾಯಿತು. ಈಗ ಈ ಚಿತ್ರದ ರಿಲೀಸ್ ದಿನಾಂಕ ಪ್ರಕಟಿಸಲಾಗಿದೆ. ರಜನಿಕಾಂತ್ ಜೊತೆ ಅನೇಕ ಘಟಾನುಘಟಿ ಸ್ಟಾರ್ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
- Madan Kumar
- Updated on: Jul 2, 2026
- 9:02 pm
ವಿಜಯ್ ಜನ್ಮದಿನಕ್ಕೆ ರಜನಿಕಾಂತ್ ಸಾರ್ವಜನಿಕವಾಗಿ ವಿಶ್ ಮಾಡಿಲ್ಲ ಯಾಕೆ? ಸಿಕ್ತು ಉತ್ತರ
ರಜನಿಕಾಂತ್ ಮತ್ತು ದಳಪತಿ ವಿಜಯ್ ನಡುವೆ ಮುನಿಸು ಇದೆಯಾ ಎಂಬ ಪ್ರಶ್ನೆ ಆಗಾಗ ಎದುರಾಗುತ್ತದೆ. ಅದಕ್ಕೆ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಿಎಂ ವಿಜಯ್ ಜನ್ಮದಿನಕ್ಕೆ ರಜನಿಕಾಂತ್ ಅವರು ಯಾಕೆ ವಿಶ್ ಮಾಡಿಲ್ಲ ಎಂಬ ಚರ್ಚೆಗೆ ಈಗ ಸ್ವತಃ ರಜನಿಕಾಂತ್ ಅವರು ಪೂರ್ಣವಿರಾಮ ಇಟ್ಟಿದ್ದಾರೆ.
- Madan Kumar
- Updated on: Jun 24, 2026
- 4:08 pm
ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್; ರಕ್ತಸಿಕ್ತ ಚಾಕು ಹಿಡಿದು ಬಂದ ‘ಧರ್ಮನ್’
ಸೂಪರ್ಸ್ಟಾರ್ ರಜನಿಕಾಂತ್ ಅವರ 173ನೇ ಚಿತ್ರಕ್ಕೆ 'ಧರ್ಮನ್' ಎಂದು ಹೆಸರಿಡಲಾಗಿದ್ದು, ಪೋಸ್ಟರ್ ಬಿಡುಗಡೆಯಾಗಿದೆ. ರಕ್ತಸಿಕ್ತ ಚಾಕುವಿನೊಂದಿಗೆ ರಗಡ್ ಲುಕ್ನಲ್ಲಿ ರಜನಿಕಾಂತ್ ಗಮನ ಸೆಳೆದಿದ್ದಾರೆ. ಕಮಲ್ ಹಾಸನ್ ಅವರ ನಿರ್ಮಾಣ ಸಂಸ್ಥೆ ಮೂಲಕ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಶ್ವತ್ ಮಾರಿಮುತ್ತು ನಿರ್ದೇಶನ, ಅನಿರುದ್ಧ್ ಸಂಗೀತವಿದೆ. 'ಜೈಲರ್ 2' ಮುಗಿದ ನಂತರ 'ಧರ್ಮನ್' ಚಿತ್ರೀಕರಣ ಆರಂಭವಾಗಲಿದೆ.
