AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan

Ram Charan

ರಾಮ್ ಚರಣ್ ಅವರು ಜನಿಸಿದ್ದು 1985ರ ಮಾರ್ಚ್ 27ರಂದು. ತೆಲುಗು ಚಿತ್ರರಂಗದಲ್ಲಿ ಅವರು ಪ್ರಮುಖನಾಗಿ ಗುರುತಿಸಿಕೊಂಡಿದ್ದಾರೆ. ಕೊನಿಡೆಲಾ ರಾಮ್ ಚರಣ್ ತೇಜ್ ಎಂದೂ ಕರೆಯಲ್ಪಡುವ ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. 2007ರಲ್ಲಿ ‘ಚಿರುತಾ’ ಚಿತ್ರದ ಮೂಲಕ ಅಭಿನಯಕ್ಕೆ ಪಾದಾರ್ಪಣೆ ಮಾಡಿದ ಅವರು ತಮ್ಮ ಅಮೋಘ ಅಭಿನಯ ಮತ್ತು ಅಸಾಧಾರಣ ನೃತ್ಯ ಕೌಶಲ್ಯಕ್ಕಾಗಿ ಶೀಘ್ರವಾಗಿ ಖ್ಯಾತಿಯನ್ನು ಗಳಿಸಿದರು. ‘ಮಗಧೀರ’, ‘ಆರ್​ಆರ್​ಆರ್’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾಗಳಲ್ಲಿ ಅವರು ಮಾಡಿದ ಪಾತ್ರಗಳು ಅವರಿಗೆ ವ್ಯಾಪಕವಾದ ಮೆಚ್ಚುಗೆಯನ್ನು ತಂದುಕೊಟ್ಟಿವೆ. ಫಿಲ್ಮ್​ ಫೇರ್​, ನಂದಿ ಅವಾರ್ಡ್​ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿರುವ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲೂ ಫೇಮಸ್​ ಆಗಿದ್ದಾರೆ.

ಇನ್ನೂ ಹೆಚ್ಚು ಓದಿ

ನೆಟ್‌ಫ್ಲಿಕ್ಸ್‌ನಲ್ಲಿ ‘ಪೆದ್ದಿ’ ಬಿಡುಗಡೆ: ಜಾನ್ವಿ ಕಪೂರ್ ನಟನೆಯ ವಿವಾದಾತ್ಮಕ ದೃಶ್ಯಕ್ಕೆ ಕತ್ತರಿ

‘ಪೆದ್ದಿ’ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆ ಆದಾಗ ಕೆಲವು ಕಾರಣಗಳಿಂದ ಟೀಕೆಗೆ ಗುರಿ ಆಗಿತ್ತು. ನಟಿ ಜಾನ್ವಿ ಕಪೂರ್ ಅವರು ಕಾಣಿಸಿಕೊಂಡ ದೃಶ್ಯಗಳು ಆಕ್ಷೇಪಾರ್ಹವಾಗಿವೆ ಎಂದು ಕೆಲವರು ತಕರಾರು ತೆಗೆದಿದ್ದರು. ಈಗ ಒಟಿಟಿ ವರ್ಷನ್​ನಲ್ಲಿ ಆ ದೃಶ್ಯಗಳನ್ನು ತೆಗೆದುಹಾಕಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ಪೆದ್ದಿ’ ಸಿನಿಮಾ ಬಗೆಗಿನ ಟ್ರೋಲ್‌ ಬಗ್ಗೆ ಕೊನೆಗೂ ಮೌನ ಮುರಿದ ರಾಮ್ ಚರಣ್

