Ram Mandir
ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿದ್ದ ಮತ್ತು ಅಕ್ರಮವಾಗಿ ನಿರ್ಮಿಸಲಾಗಿತ್ತು ಎನ್ನಲಾಗಿರುವ ಬಾಬರಿ ಮಸೀದಿಯನ್ನು 90ರ ದಶಕದ ಆರಂಭದಲ್ಲಿ ಕರಸೇವಕರು ನೆಲಸಮಗೊಳಿಸಿದರು. ಘಟನೆಯು ದೇಶದಾದ್ಯಂತ ಉದ್ವಿಗ್ನತೆ ಸೃಷ್ಟಿಸಿದ್ದಲ್ಲದೆ ತೀವ್ರತರದ ರಾಜಕೀಯ ಸಂಚಲನವನ್ನೂ ಸೃಷ್ಟಿಸಿತು. ಅದಾದ ಬಳಿಕ ಪ್ರಕರಣ ಕೋರ್ಟ್ ಮೆಟ್ಟಿಲೇರಿತು. ಅಂತಿಮವಾಗಿ ಸುಪ್ರೀಂ ಕೋರ್ಟ್ 2019ರ ನವೆಂಬರ್ 9ರಂದು ವಿವಾದಿತ ಭೂಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅನುವು ಮಾಡಕೊಟ್ಟು ಆದೇಶ ನೀಡಿತು. ಅದಕ್ಕಾಗಿ ಟ್ರಸ್ಟೊಂದನ್ನು ಸ್ಥಾಪಿಸುವಂತೆಯೂ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು. ಅಯೋಧ್ಯೆಯ ಮತ್ತೊಂದು ಜಾಗದಲ್ಲಿ ಮಸೀದಿ ನಿರ್ಮಾಣಕ್ಕೂ ಅನುವು ಮಾಡಿಕೊಡಲಾಯಿತು. ತದನಂತರ ಅಸ್ತಿತ್ವಕ್ಕೆ ಬಂದ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತುಕೊಂಡಿತು. 2020 ರ ಆಗಸ್ಟ್ 5 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಂದಿರ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ ನಡೆಯಿತು. ರಾಮಾಯಣದ ಪ್ರಕಾರ, ಭಗವಾನ್ ಮಹಾವಿಷ್ಣುವಿನ ಅವತಾರವಾದ ಶ್ರೀರಾಮನ ಜನ್ಮಸ್ಥಳವಾಗಿರುವ ಅಯೋಧ್ಯೆ ಕೋಟ್ಯಂತರ ಹಿಂದೂಗಳ ಭಕ್ತಿಯ ತಾಣವಾಗಿದೆ. ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಬಳಿಕ ಮಂದಿರವು ಭಕ್ತರ ಪ್ರವೇಶಕ್ಕೆ ಮುಕ್ತವಾಗುತ್ತಿದೆ.
ಅಯೋಧ್ಯೆಯ ರಾಮನ ದರ್ಶನಕ್ಕೆ 450 ಕಿ.ಮೀ ಸ್ಕೇಟಿಂಗ್ ಮಾಡಿದ 9 ವರ್ಷದ ಬಾಲಕಿ
9 ವರ್ಷದ ವಂಶಿಕಾ ಯಾದವ್ ಎಂಬ ಬಾಲಕಿ ಅಯೋಧ್ಯೆಯ ರಾಮಲಲ್ಲಾ ದರ್ಶನಕ್ಕಾಗಿ ಫಿರೋಜಾಬಾದ್ನಿಂದ ಅಯೋಧ್ಯೆಗೆ 450 ಕಿ.ಮೀ ದೂರ ಸ್ಕೇಟಿಂಗ್ ಮಾಡಿದ್ದಾಳೆ. ಆಕೆಯ ಈ ಸಾಧನೆ ಹಾಗೂ ಭಕ್ತಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಅಯೋಧ್ಯೆಯಲ್ಲಿರುವ ಬಾಲ ರಾಮನನ್ನು ಭೇಟಿ ಮಾಡಲು ಫಿರೋಜಾಬಾದ್ನಿಂದ ಅಯೋಧ್ಯೆಗೆ 450 ಕಿಲೋಮೀಟರ್ ಸ್ಕೇಟಿಂಗ್ ಮಾಡಿದ್ದಾಳೆ. ರಾಮನ ಮೇಲಿನ ಬಾಲಕಿಯ ಭಕ್ತಿಯ ಬಗ್ಗೆ ದೇಶಾದ್ಯಂತ ಚರ್ಚೆಯಾಗುತ್ತಿದೆ.
