Ram Charan
ರಾಮ್ ಚರಣ್ ಅವರು ಜನಿಸಿದ್ದು 1985ರ ಮಾರ್ಚ್ 27ರಂದು. ತೆಲುಗು ಚಿತ್ರರಂಗದಲ್ಲಿ ಅವರು ಪ್ರಮುಖನಾಗಿ ಗುರುತಿಸಿಕೊಂಡಿದ್ದಾರೆ. ಕೊನಿಡೆಲಾ ರಾಮ್ ಚರಣ್ ತೇಜ್ ಎಂದೂ ಕರೆಯಲ್ಪಡುವ ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. 2007ರಲ್ಲಿ ‘ಚಿರುತಾ’ ಚಿತ್ರದ ಮೂಲಕ ಅಭಿನಯಕ್ಕೆ ಪಾದಾರ್ಪಣೆ ಮಾಡಿದ ಅವರು ತಮ್ಮ ಅಮೋಘ ಅಭಿನಯ ಮತ್ತು ಅಸಾಧಾರಣ ನೃತ್ಯ ಕೌಶಲ್ಯಕ್ಕಾಗಿ ಶೀಘ್ರವಾಗಿ ಖ್ಯಾತಿಯನ್ನು ಗಳಿಸಿದರು. ‘ಮಗಧೀರ’, ‘ಆರ್ಆರ್ಆರ್’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾಗಳಲ್ಲಿ ಅವರು ಮಾಡಿದ ಪಾತ್ರಗಳು ಅವರಿಗೆ ವ್ಯಾಪಕವಾದ ಮೆಚ್ಚುಗೆಯನ್ನು ತಂದುಕೊಟ್ಟಿವೆ. ಫಿಲ್ಮ್ ಫೇರ್, ನಂದಿ ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಟಾಲಿವುಡ್ನಲ್ಲಿ ಬಹುಬೇಡಿಕೆಯ ನಟನಾಗಿರುವ ರಾಮ್ ಚರಣ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲೂ ಫೇಮಸ್ ಆಗಿದ್ದಾರೆ.
ಕೊನೆಗೂ ಮಗಳ ಮುಖ ತೋರಿಸಿದ ರಾಮ್ ಚರಣ್, ಉಪಾಸನಾ; ಕ್ಲಿನ್ ಕಾರಾ ಯಾರ ರೀತಿ ಇದ್ದಾಳೆ ನೋಡಿ..
ರಾಮ್ ಚರಣ್ ಮತ್ತು ಉಪಾಸನಾ ಕೊನಿಡೆಲಾ ಅವರು ಇದೇ ಮೊದಲ ಬಾರಿಗೆ ಮಗಳು ಕ್ಲಿನ್ ಕಾರಾ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಹ್ಯಾಪಿ ಬರ್ತ್ಡೇ ಕ್ಲಿನ್ ಕಾರಾ, ನಮ್ಮ ಮುದ್ದಾದ ಪುಟ್ಟ ಕಂದಮ್ಮ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಫೋಟೋ ನೋಡಿದ ಕೂಡಲೇ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರೀತಿಯಿಂದ ಕಮೆಂಟ್ ಮಾಡಿದ್ದಾರೆ.
- Madan Kumar
- Updated on: Jun 21, 2026
- 7:17 am
‘ಗೇಮ್ ಚೇಂಜರ್ ಚಿತ್ರದ ಸೋಲು ನನ್ನ ವೈಫಲ್ಯ, ವಿಷಾದವಿದೆ’; ಮುಕ್ತವಾಗಿ ಒಪ್ಪಿಕೊಂಡ ನಿರ್ಮಾಪಕ
ನಿರ್ಮಾಪಕ ದಿಲ್ ರಾಜು 'ಗೇಮ್ ಚೇಂಜರ್' ಚಿತ್ರದ ನಿರ್ಮಾಣ ಅನುಭವವನ್ನು ತಮ್ಮ ವೃತ್ತಿಜೀವನದ ದೊಡ್ಡ ತಪ್ಪು ಎಂದು ಬಣ್ಣಿಸಿದ್ದಾರೆ. ಚಿತ್ರದ ಅತಿಯಾದ ಅವಧಿ ಮತ್ತು ಅಂತಿಮ ಕಟ್ ನೋಡಲು ಸಾಧ್ಯವಾಗದ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ದೊಡ್ಡ ನಿರ್ದೇಶಕರೊಂದಿಗೆ ಕೆಲಸ ಮಾಡುವ ಸವಾಲುಗಳು, ನಿರ್ಮಾಪಕರಾಗಿ ತಮ್ಮ ವೈಫಲ್ಯವನ್ನು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ. ಭವಿಷ್ಯದಲ್ಲಿ ಸ್ಪಷ್ಟ ಒಪ್ಪಂದಗಳಿಲ್ಲದೆ ಇಂತಹ ದೊಡ್ಡ ಯೋಜನೆಗಳಿಂದ ದೂರವಿರುವುದಾಗಿ ಹೇಳಿದ್ದು, ತಂಡದ ಹೊಂದಾಣಿಕೆಯ ಮಹತ್ವವನ್ನು ಒತ್ತಿಹೇಳಿದ್ದಾರೆ.
