Ram Mandir
ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.
ಇನ್ನೂ ಹೆಚ್ಚು ಓದಿರಾಮಮಂದಿರ ಕಾಣಿಕೆ ಕಳವು; ಕೇಸರಿ ಬಟ್ಟೆ ಧರಿಸಿ ಸಂಸತ್ ಹೊರಗೆ ಪಪ್ಪು ಯಾದವ್ ಪ್ರತಿಭಟನೆ
ಜುಲೈ 20ರಂದು ಜಂತರ್ ಮಂತರ್ನಲ್ಲಿ ನಡೆದ ಸಂಸತ್ ಚಲೋ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನಾ ಅಭಿಯಾನವನ್ನು ಮುಂದುವರಿಸಿರುವ ಬೆನ್ನಲ್ಲೇ ಈ ಸಾಂಕೇತಿಕ ಪ್ರತಿಭಟನೆ ನಡೆದಿದೆ. ಸತತ ಎರಡನೇ ದಿನವೂ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದೊಳಗೆ ಅಮಿತ್ ಶಾ ಅವರ ಗೈರುಹಾಜರಿಯನ್ನು ಪ್ರಶ್ನಿಸುವ ಬ್ಯಾನರ್ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
- Sushma Chakre
- Updated on: Jul 31, 2026
- 9:30 pm
ಅಯೋಧ್ಯಾ ರಾಮ ಮಂದಿರ ಟ್ರಸ್ಟ್ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಜಗದೀಶ್ ಅಫ್ಲೆ ಅವರನ್ನು ಹೊಸ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಐಐಟಿ ಪದವೀಧರರಾದ ಅಫ್ಲೆ, ಆರ್ಎಸ್ಎಸ್ ಸ್ವಯಂಸೇವಕರಾಗಿದ್ದು, ರಾಮ ಮಂದಿರ ನಿರ್ಮಾಣದಲ್ಲಿ ವೇತನವಿಲ್ಲದೆ ಸೇವೆ ಸಲ್ಲಿಸಿದ್ದಾರೆ. ಟ್ರಸ್ಟ್ನ ಆಡಳಿತಾತ್ಮಕ ಸುಧಾರಣೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಇಒ ಆಯ್ಕೆ ಪ್ರಕ್ರಿಯೆಯೂ ನಡೆಯುತ್ತಿದ್ದು, ಟ್ರಸ್ಟ್ನ ಹಣಕಾಸು ನಿರ್ವಹಣೆಯಲ್ಲಿ ಅಫ್ಲೆ ಪ್ರಮುಖ ಪಾತ್ರ ವಹಿಸಿದ್ದಾರೆ.
- Nayana Rajeev
- Updated on: Jul 29, 2026
- 8:47 am
ರಾಮಮಂದಿರ ಹಗರಣದ ತನಿಖೆಯ ಎಸ್ಐಟಿಗೆ ಚಾರ್ಟರ್ಡ್ ಅಕೌಂಟೆಂಟ್ ನೇಮಿಸಿ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಯುತ, ನಿಖರ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿರುವ ವಿಶೇಷ ತನಿಖಾ ತಂಡದಲ್ಲಿ (SIT) ಚಾರ್ಟರ್ಡ್ ಅಕೌಂಟೆಂಟ್ ಅನ್ನು ಸೇರಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತು. ಉತ್ತರ ಪ್ರದೇಶ ಸರ್ಕಾರ ಸೂಚಿಸಿದ ಹೆಸರುಗಳ ಆಧಾರದ ಮೇಲೆ SIT ಅನ್ನು ರಚಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತಂಡಕ್ಕೆ ಎಸ್. ಕಿರಣ್ ನೇತೃತ್ವ ವಹಿಸಿದ್ದಾರೆ. ಕಳೆದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಎಸ್ಐಟಿ ರಚಿಸಲು ಅಧಿಕಾರಿಗಳ ಹೆಸರುಗಳನ್ನು ಸೂಚಿಸುವಂತೆ ಕೇಳಿತ್ತು.