- Rajesh Duggumane
- Updated on: Jun 24, 2026
- 10:53 am
‘ಕ್ಯಾಬ್ಗೆ ಕೊಡಲು ರಜನಿ ಬಳಿ ಹಣ ಇರಲಿಲ್ಲ’; ಹಳೆಯ ಘಟನೆ ನೆನೆದ ನಿರ್ದೇಶಕ
ನಿರ್ದೇಶಕ ಕೆ.ಸಿ. ಬೊಕಾಡಿಯಾ ರಜನಿಕಾಂತ್ ಅವರ ಅಪಾರ ಸರಳತೆ ಮತ್ತು ನಮ್ರತೆಯನ್ನು ಶ್ಲಾಘಿಸಿದ್ದಾರೆ. ಸೆಟ್ಗೆ ಯಾರೂ ಕರೆತರಲು ಬರದಿದ್ದಾಗ, ರಜನಿಕಾಂತ್ ಸ್ವತಃ ಟ್ಯಾಕ್ಸಿಯಲ್ಲಿ ಬಂದು ಬಾಡಿಗೆ ನೀಡಲು ಕೇಳಿದ ಪ್ರಸಂಗವನ್ನು ಬೊಕಾಡಿಯಾ ಹಂಚಿಕೊಂಡಿದ್ದಾರೆ. ಇಷ್ಟು ದೊಡ್ಡ ಸೂಪರ್ಸ್ಟಾರ್ಗೂ ಅಹಂ ಇಲ್ಲದಿರುವುದು ಅವರನ್ನು ಎತ್ತರಕ್ಕೆ ಬೆಳೆಸಿದೆ. ಈ ಕಥೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
- Rajesh Duggumane
- Updated on: Jun 24, 2026
- 9:33 am
ರಜನಿಕಾಂತ್ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ
ಸಮಂತಾ ರುತ್ ಪ್ರಭು ಅವರ 'ಮಾ ಇಂಟಿ ಬಂಗಾರಂ' ಸಿನಿಮಾ ಜೂನ್ 19ರಂದು ತೆರೆಗೆ ಬರಲಿದೆ. ನಿರ್ದೇಶಕಿ ನಂದಿನಿ ರೆಡ್ಡಿ ಇದು ಸೂಪರ್ಸ್ಟಾರ್ ರಜನಿಕಾಂತ್ ಅವರ 'ಬಾಷಾ' ಚಿತ್ರದಿಂದ ಸ್ಪೂರ್ತಿ ಪಡೆದಿದೆ ಎಂದು ಹೇಳಿದ್ದಾರೆ. 'ಬಾಷಾ' ಕಥೆಯ ಟೆಂಪ್ಲೇಟ್ಗೆ ಮಹಿಳಾ ಪಾತ್ರವನ್ನು ಸೇರಿಸಿ ಹೊಸ ಟ್ವಿಸ್ಟ್ ನೀಡಲಾಗಿದೆ. ಸಾಯಿ ಪಲ್ಲವಿ ಬದಲಿಗೆ ಸಮಂತಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡದ ದಿಗಂತ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.
- Rajesh Duggumane
- Updated on: Jun 13, 2026
- 8:53 am
‘ಜೈಲರ್ 2’ ಚಿತ್ರತಂಡಕ್ಕೆ ಸೇರ್ಪಡೆಯಾದ ಹೃತಿಕ್ ರೋಷನ್; ರಜನಿ ಜೊತೆ 2 ದಿನ ಶೂಟಿಂಗ್
ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಮತ್ತು ಸನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸುತ್ತಿರುವ ‘ಜೈಲರ್ 2’ ಚಿತ್ರದಲ್ಲಿ ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆಗಳ ದಂಡೇ ಇದೆ. ರಜನಿಕಾಂತ್, ಮೋಹನ್ ಲಾಲ್, ಶಿವರಾಜ್ಕುಮಾರ್, ವಿಜಯ್ ಸೇತುಪತಿ ಬಳಿಕ ಹೃತಿಕ್ ರೋಷನ್ ಕೂಡ ಈ ಸಿನಿಮಾಗೆ ಸೇರ್ಪಡೆ ಆಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
- Madan Kumar
- Updated on: Jun 11, 2026
- 8:08 pm
ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯ ಸೋಲು ಕಂಡಿದ್ದ ಆರ್. ಮಾಧವನ್
ನಟ ಆರ್. ಮಾಧವನ್ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಆದರೆ ಅವರು ರಜನಿಕಾಂತ್ ಸ್ಟೈಲ್ ಕಾಪಿ ಮಾಡಲು ಹೋಗಿ ಹೀನಾಯವಾಗಿ ಸೋತಿದ್ದರು. ಆ ಘಟನೆಯ ಬಗ್ಗೆ ಸ್ವತಃ ಆರ್. ಮಾಧವನ್ ಅವರೇ ಮಾತನಾಡಿದ್ದಾರೆ. ಆ ಘಟನೆಯ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Jun 10, 2026
- 4:49 pm
ಶಾರುಖ್ ಖಾನ್ ಅಲಭ್ಯತೆ; ‘ಜೈಲರ್ 2’ ಸಿನಿಮಾದಲ್ಲಿ ಅತಿಥಿ ಪಾತ್ರವೇ ಡಿಲೀಟ್
‘ಜೈಲರ್ 2’ ಸಿನಿಮಾದಲ್ಲಿ ಒಂದು ಪ್ರಮುಖವಾದ ಅತಿಥಿ ಪಾತ್ರವನ್ನು ಪ್ಲ್ಯಾನ್ ಮಾಡಲಾಗಿತ್ತು. ಆದರೆ ಈಗ ಆ ಪ್ಲ್ಯಾನ್ ಕೈ ಬಿಡಲಾಗಿದೆ. ಶಾರುಖ್ ಖಾನ್, ಹೃತಿಕ್ ರೋಷನ್ ಮುಂತಾದವರು ಆ ಪಾತ್ರವನ್ನು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಚಿತ್ರದ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅನಿವಾರ್ಯ ಆಗಿದೆ.
