Ram Charan

Ram Charan

ರಾಮ್ ಚರಣ್ ಅವರು ಜನಿಸಿದ್ದು 1985ರ ಮಾರ್ಚ್ 27ರಂದು. ತೆಲುಗು ಚಿತ್ರರಂಗದಲ್ಲಿ ಅವರು ಪ್ರಮುಖನಾಗಿ ಗುರುತಿಸಿಕೊಂಡಿದ್ದಾರೆ. ಕೊನಿಡೆಲಾ ರಾಮ್ ಚರಣ್ ತೇಜ್ ಎಂದೂ ಕರೆಯಲ್ಪಡುವ ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. 2007ರಲ್ಲಿ ‘ಚಿರುತಾ’ ಚಿತ್ರದ ಮೂಲಕ ಅಭಿನಯಕ್ಕೆ ಪಾದಾರ್ಪಣೆ ಮಾಡಿದ ಅವರು ತಮ್ಮ ಅಮೋಘ ಅಭಿನಯ ಮತ್ತು ಅಸಾಧಾರಣ ನೃತ್ಯ ಕೌಶಲ್ಯಕ್ಕಾಗಿ ಶೀಘ್ರವಾಗಿ ಖ್ಯಾತಿಯನ್ನು ಗಳಿಸಿದರು. ‘ಮಗಧೀರ’, ‘ಆರ್​ಆರ್​ಆರ್’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾಗಳಲ್ಲಿ ಅವರು ಮಾಡಿದ ಪಾತ್ರಗಳು ಅವರಿಗೆ ವ್ಯಾಪಕವಾದ ಮೆಚ್ಚುಗೆಯನ್ನು ತಂದುಕೊಟ್ಟಿವೆ. ಫಿಲ್ಮ್​ ಫೇರ್​, ನಂದಿ ಅವಾರ್ಡ್​ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿರುವ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲೂ ಫೇಮಸ್​ ಆಗಿದ್ದಾರೆ.

ಇನ್ನೂ ಹೆಚ್ಚು ಓದಿ

ಹಂಪಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ಮೊದಲ ಸಿನಿಮಾ

‘ದಿ ಇಂಡಿಯಾ ಹೌಸ್’ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ. ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ಈ ವೇಳೆ ಇಡೀ ಚಿತ್ರತಂಡ ಭಾಗಿ ಆಗಿತ್ತು. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಸಾವರ್ಕರ್ ಜೀವನದ ಕಥೆಯನ್ನು ಸಿನಿಮಾ ಆಧರಿಸಿದೆ.

ತೆಲುಗಿನ ಸ್ಟಾರ್​ಗಳಲ್ಲಿ ಇರುವ ಒಗ್ಗಟ್ಟು ಎಂಥದ್ದು? ಕನ್ನಡದವರಿಗೂ ಇದು ಮಾದರಿಯಾಗಬೇಕು

ತೆಲುಗು ಸ್ಟಾರ್ಸ್​ಗಳು ಒಬ್ಬರ ಚಿತ್ರಕ್ಕೆ ಒಬ್ಬರು ಬೆಂಬಲವಾಗಿ ನಿಲ್ಲುತ್ತಾರೆ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಟಾಲಿವುಡ್ ನಟಿ ಲಕ್ಷ್ಮಿ ಮಂಚು ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸೆಲೆಬ್ರಿಟಿಗಳು ಕ್ರಿಯೇಟ್ ಮಾಡಿಕೊಂಡಿರೋ ವಾಟ್ಸಾಪ್ ಗ್ರೂಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಮೇ 10ರಂದು ಚಿತ್ರಮಂದಿರಗಳಲ್ಲಿ ಮರು ಬಿಡುಗಡೆ ಆಗಲಿದೆ ‘ಆರ್​ಆರ್​ಆರ್​’ ಸಿನಿಮಾ

