Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Charan

Ram Charan

ರಾಮ್ ಚರಣ್ ಅವರು ಜನಿಸಿದ್ದು 1985ರ ಮಾರ್ಚ್ 27ರಂದು. ತೆಲುಗು ಚಿತ್ರರಂಗದಲ್ಲಿ ಅವರು ಪ್ರಮುಖನಾಗಿ ಗುರುತಿಸಿಕೊಂಡಿದ್ದಾರೆ. ಕೊನಿಡೆಲಾ ರಾಮ್ ಚರಣ್ ತೇಜ್ ಎಂದೂ ಕರೆಯಲ್ಪಡುವ ಅವರು ಪ್ರಸಿದ್ಧ ಚಲನಚಿತ್ರ ಕುಟುಂಬದಿಂದ ಬಂದವರು. 2007ರಲ್ಲಿ ‘ಚಿರುತಾ’ ಚಿತ್ರದ ಮೂಲಕ ಅಭಿನಯಕ್ಕೆ ಪಾದಾರ್ಪಣೆ ಮಾಡಿದ ಅವರು ತಮ್ಮ ಅಮೋಘ ಅಭಿನಯ ಮತ್ತು ಅಸಾಧಾರಣ ನೃತ್ಯ ಕೌಶಲ್ಯಕ್ಕಾಗಿ ಶೀಘ್ರವಾಗಿ ಖ್ಯಾತಿಯನ್ನು ಗಳಿಸಿದರು. ‘ಮಗಧೀರ’, ‘ಆರ್​ಆರ್​ಆರ್’ ಮುಂತಾದ ಗಮನಾರ್ಹ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈ ಸಿನಿಮಾಗಳಲ್ಲಿ ಅವರು ಮಾಡಿದ ಪಾತ್ರಗಳು ಅವರಿಗೆ ವ್ಯಾಪಕವಾದ ಮೆಚ್ಚುಗೆಯನ್ನು ತಂದುಕೊಟ್ಟಿವೆ. ಫಿಲ್ಮ್​ ಫೇರ್​, ನಂದಿ ಅವಾರ್ಡ್​ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದಿದ್ದಾರೆ. ಟಾಲಿವುಡ್​ನಲ್ಲಿ ಬಹುಬೇಡಿಕೆಯ ನಟನಾಗಿರುವ ರಾಮ್​ ಚರಣ್​ ಅವರು ಪ್ಯಾನ್​ ಇಂಡಿಯಾ ಮಟ್ಟದಲ್ಲೂ ಫೇಮಸ್​ ಆಗಿದ್ದಾರೆ.

ಇನ್ನೂ ಹೆಚ್ಚು ಓದಿ

ಸಖತ್ ರಗಡ್ ಆಗಿದೆ ಪೆದ್ದಿ ಗ್ಲಿಂಪ್ಸ್; ಬ್ಯಾಟ್ ಹಿಡಿದು ಅಬ್ಬರಿಸಿದ ರಾಮ್ ಚರಣ್

‘ಪೆದ್ದಿ’ ಸಿನಿಮಾದ ಫಸ್ಟ್ ಶಾಟ್ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಇದರಲ್ಲಿ ರಾಮ್ ಚರಣ್ ಅವರ ಪಾತ್ರದ ಝಲಕ್ ನೀಡಲಾಗಿದೆ. ಅಲ್ಲದೇ, ಕಥೆಯ ಬಗ್ಗೆಯೂ ಸುಳಿವು ನೀಡಲಾಗಿದೆ. 2026ರ ಮಾ.27ರಂದು ಈ ಚಿತ್ರ ತೆರೆಕಾಣಲಿದೆ. ಶಿವರಾಜ್​ಕುಮಾರ್​ ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬುದು ವಿಶೇಷ.

Peddi Movie: ರಾಮ್ ಚರಣ್ ಹೊಸ ಚಿತ್ರದ ಟೈಟಲ್ ರಿವೀಲ್; ಮತ್ತೆ ಮಾಸ್ ಲುಕ್​ನಲ್ಲಿ ಗ್ಲೋಬಲ್ ಸ್ಟಾರ್

Ram Charan Birthday: ರಾಮ್‌ಚರಣ್ ಅಭಿನಯದ RC16 ಚಿತ್ರಕ್ಕೆ 'ಪೆದ್ದಿ' ಎಂದು ಶೀರ್ಷಿಕೆ ಇಡಲಾಗಿದೆ. ರಾಮ್‌ಚರಣ್ ಅವರ ಜನ್ಮದಿನದಂದು ಚಿತ್ರದ ಫಸ್ಟ್ ಲುಕ್ ಮತ್ತು ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಅವರ ಮಾಸ್ ಲುಕ್ ಅಭಿಮಾನಿಗಳನ್ನು ಆಕರ್ಷಿಸಿದೆ.

Ram Charan: ರಾಮ್ ಚರಣ್​ಗೆ ಪತ್ನಿ ಉಪಾಸನಾ ಕೊಡುವ ದುಬಾರಿ ಗಿಫ್ಟ್​ಗಳೇನು?