- Sushma Chakre
- Updated on: Jul 27, 2026
- 7:35 pm
ರಾಮ ಮಂದಿರ ದೇಣಿಗೆ ಕಳ್ಳತನ ತನಿಖೆ: ಸುಪ್ರೀಂ ಆದೇಶದಂತೆ ಯುಪಿ ಸರ್ಕಾರದಿಂದ ಎಸ್ಐಟಿ ಪುನಾರಚನೆ
ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಗೆ ಯುಪಿ ಸರ್ಕಾರ ವಿಶೇಷ ತನಿಖಾ ತಂಡ (SIT) ಪುನರ್ರಚಿಸಿದೆ. ತನಿಖೆಯ ಪಾರದರ್ಶಕತೆಗಾಗಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತಂಡದಲ್ಲಿ ಸೇರಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಹೊಸ SIT ತನ್ನ ತನಿಖಾ ಪ್ರಗತಿಯ ವರದಿಯನ್ನು ಜುಲೈ 27 ರೊಳಗೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿದೆ.
- Nayana Rajeev
- Updated on: Jul 26, 2026
- 8:26 am
ಭ್ರಷ್ಟಾಚಾರಿಗಳಿಗೆ ಮರಣದಂಡನೆ ವಿಧಿಸುವಂತಾಗಬೇಕು; ಅಲಹಾಬಾದ್ ಹೈಕೋರ್ಟ್ ಟೀಕೆ
ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರುಪಯೋಗವಾಗಿರುವ ಆರೋಪದ ವಿಷಯವನ್ನು ಪ್ರಸ್ತಾಪಿಸಿದ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ಶ್ರೀಧರನ್, ಈ ಘಟನೆಯಿಂದಲೂ ವಿಚಲಿತರಾದ ಜನರನ್ನು ಜಗತ್ತಿನಲ್ಲಿ ಯಾವುದೂ ನಾಚಿಕೆಪಡಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸುವಂತೆಯೂ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ. ರಾಮಮಂದಿರದಲ್ಲಿ ನಡೆದ ಇತ್ತೀಚಿನ ದೇಣಿಗೆ ಕಳ್ಳತನ ಭಾರತೀಯರ ಪ್ರಾಮಾಣಿಕತೆಯ ಅಧಃಪತನಕ್ಕೆ ಸಾಕ್ಷಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
- Sushma Chakre
- Updated on: Jul 22, 2026
- 5:01 pm
‘ರಾಮಮಂದಿರ ದೇಣಿಗೆ ಹಗರಣದಲ್ಲಿ ಮೌನವೇಕೆ?’; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ
ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನವೇ ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಂಸತ್ತಿನ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಹಗರಣದ ಕುರಿತು ಪ್ರಧಾನಿಯವರ ಮೌನ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಹಾಗೇ ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡುವುದು ಪ್ರಧಾನಿಯ ಕರ್ತವ್ಯ ಎಂದು ಆಗ್ರಹಿಸಿದ್ದಾರೆ.
- Sushma Chakre
- Updated on: Jul 19, 2026
- 12:59 pm
ದೇಣಿಗೆ ಕಳ್ಳತನಕ್ಕೆ ಪ್ರಾಯಶ್ಚಿತ್ತ; ರಾಮ ಮಂದಿರದಲ್ಲಿ 10 ದಿನದ ಶುದ್ಧೀಕರಣ ಆರಂಭ
ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿದ್ದ ದೇಣಿಗೆ ಕಳ್ಳತನವಾದ ಸಂಗತಿ ದೊಡ್ಡ ವಿವಾದವಾಗಿ ಪರಿಣಮಿಸಿದೆ. ಈ ಘಟನೆಗೆ ದೇಶಾದ್ಯಂತ ಭಕ್ತರು ಭಾರೀ ಆಕ್ರೋಶ ಹೊರಹಾಕುತ್ತಿದ್ದಾರೆ. ರಾಮ ಮಂದಿರ ಟ್ರಸ್ಟ್ ಬಗ್ಗೆಯೂ ಆಕ್ರೋಶ ಹೆಚ್ಚಾಗಿದೆ. ರಾಮ ಮಂದಿರದ ಕಾಣಿಕೆಗಳು ಕಳುವಾದ ಬೆನ್ನಲ್ಲೇ ರಾಮ ಮಂದಿರದ ಇಡೀ ಆವರಣವನ್ನು ಶುದ್ಧೀಕರಲು ರಾಮ ಮಂದಿರದಲ್ಲಿ ಮಂತ್ರ ಪಠಣ, ರುದ್ರಾಭಿಷೇಕ ಮತ್ತು ಹವನ, ವಿಶೇಷ ಆಚರಣೆಗಳು ಶುರುವಾಗಿವೆ. 10 ದಿನಗಳ ಕಾಲ ರಾಮ ಮಂದಿರದ ಶುದ್ಧೀಕರಣ ಪ್ರಕ್ರಿಯೆ ನಡೆಯಲಿದೆ.
