Ram Mandir

Ram Mandir

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್​​ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್​ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.

ಇನ್ನೂ ಹೆಚ್ಚು ಓದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ ಸಿಗುವ ಜಿಎಸ್​ಟಿ ಮೊತ್ತ 400 ಕೋಟಿ ರೂ?

GST collection from Ayodhya Ram temple construction: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ ಸಿಗುವ ತೆರಿಗೆ ಮೊತ್ತ ಅಂದಾಜು 400 ಕೋಟಿ ರೂ ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. 70 ಎಕರೆ ವಿಶಾಲ ಪ್ರದೇಶದಲ್ಲಿ ರಾಮಮಂದಿರ ಸೇರಿ ಒಟ್ಟು 18 ದೇವಸ್ಥಾನಗಳನ್ನು ಕಟ್ಟಲಾಗುತ್ತಿದೆ. ಇವುಗಳ ಒಟ್ಟು ನಿರ್ಮಾಣ ವೆಚ್ಚ 1,800 ಕೋಟಿ ರೂ ಎಂಬ ಅಂದಾಜಿದೆ.

ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಶೇ.20 ರಷ್ಟು ಇಳಿಕೆ

ಏಪ್ರಿಲ್​ ಬಳಿಕ ಅಯೋಧ್ಯೆಗೆ ಭೇಟಿ ನೀಡುವ ಭಕ್ತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಈ ಕುರಿತು ಅಮರ್​ ಉಜಾಲಾ ಸುದ್ದಿ ಮಾಡಿದ್ದು, ಪ್ರವಾಸೋದ್ಯಮ ಉತ್ತಮವಾಗಿದ್ದರೂ ಕೂಡ ಏಪ್ರಿಲ್​ನಿಂದ ಅದರ ವೇಗ ಕಡಿಮೆಯಾಗಿದೆ.

ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್​ ಅಧ್ಯಕ್ಷ ಮಹಂತ್ ದಾಸ್ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಪ್ಟೆಂಬರ್ 8 ರಂದು ಸಂಜೆ 6.30 ರ ಸುಮಾರಿಗೆ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಯಿತು.

ಅಯೋಧ್ಯೆಯಲ್ಲಿ ಭೂಮಿಗೆ ಡಿಮ್ಯಾಂಡ್; ಮಾರ್ಗಸೂಚಿ ದರವೇ ಶೇ. 200ರಷ್ಟು ಹೆಚ್ಚಳ ಸಾಧ್ಯತೆ

Ayodhya circle rates set to be revised: ಕಳೆದ ನಾಲ್ಕೈದು ವರ್ಷಗಳಿಂದ ಅಯೋಧ್ಯೆಯಲ್ಲಿ ಭೂಮಿಗೆ ಭಾರೀ ಬೇಡಿಕೆ ಬಂದಿದೆ. ರಾಮಮಂದಿರ ನಿರ್ಮಾಣದ ಪರಿಣಾಮ ಇದು. ಭೂಮಿ ಬಹಳ ಹೆಚ್ಚಿನ ಮಟ್ಟದಲ್ಲಿ ಮಾರಾಟವಾಗುತ್ತಿದ್ದರೂ ಸರ್ಕಲ್ ರೇಟ್ ಅಥವಾ ಮಾರ್ಗಸೂಚಿ ದರ ಏಳು ವರ್ಷದ ಹಿಂದಿನದ್ದೇ ಇದೆ. ಇದೀಗ ಜಿಲ್ಲಾ ದಂಡಾಧಿಕಾರಿಗಳು ಮಾರ್ಗಸೂಚಿ ದರವನ್ನು ಶೇ. 50ರಿಂದ 200ರವರೆಗೂ ಹೆಚ್ಚಿಸಲು ಯೋಜಿಸಿದ್ದಾರೆ.

India Day Parade: ನ್ಯೂಯಾರ್ಕ್‌ನಲ್ಲಿ ಇಂಡಿಯಾ ಡೇ ಪರೇಡ್ ಆಚರಣೆ; ಕಣ್ಮನ ಸೆಳೆದ ಅಯೋಧ್ಯೆಯ ರಾಮಮಂದಿರ ಸ್ತಬ್ಧಚಿತ್ರ

ರಾಮಮಂದಿರದ ಟ್ಯಾಬ್ಲೋ ಜನಾಕರ್ಷಣೆಯ ಕೇಂದ್ರ ಬಿಂದು ಆಗಿತ್ತು. ರಾಮಮಂದಿರದ ಸ್ತಬ್ಧಚಿತ್ರ ಭಾರತದ ಸಂಸ್ಕೃತಿಯು ಇಡೀ ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುತ್ತದೆ ಎಂಬುದನ್ನು ತೋರಿಸುತ್ತದೆ. ಅದು ಎಲ್ಲಾ ಮನುಷ್ಯರಲ್ಲಿ ಒಬ್ಬನೇ ದೇವರನ್ನು ನೋಡುತ್ತದೆ. ಎಲ್ಲವೂ ಬ್ರಹ್ಮನ ಸೃಷ್ಟಿ ಎಂದು ನಮ್ಮ ಸಂಸ್ಕೃತಿ ಹೇಳುತ್ತದೆ. ನಾವು ಭಾರತೀಯರು ಸಮಾನತೆಯ ಸಂದೇಶವನ್ನು ನೀಡುತ್ತೇವೆ ಎಂದು ಎಎನ್‌ಐ ಜೊತೆ ಮಾತನಾಡಿದ ಸ್ವಾಮಿ ಅವಧೇಶಾನಂದ ಗಿರಿ ಜಿ ಮಹಾರಾಜ್ ಹೇಳಿದ್ದಾರೆ.