- Shreelaxmi H
- Updated on: Jun 19, 2026
- 8:04 am
ಸುಕುಮಾರ್ ಹೊಸ ಸಿನಿಮಾ ಮತ್ತಷ್ಟು ತಡ? ಪೆದ್ದಿ ನಟನಿಗೆ ವರವಾಯ್ತು ವಿಳಂಬ
ರಾಮ್ ಚರಣ್ ಮತ್ತು ಸುಕುಮಾರ್ ಅವರ ಬಹುನಿರೀಕ್ಷಿತ ಚಿತ್ರದ ಚಿತ್ರೀಕರಣ ವಿಳಂಬವಾಗಿದೆ. ನಿರ್ದೇಶಕ ಸುಕುಮಾರ್ ಕಥೆಯನ್ನು ಅಂತಿಮಗೊಳಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಿದ್ದಾರೆ. 'ಪೆದ್ದಿ' ಯಶಸ್ಸಿನಲ್ಲಿರುವ ರಾಮ್ ಚರಣ್ ಅವರಿಗೆ ಈ ವಿಳಂಬ ವರದಾನವಾಗಿದೆ, ಏಕೆಂದರೆ ಇದು ಗಾಯದಿಂದ ಚೇತರಿಸಿಕೊಳ್ಳಲು ಸಮಯ ನೀಡಿದೆ. ದಸರಾ ಹಬ್ಬದ ನಂತರ ಚಿತ್ರದ ಅಧಿಕೃತ ಲಾಂಚ್ ನಿರೀಕ್ಷಿಸಲಾಗಿದೆ, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
- Rajesh Duggumane
- Updated on: Jun 15, 2026
- 10:43 am
‘ಪೆದ್ದಿ’ ಚಿತ್ರದ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ನಿರ್ದೇಶಕ; ಹೊಸ ದೃಶ್ಯಗಳ ಸೇರ್ಪಡೆ
ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ 'ಪೆದ್ದಿ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸುತ್ತಿದೆ. ಸದ್ಯ ಭಾರಿ ಕಲೆಕ್ಷನ್ ಮಾಡುತ್ತಿರುವ ಈ ಸೂಪರ್ ಹಿಟ್ ಚಿತ್ರಕ್ಕೆ ಹೊಸದಾಗಿ ಮೂರು ದೃಶ್ಯಗಳನ್ನು ಸೇರಿಸಲಾಗಿದೆ. ಜೂನ್ 17ರಿಂದ ಪ್ರದರ್ಶನಗೊಳ್ಳಲಿರುವ ಈ ದೃಶ್ಯಗಳು ನಾಯಕಿ ಜಾನ್ವಿ ಕಪೂರ್ ಮತ್ತು ಜಗಪತಿ ಬಾಬು ಅವರ ಪಾತ್ರಗಳಿಗೆ ಇನ್ನಷ್ಟು ತೂಕ ನೀಡಲಿವೆ.
- Shreelaxmi H
- Updated on: Jun 15, 2026
- 7:48 am
‘ಪೆದ್ದಿ’ ಸಕ್ಸಸ್ ಮೀಟ್ಗೆ ಜಾನ್ವಿ ಕಪೂರ್ ಗೈರು: ರಾಮ್ ಚರಣ್ ಸಿನಿಮಾ ವಿವಾದಕ್ಕೆ ಹೆದರಿದ್ರಾ ನಟಿ?
ಜಾನ್ವಿ ಕಪೂರ್ ಅವರಿಗೆ ‘ಪೆದ್ದಿ’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇತ್ತು. ಆದರೆ ಈ ಸಿನಿಮಾದಿಂದ ವಿವಾದ ಆಗಿದ್ದೇ ಹೆಚ್ಚು. ಹಾಗಾಗಿ ಅವರು ಸಿನಿಮಾದ ಸಕ್ಸಸ್ ಮೀಟ್ಗೆ ಬಂದಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಆ ಕುರಿತು ಇಲ್ಲಿದೆ ಮಾಹಿತಿ..