ನಟ ರಾಮ್ ಚರಣ್ ನಟನೆಯ 'ಪೆದ್ದಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಜಾನ್ವಿ ಕಪೂರ್ ಪಾತ್ರದ ಬಗ್ಗೆ ಟೀಕೆಗಳು ವ್ಯಕ್ತವಾದಾಗ, ರಾಮ್ ಚರಣ್ ಹೈದರಾಬಾದ್‌ನಲ್ಲಿ ನಡೆದ ಸಕ್ಸಸ್ ಮೀಟ್‌ನಲ್ಲಿ ಚಿತ್ರವನ್ನು ಸಮರ್ಥಿಸಿಕೊಂಡರು. ಪ್ರೇಕ್ಷಕರ ಬೆಂಬಲಕ್ಕೆ ಧನ್ಯವಾದ ಹೇಳಿದ ಅವರು, ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕಿದ ನಂತರವೂ ಸಿನಿಮಾ 332 ಕೋಟಿ ರೂ. ಗಳಿಸಿ ದಾಖಲೆ ಬರೆದಿದೆ.

‘ರಾಮ್ ಚರಣ್ ಹೊಸ ತಲೆಮಾರಿನ ಮೆಗಾಸ್ಟಾರ್’; ತಮ್ಮ ಬಿರುದನ್ನು ಮಗನಿಗೆ ಕೊಟ್ಟ ಚಿರಂಜೀವಿ

ಮೆಗಾಸ್ಟಾರ್ ಚಿರಂಜೀವಿ ಅವರು 'ಪೆದ್ದಿ' ಚಿತ್ರದ ಸಕ್ಸಸ್ ಮೀಟ್‌ನಲ್ಲಿ ಮಗ ರಾಮ್ ಚರಣ್ ಅವರನ್ನು 'ಹೊಸ ತಲೆಮಾರಿನ ಮೆಗಾಸ್ಟಾರ್' ಎಂದು ಶ್ಲಾಘಿಸಿದರು. ‘ಪೆದ್ದಿ’ ಚಿತ್ರದಲ್ಲಿ ಚರಣ್ ಪಾತ್ರವಾಗಿ ಜೀವಿಸಿದ್ದಾನೆ ಎಂದ ಚಿರಂಜೀವಿ ಭಾವುಕರಾದರು. ಮಗನ ಯಶಸ್ಸಿಗೆ ತಂದೆಯಾಗಿ ತಮಗೆ ಅತೀವ ಸಂತಸವಿದೆ ಎಂದು ಚಿರಂಜೀವಿ ಹೇಳಿದ್ದು, ಅವರ ಮಾತುಗಳು ವೈರಲ್ ಆಗಿವೆ.

ಕೊನೆಗೂ ಮಗಳ ಮುಖ ತೋರಿಸಿದ ರಾಮ್ ಚರಣ್, ಉಪಾಸನಾ; ಕ್ಲಿನ್ ಕಾರಾ ಯಾರ ರೀತಿ ಇದ್ದಾಳೆ ನೋಡಿ..

ರಾಮ್ ಚರಣ್ ಮತ್ತು ಉಪಾಸನಾ ಕೊನಿಡೆಲಾ ಅವರು ಇದೇ ಮೊದಲ ಬಾರಿಗೆ ಮಗಳು ಕ್ಲಿನ್ ಕಾರಾ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಹ್ಯಾಪಿ ಬರ್ತ್‌ಡೇ ಕ್ಲಿನ್ ಕಾರಾ, ನಮ್ಮ ಮುದ್ದಾದ ಪುಟ್ಟ ಕಂದಮ್ಮ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಫೋಟೋ ನೋಡಿದ ಕೂಡಲೇ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರೀತಿಯಿಂದ ಕಮೆಂಟ್ ಮಾಡಿದ್ದಾರೆ.