ದೇಶದ ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ‘ಆರ್​ಆರ್​ಆರ್​’ ಸಿನಿಮಾ ಮರು ಬಿಡುಗಡೆ ಆಗಲಿದೆ. ಈ ಬಾರಿ ಎಷ್ಟು ಕಲೆಕ್ಷನ್​ ಮಾಡಲಿದೆ ಎಂಬುದನ್ನು ತಿಳಿಯುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಜೂನಿಯರ್​ ಎನ್​ಟಿಆರ್, ರಾಮ್​ ಚರಣ್​, ಆಲಿಯಾ ಭಟ್​, ಅಜಯ್​ ದೇವಗನ್​ ಮುಂತಾದವರು ನಟಿಸಿರುವ ಈ ಸಿನಿಮಾಗೆ ಎಸ್​ಎಸ್​ ರಾಜಮೌಳಿ ನಿರ್ದೇಶನವಿದೆ.

‘ದೇವರ’ ವರ್ಸಸ್​ ‘ಗೇಮ್​ ಚೇಂಜರ್​’: ಜೂ. ಎನ್​ಟಿಆರ್​-ರಾಮ್​ ಚರಣ್​ ನಡುವೆ ಪೈಪೋಟಿ

ಹಿಂದಿ ಪ್ರೇಕ್ಷಕರ ವಲಯದಲ್ಲಿ ಜೂನಿಯರ್​ ಎನ್​ಟಿಆರ್​ ಮತ್ತು ರಾಮ್​ ಚರಣ್​ ಅವರಿಗೆ ದೊಡ್ಡ ಫ್ಯಾನ್​​ ಫಾಲೋಯಿಂಗ್​ ಇದೆ. ರಾಮ್​ ಚರಣ್​ ನಟನೆಯ ‘ಗೇಮ್​ ಚೇಂಜರ್​’ ಹಾಗೂ ಜೂನಿಯರ್​ ಎನ್​ಟಿಆರ್​ ಅಭಿನಯದ ‘ದೇವರ’ ಸಿನಿಮಾ ಹಿಂದಿ ವರ್ಷನ್​ನ ವಿತರಣಾ ಹಕ್ಕುಗಳು ಬಹುಕೋಟಿ ರೂಪಾಯಿಗೆ ಮಾರಾಟ ಆಗಿವೆ. ಆ ಬಗ್ಗೆ ಇಂಟರೆಸ್ಟಿಂಗ್​ ವಿಷಯ ಕೇಳಿಬರುತ್ತಿವೆ.

ಬರ್ತ್​ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Ram Charan Birthday: ಹೇಗಿದೆ ನೋಡಿ ರಾಮ್ ಚರಣ್ ದುಬಾರಿ ಪ್ರೈವೆಟ್ ಜೆಟ್; ಇಲ್ಲಿದೆ ವಿಡಿಯೋ

ರಾಮ್ ಚರಣ್ ಹಾಗೂ ಉಪಾಸನಾ ಅವರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ರಾಮ್ ಚರಣ್ ಅವರ ಆಸ್ತಿ 1600 ಕೋಟಿ ರೂಪಾಯಿಗೂ ಅಧಿಕವಾಗಿದೆ. ಹಲವು ಐಷಾರಾಮಿ ಕಾರುಗಳು ಅವರ ಬಳಿ ಇವೆ. ಅವರು ತಮ್ಮದೇ ಆದ ಏರ್​ಲೈನ್ಸ್ ಕೂಡ ಹೊಂದಿದ್ದಾರೆ.

ಸ್ವಂತ ಏರ್​ಲೈನ್ಸ್, ದುಬಾರಿ ಕಾರು, ದೊಡ್ಡ ಬಂಗಲೆ; ಹೇಗಿದೆ ನೋಡಿ ರಾಮ್ ಚರಣ್​ ಐಷಾರಾಮಿ ಜೀವನ

Ram Charan Birthday: ರಾಮ್ ಚರಣ್ ‘ಮಗಧೀರ’, ‘ರಂಗಸ್ಥಲಂ’, ‘ಯೆವಡು’, ‘ಆರ್​ಆರ್​ಆರ್​’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಶ್ರೀಮಂತ ನಟರಲ್ಲಿ ಒಬ್ಬರು.