- Madan Kumar
- Updated on: Jun 9, 2026
- 6:40 pm
ತಪ್ಪು ಒಪ್ಪಿಕೊಂಡು ವಿವಾದಾತ್ಮಕ ದೃಶ್ಯ ತೆಗೆದು ಹಾಕಿದ ‘ಪೆದ್ದಿ’ ನಿರ್ದೇಶಕ ಬುಚ್ಚಿ ಬಾಬು ಸನಾ
‘ಪೆದ್ದಿ’ ಸಿನಿಮಾದಲ್ಲಿ ನಾಯಕಿ ಜಾನ್ವಿ ಕಪೂರ್ ಅವರನ್ನು ತೋರಿಸಿದ ರೀತಿ ತಪ್ಪಾಗಿದೆ ಎಂಬುದನ್ನು ಸ್ವತಃ ನಿರ್ದೇಶಕ ಬುಚ್ಚಿ ಬಾಬು ಸನಾ ಅವರು ಒಪ್ಪಿಕೊಂಡಿದ್ದಾರೆ. ಅಲ್ಲದೇ, ವಿವಾದಕ್ಕೆ ಕಾರಣ ಆಗಿರುವ ದೃಶ್ಯಗಳನ್ನು ತೆಗೆದುಹಾಕಲಾಗಿದೆ ಎಂದು ಕೂಡ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..
- Madan Kumar
- Updated on: Jun 9, 2026
- 2:11 pm
ನಾಲ್ಕನೇ ದಿನ ಭರ್ಜರಿ ಗಳಿಕೆ ಮಾಡಿದ ‘ಪೆದ್ದಿ’; ಮುಂದಿದೆ ಚಾಲೆಂಜ್
ರಾಮ್ ಚರಣ್ ಅಭಿನಯದ 'ಪೆದ್ದಿ' ಚಿತ್ರ ನಾಲ್ಕು ದಿನಗಳಲ್ಲಿ ಜಾಗತಿಕವಾಗಿ 233 ಕೋಟಿಗೂ ಹೆಚ್ಚು ಗಳಿಸಿ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಭಾನುವಾರ ₹31.90 ಕೋಟಿ ಗಳಿಕೆಯೊಂದಿಗೆ ಒಟ್ಟು ₹157.15 ಕೋಟಿ ನೆಟ್ ಕಲೆಕ್ಷನ್ ಭಾರತದಲ್ಲಾಗಿದೆ. ಆದರೆ, ವಾರದ ದಿನಗಳ ಪರೀಕ್ಷೆ ಮತ್ತು ಚಿತ್ರದಲ್ಲಿ ಜಾನ್ವಿ ಕಪೂರ್ ಪಾತ್ರದ ಕುರಿತಾದ ವಿವಾದ ಚಿತ್ರದ ಮುಂದಿರುವ ಪ್ರಮುಖ ಸವಾಲುಗಳಾಗಿವೆ.
- Rajesh Duggumane
- Updated on: Jun 8, 2026
- 8:52 am
200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು
‘ಪೆದ್ದಿ’ ಸಿನಿಮಾ ಮೇಲೆ ರಾಮ್ ಚರಣ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದರು. ಈ ಸಿನಿಮಾದ ವೀಕೆಂಡ್ ಕಲೆಕ್ಷನ್ ಉತ್ತಮವಾಗಿದ್ದರೂ ಅಸಲಿ ಪರೀಕ್ಷೆ ಮುಂದಿದೆ. ಬಜೆಟ್ ಜಾಸ್ತಿ ಇರುವುದರಿಂದ ಸಿನಿಮಾ ಹಿಟ್ ಎನಿಸಿಕೊಳ್ಳಲು ಕಲೆಕ್ಷನ್ ಕೂಡ ಭಾರಿ ಪ್ರಮಾಣದಲ್ಲಿ ಆಗಬೇಕಿದೆ. ಚಿತ್ರದ ಮುಂದೆ ದೊಡ್ಡ ಟಾರ್ಗೆಟ್ ಇದೆ.
- Madan Kumar
- Updated on: Jun 7, 2026
- 1:15 pm
‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್
‘ಪೆದ್ದಿ’ ಸಿನಿಮಾದಲ್ಲಿ ಜಾನ್ವಿ ಕಪೂರ್ ಅವರನ್ನು ತೋರಿಸಿರುವ ರೀತಿಯ ಬಗ್ಗೆ ಆಕ್ಷೇಪ ಎದುರಾಗಿದೆ. ನಿರ್ದೇಶಕ ಬುಚ್ಚಿ ಬಾಬು ಸನಾ ಅವರನ್ನು ತೀವ್ರವಾಗಿ ಟೀಕಿಸಲಾಗುತ್ತಿದೆ. ಜಾನ್ವಿ ಕಪೂರ್ ಅವರು ಶೂಟಿಂಗ್ ಸಮಯದಲ್ಲೇ ವಿರೋಧ ವ್ಯಕ್ತಪಡಿಸಿದ್ದರು ಎಂಬ ವಿಷಯ ಈಗ ತಿಳಿದುಬಂದಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ..