ರಾಮ್‌ಚರಣ್ ಮತ್ತು ಉಪಾಸನಾ ಅವರ ಪ್ರೀತಿಯ ಕಥೆ ಮತ್ತು ಅವರ ಸರಳ ಜೀವನಶೈಲಿಯ ಬಗ್ಗೆ ಈ ಲೇಖನ ತಿಳಿಸುತ್ತದೆ. ರಾಮ್‌ಚರಣ್ ಅವರ ಹುಟ್ಟುಹಬ್ಬದಂದು ಉಪಾಸನಾ ಅವರು ನೀಡಿದ ಉಡುಗೊರೆಗಳ ಬಗ್ಗೆಯೂ ಮಾಹಿತಿ ಇದೆ. ದುಬಾರಿ ಉಡುಗೊರೆಗಳಿಗಿಂತ ಸಣ್ಣ ಸಣ್ಣ ವಿಷಯಗಳಲ್ಲಿ ಅವರು ಹೆಚ್ಚು ಸಂತೋಷ ಪಡುತ್ತಾರೆ ಎಂದು ತಿಳಿದುಬಂದಿದೆ.

ಗೆದ್ದಿದ್ದು ಕಡಿಮೆ ಸಿನಿಮಾ ಆದರೂ ರಾಮ್ ಚರಣ್ ಆಸ್ತಿ 1,300 ಕೋಟಿ ರೂ.; ಸಾಧ್ಯವಾಗಿದ್ದು ಹೇಗೆ?

Ram Charan's Birthday: ರಾಮ್‌ಚರಣ್ ಅವರಿಗೆ ಇಂದು 38ನೇ ಜನ್ಮದಿನ. ಅವರು ಅಪಾರ ಸಂಪತ್ತು ಹೊಂದಿದ್ದಾರೆ. ವ್ಯಾಪಾರದಲ್ಲೂ ಯಶಸ್ಸು ಕಂಡಿದ್ದಾರೆ. ಹೈದರಾಬಾದ್ ಪೋಲೋ ರೈಡಿಂಗ್ ಕ್ಲಬ್, ಪ್ರೊಡಕ್ಷನ್ ಹೌಸ್, ಹೂಡಿಕೆಗಳು ಮುಂತಾದವು ಅವರ ವ್ಯಾಪಾರ ಸಾಮ್ರಾಜ್ಯದ ಒಂದು ಭಾಗ. ಅವರ ಸಿನಿಮಾ ವೃತ್ತಿಜೀವನ ಮತ್ತು ವ್ಯವಹಾರ ಯಶಸ್ಸಿನ ಬಗ್ಗೆ ಇಲ್ಲಿ ವಿವರಿಸಲಾಗಿದೆ.

Shiva Rajkumar: ದೆಹಲಿ ಸಂಸತ್ತು ಹತ್ತಲಿದ್ದಾರೆ ಶಿವರಾಜ್​ಕುಮಾರ್; ಸಿಕ್ಕಿತು ಹೊಸ ಸುದ್ದಿ

ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದು, ರಾಮ್​ಚರಣ್ ಜೊತೆಗಿನ "RC16" ಚಿತ್ರದ ಶೂಟ್​ನಲ್ಲಿ ಭಾಗಿ ಆಗಲಿದ್ದಾರೆ. ದೆಹಲಿ ಪಾರ್ಲಿಮೆಂಟ್‌ನಲ್ಲಿನ ಚಿತ್ರದ ಶೂಟ್ ನಡೆಯಲಿದೆ. ಈ ಚಿತ್ರದ ಶೂಟಿಂಗ್‌ಗಾಗಿ ದೆಹಲಿಗೆ ತೆರಳುವುದರ ಜೊತೆಗೆ ಜಮಾ ಮಸೀದಿಯಲ್ಲಿಯೂ ಶೂಟಿಂಗ್ ನಡೆಯಲಿದೆ. ಪವನ್ ಕಲ್ಯಾಣ್ ಅವರ ಮಧ್ಯಸ್ಥಿಕೆಯಿಂದ ಪಾರ್ಲಿಮೆಂಟ್‌ನಲ್ಲಿ ಶೂಟಿಂಗ್‌ಗೆ ಅನುಮತಿ ಪಡೆಯುವ ಪ್ರಯತ್ನ ನಡೆಯುತ್ತಿದೆ.

ಅಲ್ಲು ಅರ್ಜುನ್ ಇನ್​ಸ್ಟಾಗ್ರಾಮ್ ಖಾತೆ ಅನ್​ಫಾಲೋ ಮಾಡಿದ ರಾಮ್ ಚರಣ್; ಕಾರಣ?

