Ramadan
ರಂಜಾನ್: ರಂಜಾನ್ ಮುಸ್ಲಿಮರ ಪವಿತ್ರ ಹಬ್ಬ. ಪ್ರಪಂಚದಾದ್ಯಂತದ ಮುಸ್ಲಿಮರು ಇಡೀ ರಂಜಾನ್ ತಿಂಗಳಲ್ಲಿ ಉಪವಾಸ ಮಾಡುತ್ತಾರೆ. ಬೆಳಗ್ಗೆ ಸೂರ್ಯೋದಯವಾಗಲಿಂದ ಸಂಜೆ ಸೂರ್ಯಾಸ್ತವಾಗುವವರೆಗೆ ಒಂದು ಹನಿ ನೀರು ಕುಡಿಯದೆ ಉಪವಾಸ ಮಾಡುತ್ತಾರೆ. ಇಸ್ಲಾಂನಲ್ಲಿ ಉಪವಾಸವು ನಂಬಿಕೆಯ ಐದು ಸ್ತಂಭಗಳಲ್ಲಿ ಒಂದಾಗಿದೆ. ಜೊತೆಗೆ ಇದರ ಜೊತೆಗೆ ನಂಬಿಕೆ, ಪ್ರಾರ್ಥನೆ, ದಾನ ಮತ್ತು ತೀರ್ಥಯಾತ್ರೆ ಮಾಡಲಾಗುತ್ತದೆ. ತೀರ್ಥಯಾತ್ರೆಯನ್ನು ಅರೇಬಿಕ್ನಲ್ಲಿ ಹಜ್ ಎಂದು ಕರೆಯಲಾಗುತ್ತದೆ.ಇಸ್ಲಾಮಿಕ್ ಕ್ಯಾಲೆಂಡರ್ ಚಂದ್ರನ ಹಂತಗಳನ್ನು ಅನುಸರಿಸುತ್ತದೆ, ಇದನ್ನು ಸಾಮಾನ್ಯವಾಗಿ ಚಂದ್ರನ ಚಕ್ರ ಎಂದು ಕರೆಯಲಾಗುತ್ತದೆ ಮತ್ತು ಇದರ ಪರಿಣಾಮವಾಗಿ, ಪವಿತ್ರ ರಂಜಾನ್ ತಿಂಗಳು ಗ್ರೆಗೋರಿಯನ್ ಕ್ಯಾಲೆಂಡರ್ನಲ್ಲಿ ಪ್ರತಿ ವರ್ಷ ಸುಮಾರು 10 ದಿನಗಳ ಮುಂಚಿತವಾಗಿ ಬರುತ್ತದೆ. ಈ ವರ್ಷ, ರಂಜಾನ್ ಸೋಮವಾರ ಮಾರ್ಚ್ 11 ಅಥವಾ ಮಂಗಳವಾರ ಮಾರ್ಚ್ 12, 2024 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಸಾಮಾನ್ಯವಾಗಿ, ರಂಜಾನ್ನ ಅರ್ಧಚಂದ್ರಾಕೃತಿಯು ಸೌದಿ ಅರೇಬಿಯಾ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳೊಂದಿಗೆ ಕೆಲವು ಭಾಗಗಳಲ್ಲಿ ಮೊದಲು ಕಂಡುಬರುತ್ತದೆ ಮತ್ತು ಸಾಮಾನ್ಯವಾಗಿ ಒಂದು ದಿನದ ನಂತರ ಉಳಿದ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿ ಕಂಡುಬರುತ್ತದೆ.
