Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan

Ram Charan

ರಾಮ್ ಚರಣ್ ಅವರು ಜನಿಸಿದ್ದು 1985ರ ಮಾರ್ಚ್ 27ರಂದು. ತೆಲುಗು ಚಿತ್ರರಂಗದಲ್ಲಿ ಅವರು ಪ್ರಮುಖನಾಗಿ ಗುರುತಿಸಿಕೊಂಡಿದ್ದಾರೆ. ಕೊನಿಡೆಲಾ ರಾಮ್ ಚರಣ್ ತೇಜ್ ಎಂದೂ ಕರೆಯಲ್ಪಡುವ ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. 2007ರಲ್ಲಿ ‘ಚಿರುತಾ’ ಚಿತ್ರದ ಮೂಲಕ ಅಭಿನಯಕ್ಕೆ ಪಾದಾರ್ಪಣೆ ಮಾಡಿದ ಅವರು ತಮ್ಮ ಅಮೋಘ ಅಭಿನಯ ಮತ್ತು ಅಸಾಧಾರಣ ನೃತ್ಯ ಕೌಶಲ್ಯಕ್ಕಾಗಿ ಶೀಘ್ರವಾಗಿ ಖ್ಯಾತಿಯನ್ನು ಗಳಿಸಿದರು. ‘ಮಗಧೀರ’, ‘ಆರ್​ಆರ್​ಆರ್’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾಗಳಲ್ಲಿ ಅವರು ಮಾಡಿದ ಪಾತ್ರಗಳು ಅವರಿಗೆ ವ್ಯಾಪಕವಾದ ಮೆಚ್ಚುಗೆಯನ್ನು ತಂದುಕೊಟ್ಟಿವೆ. ಫಿಲ್ಮ್​ ಫೇರ್​, ನಂದಿ ಅವಾರ್ಡ್​ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿರುವ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲೂ ಫೇಮಸ್​ ಆಗಿದ್ದಾರೆ.

ಇನ್ನೂ ಹೆಚ್ಚು ಓದಿ

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್​ಚರಣ್ ಜೊತೆಗಿನ "RC16" ಚಿತ್ರದ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್‌ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್‌ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್‌ನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

ಅಲ್ಲು ಅರ್ಜುನ್ ಇನ್​ಸ್ಟಾಗ್ರಾಮ್ ಖಾತೆ ಅನ್​ಫಾಲೋ ಮಾಡಿದ ರಾಮ್ ಚರಣ್; ಕಾರಣ?

ರಾಮ್ ಚರಣ್ ಅವರು ಅಲ್ಲು ಅರ್ಜುನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇತ್ತೀಚೆಗಿನ ಒಂದು ವಿವಾದವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲು ಅರವಿಂದ್ ಅವರು ರಾಮ್ ಚರಣ್ ಸಿನಿಮಾದ ಸೋಲಿನ ಕುರಿತು ಮಾತನಾಡಿದ್ದರಿಂದ ಇಷ್ಟೆಲ್ಲ ಕಿರಿಕ್ ಶುರುವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್

ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಮೇಲೆ ರಾಮ್ ಚರಣ್ ಅಭಿಮಾನಿಗಳು ಸಖತ್ ಕೋಪ ಮಾಡಿಕೊಂಡಿದ್ದರು. ಅದಕ್ಕಾಗಿ ಅಲ್ಲು ಅರವಿಂದ್ ಈಗ ಕ್ಷಮೆ ಕೇಳಿದ್ದಾರೆ. ತಮ್ಮ ಮಾತಿನ ಹಿಂದೆ ಬೇರೆ ಉದ್ದೇಶ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ‘ತಂಡೇಲ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

‘ಗೇಮ್ ಚೇಂಜರ್’ ಒಟಿಟಿ ರಿಲೀಸ್: ಫೆಬ್ರವರಿ 7ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

ರಾಮ್ ಚರಣ್, ಕಿಯಾರಾ ಅಡ್ವಾಣಿ, ಎಸ್​.ಜೆ. ಸೂರ್ಯ ಮುಂತಾದವರು ನಟಿಸಿದ ‘ಗೇಮ್ ಚೇಂಜರ್’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಬಹಿರಂಗ ಆಗಿದೆ. ಫೆ.7ರಿಂದ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಹಿಂದಿ ವರ್ಷನ್ ಬಿಡುಗಡೆ ಇನ್ನೂ ತಡವಾಗಲಿದೆ.

‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ

ಬಿಗ್ ಬಾಸ್ ಫಿನಾಲೆಯ ಎರಡನೇ ದಿನ ಆರಂಭ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದಕ್ಕೆ ಸಂಬಂಧಿಸಿದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಹನುಮಂತ ಅವರ ಫನ್ ಟಾಕ್ ಎಲ್ಲರಿಗೂ ಇಷ್ಟ ಆಗಿದೆ.