- Sushma Chakre
- Updated on: Jan 10, 2026
- 10:46 pm
ಅಯೋಧ್ಯೆಯ ರಾಮ ಮಂದಿರದಲ್ಲಿ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿ ಯಾರು?
ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದೊಳಗೆ ನಮಾಜ್ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರನ್ನು ಕಾಶ್ಮೀರದ ಶೋಪಿಯಾನ್ ನಿವಾಸಿ ಅಬ್ದುಲ್ ಅಹಮದ್ ಶೇಖ್ ಎಂದು ಗುರುತಿಸಲಾಗಿದೆ. ಭದ್ರತಾ ಸಿಬ್ಬಂದಿ ಅವರನ್ನು ರಾಮ ಮಂದಿರ ಸಂಕೀರ್ಣದಲ್ಲಿ ವಶಕ್ಕೆ ಪಡೆದರು. ಕಾಶ್ಮೀರದಲ್ಲಿ ಕೂಡ ತನಿಖೆ ನಡೆಯುತ್ತಿದ್ದು, ಭದ್ರತಾ ಸಿಬ್ಬಂದಿ ಅಬ್ದುಲ್ ಅವರ ಮನೆಗೆ ಭೇಟಿ ನೀಡಿದ್ದಾರೆ.
- Sushma Chakre
- Updated on: Jan 10, 2026
- 9:22 pm
ಅಯೋಧ್ಯೆಯ ರಾಮ ಮಂದಿರದ ಸುತ್ತ ಆಲ್ಕೋಹಾಲ್, ಮಾಂಸಾಹಾರ ಸೇವನೆ ನಿಷೇಧ
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಆಲ್ಕೋಹಾಲ್, ಮಾಂಸಾಹಾರ ಮಾರಾಟವನ್ನು ನಿಷೇಧಿಸಲಾಗಿದೆ. ಅಯೋಧ್ಯೆ ಧಾಮ ಮತ್ತು ಪಂಚಕೋಸಿ ಪರಿಕ್ರಮ ಮಾರ್ಗಗಳಲ್ಲಿ ಮಾಂಸಾಹಾರ ನಿಷೇಧಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಈ ಕ್ರಮವು ರಾಮ ಮಂದಿರದ ಸುತ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಪಾವಿತ್ರ್ಯತೆಯನ್ನು ಕಾಪಾಡುವ ಗುರಿಯನ್ನು ಹೊಂದಿದೆ.
- Sushma Chakre
- Updated on: Jan 10, 2026
- 6:50 pm
ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ
ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ.
- Ram
- Updated on: Dec 22, 2025
- 10:16 pm
ಬಂಗಾಳದಲ್ಲಿ ಬಾಬರಿ ಮಸೀದಿ ವಿವಾದದ ಬೆನ್ನಲ್ಲೇ ಅಯೋಧ್ಯೆ ಶೈಲಿಯ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಟಿಎಂಸಿಯ ಉಚ್ಚಾಟಿತ ಶಾಸಕ ಮುರ್ಷಿದಾಬಾದ್ನಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವ ಮೂಲಕ ಭಾರೀ ಸುದ್ದಿಯಾಗಿದ್ದರು. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಮಾಡಿದ ದಿನಾಂಕದಂದೇ ಬಂಗಾಳದಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿಸಲಾಗಿತ್ತು. ಇದೀಗ ಬಂಗಾಳದಲ್ಲಿ ಅಯೋಧ್ಯಾ ಶೈಲಿಯಲ್ಲೇ ರಾಮ ಮಂದಿರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ.