ಯುಗಾದಿ, ರಂಜಾನ್ ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಯುಗಾದಿ (Ugadi) ಹಾಗೂ ರಂಜಾನ್ (Ramadan) ಹಬ್ಬಕ್ಕೆ ಸಾಲುಸಾಲು ರಜೆ ಇದ್ದ ಹಿನ್ನೆಲೆ ಊರಿಗೆ ಹೋಗಿದ್ದ ಜನ ಇದೀಗ ಮತ್ತೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಈ ಪರಿಣಾಮ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೇ ಫುಲ್ ಟ್ರಾಫಿಕ್ (Traffic) ಜಾಮ್ ಆಗಿದೆ. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರು ಹಾಗೂ ಟ್ರಿಪ್ ಹೋಗಿದ್ದವುರ ಇದೀಗ ಬೆಂಗಳೂರಿಗ ವಾಪಸ್ ಆಗುತ್ತಿದ್ದು, ಬೆಂಗಳೂರು ಎಂಟ್ರಿ ಕೊಡುವ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಹೆದ್ದಾರಿಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು, ಆಗಾಗ ಅಲ್ಪ ಸ್ವಲ್ಪ ಮೂವ್ ಆಗುತ್ತಿವೆ. ಇದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.
- Ramesh B Jawalagera
- Updated on: Mar 22, 2026
- 8:33 pm
ಹಬ್ಬಕ್ಕೆ ಊರಿಗೆ ಹೊರಟ ಜನ: ಬೆಂಗಳೂರಿನಲ್ಲಿ ರಾತ್ರಿಯೆಲ್ಲ ಟ್ರಾಫಿಕ್ ಜಾಮ್, ಮೆಜೆಸ್ಟಿಕ್ನಲ್ಲಿ ಜನವೋ ಜನ
ಯುಗಾದಿ ಮತ್ತು ರಂಜಾನ್ ಹಬ್ಬಗಳ ನಿಮಿತ್ತ ಊರಿನತ್ತ ಪ್ರಯಾಣ ಬೆಳೆಸಿರುವ ಜನರಿಂದ ಬುಧವಾರ ರಾತ್ರಿ ಮೆಜೆಸ್ಟಿಕ್ ಬಸ್ ನಿಲ್ದಾಣ ಕಿಕ್ಕಿರಿದು ತುಂಬಿತು. ಬಸ್ಸುಗಳಲ್ಲಿ ಸೀಟು ಸಿಗದೆ, ಖಾಸಗಿ ಬಸ್ಸುಗಳಲ್ಲಿ ದುಪ್ಪಟ್ಟು ಹಣ ತೆತ್ತು ಪ್ರಯಾಣಿಕರು ಪರದಾಡಿದರು. ರಾತ್ರಿಯಿಡೀ ನಿಲ್ದಾಣದಲ್ಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರು ನಗರದ ವಿವಿಧೆಡೆ ಟ್ರಾಫಿಕ್ ಜಾಮ್ ಉಂಟಾಗಿ ಜನ ಒದ್ದಾಡುವಂತಾಯಿತು.
- Ganapathi Sharma
- Updated on: Mar 19, 2026
- 7:09 am
Cooking Oil Price Hike: ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ದರ ಭಾರೀ ಏರಿಕೆ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಅಡುಗೆ ಎಣ್ಣೆ ಬೆಲೆ ಗ್ಯಾಸ್ ಸಿಲಿಂಡರ್ಗಳಂತೆ ಏರಿಕೆಯಾಗಿದೆ. ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಮಯದಲ್ಲಿ ಎಣ್ಣೆ ಸರಬರಾಜು ಕಡಿಮೆಯಾಗಿ, ಪ್ರತಿ ಲೀಟರ್ಗೆ 20 ರೂಪಾಯಿ ಹೆಚ್ಚಳವಾಗಿದೆ. ಬ್ರಾಂಡೆಡ್ ಎಣ್ಣೆಯ ಕೊರತೆ ಎದುರಾಗಿದ್ದು, ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಆತಂಕ ಮನೆ ಮಾಡಿದೆ.