‘ಪುಷ್ಪ 2’ ಬಳಿಕ ರಾಮ್​ ಚರಣ್​ಗೆ ಸುಕುಮಾರ್​ ನಿರ್ದೇಶನ; ಇಲ್ಲಿದೆ ಸಿಹಿ ಸುದ್ದಿ

ಸ್ಟಾರ್​ ನಿರ್ದೇಶಕ ಸುಕುಮಾರ್​ ಅವರು ನಟ ರಾಮ್​ ಚರಣ್​ ಜೊತೆ ಕೈ ಜೋಡಿಸಿದ್ದಾರೆ. ಈ ಹಿಂದೆ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ರಂಗಸ್ಥಲಂ’ ಸಿನಿಮಾ ಮೂಡಿಬಂದಿತ್ತು. ಈಗ ಮತ್ತೆ ಅವರಿಬ್ಬರು ಒಂದಾಗುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇದು ರಾಮ್​ ಚರಣ್​ ನಟನೆಯ 17ನೇ ಸಿನಿಮಾ ಆಗಲಿದೆ. ದೇವಿಶ್ರೀ ಪ್ರಸಾದ್​ ಸಂಗೀತ ನೀಡಲಿದ್ದಾರೆ.

105 ಕೋಟಿ ರೂಪಾಯಿಗೆ ‘ಗೇಮ್​ ಚೇಂಜರ್​’ ಸಿನಿಮಾದ ಒಟಿಟಿ ಪ್ರಸಾರ ಹಕ್ಕು ಮಾರಾಟ?

‘ಗೇಮ್​ ಚೇಂಜರ್​’ ಚಿತ್ರಕ್ಕೆ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಒಟಿಟಿ ಪ್ರಸಾರದ ಹಕ್ಕನ್ನು ‘ಅಮೇಜಾನ್​ ಪ್ರೈಂ ವಿಡಿಯೋ’ ಖರೀದಿಸಿದೆ. ಭಾರಿ ಮೊತ್ತಕ್ಕೆ ಈ ವ್ಯವಹಾರ ನಡೆದಿದೆ. ಈ ಸಿನಿಮಾದಲ್ಲಿ ರಾಮ್ ಚರಣ್​ ಅವರಿಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ರಾಜಕೀಯ ಮತ್ತು ಚುನಾವಣೆ ಕುರಿತ ಕಥೆ ಈ ಸಿನಿಮಾದಲ್ಲಿ ಇರಲಿದೆ.

ರಾಮ್​ ಚರಣ್​ ಫ್ಯಾನ್​ ಪೇಜ್​ನಲ್ಲಿ ಶಿವಣ್ಣನ ವಿಡಿಯೋ ವೈರಲ್​; ಏನಿದೆ ಇದರಲ್ಲಿ?

ಟಾಲಿವುಡ್​ ನಟ ರಾಮ್​ ಚರಣ್​ ಅಭಿನಯಿಸಲಿರುವ 16ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರದಲ್ಲಿ ಕನ್ನಡದ ಸ್ಟಾರ್​ ನಟ ಶಿವರಾಜ್​ಕುಮಾರ್​ ಕೂಡ ಒಂದು ಮುಖ್ಯ ಪಾತ್ರ ಮಾಡಲಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಬಗ್ಗೆ ಶಿವಣ್ಣ ಮಾತನಾಡಿದ ವಿಡಿಯೋ ವೈರಲ್​ ಆಗಿದೆ. ರಾಮ್​ ಚರಣ್​ ಅವರ ಫ್ಯಾನ್ಸ್​​ ಪೇಜ್​ಗಳಲ್ಲಿ ಈ ವಿಡಿಯೋವನ್ನು ಶೇರ್​ ಮಾಡಿಕೊಳ್ಳಲಾಗಿದೆ.

‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು