Ram Mandir
ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.
ಅಯೋಧ್ಯೆ ರಾಮಮಂದಿರ ದೇಣಿಗೆ ವಂಚನೆ: ಲಕ್ನೋ ಹೈಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ
ಅಯೋಧ್ಯೆ ರಾಮಮಂದಿರ ದೇಣಿಗೆಯಲ್ಲಿ ಕೋಟಿ ಕೋಟಿ ರೂಪಾಯಿ ವಂಚನೆ ಮತ್ತು ಚಿನ್ನಾಭರಣ ಕಳ್ಳಾಟ ನಡೆದಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಲಕ್ನೋ ಹೈಕೋರ್ಟ್ನಲ್ಲಿ ಇಂದು ಮಹತ್ವದ ಅರ್ಜಿ ವಿಚಾರಣೆ ನಡೆಯಲಿದೆ. ಸ್ವತಂತ್ರ ತನಿಖೆಗೆ ಆಗ್ರಹಿಸಿ ಸಲ್ಲಿಸಲಾದ ಈ ಅರ್ಜಿಯಲ್ಲಿ, 1,250 ಕೆಜಿ ಚಿನ್ನ, 70 ಕೆಜಿ ಬೆಳ್ಳಿ ಹಾಗೂ 200 ಕೋಟಿ ರೂಪಾಯಿ ಹಣದ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಕೋರಲಾಗಿದೆ.
- Nayana Rajeev
- Updated on: Jun 24, 2026
- 12:57 pm
ರಾಮ ಮಂದಿರ ದೇಣಿಗೆ ಹಗರಣಕ್ಕೆ ಭಾರಿ ತಿರುವು, ಎಸ್ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ, ಏನೇನಿದೆ?
Ayodhya Ram Mandir: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ 15 ಪುಟಗಳ ವರದಿ ಸಲ್ಲಿಸಿದೆ. ಈ ವರದಿಯು ದೇಣಿಗೆ ಸಂಗ್ರಹ ಮತ್ತು ನಿರ್ವಹಣೆಯಲ್ಲಿ ವ್ಯಾಪಕ ಅಕ್ರಮಗಳನ್ನು ಬಯಲಿಗೆಳೆದಿದೆ. ಚಿನ್ನ, ಬೆಳ್ಳಿಗೆ ದಾಖಲೆಗಳಿಲ್ಲದಿರುವುದು, ಭಕ್ತರ ಸಂಖ್ಯೆ ಹೆಚ್ಚಿದ್ದರೂ ಆದಾಯ ಕುಸಿದಿರುವುದು, ಹಾಗೂ ಚಂಪತ್ ರಾಯ್ ಸಮಿತಿಯ ನಿರ್ಲಕ್ಷ್ಯ ಪ್ರಮುಖ ಆರೋಪಗಳು. ಹಲವಾರು ಉದ್ಯೋಗಿಗಳ ಆಸ್ತಿ ದಿಢೀರ್ ಹೆಚ್ಚಳವೂ ತನಿಖೆಗೆ ಒಳಪಟ್ಟಿದೆ. ಕಟ್ಟುನಿಟ್ಟಿನ ಕ್ರಮಗಳಿಗೆ ಎಸ್ಐಟಿ ಶಿಫಾರಸು ಮಾಡಿದೆ.
- Nayana Rajeev
- Updated on: Jun 24, 2026
- 11:14 am
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಮ ಮಂದಿರ ದೇಣಿಗೆ ಹಗರಣ, ಸಿಬಿಐ ತನಿಖೆಗೆ ಕೋರಿ ಅರ್ಜಿ
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಆರ್ಥಿಕ ಅಕ್ರಮಗಳು ಮತ್ತು ಕಾಣಿಕೆ ಹಣದ ದುರುಪಯೋಗದ ಬಗ್ಗೆ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಸಿಬಿಐ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮತ್ತು ಉತ್ತರ ಪ್ರದೇಶ ಸರ್ಕಾರದ ಎಸ್ಐಟಿ ತನಿಖೆಯ ಲೋಪದೋಷಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಭಕ್ತರ ನಂಬಿಕೆ ಕಾಪಾಡಲು ಪಾರದರ್ಶಕ ತನಿಖೆ ಅನಿವಾರ್ಯ.
- Nayana Rajeev
- Updated on: Jun 23, 2026
- 2:42 pm
ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಿಂದ 40 ಸಿಬ್ಬಂದಿ ವಜಾ, ಸಿಎಂ ಯೋಗಿಗೆ ಇಂದು ಎಸ್ಐಟಿ ವರದಿ ಸಲ್ಲಿಕೆ
ಅಯೋಧ್ಯೆಯ ಶ್ರೀ ರಾಮ ಮಂದಿರ ದೇಣಿಗೆ ಹಗರಣದಲ್ಲಿ ಭಾರಿ ಅಕ್ರಮದ ಆರೋಪ ಕೇಳಿಬಂದಿದೆ. ಭಕ್ತರ ಕಾಣಿಕೆ ಹಣ ಹಾಗೂ ಆಭರಣಗಳ ದುರುಪಯೋಗದ ಹಿನ್ನೆಲೆಯಲ್ಲಿ ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ 40 ಸಿಬ್ಬಂದಿಯನ್ನು ವಜಾ ಮಾಡಲಾಗಿದೆ. ವಿಶೇಷ ತನಿಖಾ ತಂಡ (SIT) ಆರು ದಿನಗಳ ತನಿಖೆ ಬಳಿಕ ಇಂದು ಸಿಎಂ ಯೋಗಿ ಆದಿತ್ಯನಾಥ್ಗೆ ಪ್ರಾಥಮಿಕ ವರದಿ ಸಲ್ಲಿಸಲಿದೆ. ಹಗರಣದ ವ್ಯಾಪ್ತಿ ದೇವಸ್ಥಾನದ ಖರೀದಿ ವ್ಯವಹಾರಗಳಿಗೂ ವಿಸ್ತರಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ನಿರೀಕ್ಷಿಸಲಾಗಿದೆ.
- Nayana Rajeev
- Updated on: Jun 22, 2026
- 9:40 am
ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು
ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ ಭಕ್ತರ ಬಗ್ಗೆ ಕಾಳಜಿ ವಹಿಸುತ್ತಿರುವಂತೆ ನಟಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ವಿರುದ್ಧ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಮ ಮಂದಿರದ ಕಳ್ಳತನದ ವಿವಾದವನ್ನು ಪ್ರಸ್ತಾಪಿಸಿ, 15 ದಿನಗಳಲ್ಲಿ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ. "ಜೈ ಶ್ರೀ ರಾಮ್" ಎಂದು ಜಪಿಸಿದವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ ಭಕ್ತರ ಬಗ್ಗೆ ಕಾಳಜಿ ವಹಿಸುತ್ತಿರುವಂತೆ ನಟಿಸುತ್ತಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
- Sushma Chakre
- Updated on: Jun 19, 2026
- 10:51 pm
ಸುಪ್ರೀಂ ಮೆಟ್ಟಿಲೇರಿದ ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ಪ್ರಕರಣ, ಯುಪಿ ಸರ್ಕಾರದಿಂದ ‘ಎಸ್ಐಟಿ’ ರಚನೆ
ಅಯೋಧ್ಯೆ ಶ್ರೀರಾಮ ಮಂದಿರ ದೇಣಿಗೆಯಲ್ಲಿನ ಅಕ್ರಮಗಳ ಆರೋಪ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸಾರ್ವಜನಿಕರ ವಿಶ್ವಾಸ ಕಾಪಾಡಲು ಸ್ವತಂತ್ರ ತನಿಖೆಗೆ ಅರ್ಜಿ ಸಲ್ಲಿಕೆಯಾಗಿದೆ. ಈ ನಡುವೆ, ಉತ್ತರ ಪ್ರದೇಶ ಸರ್ಕಾರವು ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಿ, ದೇಣಿಗೆ ನಿರ್ವಹಣೆಯಲ್ಲಿನ ಪಾರದರ್ಶಕ ತನಿಖೆಗೆ ಆದೇಶಿಸಿದೆ. ಸತ್ಯಾಸತ್ಯತೆ ಶೀಘ್ರವೇ ಹೊರಬೀಳುವ ನಿರೀಕ್ಷೆ ಇದೆ.
- Nayana Rajeev
- Updated on: Jun 15, 2026
- 12:14 pm
Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!
ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ರಾಮನವಮಿಯಂದು ರಾಮಲಲ್ಲಾನ ಹಣೆಯ ಮೇಲೆ ಸೂರ್ಯ ತಿಲಕವು ಪ್ರಕಾಶಿಸಿದ ಅದ್ಭುತ ದೃಶ್ಯದ ವಿಡಿಯೋ ಇಲ್ಲಿದೆ ನೋಡಿ. ಇದು ಐಐಟಿ ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಪ್ಟೋ-ಮೆಕ್ಯಾನಿಕಲ್ ವ್ಯವಸ್ಥೆಯ ಮೂಲಕ ನಡೆದ ವೈಜ್ಞಾನಿಕ ಅದ್ಭುತವಾಗಿದೆ. ಆಧುನಿಕ ವಿಜ್ಞಾನ ಮತ್ತು ಪ್ರಾಚೀನ ಸಂಪ್ರದಾಯದ ಅನನ್ಯ ಸಮ್ಮಿಲನಕ್ಕೆ ಭಕ್ತರು ಸಾಕ್ಷಿಯಾದರು.
- Akshatha Vorkady
- Updated on: Mar 27, 2026
- 1:07 pm
ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು.
- Nayana Rajeev
- Updated on: Mar 27, 2026
- 2:18 pm
Ram Navami 2026: ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅಯೋಧ್ಯೆಯಲ್ಲಿ ರಾಮ ನವಮಿ ಹಿನ್ನೆಲೆಯಲ್ಲಿ ಶ್ರೀ ರಾಮ ಮಂದಿರದಲ್ಲಿ ರಾಮ ಲಲ್ಲಾನಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ನವರಾತ್ರಿಯ ಮೊದಲ ದಿನದಿಂದ ಇಂದಿನವರೆಗೆ ಹಲವು ಆಚರಣೆಗಳನ್ನು ನಡೆಸಲಾಯಿತು. ಭಾರತ ಮತ್ತು ವಿದೇಶಗಳಾದ್ಯಂತ ಭಕ್ತರು ಶ್ರೀರಾಮನ ಪವಿತ್ರ ಜನ್ಮಭೂಮಿಯಲ್ಲಿ ರಾಮ ನವಮಿಗೆ ಆಗಮಿಸಿದ್ದಾರೆ. ಅಲಂಕೃತವಾದ ರಾಮನನ್ನು ಕಣ್ತುಂಬಿಕೊಳ್ಳಲು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ.
- Sushma Chakre
- Updated on: Mar 26, 2026
- 12:37 pm
ಬಾಬರಿ ಮಸೀದಿಯನ್ನು ಇನ್ನೆಂದೂ ನಿರ್ಮಿಸಲು ಸಾಧ್ಯವಿಲ್ಲ; ಸಿಎಂ ಯೋಗಿ ಆದಿತ್ಯನಾಥ್ ಪುನರುಚ್ಛಾರ
ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಇನ್ನೆಂದೂ ಪುನರ್ನಿರ್ಮಿಸಲು ಆಗುವುದಿಲ್ಲ ಎಂದು ಬಾರಾಬಂಕಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಒಂದುವೇಳೆ ಯಾರಾದರೂ ಬಾಬರಿ ಮಸೀದಿಯ ನಿರ್ಮಾಣದ ಬಗ್ಗೆ ಕನಸನ್ನು ಇಟ್ಟುಕೊಂಡಿದ್ದರೆ ಅದು ಎಂದಿಗೂ ನನಸಾಗುವುದಿಲ್ಲ ಎಂಬುದು ಅವರಿಗೆ ತಿಳಿದಿರಲಿ. ರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ಶಾಶ್ವತವಾಗಿ ಉಳಿಯಲಿದೆ. ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
- Sushma Chakre
- Updated on: Feb 10, 2026
- 5:21 pm
ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ
9 ವರ್ಷದ ವಂಶಿಕಾ ಯಾದವ್ ಎಂಬ ಬಾಲಕಿ ಅಯೋಧ್ಯೆಯ ರಾಮಲಲ್ಲಾ ದರ್ಶನಕ್ಕಾಗಿ ಫಿರೋಜಾಬಾದ್ನಿಂದ ಅಯೋಧ್ಯೆಗೆ 450 ಕಿ.ಮೀ ದೂರ ಸ್ಕೇಟಿಂಗ್ ಮಾಡಿದ್ದಾಳೆ. ಆಕೆಯ ಈ ಸಾಧನೆ ಹಾಗೂ ಭಕ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಯೋಧ್ಯೆಯಲ್ಲಿರುವ ಬಾಲ ರಾಮನನ್ನು ಭೇಟಿ ಮಾಡಲು ಫಿರೋಜಾಬಾದ್ನಿಂದ ಅಯೋಧ್ಯೆಗೆ 450 ಕಿಲೋಮೀಟರ್ ಸ್ಕೇಟಿಂಗ್ ಮಾಡಿದ್ದಾಳೆ. ರಾಮನ ಮೇಲಿನ ಬಾಲಕಿಯ ಭಕ್ತಿಯ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ.
- Sushma Chakre
- Updated on: Jan 10, 2026
- 10:46 pm
ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು?
ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರನ್ನು ಕಾಶ್ಮೀರದ ಶೋಪಿಯಾನ್ ನಿವಾಸಿ ಅಬ್ದುಲ್ ಅಹಮದ್ ಶೇಖ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿ ಅವರನ್ನು ರಾಮ ಮಂದಿರ ಸಂಕೀರ್ಣದಲ್ಲಿ ವಶಕ್ಕೆ ಪಡೆದರು. ಕಾಶ್ಮೀರದಲ್ಲಿ ಕೂಡ ತನಿಖೆ ನಡೆಯುತ್ತಿದ್ದು, ಭದ್ರತಾ ಸಿಬ್ಬಂದಿ ಅಬ್ದುಲ್ ಅವರ ಮನೆಗೆ ಭೇಟಿ ನೀಡಿದ್ದಾರೆ.
- Sushma Chakre
- Updated on: Jan 10, 2026
- 9:22 pm