- Akshatha Vorkady
- Updated on: Mar 14, 2026
- 1:02 pm
ಈದ್ ಆಚರಿಸಿ ಮಸೀದಿಯಿಂದ ಬರುತ್ತಿದ್ದ ಮುಸ್ಲಿಮರ ಮೇಲೆ ಹೂವುಗಳ ಮಳೆ ಸುರಿಸಿದ ಹಿಂದೂಗಳು
ರಾಜಸ್ಥಾನದ ಜೈಪುರದಲ್ಲಿ ಜಾಮಾ ಮಸೀದಿ ಮತ್ತು ಈದ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಹೊರಗೆ ಬರುತ್ತಿದ್ದ ಸ್ಥಳೀಯ ಹಿಂದೂ ಸಮುದಾಯದ ಸದಸ್ಯರು ತಮ್ಮ ಮುಸ್ಲಿಂ ಸಹೋದರರ ಮೇಲೆ ಹೂವುಗಳ ಮಳೆ ಸುರಿಸಿದರು. ಪ್ರಯಾಗ್ರಾಜ್ನಲ್ಲಿ ಇದೇ ರೀತಿಯ ದೃಶ್ಯ ಕಂಡುಬಂದಿತು. ಅಲ್ಲಿ ಸಾಮಾಜಿಕ ಸಂಸ್ಥೆಗಳು ಮತ್ತು ಹಿಂದೂ ಸಮುದಾಯದ ಸದಸ್ಯರು ತಮ್ಮ ನಮಾಜ್ ಸಲ್ಲಿಸಿದ ನಂತರ ಮಸೀದಿಗಳಿಂದ ನಿರ್ಗಮಿಸುವವರ ಮೇಲೆ ಗುಲಾಬಿ ದಳಗಳನ್ನು ಸುರಿಸುತ್ತಿದ್ದರು.
- Sushma Chakre
- Updated on: Mar 31, 2025
- 8:26 pm
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನಿನ್ನೆ(ಮಾರ್ಚ್ 30) ಹಿಂದೂಗಳ ಹೊಸ ವರ್ಷ ಯುಗಾದಿ ಮುಗಿದಿದೆ. ಇದರ ಬೆನ್ನಲ್ಲೆ ಇಂದು(ಮಾರ್ಚ್ 31) ಮುಸ್ಲಿಮರು ಪವಿತ್ರ ಹಬ್ಬ ರಂಜಾನ್ ಇದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಮುಸ್ಲಿಂ ಸಮುದಾಯದವರು ಬೆಳಗ್ಗೆಯೇ ಪ್ರಾರ್ಥನೆ ಮಾಡಿ ಸಿಹಿ ಅಡುಗೆ ಮಾಡಿ ಸಂಭ್ರಮದಿಂದ ಹಬ್ಬ ಆಚರಿಸುತ್ತಿದ್ದಾರೆ. ಇದರ ಮಧ್ಯೆ ಕೆಲ ಮುಸ್ಲಿಂ ಯುವಕರು ದೇವಾಲಯದಲ್ಲಿ ಭಕ್ತಿಗೀತೆಯ ಸೌಂಡ್ ಕಡಿಮೆ ಮಾಡುವಂತೆ ಅವಾಜ್ ಹಾಕಿರುವ ಘಟನೆ ನಡೆದಿದೆ.
- Ramesh B Jawalagera
- Updated on: Mar 31, 2025
- 5:25 pm
ಮಂಗಳೂರಿನಲ್ಲಿ ರಂಜಾನ್ ಸಂಭ್ರಮ: ಸಾಮೂಹಿಕ ಪ್ರಾರ್ಥನೆಯಲ್ಲಿ ವಿಧಾನಸಭೆ ಸ್ಪೀಕರ್ ಖಾದರ್ ಭಾಗಿ
ದಕ್ಷಿಣ ಕನ್ನಡದಲ್ಲಿ ರಂಜಾನ್ ಹಬ್ಬದ ಸಂಭ್ರಮ ಮುಗಿಲುಮುಟ್ಟಿದೆ. ಮಂಗಳೂರಿನ ಬಾವುಟಗುಡ್ಡೆ ಈದ್ಗಾ ಮಸೀದಿಯಲ್ಲಿ ವಿಶೇಷ ನಮಾಜ್ ನಡೆಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭಾಗವಹಿಸಿ ಶುಭಾಶಯ ಕೋರಿದರು. ಈದ್ಗಾ ಮಸೀದಿಯಲ್ಲಿ ನಡೆದ ರಂಜಾನ್ ವಿಶೇಷ ಪ್ರಾರ್ಥನೆಯ ವಿಡಿಯೋ ಇಲ್ಲಿದೆ.