- Sushma Chakre
- Updated on: Dec 12, 2025
- 3:23 pm
Pilgrimage Destinations: ಉತ್ತರ ಭಾರತದ ಅತ್ಯುತ್ತಮ ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಯೋಚಿಸುತ್ತಿದ್ದೀರಾ? ಉಪಯುಕ್ತ ಮಾಹಿತಿ ಇಲ್ಲಿದೆ
ಉತ್ತರ ಭಾರತದ ಆಧ್ಯಾತ್ಮಿಕ ಮತ್ತು ಧಾರ್ಮಿಕ ತಾಣಗಳು ಇತ್ತೀಚಿನ ದಿನಗಳಲ್ಲಿ ಯುವಜನರನ್ನು ಆಕರ್ಷಿಸುತ್ತಿವೆ. ಕಾಶಿ, ಅಯೋಧ್ಯೆ, ಮಥುರಾ-ವೃಂದಾವನ, ಹರಿದ್ವಾರ-ಋಷಿಕೇಶ, ವೈಷ್ಣೋ ದೇವಿ ಮತ್ತು ಅಮರನಾಥದಂತಹ ಸ್ಥಳಗಳು ಭಕ್ತಿ, ನಂಬಿಕೆ, ಶಾಂತಿ ಮತ್ತು ಅಧ್ಯಾತ್ಮಿಕ ಅನುಭವಗಳನ್ನು ನೀಡುತ್ತವೆ. ಈ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲು ನೀವೂ ಯೋಚಿಸುತ್ತಿದ್ದರೆ, ನಿಮಗಾಗಿ ಉಪಯುಕ್ತ ಮಾಹಿತಿ ಇಲ್ಲಿದೆ.
- Akshatha Vorkady
- Updated on: Dec 9, 2025
- 1:44 pm
ರಾಮ ಮಂದಿರ ಆಂದೋಲನದಲ್ಲಿ ಉಡುಪಿ ಪಾತ್ರ ಸ್ಮರಿಸಿದ ಮೋದಿ, ಕೃಷ್ಣ ನಗರಿಯಲ್ಲಿ ನಮೋ ಭಾಷಣದ ಮುಖ್ಯಾಂಶಗಳು
ಉಡುಪಿಯ ವಿಶ್ವಗೀತಾ ಪಾರಾಯಣ ವೇದಿಕೆ ಬಳಿ ಲಕ್ಷ ಕಂಠ ಭಗವದ್ಗೀತೆ ಪಠಣ ನಡೆಯಿತು. ಸಾವಿರಾರು ಭಕ್ತರು ಭಗವದೀತೆಯ ಶ್ಲೋಕ ಪಠಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ಥಳೀಯ ಬಿಜೆಪಿ ನಾಯಕರು ಸೇರಿದಂತೆ ನೆರೆದಿದ್ದವರು ಧ್ವನಿಗೂಡಿಸಿದರು. ಬಳಿಕ ಮಾತನಾಡಿದ ಪ್ರಧಾನಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದಲ್ಲಿ ಉಡುಪಿ ಪಾತ್ರವನ್ನು ಮೆಲುಕು ಹಾಕಿದರು. ಹಾಗೇ ಇದೇ ವೇಳೆ ಒಂಭತ್ತು ಸಂಕಲ್ಪ ಮಾಡುವಂತೆ ಕರೆ ನೀಡಿದರು.