ರಾಮ್ ಚರಣ್ ಅವರು ಅಲ್ಲು ಅರ್ಜುನ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್​ಫಾಲೋ ಮಾಡಿದ್ದಾರೆ. ಇತ್ತೀಚೆಗಿನ ಒಂದು ವಿವಾದವೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಅಲ್ಲು ಅರವಿಂದ್ ಅವರು ರಾಮ್ ಚರಣ್ ಸಿನಿಮಾದ ಸೋಲಿನ ಕುರಿತು ಮಾತನಾಡಿದ್ದರಿಂದ ಇಷ್ಟೆಲ್ಲ ಕಿರಿಕ್ ಶುರುವಾಗಿದೆ ಎಂದು ನೆಟ್ಟಿಗರು ಮಾತನಾಡಿಕೊಳ್ಳುತ್ತಿದ್ದಾರೆ.

ತಪ್ಪು ಮಾತಾಡಿದೆ, ಕ್ಷಮಿಸಿ: ರಾಮ್ ಚರಣ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಅಲ್ಲು ಅರವಿಂದ್

ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಅವರ ಮೇಲೆ ರಾಮ್ ಚರಣ್ ಅಭಿಮಾನಿಗಳು ಸಖತ್ ಕೋಪ ಮಾಡಿಕೊಂಡಿದ್ದರು. ಅದಕ್ಕಾಗಿ ಅಲ್ಲು ಅರವಿಂದ್ ಈಗ ಕ್ಷಮೆ ಕೇಳಿದ್ದಾರೆ. ತಮ್ಮ ಮಾತಿನ ಹಿಂದೆ ಬೇರೆ ಉದ್ದೇಶ ಇರಲಿಲ್ಲ ಎಂದು ಅವರು ಹೇಳಿದ್ದಾರೆ. ‘ತಂಡೇಲ್’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

‘ಗೇಮ್ ಚೇಂಜರ್’ ಒಟಿಟಿ ರಿಲೀಸ್: ಫೆಬ್ರವರಿ 7ರಿಂದ ‘ಅಮೇಜಾನ್ ಪ್ರೈಂ ವಿಡಿಯೋ’ದಲ್ಲಿ ಪ್ರಸಾರ

ರಾಮ್ ಚರಣ್, ಕಿಯಾರಾ ಅಡ್ವಾಣಿ, ಎಸ್​.ಜೆ. ಸೂರ್ಯ ಮುಂತಾದವರು ನಟಿಸಿದ ‘ಗೇಮ್ ಚೇಂಜರ್’ ಸಿನಿಮಾದ ಒಟಿಟಿ ರಿಲೀಸ್ ದಿನಾಂಕ ಬಹಿರಂಗ ಆಗಿದೆ. ಫೆ.7ರಿಂದ ತೆಲುಗು, ತಮಿಳು ಮತ್ತು ಕನ್ನಡದಲ್ಲಿ ಈ ಸಿನಿಮಾ ಪ್ರಸಾರ ಆಗಲಿದೆ. ಹಿಂದಿ ವರ್ಷನ್ ಬಿಡುಗಡೆ ಇನ್ನೂ ತಡವಾಗಲಿದೆ.

‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ

ಬಿಗ್ ಬಾಸ್ ಫಿನಾಲೆಯ ಎರಡನೇ ದಿನ ಆರಂಭ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದಕ್ಕೆ ಸಂಬಂಧಿಸಿದ ಪ್ರೋಮೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಹನುಮಂತ ಅವರ ಫನ್ ಟಾಕ್ ಎಲ್ಲರಿಗೂ ಇಷ್ಟ ಆಗಿದೆ.

Game Changer: ಫ್ಲಾಪ್ ಸಿನಿಮಾ ಪ್ರಸಾರ ಮಾಡಿ ಅರೆಸ್ಟ್ ಆದ ಕೇಬಲ್ ಟಿವಿ ಸಿಬ್ಬಂದಿ

ನಟ ರಾಮ್ ಚರಣ್ ಅವರಿಗೆ 2025ರ ಆರಂಭದಲ್ಲೇ ಸೋಲು ಉಂಟಾಗಿದೆ. ಈ ವರ್ಷ ಸಂಕ್ರಾಂತಿ ಪ್ರಯುಕ್ತ ಅವರು ನಟಿಸಿದ ‘ಗೇಮ್ ಚೇಂಜರ್​’ ಸಿನಿಮಾ ಬಿಡುಗಡೆ ಆಯಿತು. ಆದರೆ ಬಾಕ್ಸ್ ಆಫೀಸ್​ನಲ್ಲಿ ನಿರೀಕ್ಷಿತ ಪ್ರಮಾಣದ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಲಿಲ್ಲ. ಸಿನಿಮಾದ ಸೋಲಿಗೆ ಪೈರಸಿ ಕೂಡ ಕಾರಣ ಆಗಿದೆ.

ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಸೆಂಟಿಮೆಂಟ್​ನಿಂದ ಸಿನಿಮಾ ಗೆಲ್ತು ಎಂಬ ಮಾತು ನನಗೆ ಬೇಡ: ಅಜಯ್ ರಾವ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಅರವಿಂದ್ ಕೇಜ್ರಿವಾಲ್ ಮಗಳ ಮದುವೆಯಲ್ಲಿ ಪಂಜಾಬ್ ಸಿಎಂ ಭರ್ಜರಿ ಡ್ಯಾನ್ಸ್
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ..
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