Viral News: ಅಯೋಧ್ಯೆಯ ರಾಮ ಮಂದಿರದ ದರ್ಶನಕ್ಕೆ ಚಪ್ಪಲಿ ಧರಿಸದೆ 11 ವರ್ಷ ಕಾದ ಭಕ್ತ

ಅಯೋಧ್ಯೆಯ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಮಧ್ಯಪ್ರದೇಶದ ಭಕ್ತ ಸೈಕಲ್​ನಲ್ಲಿ ರಾಮನ ದರ್ಶನಕ್ಕೆ ತೆರಳಿದರು. ರಾಮನನ್ನು ಕಣ್ತುಂಬಿಕೊಂಡ ನಂತರ ಇದೀಗ 11 ವರ್ಷಗಳ ಬಳಿಕ ಅವರು ಚಪ್ಪಲಿ ಧರಿಸಲಿದ್ದಾರೆ.

WAQF Amendment Bill: ವಕ್ಫ್​ ಕಾಯ್ದೆ ತಿದ್ದುಪಡಿ, ಕೇಂದ್ರದ ನಿರ್ಧಾರ ಸ್ವಾಗತಿಸಿದ ಅಯೋಧ್ಯೆ ರಾಮ ಮಂದಿರ ಪ್ರಧಾನ ಅರ್ಚಕರು

Wakf Bill 2024:ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರವನ್ನು ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರು ಸ್ವಾಗತಿಸಿದ್ದಾರೆ. 1954 ರಲ್ಲಿ ಜವಾಹರಲಾಲ್ ನೆಹರು ಸರ್ಕಾರವು ಈ ಆಸ್ತಿಗಳನ್ನು ನಿರ್ವಹಿಸಲು ಮೊದಲ ವಕ್ಫ್ ಕಾಯಿದೆಯನ್ನು ತಂದಿತು. ನಂತರ 1995 ರಲ್ಲಿ, ಪಿವಿ ನರಸಿಂಹ ರಾವ್ ಸರ್ಕಾರವು ಹೊಸ ವಕ್ಫ್ ಕಾಯಿದೆಯನ್ನು ಜಾರಿಗೆ ತಂದಿತು.

ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್​ ಕೋಡ್​, ಮೊಬೈಲ್​ ಬಳಕೆ ನಿಷೇಧ

ಇನ್ನುಮುಂದೆ ರಾಮ ಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಅರ್ಚಕರೆಲ್ಲರೂ ಒಂದೇ ಬಗೆಯ ಧಿರಿಸಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ಈಗಾಗಲೇ ಭಕ್ತರಿಗೆ ರಾಮ ಮಂದಿರ ಆವರಣದಲ್ಲಿ ಮೊಬೈಲ್​ ಬಳಕೆಯನ್ನು ನಿಷೇಧಿಸಿದ್ದು, ಇನ್ನುಮುಂದೆ ಅರ್ಚಕರೂ ಕೂಡ ಮೊಬೈಲ್​ ಕೊಂಡೊಯ್ಯುವಂತಿಲ್ಲ.

ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ ಎಮ್ಮೆಲ್ಸಿ ಹೆಚ್ ವಿಶ್ವನಾಥ್

ಇದಕ್ಕೂ ಮೊದಲು ಸಹ ನಾವು ಹೆಚ್ ವಿಶ್ವನಾಥ್ ಅವರ ದ್ವಂದ್ವ ನಿಲುವಿನ ಬಗ್ಗೆ ವರದಿ ಮಾಡಿದ್ದೇವೆ. ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾಗಿರುವ ಅವರು ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಜೊತೆ ನಿಂತಿದ್ದರು. ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರು. ಅವರನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಸ್ವಾಮಿ!

ಅಯೋಧ್ಯೆ: ಮೊದಲ ಮಳೆಗೆ ಸೋರಿದ ರಾಮ ಮಂದಿರದ ಗರ್ಭಗುಡಿಯ ಮೇಲ್ಛಾವಣಿ

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯಾಗಿ ಕೇವಲ 6 ತಿಂಗಳು ಕಳೆದಿವೆ, ಈಗ ಅಯೋಧ್ಯೆಯಲ್ಲಿ ಸುರಿದಿರುವ ಮೊದಲ ಮಳೆಗೆ ಗರ್ಭಗುಡಿಯ ಮೇಲ್ಛಾವಣಿ ಸೋರುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