- Ramesh B Jawalagera
- Updated on: Nov 28, 2025
- 3:10 pm
ನಿಮಗೆ ನೈತಿಕತೆಯೇ ಇಲ್ಲ; ರಾಮಮಂದಿರ ಧ್ವಜಾರೋಹಣದ ಕುರಿತ ಪಾಕಿಸ್ತಾನದ ಟೀಕೆಗೆ ಭಾರತ ತಿರುಗೇಟು
ಅಯೋಧ್ಯೆಯ ರಾಮಮಂದಿರದಲ್ಲಿ ನಡೆದ ಧರ್ಮ ಧ್ವಜಾರೋಹಣದ ಕುರಿತಾದ ಪಾಕಿಸ್ತಾನದ ಹೇಳಿಕೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಮ ಮಂದಿರದಲ್ಲಿ ನಡೆದ ಸಮಾರಂಭದ ನಂತರ ಭಾರತದಲ್ಲಿ ಹೆಚ್ಚುತ್ತಿರುವ ಇಸ್ಲಾಮೋಫೋಬಿಯಾ, ದ್ವೇಷ ಭಾಷಣ ಮತ್ತು ದ್ವೇಷ ಪ್ರೇರಿತ ದಾಳಿಗಳ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯವು ಗಮನಹರಿಸಬೇಕೆಂದು ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಕರೆ ನೀಡಿತ್ತು.
- Sushma Chakre
- Updated on: Nov 26, 2025
- 8:07 pm
ಭಗವಾಧ್ವಜ ಹಾರಿಸಲು ರಾಮಮಂದಿರಕ್ಕೆ ಬಂದ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಕರ್ನಾಟಕದ ಆಹಾರ ಉಣಬಡಿಸಿದ ಕನ್ನಡಿಗ
ಈ ಧರ್ಮ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬಂದ ನರೇಂದ್ರ ಮೋದಿ ಸೇರಿದಂತೆ ಇತರೆ ಗಣ್ಯರಿಗೆ ಆಹಾರದ ವ್ಯವಸ್ಥೆ ಮಾಡಿದ್ದು ಸಹ ಕನ್ನಡಿಗರು ಎನ್ನುವುದು ವಿಶೇಷ. ಹೌದು... ಮೋದಿ ಸೇರಿ ಇತರೇ VIP, VVIPಗಳಿಗೆ ಕರ್ನಾಟದ ಆಹಾರವನ್ನು ನೀಡಲಾಗಿದೆ. ಇನ್ನು ರಾಮಮಂದಿರದಲ್ಲಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಕನ್ನಡಿಗ ಸುರೇಂದ್ರ ಕಾಂಚಣ್ ಪ್ರತಿಕ್ರಿಯಿಸಿ, VIP VVIPಗೆ ಕರ್ನಾಟದ ಆಹಾರವನ್ನು ಅಯೋಧ್ಯೆಯಲ್ಲಿ ನೀಡುತ್ತಿದ್ದೇವೆ. ಇದು ನಮಗೆ ಸಂತಸದ ಕ್ಷಣ ಎಂದು ಹರ್ಷ ವ್ಯಕ್ತಡಿಸಿದರು.