- Sushma Chakre
- Updated on: Jul 17, 2026
- 5:05 pm
ರಾಮ ಮಂದಿರ ದೇಣಿಗೆ ಹಗರಣ: ಜುಲೈ 20 ರಂದು ಸುಪ್ರೀಂಗೆ ಮಧ್ಯಂತರ ವರದಿ ಸಿಲ್ಲಿಸಲಿದೆ ಎಸ್ಐಟಿ
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ತನಿಖೆ ಅಂತಿಮ ಹಂತ ತಲುಪಿದೆ. ಜುಲೈ 20 ರಂದು ಸುಪ್ರೀಂ ಕೋರ್ಟ್ಗೆ ಎಸ್ಐಟಿ ಮಧ್ಯಂತರ ವರದಿ ಸಲ್ಲಿಸಲಿದೆ. ದೇಣಿಗೆಯಲ್ಲಿ ನಡೆದ ಆರ್ಥಿಕ ಅಕ್ರಮಗಳ ಕುರಿತ ಈ ವರದಿಯಿಂದ ಮಂದಿರ ಆಡಳಿತದಲ್ಲಿ ಬದಲಾವಣೆ ಸಾಧ್ಯತೆ ಇದೆ. ವಂಚಕರಿಗೆ ಕಠಿಣ ಶಿಕ್ಷೆಯ ಭರವಸೆ ನೀಡಿರುವ ಸರ್ಕಾರ, ದೇಶದ ಜನತೆ ತಾಳ್ಮೆಯಿಂದಿರಲು ಮನವಿ ಮಾಡಿದೆ.
- Nayana Rajeev
- Updated on: Jul 17, 2026
- 2:57 pm
ರಾಮ ಮಂದಿರಕ್ಕೆ ಬೇಕಾಗಿದ್ದಾರೆ ಬಾಸ್: ಸಿಇಒ ಹುದ್ದೆಗೆ 1,000 ಮಂದಿಯಿಂದ ಅರ್ಜಿ, ಜುಲೈ 22ಕ್ಕೆ ಅಂತಿಮ ಮುದ್ರೆ
ಅಯೋಧ್ಯೆಯ ರಾಮ ಮಂದಿರದ ಪಾರದರ್ಶಕ ನಿರ್ವಹಣೆಗಾಗಿ ಸಿಇಒ ಹುದ್ದೆ ಸೃಷ್ಟಿಸಲಾಗಿದೆ. ಕೇವಲ 5 ದಿನಗಳಲ್ಲಿ 1,000 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದು, ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು ಮತ್ತು ಕಾರ್ಪೊರೇಟ್ ತಜ್ಞರು ಸೇರಿದ್ದಾರೆ. 'ರಾಮಭಕ್ತ' ಹಾಗೂ 20 ವರ್ಷಗಳ ಅನುಭವ ಕಡ್ಡಾಯ. ಜುಲೈ 22 ರಂದು ಅಂತಿಮ ಆಯ್ಕೆ ನಡೆಯಲಿದ್ದು, ತಿರುಪತಿ ಮಾದರಿಯಲ್ಲಿ ಮಂದಿರದ ದೈನಂದಿನ ಕಾರ್ಯನಿರ್ವಹಣೆ ಸುಧಾರಿಸುವುದು ಮುಖ್ಯ ಗುರಿಯಾಗಿದೆ.