- Madan Kumar
- Updated on: Jun 7, 2026
- 12:03 pm
‘ನಟಿಯನ್ನು ಕೀಳಾಗಿ ತೋರಿಸೋ ಉದ್ದೇಶವಿರಲಿಲ್ಲ’; ಜಾನ್ವಿ ಹೊಕ್ಕುಳ ಪ್ರದರ್ಶನದ ಬಗ್ಗೆ ನಿರ್ದೇಶಕರ ಸ್ಪಷ್ಟನೆ
'ಪೆದ್ದಿ' ಚಿತ್ರದಲ್ಲಿ ಜಾನ್ವಿ ಕಪೂರ್ ಅವರ ಪಾತ್ರ ಕೇವಲ ಗ್ಲಾಮರ್ಗೆ ಸೀಮಿತ ಎಂಬ ಟೀಕೆಗೆ ನಿರ್ದೇಶಕ ಬುಚ್ಚಿ ಬಾಬು ಸನ ಸ್ಪಷ್ಟನೆ ನೀಡಿದ್ದಾರೆ. ಜಾನ್ವಿ ಕಪೂರ್ ಅವರನ್ನು ಗ್ಲಾಮರ್ ಗೊಂಬೆಯಾಗಿ ಬಳಸಿದ್ದಾರೆ ಎಂಬ ಆರೋಪಕ್ಕೆ ಅವರು, ಚಿತ್ರದ ಕಥಾಹಂದರಕ್ಕೆ ತಕ್ಕಂತೆ ಪಾತ್ರವನ್ನು ವಿನ್ಯಾಸಗೊಳಿಸಲಾಗಿದೆ, ವಿವಾದ ಸೃಷ್ಟಿಯ ಉದ್ದೇಶವಿರಲಿಲ್ಲ ಎಂದಿದ್ದಾರೆ. ಗ್ರಾಮೀಣ ಸೊಗಡಿನ ಹೈ-ಎನರ್ಜಿ ಡ್ರಾಮಾಗೆ ಪೂರಕವಾಗಿಯೇ ನಟಿಯ ಪಾತ್ರ ಇದೆ ಎಂದು ಹೇಳಿದ್ದಾರೆ.
- Rajesh Duggumane
- Updated on: Jun 6, 2026
- 10:00 am
ಬಾಕ್ಸ್ ಆಫೀಸ್ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ
'ಪೆದ್ದಿ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಂಡಿದೆ. ಮೊದಲ ದಿನದ ಬಂಪರ್ ಗಳಿಕೆಯ ನಂತರ, ಎರಡನೇ ದಿನವೂ ಉತ್ತಮ ಕಲೆಕ್ಷನ್ ಮಾಡಿದೆ. ಕೇವಲ ಎರಡು ದಿನಗಳಲ್ಲಿ ವಿಶ್ವಾದ್ಯಂತ 150.49 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿ, ಸಿನಿಮಾ ಹೊಸ ದಾಖಲೆ ಬರೆದಿದೆ. ರಾಮ್ ಚರಣ್, ಜಾನ್ವಿ ಕಪೂರ್ ಮತ್ತು ಶಿವರಾಜ್ಕುಮಾರ್ ಅಭಿನಯದ ಈ ಚಿತ್ರ ವೀಕೆಂಡ್ನಲ್ಲಿ ಇನ್ನಷ್ಟು ದೊಡ್ಡ ಮಟ್ಟದ ಗಳಿಕೆ ಮಾಡುವ ನಿರೀಕ್ಷೆಯಿದೆ.
- Rajesh Duggumane
- Updated on: Jun 6, 2026
- 6:56 am
ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ಗೆ ಹೊಸ ಬಾಡಿಗಾರ್ಡ್?
ರಾಮ್ ಚರಣ್ ಅವರ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಸುದ್ದಿ ಆದ ಬೆನ್ನಲ್ಲೇ, ಕಿಚ್ಚ ಸುದೀಪ್ ಜೊತೆ ವಿದೇಶಿ ಅಂಗರಕ್ಷಕರೊಬ್ಬರು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಹಲವು ವರ್ಷಗಳಿಂದ ಸುದೀಪ್ ಜೊತೆಗಿರುವ ಕಿರಣ್ ಹೊರತಾಗಿ, ಈ ಎತ್ತರದ ವ್ಯಕ್ತಿ ಯಾರು ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇಂದಿಗಷ್ಟೇ ಅವರ ಭದ್ರತೆಗೆ ಬಂದಿದ್ದಾರೋ ಅಥವಾ ಸುದೀಪ್ ಅವರ ಹೊಸ ಅಂಗರಕ್ಷಕರೋ ಎಂಬ ಕುತೂಹಲವಿದೆ.
- Rajesh Duggumane
- Updated on: Jun 5, 2026
- 12:42 pm