Game Changer: ಫ್ಲಾಪ್ ಸಿನಿಮಾ ಪ್ರಸಾರ ಮಾಡಿ ಅರೆಸ್ಟ್ ಆದ ಕೇಬಲ್ ಟಿವಿ ಸಿಬ್ಬಂದಿ

ನಟ ರಾಮ್ ಚರಣ್ ಅವರಿಗೆ 2025ರ ಆರಂಭದಲ್ಲೇ ಸೋಲು ಉಂಟಾಗಿದೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಅವರು ನಟಿಸಿದ ‘ಗೇಮ್ ಚೇಂಜರ್​’ ಸಿನಿಮಾ ಬಿಡುಗಡೆ ಆಯಿತು. ಆದರೆ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಸಿನಿಮಾದ ಸೋಲಿಗೆ ಪೈರಸಿ ಕೂಡ ಕಾರಣ ಆಗಿದೆ.

‘ಗೇಮ್ ಚೇಂಜರ್ ಬಾಕ್ಸ್ ಆಫೀಸ್​ ಲೆಕ್ಕ ಸುಳ್ಳು’: ಹಿಗ್ಗಾಮುಗ್ಗ ಜಾಡಿಸಿದ ರಾಮ್ ಗೋಪಾಲ್ ವರ್ಮಾ

ರಾಮ್ ಚರಣ್ ನಟನೆಯ ‘ಗೇಮ್​ ಚೇಂಜರ್​’ ಸಿನಿಮಾ ಜನವರಿ 10ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಘಟಾನುಘಟಿಗಳು ಇದ್ದರೂ ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಆಗಿಲ್ಲ. ಆದರೆ ಚಿತ್ರತಂಡದ ಕಡೆಯಿಂದ ಸುಳ್ಳು ಬಾಕ್ಸ್ ಆಫೀಸ್​ ಲೆಕ್ಕ ನೀಡಲಾಗಿದೆ ಎಂದು ರಾಮ್​ ಗೋಪಾಲ್ ವರ್ಮಾ ಅವರು ಆರೋಪ ಮಾಡಿದ್ದಾರೆ.

ಮೂರೇ ದಿನಕ್ಕೆ ಹೀನಾಯ ಸ್ಥಿತಿಯಲ್ಲಿ ‘ಗೇಮ್ ಚೇಂಜರ್’ ಗಳಿಕೆ; ನಿರ್ಮಾಪಕರಿಗೆ ಆಗೋ ನಷ್ಟವೆಷ್ಟು?

‘ಗೇಮ್ ಚೇಂಜರ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷೆಗಿಂತ ಕಡಿಮೆ ಗಳಿಕೆ ಮಾಡುತ್ತಿದೆ. ಮೊದಲ ದಿನ 51 ಕೋಟಿ ರೂಪಾಯಿ ಗಳಿಸಿದ್ದ ಚಿತ್ರ, ನಂತರದ ದಿನಗಳಲ್ಲಿ ನಿರೀಕ್ಷಿತ ಗಳಿಕೆಯನ್ನು ಕಾಣಲಿಲ್ಲ. ರಾಮ್ ಚರಣ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಈ ಸಿನಿಮಾದ ನಿರ್ದೇಶನ ಶಂಕರ್ ಅವರದ್ದು. ದೊಡ್ಡ ಬಜೆಟ್‌ನ ಈ ಚಿತ್ರ ದೊಡ್ಡ ಪ್ರಮಾಣದ ನಷ್ಟವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಊಹಿಸಲಾಗಿದೆ.

ಮಿಶ್ರ ಪ್ರತಿಕ್ರಿಯೆ ಮಧ್ಯೆಯೂ ಭರ್ಜರಿ ಗಳಿಕೆ; ‘ಗೇಮ್ ಚೇಂಜರ್’ ಮೊದಲ ದಿನದ ಕಲೆಕ್ಷನ್ ಇಷ್ಟೊಂದಾ?

ಶಂಕರ್ ಅವರು ‘ಗೇಮ್ ಚೇಂಜರ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಾಮ್ ಚರಣ್, ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರ ಮಾಡಿದರೆ, ಎಸ್ಜೆ ಸೂರ್ಯ ವಿಲನ್ ಪಾತ್ರ ಮಾಡಿದ್ದಾರೆ. 450 ಕೋಟಿ ರೂಪಾಯಿ ಬಜೆಟ್ನಲ್ಲಿ ಸಿದ್ಧವಾದ ಈ ಚಿತ್ರ ಮೊದಲ ದಿನ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬ ಕುತೂಹಲ ಮೂಡಿದೆ.

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

Game Changer: ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ಇಂದು (ಜನವರಿ 10) ಬಿಡುಗಡೆ ಆಗಿದೆ. ಬೆಂಗಳೂರಿನಲ್ಲಿ ಸಹ ಹಲವು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬಂದಿದ್ದು, ಬೆಂಗಳೂರಿನಲ್ಲಿ ರಾಮ್ ಚರಣ್ ಅಭಿಮಾನಿಗಳು ಕಟೌಟ್ ನಿಲ್ಲಿಸಿ, ಪೋಸ್ಟರ್​ಗಳನ್ನು ಅಂಟಿಸಿ, ಬೆಳ್ಳಂಬೆಳಿಗ್ಗೆ ಚಿತ್ರಮಂದಿರಗಳ ಮುಂದೆ ಪಟಾಕಿಗಳನ್ನು ಹಚ್ಚಿ ಸಿನಿಮಾಕ್ಕೆ ಸ್ವಾಗತ ಕೋರಿದ್ದಾರೆ. ಇಲ್ಲಿದೆ ವಿಡಿಯೋ.

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್