‘ಗೇಮ್ ಚೇಂಜರ್ ಚಿತ್ರದ ಸೋಲು ನನ್ನ ವೈಫಲ್ಯ, ವಿಷಾದವಿದೆ’; ಮುಕ್ತವಾಗಿ ಒಪ್ಪಿಕೊಂಡ ನಿರ್ಮಾಪಕ

ನಿರ್ಮಾಪಕ ದಿಲ್ ರಾಜು 'ಗೇಮ್ ಚೇಂಜರ್' ಚಿತ್ರದ ನಿರ್ಮಾಣ ಅನುಭವವನ್ನು ತಮ್ಮ ವೃತ್ತಿಜೀವನದ ದೊಡ್ಡ ತಪ್ಪು ಎಂದು ಬಣ್ಣಿಸಿದ್ದಾರೆ. ಚಿತ್ರದ ಅತಿಯಾದ ಅವಧಿ ಮತ್ತು ಅಂತಿಮ ಕಟ್ ನೋಡಲು ಸಾಧ್ಯವಾಗದ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ದೊಡ್ಡ ನಿರ್ದೇಶಕರೊಂದಿಗೆ ಕೆಲಸ ಮಾಡುವ ಸವಾಲುಗಳು, ನಿರ್ಮಾಪಕರಾಗಿ ತಮ್ಮ ವೈಫಲ್ಯವನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ಸ್ಪಷ್ಟ ಒಪ್ಪಂದಗಳಿಲ್ಲದೆ ಇಂತಹ ದೊಡ್ಡ ಯೋಜನೆಗಳಿಂದ ದೂರವಿರುವುದಾಗಿ ಹೇಳಿದ್ದು, ತಂಡದ ಹೊಂದಾಣಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ.

ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ

ರಾಮ್ ಚರಣ್ ಮತ್ತು ಸುಕುಮಾರ್ ಅವರ ಬಹುನಿರೀಕ್ಷಿತ ಚಿತ್ರದ ಚಿತ್ರೀಕರಣ ವಿಳಂಬವಾಗಿದೆ. ನಿರ್ದೇಶಕ ಸುಕುಮಾರ್ ಕಥೆಯನ್ನು ಅಂತಿಮಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. 'ಪೆದ್ದಿ' ಯಶಸ್ಸಿನಲ್ಲಿರುವ ರಾಮ್ ಚರಣ್ ಅವರಿಗೆ ಈ ವಿಳಂಬ ವರದಾನವಾಗಿದೆ, ಏಕೆಂದರೆ ಇದು ಗಾಯದಿಂದ ಚೇತರಿಸಿಕೊಳ್ಳಲು ಸಮಯ ನೀಡಿದೆ. ದಸರಾ ಹಬ್ಬದ ನಂತರ ಚಿತ್ರದ ಅಧಿಕೃತ ಲಾಂಚ್ ನಿರೀಕ್ಷಿಸಲಾಗಿದೆ, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

‘ಪೆದ್ದಿ’ ಚಿತ್ರದ  ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ನಿರ್ದೇಶಕ; ಹೊಸ ದೃಶ್ಯಗಳ ಸೇರ್ಪಡೆ 

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ 'ಪೆದ್ದಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಸದ್ಯ ಭಾರಿ ಕಲೆಕ್ಷನ್ ಮಾಡುತ್ತಿರುವ ಈ ಸೂಪರ್ ಹಿಟ್ ಚಿತ್ರಕ್ಕೆ ಹೊಸದಾಗಿ ಮೂರು ದೃಶ್ಯಗಳನ್ನು ಸೇರಿಸಲಾಗಿದೆ. ಜೂನ್ 17ರಿಂದ ಪ್ರದರ್ಶನಗೊಳ್ಳಲಿರುವ ಈ ದೃಶ್ಯಗಳು ನಾಯಕಿ ಜಾನ್ವಿ ಕಪೂರ್ ಮತ್ತು ಜಗಪತಿ ಬಾಬು ಅವರ ಪಾತ್ರಗಳಿಗೆ ಇನ್ನಷ್ಟು ತೂಕ ನೀಡಲಿವೆ.

‘ಪೆದ್ದಿ’ ಸಕ್ಸಸ್ ಮೀಟ್‌ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ?

ಜಾನ್ವಿ ಕಪೂರ್ ಅವರಿಗೆ ‘ಪೆದ್ದಿ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾದಿಂದ ವಿವಾದ ಆಗಿದ್ದೇ ಹೆಚ್ಚು. ಹಾಗಾಗಿ ಅವರು ಸಿನಿಮಾದ ಸಕ್ಸಸ್ ಮೀಟ್​ಗೆ ಬಂದಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..

