AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Mandir

Ram Mandir

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್​​ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್​ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.

ಇನ್ನೂ ಹೆಚ್ಚು ಓದಿ

Video: ರಾಮಮಂದಿರ ಟ್ರಸ್ಟ್‌ಗೆ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಮೊದಲ CEO ಆಗಿ ನೇಮಕ

ಅಯೋಧ್ಯೆ ರಾಮಮಂದಿರ ಟ್ರಸ್ಟ್‌ಗೆ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಮೊದಲ ಪೂರ್ಣಾವಧಿ CEO ಆಗಿ ನೇಮಿಸಲಾಗಿದೆ. ದೇಣಿಗೆ ಅಕ್ರಮದ ಆರೋಪಗಳ ನಂತರ ಆಡಳಿತದಲ್ಲಿ ಪಾರದರ್ಶಕತೆ ತರಲು ಈ ಕ್ರಮ ಕೈಗೊಳ್ಳಲಾಗಿದೆ. ಮಿಶ್ರಾ ಅವರ ಮಿಲಿಟರಿ ಹಿನ್ನೆಲೆ ದೇವಾಲಯದ ಆಡಳಿತ, ಭದ್ರತೆ ಮತ್ತು ಆರ್ಥಿಕ ನಿರ್ವಹಣೆಗೆ ಶಿಸ್ತನ್ನು ತರಲಿದೆ ಎಂದು ನಿರೀಕ್ಷಿಸಲಾಗಿದೆ.

ಕಾರ್ಗಿಲ್​ನಿಂದ ಆಪರೇಷನ್ ಸಿಂಧೂರ್​​ವರೆಗೆ; ರಾಮ ಮಂದಿರ ಟ್ರಸ್ಟ್​ನ ಸಿಇಒ ಜಿತೇಂದ್ರ ಮಿಶ್ರಾ ಯಾರು?

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಆಡಳಿತ ವ್ಯವಸ್ಥೆಯಲ್ಲಿ ಚಾರಿತ್ರಿಕ ಬದಲಾವಣೆ ತರಲು ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಕ ಮಾಡಲಾಗಿದೆ. ರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ ವಿವಾದ ಮತ್ತು ಆಡಳಿತ ವೈಫಲ್ಯಗಳ ನಂತರ, ಭಕ್ತರಲ್ಲಿ ನಂಬಿಕೆಯನ್ನು ಮರುಸ್ಥಾಪಿಸಲು ಮತ್ತು ಆಡಳಿತದಲ್ಲಿ ಮಿಲಿಟರಿ ಶಿಸ್ತು ತರಲು ರಾಮ ಮಂದಿರ ಟ್ರಸ್ಟ್ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಮ ಮಂದಿರ ಟ್ರಸ್ಟ್​ನ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಯಾರು? ಇವರ ಸಾಧನೆಯೇನು? ಎಂಬ ಮಾಹಿತಿ ಇಲ್ಲಿದೆ.

ರಾಮ ಮಂದಿರ ಟ್ರಸ್ಟ್​ನ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

ಭಾರತೀಯ ವಾಯುಪಡೆಯ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ಅವರನ್ನು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ನೇಮಕ ಮಾಡಲಾಗಿದೆ. ದೇವಾಲಯದಲ್ಲಿ ಕಾಣಿಕೆ ಹಣ ಕಳವಿನ ಪ್ರಕರಣ ಬೆಳಕಿಗೆ ಬಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವ್ಯಾಪಕ ವಾಗ್ದಾಳಿ ನಡೆಸಿದ ಕೆಲವು ತಿಂಗಳ ನಂತರ, ಅಯೋಧ್ಯೆ ರಾಮಮಂದಿರವನ್ನು ನಿರ್ವಹಿಸುವ ಟ್ರಸ್ಟ್‌ನಲ್ಲಿ ಶಾಸನಬದ್ಧ ಮತ್ತು ಆಡಳಿತಾತ್ಮಕ ಬದಲಾವಣೆಗಳು ಆರಂಭವಾಗಿವೆ. ಇನ್ಮುಂದೆ ದೇವಾಲಯದ ಆಡಳಿತ ಮತ್ತು ಹಣಕಾಸಿನ ವ್ಯವಹಾರಗಳನ್ನು ಟ್ರಸ್ಟ್ ಮುಖ್ಯಸ್ಥರ ಬದಲಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ನಿರ್ವಹಿಸಲಿದ್ದಾರೆ.

