
Ram Mandir
ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.
ಅಯೋಧ್ಯೆಯ ರಾಮ ಮಂದಿರದಲ್ಲಿ ದರ್ಶನದ ಸಮಯ ವಿಸ್ತರಣೆ, ಎಷ್ಟು ಗಂಟೆ ಬಾಗಿಲು ತೆಗೆದಿರುತ್ತೆ?
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀರಾಮ ಮಂದಿರದ ದರ್ಶನ ಸಮಯವನ್ನು ವಿಸ್ತರಿಸಲಾಗಿದೆ. ಈಗ ದೇವಾಲಯವು ಒಂದು ಗಂಟೆ ಮುಂಚಿತವಾಗಿ ತೆರೆಯುತ್ತದೆ. ಇಲ್ಲಿಯವರೆಗೆ ದೇವಾಲಯ ತೆರೆಯುವ ಸಮಯ ಬೆಳಗ್ಗೆ 7 ಗಂಟೆಯಾಗಿತ್ತು. ಇನ್ನು ಮುಂದೆ ದೇವಸ್ಥಾನ ಬೆಳಗ್ಗೆ 6 ಗಂಟೆಗೆ ತೆರೆಯುತ್ತದೆ. ಈ ಮಾಹಿತಿಯನ್ನು ರಾಮ ಮಂದಿರ ಟ್ರಸ್ಟ್ನ ಮಾಧ್ಯಮ ವಿಭಾಗ ಸೋಮವಾರ ನೀಡಿದೆ. ಮಾಧ್ಯಮ ವಿಭಾಗದ ಪ್ರಕಾರ, ರಾಮ ಮಂದಿರದಲ್ಲಿ ದರ್ಶನಕ್ಕಾಗಿ ಹೊಸ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
- Nayana Rajeev
- Updated on: Mar 4, 2025
- 12:41 pm
ರಾಮಮಂದಿರದ ಮೇಲೆ ದಾಳಿಗೆ ಸಂಚು; ಉಗ್ರ ಅಬ್ದುಲ್ ಬಂಧನ
ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿಗೆ ಉಗ್ರರು ಸಂಚು ರೂಪಿಸಿದ್ದರು. ಶಂಕಿತ ಭಯೋತ್ಪಾದಕ ಅಬ್ದುಲ್ನನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕದಲ್ಲಿದ್ದ ಶಂಕಿತ ಉಗ್ರ ಅಬ್ದುಲ್ ರಾಮ ಮಂದಿರದ ಮೇಲೆ ಗ್ರೇನೇಡ್ ದಾಳಿಗೆ ಸಂಚು ರೂಪಿಸಿದ್ದ ಎನ್ನಲಾಗಿದೆ. ಹರಿಯಾಣದ ಫರಿದಾಬಾದ್ದಲ್ಲಿ ಅಬ್ದುಲ್ ರೆಹಮಾನ್ ಬಂಧಿಸಲಾಗಿದೆ. ಐಎಸ್ಐ ಸಂಪರ್ಕದಲ್ಲಿದ್ದ ಅಬ್ದುಲ್ ರೆಹಮಾನ್ ಪಿತೂರಿಯ ಭಾಗವಾಗಿ ಹಲವು ಬಾರಿ ರಾಮ ಮಂದಿರದ ಪರಿಶೀಲನೆ ನಡೆಸಿದ್ದ. ರಾಮಮಂದಿರದ ಎಲ್ಲಾ ಮಾಹಿತಿಯನ್ನು ಪಾಕಿಸ್ತಾನದ ಐಎಸ್ಐ ಜೊತೆ ಹಂಚಿಕೊಂಡಿದ್ದ. ಆದರೆ ಅವನ ಯೋಜನೆ ಯಶಸ್ವಿಯಾಗುವ ಮೊದಲು ಗುಜರಾತ್ ಎಟಿಎಸ್ ಮತ್ತು ಫರಿದಾಬಾದ್ ಎಸ್ಟಿಎಫ್ ಶಂಕಿತ ಭಯೋತ್ಪಾದಕನನ್ನು ಬಂಧಿಸಿದೆ.