- Madan Kumar
- Updated on: Jun 7, 2026
- 2:56 pm
ಹಿಟ್ ಕೊಟ್ಟ ನಿರ್ದೇಶಕನಿಗೆ ಚಾನ್ಸ್ ಕೊಟ್ಟ ರಜನಿಕಾಂತ್-ಕಮಲ್
ಸೂಪರ್ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ 'ತಲೈವರ್ 173' ಚಿತ್ರದ ನಿರ್ದೇಶಕರ ಬಗ್ಗೆ ಇದ್ದ ಹಲವು ದಿನಗಳ ಕುತೂಹಲಕ್ಕೆ ತೆರೆಬಿದ್ದಿದೆ. ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ 'ಓ ಮೈ ಕಡವಲೆ' ಖ್ಯಾತಿಯ ಯುವ ನಿರ್ದೇಶಕ ಅಶ್ವಥ್ ಮಾರಿಮುತ್ತು ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಪರೋಕ್ಷವಾಗಿ ಘೋಷಿಸಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದ್ದು, ರಜನಿಕಾಂತ್ ಅವರನ್ನು ಹೊಸ ಅವತಾರದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
- Rajesh Duggumane
- Updated on: Jun 2, 2026
- 2:07 pm
ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?
ಶಾರುಖ್ ಖಾನ್ ಅವರು ಡೇಟ್ಸ್ ಇಲ್ಲದ ಕಾರಣ ‘ಜೈಲರ್ 2’ ಸಿನಿಮಾದಲ್ಲಿ ನಟಿಸಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ನೆಲ್ಸನ್ ದಿಲೀಪ್ಕುಮಾರ್ ನಿರ್ದೇಶನದ ಈ ಚಿತ್ರತಂಡ ಈಗ ಹೃತಿಕ್ ರೋಷನ್ ಜೊತೆ ಮಾತುಕಥೆ ನಡೆಸುತ್ತಿದೆ ಎಂದು ವರದಿ ಆಗಿದೆ. ಆದರೆ ಈ ಬಗ್ಗೆ ತಂಡದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.
- Madan Kumar
- Updated on: May 27, 2026
- 10:34 pm
ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ
ಸೂಪರ್ಸ್ಟಾರ್ ರಜನಿಕಾಂತ್ ಅವರ ಬೆಂಗಳೂರು ಸಾರಿಗೆ ಸಂಸ್ಥೆಯ ಹಳೆಯ ID ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರರಂಗಕ್ಕೆ ಬರುವ ಮುನ್ನ ಶಿವಾಜಿ ರಾವ್ ಗಾಯಕ್ವಾಡ್ ಆಗಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರ ದಿನಗಳನ್ನು ಈ ಕಾರ್ಡ್ ನೆನಪಿಸುತ್ತದೆ. ಕೇವಲ 275 ರೂ. ಸಂಬಳದಿಂದ ಆರಂಭಿಸಿ, ಇಂದು ಭಾರತೀಯ ಚಿತ್ರರಂಗದ ತಲೈವಾ ಆಗಿ ಬೆಳೆದ ಅವರ ಪಯಣ ಲಕ್ಷಾಂತರ ಜನರಿಗೆ ಸ್ಫೂರ್ತಿದಾಯಕವಾಗಿದೆ.
- Shreelaxmi H
- Updated on: May 27, 2026
- 10:11 am
‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ
ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದಕ್ಕೆ ರಜನಿಕಾಂತ್ ಅವರಿಗೆ ಅಸೂಯೆ ಇದೆ ಎಂದು ಕೆಲವರು ಮಾತನಾಡಿಕೊಂಡಿದ್ದರು. ಅಂಥವರಿಗೆ ಸುದ್ದಿಗೋಷ್ಠಿ ಮೂಲಕ ರಜನಿಕಾಂತ್ ಅವರು ತಿರುಗೇಟು ನೀಡಿದ್ದಾರೆ. ಕೇಳಿಬಂದ ಎಲ್ಲ ವದಂತಿಗಳಿಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..
- Madan Kumar
- Updated on: May 17, 2026
- 1:07 pm