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಎಸ್​ಐಟಿ ಕ್ಲೀನ್ ಚಿಟ್

Ayodhya Ram Mandir donation theft case, Champat Rai, Anil Mishra get clean-chit: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನದ ಆರೋಪಿಗಳ ಪೈಕಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ಹೆಸರನ್ನು SIT ತನ್ನ ಅಂತಿಮ ವರದಿಯಲ್ಲಿ ಕೈಬಿಟ್ಟಿದೆ. ಚಂಪತ್ ರಾಯ್ ಅವರು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅನಿಲ್ ಮಿಶ್ರಾ ಅವರು ಟ್ರಸ್ಟ್​ನ ಮಾಜಿ ಸದಸ್ಯರಾಗಿದ್ದಾರೆ.

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ ವದಂತಿಗೆ ತೆರೆ: 3,300 ಕೋಟಿ ರೂ. ಲೆಕ್ಕಪತ್ರ ಪಕ್ಕಾ

ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣದ ಆರೋಪಗಳು ಆಧಾರರಹಿತ. 3,300 ಕೋಟಿ ರೂ. ದೇಣಿಗೆ ಸುರಕ್ಷಿತವಾಗಿದ್ದು, ಸ್ವತಂತ್ರ ಆಡಿಟರ್‌ಗಳಿಂದ ಸಂಪೂರ್ಣವಾಗಿ ಲೆಕ್ಕಪರಿಶೋಧನೆಗೊಂಡಿದೆ. ಇದು ಟ್ರಸ್ಟ್‌ನ ದುರುಪಯೋಗವಲ್ಲ, ಬದಲಿಗೆ ನಗದು ಎಣಿಕೆಯ ವೇಳೆ ಬಾಹ್ಯ ಸಿಬ್ಬಂದಿಯಿಂದ ನಡೆದ ಸಣ್ಣ ಕಳ್ಳತನ. ಆರೋಪಿಗಳನ್ನು ಬಂಧಿಸಲಾಗಿದ್ದು, ವಿಶೇಷ ತನಿಖಾ ತಂಡ (SIT) ತನಿಖೆ ನಡೆಸುತ್ತಿದೆ. ಭಕ್ತರ ನಂಬಿಕೆ ಅಚಲವಾಗಿದೆ.

Sugama Darshan: ಅಯೋಧ್ಯೆಯಲ್ಲಿ ವೃದ್ಧರಿಗೆ ‘ಸುಗಮ ದರ್ಶನ’ ಪಾಸ್; 3 ವರ್ಷದೊಳಗಿನ ಮಕ್ಕಳ ತಾಯಂದಿರಿಗೂ ನೇರ ದರ್ಶನ!

ಶ್ರೀರಾಮ ಜನ್ಮಭೂಮಿ ದೇವಾಲಯ ಟ್ರಸ್ಟ್ 'ಸುಗಮ ದರ್ಶನ' ನೀತಿ ಜಾರಿಗೆ ತಂದಿದೆ. ಇದು ಹಿರಿಯ ನಾಗರಿಕರು, ಸಣ್ಣ ಮಕ್ಕಳಿರುವ ತಾಯಂದಿರು ಮತ್ತು 10 ವರ್ಷದೊಳಗಿನ ಮಕ್ಕಳಿಗೆ ಶ್ರೀರಾಮನ ದರ್ಶನವನ್ನು ಸುಲಭಗೊಳಿಸುತ್ತದೆ. ದೀರ್ಘ ಸರತಿ ಸಾಲುಗಳನ್ನು ತಪ್ಪಿಸಿ, ಕೇವಲ 10 ನಿಮಿಷಗಳಲ್ಲಿ ಹಿರಿಯರಿಗೆ ಪಾಸ್ ಸಿಗಲಿದೆ. ಈ ಮಾನವೀಯ ಕ್ರಮವು ಲಕ್ಷಾಂತರ ಭಕ್ತರಿಗೆ ಶಾಂತಿಯುತ ಹಾಗೂ ಆರಾಮದಾಯಕ ದರ್ಶನಕ್ಕೆ ನೆರವಾಗಲಿದೆ.