- Nayana Rajeev
- Updated on: Jul 15, 2026
- 12:41 pm
ಹಗರಣದ ಬೆನ್ನಲ್ಲೇ ದೊಡ್ಡ ನಿರ್ಧಾರ: ರಾಮ ಮಂದಿರ ‘CEO’ ಹುದ್ದೆಗೆ ಅರ್ಜಿ ಆಹ್ವಾನಿಸಿದ ಟ್ರಸ್ಟ್
ರಾಮ ಮಂದಿರದ ದೇಣಿಗೆ ಹಗರಣದ ಹಿನ್ನೆಲೆಯಲ್ಲಿ ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಮಹತ್ವದ ನಿರ್ಧಾರ ಕೈಗೊಂಡಿದೆ. ಮಂದಿರದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಭದ್ರತೆ ಹೆಚ್ಚಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. 50-70 ವಯಸ್ಸಿನ, 20+ ವರ್ಷಗಳ ಅನುಭವವಿರುವ ರಾಮ ಭಕ್ತರು ಅರ್ಜಿ ಸಲ್ಲಿಸಬಹುದು. ಸಿಬ್ಬಂದಿಗೆ ಜೇಬಿಲ್ಲದ ಸಮವಸ್ತ್ರ, ಖಾಸಗಿ ಬ್ಯಾಂಕ್ ಸೇವೆಗಳ ಮೂಲಕ ಹಣಕಾಸು ಭದ್ರತೆಯನ್ನು ಬಲಪಡಿಸಲು ಟ್ರಸ್ಟ್ ಮುಂದಾಗಿದೆ.
- Nayana Rajeev
- Updated on: Jul 14, 2026
- 7:54 am
ರಾಮಮಂದಿರ ದೇಣಿಗೆ ಕಳ್ಳತನ: ಅನುಪಮ್ ಖೇರ್ ಬಗ್ಗೆ ನಾಸಿರುದ್ದೀನ್ ಶಾ ಮಾತನಾಡಿದ್ದ ವಿಡಿಯೋ ವೈರಲ್
ರಾಮಮಂದಿರದ ದೇಣಿಗೆ ಕಳ್ಳತನದ ಕುರಿತಾದ ನಟ ಅನುಪಮ್ ಖೇರ್ ಹೇಳಿಕೆಗೆ ನೆಟ್ಟಿಗರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಾಸಿರುದ್ದೀನ್ ಶಾ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಬಾಲಿವುಡ್ನ ಈ ಇಬ್ಬರು ಹಿರಿಯ ನಟರ ವಾಕ್ಸಮರದ ವಿಡಿಯೋ ಮತ್ತೆ ಇಂಟರ್ನೆಟ್ನಲ್ಲಿ ಚರ್ಚೆ ಹುಟ್ಟುಹಾಕಿದೆ.
- Madan Kumar
- Updated on: Jul 13, 2026
- 9:14 pm
ರಾಮ ಮಂದಿರದ ಕಾಣಿಕೆಗೆ ‘AI’ ಕಾವಲು: ಪ್ರತಿ ರೂಪಾಯಿಯನ್ನೂ ಟ್ರ್ಯಾಕ್ ಮಾಡಲು ಎಸ್ಐಟಿ ಮಾಸ್ಟರ್ ಪ್ಲ್ಯಾನ್
ರಾಮ ಮಂದಿರದಲ್ಲಿ ನಡೆದ ಕಾಣಿಕೆ ಕಳ್ಳತನಕ್ಕೆ ಕಡಿವಾಣ ಹಾಕಲು ಎಸ್ಐಟಿ AI-ಆಧಾರಿತ ಕಣ್ಗಾವಲು ವ್ಯವಸ್ಥೆ ಶಿಫಾರಸು ಮಾಡಿದೆ. ಇದು ಅನುಮಾನಾಸ್ಪದ ಚಲನವಲನ, ನಗದು ಸ್ಕ್ಯಾನಿಂಗ್ ಮೂಲಕ ಸಂಪೂರ್ಣ ಪಾರದರ್ಶಕತೆ ಖಚಿತಪಡಿಸುತ್ತದೆ. ಎಸ್ಬಿಐ ಮೇಲಿನ ಆಕ್ರೋಶದ ನಂತರ ಬ್ಯಾಂಕ್ ಬದಲಾವಣೆಗೆ ಟ್ರಸ್ಟ್ ಚಿಂತಿಸಿದೆ. ಅಲ್ಲದೆ, ಆರೋಪಿಗಳ ಆಸ್ತಿ ಜಪ್ತಿ ಮತ್ತು ವಿಐಪಿ ಪಾಸ್ ದಂಧೆಗೂ ಬೀಗ ಹಾಕಲಾಗಿದೆ.
- Nayana Rajeev
- Updated on: Jul 13, 2026
- 10:55 am