- Sushma Chakre
- Updated on: Mar 3, 2025
- 7:12 pm
Acharya Satyendra Das: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
- Nayana Rajeev
- Updated on: Feb 12, 2025
- 9:47 am
ರಾಮಲಲ್ಲಾ ವಿಗ್ರಹ ಕೆತ್ತಲು ಶಿಲೆ ಸಿಕ್ಕ ಮೈಸೂರು ಬಳಿಯ ಜಾಗದಲ್ಲಿ ಶಾಸಕ ಮತ್ತು ಸ್ಥಳೀಯರಿಂದ ಪೂಜೆ
ಅಯೋಧ್ಯೆಯಿಂದ ಮಣ್ಣನ್ನು ತಂದು ಶಿಲೆಸಿಕ್ಕ ಜಾಗದಲ್ಲಿ ಹಾಕಿರುವುದರಿಂದ ಪುಣ್ಯಭೂಮಿಯ ಪಾವಿತ್ರ್ಯತೆ ಮತ್ತಷ್ಟು ಹೆಚ್ಚದೆ. ಇವತ್ತು ನಡೆದ ಪೂಜಾ ಸಂಸ್ಕಾರಗಳಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಗಳ ನಿವಾಸಿಗಳು ಸಹ ಭಾಗಿಯಾಗಿದ್ದರು. ಕಳೆದ ವರ್ಷವೂ ಇಲ್ಲಿ ಪೂಜೆಯನ್ನು ನೆರವೇರಿಸಲಾಗಿತ್ತು. ಇದೇ ಜಾಗದಲ್ಲಿ ಒಂದು ಭವ್ಯವಾದ ರಾಮಮಂದಿರ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
- Arun Belly
- Updated on: Jan 22, 2025
- 1:07 pm
ಅಂಜನಾದ್ರಿ ಟು ಅಯೋಧ್ಯೆ ರೈಲು ಸಂಪರ್ಕಕ್ಕೆ ಹೆಚ್ಚಿದ ಆಗ್ರಹ: ಪರಿಶೀಲನೆ ಭರವಸೆ ನೀಡಿದ ಸಚಿವ ಸೋಮಣ್ಣ
ರಾಮನ ಜನ್ಮಸ್ಥಳ ಅಯೋಧ್ಯೆಗೆ ರಾಮನ ಬಂಟ ಹನುಮಂತನ ಜನ್ಮಸ್ಥಳ ಅಂಜನಾದ್ರಿಯಿಂದ ರೈಲು ಸಂಪರ್ಕ ಕಲ್ಪಿಸಬೇಕು ಮತ್ತು ನೇರ ರೈಲು ಆರಂಭಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ನಂತರ ಈ ಬೇಡಿಕೆಯ ಕಾವು ಹೆಚ್ಚಾಗಿದೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಖುದ್ದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ.
- Sanjayya Chikkamath
- Updated on: Jan 18, 2025
- 4:57 pm
ಅಯೋಧ್ಯೆ ಬಾಲರಾಮನ ಕೆತ್ತನೆಗೆ ಕಲ್ಲು ದೊರೆತ ಸ್ಥಳದಲ್ಲಿ ಗ್ರಾಮಸ್ಥರಿಂದ ದೇವಸ್ಥಾನ ನಿರ್ಮಾಣ: ಜ.22ಕ್ಕೆ ಮತ್ತೊಮ್ಮೆ ಭೂಮಿ ಪೂಜೆ
ಮೈಸೂರಿನ ಹಾರೋಹಳ್ಳಿಯಲ್ಲಿ ದೊರೆತ ಕಲ್ಲಿನಿಂದ ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತಲಾಗಿದೆ. ಕಲ್ಲು ದೊರೆತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒಂದು ವರ್ಷದ ಹಿಂದೆ ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ,ಇನ್ನೂವರೆಗೂ ದೇವಸ್ಥಾನ ನಿರ್ಮಾಣವಾಗಿಲ್ಲ. ಈ ಹಿನ್ನೆಲೆಯಲ್ಲಿ ಜಮೀನು ಮಾಲೀಕ ರಾಮ್ದಾಸ್ ಅವರೇ ಸಣ್ಣ ಗುಡಿ ನಿರ್ಮಿಸಲು ಮುಂದಾಗಿದ್ದಾರೆ.
- Web contact
- Updated on: Jan 17, 2025
- 1:31 pm
ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಪಂಚಾಮೃತ ಅಭಿಷೇಕ
ಮಂತ್ರ ಪಠಣ, ಪಂಚಾಮೃತಾಭಿಷೇಕ, ಚಿನ್ನ- ಬೆಳ್ಳಿ ದಾರದಿಂದ ಮಾಡಿದ ಬಟ್ಟೆಗಳನ್ನು ಹಾಕುವ ಮೂಲಕ ಅಯೋಧ್ಯೆಯ ರಾಮಮಂದಿರದ ಮೊದಲ ವಾರ್ಷಿಕೋತ್ಸವದ ದಿನವಾದ ಇಂದು ರಾಮಲಲ್ಲಾವನ್ನು ಭವ್ಯವಾಗಿ ಅಲಂಕರಿಸಲಾಗಿತ್ತು. ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಮೊದಲ ವಾರ್ಷಿಕೋತ್ಸವದಂದು ಅಯೋಧ್ಯಾ ರಾಮ ದೇವಾಲಯದಲ್ಲಿ ಮೂರು ದಿನಗಳ ಭವ್ಯ ಪ್ರತಿಷ್ಠಾ ದ್ವಾದಶಿ ಆಚರಣೆಯನ್ನು ಆಯೋಜಿಸಲಾಗಿದೆ. ಇದರಲ್ಲಿ ರಾಮಲಲ್ಲಾಗೆ ಮಂತ್ರಗಳ ಪಠಣದೊಂದಿಗೆ ಪಂಚಾಮೃತದಿಂದ ಅಭಿಷೇಕ ನೆರವೇರಿಸಲಾಯಿತು. ಬಾಲ ರಾಮನನ್ನು ಭವ್ಯವಾಗಿ ಅಲಂಕಾರ ಮಾಡಲಾಗಿತ್ತು.