- Ramesh B Jawalagera
- Updated on: Nov 25, 2025
- 5:15 pm
ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಇಂದು ಶಾಂತಿ ಸಿಕ್ಕಿರಬಹುದು; ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
"ಸತ್ಯ ಮತ್ತು ಧರ್ಮದ ಸಂಕೇತವಾದ ಈ ರಾಮ ಮಂದಿರವು ಇಂದು ಎದ್ದು ನಿಂತಿದೆ. ಧರ್ಮ, ಜ್ಞಾನ ಮತ್ತು ಸತ್ಯವನ್ನು ಜಗತ್ತಿಗೆ ಹರಡುವ ಕೆಲಸ ಪ್ರಾರಂಭವಾಗಿದೆ. ನಾವು ಎಲ್ಲಾ ಅಡೆತಡೆಗಳ ನಡುವೆಯೂ ಧೈರ್ಯದಿಂದ ಮುಂದುವರಿಯಬೇಕು. ಈ ದೇಶದಲ್ಲಿ ಜನಿಸಿದವರು ಹಿರಿಯ ಸಹೋದರರಂತೆ. ಜಗತ್ತು ನಮ್ಮ ಮೇಲೆ ನಿರೀಕ್ಷೆಗಳನ್ನು ಇಟ್ಟಿದೆ. ನಾವು ಅವುಗಳನ್ನು ಪೂರೈಸಲು ಕೆಲಸ ಮಾಡಬೇಕು" ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
- Sushma Chakre
- Updated on: Nov 25, 2025
- 5:02 pm
ಧರ್ಮ ಧ್ವಜಾರೋಹಣ ಸಮಾರಂಭಕ್ಕೆ ಅಯೋಧ್ಯೆ ರಾಮಮಂದಿರ ಪಳಪಳ ಹೊಳೆಯುವಂತೆ ಮಾಡಿದ ಕನ್ನಡಿಗ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕರ್ನಾಟಕ ಗಮನಾರ್ಹ ಕೊಡುಗೆಗಳನ್ನು ನೀಡಿದೆ. ಹೌದು...ಅಯೋಧ್ಯೆಯಲ್ಲಿ ಪ್ರತಿಷ್ಠಾನೆಯಾಗಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಬಳಸಲಾಗಿದೆ. ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿತ್ತು. ಇನ್ನು ಗರ್ಭಗುಡಿಯ ಮುಂಭಾಗದ ಮಂಟಪ ತಯಾರಿಯಲ್ಲಿ ಕೊಪ್ಪಳದ ಶಿಲ್ಪಿ ಸಹ ಇದ್ದ. ಅದರಲ್ಲೂ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಪ್ರತಿಮೆಯು ಪ್ರಾಣ ಪ್ರತಿಷ್ಠಾಪನೆಗೆ ಆಯ್ಕೆಯಾಗಿರುವುದು ಕರ್ನಾಟಕದ ಹೆಮ್ಮೆ. ಇದೀಗ ಶ್ರೀರಾಮ ಮಂದಿರದ ಶಿಖರದ ಮೇಲೆ ಭಗವಾಧ್ವಜವನ್ನು ಹಾರಿಸುವ ಕಾರ್ಯಕ್ರಮ ಸಂಬಂಧ ಲೈಟಿಂಗ್ಸ್ ಅಲಂಕಾರ ಮಾಡಿದ್ದು ಸಹ ಕನ್ನಡಿಗ ರಾಜೇಶ್ ಶೆಟ್ಟಿ .
- Ramesh B Jawalagera
- Updated on: Nov 25, 2025
- 4:48 pm
ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ; ರಾಮಜನ್ಮಭೂಮಿಯ ಜನರಿಂದ ಅದ್ದೂರಿ ಸ್ವಾಗತ
ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರದ ಶಿಖರವನ್ನು ಅಲಂಕರಿಸುತ್ತಿದ್ದಂತೆ ಏಕತೆ ಮತ್ತು ಭಕ್ತಿಯ ಮನೋಭಾವಕ್ಕೆ ಸಾಕ್ಷಿಯಾಗಲಿ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಜನ್ಮಭೂಮಿ ದೇವಾಲಯದಲ್ಲಿ ಧ್ವಜಾರೋಹಣ ಸಮಾರಂಭಕ್ಕೂ ಮುನ್ನ ಅಯೋಧ್ಯೆಯಲ್ಲಿ ರೋಡ್ ಶೋ ನಡೆಸಿದರು.ಇದಾದ ಬಳಿಕ ಅವರು ರಾಮ ಮಂದಿರದ 191 ಅಡಿ ಎತ್ತರದ ಶಿಖರದ ಮೇಲೆ ಪವಿತ್ರ ಕೇಸರಿ ಧ್ವಜವನ್ನು ಹಾರಿಸಿದರು.
- Sushma Chakre
- Updated on: Nov 25, 2025
- 3:32 pm