ತಪ್ಪು ಒಪ್ಪಿಕೊಂಡು ವಿವಾದಾತ್ಮಕ ದೃಶ್ಯ ತೆಗೆದು ಹಾಕಿದ ‘ಪೆದ್ದಿ’ ನಿರ್ದೇಶಕ ಬುಚ್ಚಿ ಬಾಬು ಸನಾ

‘ಪೆದ್ದಿ’ ಸಿನಿಮಾದಲ್ಲಿ ನಾಯಕಿ ಜಾನ್ವಿ ಕಪೂರ್ ಅವರನ್ನು ತೋರಿಸಿದ ರೀತಿ ತಪ್ಪಾಗಿದೆ ಎಂಬುದನ್ನು ಸ್ವತಃ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೇ, ವಿವಾದಕ್ಕೆ ಕಾರಣ ಆಗಿರುವ ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಕೂಡ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ನಾಲ್ಕನೇ ದಿನ ಭರ್ಜರಿ ಗಳಿಕೆ ಮಾಡಿದ ‘ಪೆದ್ದಿ’; ಮುಂದಿದೆ ಚಾಲೆಂಜ್

ರಾಮ್ ಚರಣ್ ಅಭಿನಯದ 'ಪೆದ್ದಿ' ಚಿತ್ರ ನಾಲ್ಕು ದಿನಗಳಲ್ಲಿ ಜಾಗತಿಕವಾಗಿ 233 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಭಾನುವಾರ ₹31.90 ಕೋಟಿ ಗಳಿಕೆಯೊಂದಿಗೆ ಒಟ್ಟು ₹157.15 ಕೋಟಿ ನೆಟ್ ಕಲೆಕ್ಷನ್ ಭಾರತದಲ್ಲಾಗಿದೆ. ಆದರೆ, ವಾರದ ದಿನಗಳ ಪರೀಕ್ಷೆ ಮತ್ತು ಚಿತ್ರದಲ್ಲಿ ಜಾನ್ವಿ ಕಪೂರ್ ಪಾತ್ರದ ಕುರಿತಾದ ವಿವಾದ ಚಿತ್ರದ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು

‘ಪೆದ್ದಿ’ ಸಿನಿಮಾ ಮೇಲೆ ರಾಮ್ ಚರಣ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾದ ವೀಕೆಂಡ್ ಕಲೆಕ್ಷನ್ ಉತ್ತಮವಾಗಿದ್ದರೂ ಅಸಲಿ ಪರೀಕ್ಷೆ ಮುಂದಿದೆ. ಬಜೆಟ್ ಜಾಸ್ತಿ ಇರುವುದರಿಂದ ಸಿನಿಮಾ ಹಿಟ್ ಎನಿಸಿಕೊಳ್ಳಲು ಕಲೆಕ್ಷನ್ ಕೂಡ ಭಾರಿ ಪ್ರಮಾಣದಲ್ಲಿ ಆಗಬೇಕಿದೆ. ಚಿತ್ರದ ಮುಂದೆ ದೊಡ್ಡ ಟಾರ್ಗೆಟ್ ಇದೆ.

‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

‘ಪೆದ್ದಿ’ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರನ್ನು ತೋರಿಸಿರುವ ರೀತಿಯ ಬಗ್ಗೆ ಆಕ್ಷೇಪ ಎದುರಾಗಿದೆ. ನಿರ್ದೇಶಕ ಬುಚ್ಚಿ ಬಾಬು ಸನಾ ಅವರನ್ನು ತೀವ್ರವಾಗಿ ಟೀಕಿಸಲಾಗುತ್ತಿದೆ. ಜಾನ್ವಿ ಕಪೂರ್ ಅವರು ಶೂಟಿಂಗ್ ಸಮಯದಲ್ಲೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ವಿಷಯ ಈಗ ತಿಳಿದುಬಂದಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ..

ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