- Pruthviraj
- Updated on: Mar 31, 2025
- 10:13 am
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ದೇಶದ ಹಲವು ಭಾಗಗಳಲ್ಲಿ ಚಂದ್ರ ದರ್ಶನ ದೃಢಪಟ್ಟಿದ್ದು ಇಂದು ದೇಶಾದ್ಯಂತ ರಂಜಾನ್ ಹಬ್ಬದ ಆಚರಿಸಲಾಯಿತು. ಇದರೊಂದಿಗೆ ಪವಿತ್ರ ರಂಜಾನ್ ತಿಂಗಳು ಮುಗಿದು ಶವ್ವಾಲ್ ತಿಂಗಳ ಪ್ರಾರಂಭವಾಗಿದೆ. 30 ದಿನಗಳ ಉಪವಾಸದ ನಂತರ ಮುಸ್ಲಿಮರು ಈದ್ ಉಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದಾರೆ. ಈದ್ ಉಲ್ ಫಿತ್ರ್ ಹಬ್ಬ ಆಚರಿಸಿಕೊಳ್ಳುತ್ತಿರುವ ಮುಸ್ಲಿಮರು ಪರಸ್ಪರ ಶುಭ ಹಾರೈಸಿದರು.
- Gangadhar Saboji
- Updated on: Mar 31, 2025
- 9:35 am
Bangalore Traffic Advisory: ಇಂದು ಚಾಮರಾಜಪೇಟೆ, ಮೈಸೂರು ರಸ್ತೆಗಳಲ್ಲಿ ಸಂಚರಿಸುವವರು ಗಮನಿಸಿ
ಬೆಂಗಳೂರು ಸಂಚಾರ ಸಲಹೆ: ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ ಮಾಡಲಾಗಿದೆ. ಹಲವೆಡೆ ನಿರ್ಬಂಧ ಹೇರಲಾಗಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಈ ಬಗ್ಗೆ ಭಾನುವಾರವೇ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಇದೀಗ ಚಾಮರಾಜಪೇಟೆ ಹಾಗೂ ಮೈಸೂರು ರಸ್ತೆಗಳ ಸಂಚಾರ ನಿರ್ಬಂಧ ಬಗ್ಗೆ ಮಾಹಿತಿ ನೀಡಿದ್ದಾರೆ. ವಿವರ ಇಲ್ಲಿದೆ.
- Ganapathi Sharma
- Updated on: Mar 31, 2025
- 6:58 am
Eid-Ul-Fitr: ಭಾರತದಲ್ಲೂ ಅರ್ಧ ಚಂದ್ರ ದರ್ಶನ; ನಾಳೆ ದೇಶಾದ್ಯಂತ ಈದ್ ಆಚರಣೆ
ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ತಿಂಗಳು ಇಂದಿಗೆ ಅಂತ್ಯವಾಗಿದೆ. ಇಂದು ಸಂಜೆ ಭಾರತದಲ್ಲೂ ಅರ್ಧ ಚಂದ್ರ ದರ್ಶನವಾಗಿದ್ದು, ನಾಳೆ (ಮಾರ್ಚ್ 31) ದೇಶಾದ್ಯಂತ ಈದ್-ಉಲ್-ಫಿತರ್ ಆಚರಿಸಲಾಗುವುದು. ಜಗತ್ತಿನ ಹಲವು ದೇಶಗಳಲ್ಲಿ ಇಂದೇ ಈದ್ ಹಬ್ಬವನ್ನು ಆಚರಿಸಲಾಗಿದೆ. ಆದರೆ, ಭಾರತದಲ್ಲಿ ಇಂದು ಚಂದ್ರನ ದರ್ಶನವಾಗಿರುವುದರಿಂದ ನಾಳೆ ಆಚರಿಸಲಾಗುವುದು.