- Sushma Chakre
- Updated on: Jan 11, 2025
- 3:41 pm
ಶತಮಾನಗಳ ತ್ಯಾಗದ ಪ್ರತಿಫಲ; ರಾಮ ಮಂದಿರ ಪ್ರತಿಷ್ಠಾಪನೆಯ ವಾರ್ಷಿಕೋತ್ಸವ ಕುರಿತು ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಅಭಿನಂದಿಸಿದ್ದಾರೆ. ತಮ್ಮ ಸಂದೇಶದಲ್ಲಿ ಪ್ರಧಾನಿ ಮೋದಿ ಅವರು ಈ ದೇವಾಲಯವನ್ನು ‘ಶತಮಾನಗಳ ತ್ಯಾಗ, ತಪಸ್ಸು ಮತ್ತು ಹೋರಾಟದ ನಂತರ ನಿರ್ಮಿಸಲಾಗಿದೆ’ ಎಂದು ಹೇಳಿದ್ದಾರೆ.
- Sushma Chakre
- Updated on: Jan 11, 2025
- 3:15 pm
ರಾಮಲಲ್ಲಾ ಪ್ರತಿಷ್ಠಾ ವರ್ಷಾಚರಣೆ ಜನವರಿ 11 ರಂದೇ ಏಕೆ? ಪ್ರತಿ ವರ್ಷವೂ ಇದೇ ದಿನ ಬರಲಿದೆಯೇ? ಇಲ್ಲಿದೆ ಉತ್ತರ
ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗಿದ್ದು 2024ರ ಜನವರಿ 22ರಂದು. ಆದರೆ, ಪ್ರತಿಷ್ಠಾ ವರ್ಷಾಚರಣೆಯನ್ನು 2025ರ ಜನವರಿ 11ರಂದು ಆಚರಿಸಲಾಗುತ್ತಿದೆ. ಇದಕ್ಕೆ ಕಾರಣವೇನು? ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಜನವರಿ 11 ಅನ್ನೇ ವರ್ಷಾಚರಣೆಗೆ ಆಯ್ಕೆ ಮಾಡಿಕೊಂಡಿದ್ದೇಕೆ? ಪ್ರತಿ ವರ್ಷವೂ ಜನವರಿ 11ರಂದೇ ವರ್ಷಾಚರಣೆ ನಡೆಯಲಿದೆಯೇ? ಈ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಮುಂದೆ ಓದಿ.
- Ganapathi Sharma
- Updated on: Jan 11, 2025
- 10:47 am
ಪ್ರತಿಷ್ಠಾ ದ್ವಾದಶಿ: ಅಯೋಧ್ಯೆಯಲ್ಲಿ ಇಂದಿನಿಂದ ಮೂರು ದಿನ ಉತ್ಸವ, ಏನೇನಿರಲಿವೆ ನೋಡಿ
Pratishtha Dwadashi 2025: ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠೆಯ ಮೊದಲ ವಾರ್ಷಿಕೋತ್ಸವವನ್ನು 'ಪ್ರತಿಷ್ಠಾ ದ್ವಾದಶಿ' ಎಂದು ಆಚರಿಸಲಾಗುತ್ತಿದೆ. ಮೂರು ದಿನಗಳ ಉತ್ಸವದಲ್ಲಿ ರಾಮಲಲ್ಲಾ ಮಹಾಭಿಷೇಕ, ಅಲಂಕಾರ, ಅರ್ಪಣೆ, ಆರತಿ, ರಾಮಚರಿತಮಾನಸ ಪಾರಾಯಣ, ರಾಮಾಯಣ ಪ್ರವಚನ ಮುಂತಾದ ಕಾರ್ಯಕ್ರಮಗಳಿವೆ. ವಿಶೇಷ ದರ್ಶನ ಪಾಸ್ಗಳನ್ನು ರದ್ದುಗೊಳಿಸಲಾಗಿದೆ.
- Ganapathi Sharma
- Updated on: Jan 11, 2025
- 10:17 am