ರಾಮಮಂದಿರ ಕಾಣಿಕೆ ಕಳವು; ಕೇಸರಿ ಬಟ್ಟೆ ಧರಿಸಿ ಸಂಸತ್ ಹೊರಗೆ ಪಪ್ಪು ಯಾದವ್ ಪ್ರತಿಭಟನೆ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಸಂಸತ್ ಚಲೋ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿರೋಧ ಪಕ್ಷಗಳು ತಮ್ಮ ಪ್ರತಿಭಟನಾ ಅಭಿಯಾನವನ್ನು ಮುಂದುವರಿಸಿರುವ ಬೆನ್ನಲ್ಲೇ ಈ ಸಾಂಕೇತಿಕ ಪ್ರತಿಭಟನೆ ನಡೆದಿದೆ. ಸತತ ಎರಡನೇ ದಿನವೂ ವಿರೋಧ ಪಕ್ಷದ ಸಂಸದರು ಸಂಸತ್ತಿನ ಆವರಣದೊಳಗೆ ಅಮಿತ್ ಶಾ ಅವರ ಗೈರುಹಾಜರಿಯನ್ನು ಪ್ರಶ್ನಿಸುವ ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ಗೆ ಹೊಸ ಕಾರ್ಯದರ್ಶಿ ನೇಮಕ: ಜಗದೀಶ್ ಅಫ್ಲೆ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಜಗದೀಶ್ ಅಫ್ಲೆ ಅವರನ್ನು ಹೊಸ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಐಐಟಿ ಪದವೀಧರರಾದ ಅಫ್ಲೆ, ಆರ್‌ಎಸ್‌ಎಸ್ ಸ್ವಯಂಸೇವಕರಾಗಿದ್ದು, ರಾಮ ಮಂದಿರ ನಿರ್ಮಾಣದಲ್ಲಿ ವೇತನವಿಲ್ಲದೆ ಸೇವೆ ಸಲ್ಲಿಸಿದ್ದಾರೆ. ಟ್ರಸ್ಟ್‌ನ ಆಡಳಿತಾತ್ಮಕ ಸುಧಾರಣೆ ಮತ್ತು ಪಾರದರ್ಶಕತೆ ಹೆಚ್ಚಿಸುವ ಗುರಿಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಿಇಒ ಆಯ್ಕೆ ಪ್ರಕ್ರಿಯೆಯೂ ನಡೆಯುತ್ತಿದ್ದು, ಟ್ರಸ್ಟ್‌ನ ಹಣಕಾಸು ನಿರ್ವಹಣೆಯಲ್ಲಿ ಅಫ್ಲೆ ಪ್ರಮುಖ ಪಾತ್ರ ವಹಿಸಿದ್ದಾರೆ.