- Sushma Chakre
- Updated on: Mar 30, 2025
- 8:25 pm
Eid-Ul-Fitr 2025: ಶಾಂತಿ, ಸೌಹಾರ್ದ ಸಾರುವ ಪವಿತ್ರ ರಂಜಾನ್ ಹಬ್ಬದ ಆಚರಣೆಯ ಹಿಂದಿನ ಇತಿಹಾಸದ ಬಗ್ಗೆ ನಿಮಗೆ ಗೊತ್ತಾ?
Eid-Ul-Fitr 2025: ಈದ್-ಉಲ್-ಫಿತರ್ ಹೆಸರಿನಿಂದ ಕರೆಯಲ್ಪಡುವ ರಂಜಾನ್ ಹಬ್ಬವು ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವು ಪವಿತ್ರ ರಂಜಾನ್ ಮಾಸದ ಅಂತ್ಯವನ್ನು ಸೂಚಿಸುತ್ತದೆ. ರಂಜಾನ್ ಮಾಸದ ಚಂದ್ರ ದರ್ಶನದೊಂದಿಗೆ ಆರಂಭವಾಗುವ ಉಪವಾಸ ಆಚರಣೆಯು ಶವ್ವಾಲ್ ತಿಂಗಳ ಚಂದ್ರ ದರ್ಶನದೊಂದಿಗೆ ಕೊನೆಗೊಳ್ಳುತ್ತದೆ. ಶವ್ವಾಲ್ ತಿಂಗಳ ಮೊದಲ ದಿನದಂದು ಈದ್-ಉಲ್-ಫಿತರ್ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಸಂಭ್ರಮದಿಂದ ಆಚರಿಸುತ್ತಾರೆ. ಈ ಬಾರಿ ಈದ್-ಉಲ್-ಫಿತರ್ ಯಾವಾಗ? ಈ ಪವಿತ್ರ ಹಬ್ಬದ ಆಚರಣೆಯ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.
- Malashree anchan
- Updated on: Mar 30, 2025
- 4:18 pm
ಯುಗಾದಿ ಹಬ್ಬ: ಬೆಂಗಳೂರು, ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು
ಯುಗಾದಿ ಮತ್ತು ರಂಜಾನ್ ಹಬ್ಬಗಳಿಗೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಮೈಸೂರಿನಿಂದ ಬೆಳಗಾವಿ, ಕಲಬುರಗಿ ಮತ್ತು ಕಾರವಾರಗಳಿಗೆ ವಿಶೇಷ ರೈಲುಗಳನ್ನು ಚಾಲನೆ ಮಾಡುತ್ತಿದೆ. ಈ ರೈಲುಗಳ ಸಮಯಾಚರಣೆ ಮತ್ತು ನಿಲುಗಡೆಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣ ಯೋಜನೆಗಳನ್ನು ಸುಲಭವಾಗಿ ಮಾಡಿಕೊಳ್ಳಲು ಈ ಮಾಹಿತಿ ಸಹಾಯಕವಾಗಿದೆ.
- Vivek Biradar
- Updated on: Mar 26, 2025
- 5:46 pm
ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯದ ಈ ಜಿಲ್ಲೆಗಳಿಗೆ ಬೆಂಗಳೂರು, ಮೈಸೂರಿನಿಂದ ವಿಶೇಷ ರೈಲು
ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಶೇಷ ರೈಲುಗಳ ಸಂಖ್ಯೆ, ಸಮಯ ಮತ್ತು ದಿನಾಂಕ, ನಿಲುಗಡೆ ಕುರಿತಾದ ಮಾಹಿತಿ ಇಲ್ಲಿದೆ. ಇನ್ನೂ ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಸೈಟ್ಗೆ ಭೇಟಿ ನೀಡಬೇಕೆಂದು ನೈಋತ್ಯ ರೈಲ್ವೆ ತಿಳಿಸಿದೆ.
- Vivek Biradar
- Updated on: Mar 23, 2025
- 7:54 am