ರಾಮಮಂದಿರ ಹಗರಣದ ತನಿಖೆಯ ಎಸ್​ಐಟಿಗೆ ಚಾರ್ಟರ್ಡ್ ಅಕೌಂಟೆಂಟ್ ನೇಮಿಸಿ; ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಯುತ, ನಿಖರ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ರಚಿಸಲಾಗುತ್ತಿರುವ ವಿಶೇಷ ತನಿಖಾ ತಂಡದಲ್ಲಿ (SIT) ಚಾರ್ಟರ್ಡ್ ಅಕೌಂಟೆಂಟ್ ಅನ್ನು ಸೇರಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿತು. ಉತ್ತರ ಪ್ರದೇಶ ಸರ್ಕಾರ ಸೂಚಿಸಿದ ಹೆಸರುಗಳ ಆಧಾರದ ಮೇಲೆ SIT ಅನ್ನು ರಚಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತಂಡಕ್ಕೆ ಎಸ್. ಕಿರಣ್ ನೇತೃತ್ವ ವಹಿಸಿದ್ದಾರೆ. ಕಳೆದ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಹೊಸ ಎಸ್‌ಐಟಿ ರಚಿಸಲು ಅಧಿಕಾರಿಗಳ ಹೆಸರುಗಳನ್ನು ಸೂಚಿಸುವಂತೆ ಕೇಳಿತ್ತು.

ರಾಮ ಮಂದಿರ ದೇಣಿಗೆ ಕಳ್ಳತನ ತನಿಖೆ: ಸುಪ್ರೀಂ ಆದೇಶದಂತೆ ಯುಪಿ ಸರ್ಕಾರದಿಂದ ಎಸ್‌ಐಟಿ ಪುನಾರಚನೆ

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರುಪಯೋಗ ತನಿಖೆಗೆ ಯುಪಿ ಸರ್ಕಾರ ವಿಶೇಷ ತನಿಖಾ ತಂಡ (SIT) ಪುನರ್ರಚಿಸಿದೆ. ತನಿಖೆಯ ಪಾರದರ್ಶಕತೆಗಾಗಿ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತಂಡದಲ್ಲಿ ಸೇರಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಹೊಸ SIT ತನ್ನ ತನಿಖಾ ಪ್ರಗತಿಯ ವರದಿಯನ್ನು ಜುಲೈ 27 ರೊಳಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿದೆ.

ಭ್ರಷ್ಟಾಚಾರಿಗಳಿಗೆ ಮರಣದಂಡನೆ ವಿಧಿಸುವಂತಾಗಬೇಕು; ಅಲಹಾಬಾದ್ ಹೈಕೋರ್ಟ್ ಟೀಕೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರುಪಯೋಗವಾಗಿರುವ ಆರೋಪದ ವಿಷಯವನ್ನು ಪ್ರಸ್ತಾಪಿಸಿದ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿ ಶ್ರೀಧರನ್, ಈ ಘಟನೆಯಿಂದಲೂ ವಿಚಲಿತರಾದ ಜನರನ್ನು ಜಗತ್ತಿನಲ್ಲಿ ಯಾವುದೂ ನಾಚಿಕೆಪಡಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯನ್ನು ವಿಧಿಸುವಂತೆಯೂ ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ. ರಾಮಮಂದಿರದಲ್ಲಿ ನಡೆದ ಇತ್ತೀಚಿನ ದೇಣಿಗೆ ಕಳ್ಳತನ ಭಾರತೀಯರ ಪ್ರಾಮಾಣಿಕತೆಯ ಅಧಃಪತನಕ್ಕೆ ಸಾಕ್ಷಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ರಾಮಮಂದಿರ ದೇಣಿಗೆ ಹಗರಣದಲ್ಲಿ ಮೌನವೇಕೆ?’; ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ, ಖರ್ಗೆ ಪತ್ರ

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನವೇ ಅಯೋಧ್ಯೆ ರಾಮಮಂದಿರದ ದೇಣಿಗೆ ಕಳ್ಳತನದ ವಿವಾದ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಂಸತ್ತಿನ ಉಭಯ ಸದನಗಳ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಹಗರಣದ ಕುರಿತು ಪ್ರಧಾನಿಯವರ ಮೌನ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಹಾಗೇ ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡುವುದು ಪ್ರಧಾನಿಯ ಕರ್ತವ್ಯ ಎಂದು ಆಗ್ರಹಿಸಿದ್ದಾರೆ.