AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Movie

Ramayana Movie

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ದೃಶ್ಯಕಾವ್ಯವಾಗಿದೆ. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಲಂಕಾಧಿಪತಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇವರೊಂದಿಗೆ ಹಿರಿಯ ನಟರು ದಶರಥ ಸೇರಿದಂತೆ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ತಾಂತ್ರಿಕವಾಗಿ ಅತ್ಯುನ್ನತ ಗುಣಮಟ್ಟ ಹೊಂದಿರುವ ಈ ಚಿತ್ರಕ್ಕೆ ಹಕೀಮ್ ಅಲಿ ಅವರ ಛಾಯಾಗ್ರಹಣ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಮತ್ತು ಹನ್ಸ್ ಜಿಮ್ಮರ್ ಅವರ ಹಿನ್ನೆಲೆ ಸಂಗೀತ ಇದೆ. ಹಾಲಿವುಡ್ ಮಟ್ಟದ ಅದ್ದೂರಿ ವಿಎಫ್‌ಎಕ್ಸ್ ತಂತ್ರಜ್ಞಾನವನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಈ ಮಹಾಕಾವ್ಯವು ದೀಪಾವಳಿಗೆ ರಿಲೀಸ್ ಆಗಲಿದೆ. ಈ ಚಿತ್ರ ಎರಡು ಭಾಗದಲ್ಲಿ ಬರಲಿದ್ದು, 4000 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿನಿಮಾ ಸಿದ್ಧವಾಗಿದೆ.

ಇನ್ನೂ ಹೆಚ್ಚು ಓದಿ

ಸ್ಕ್ರೀನ್‌ಎಕ್ಸ್ ಫಾರ್ಮ್ಯಾಟ್‌ನಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಸಿನಿಮಾ ‘ರಾಮಾಯಣ’

ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಜಾಗತಿಕವಾಗಿ ತೆರೆಕಾಣಲಿರುವ ‘ರಾಮಾಯಣ’ ಸಿನಿಮಾದಿಂದ ಪ್ರೇಕ್ಷಕರಿಗೆ ಅದ್ಭುತವಾದ ಅನುಭವ ಸಿಗಲಿದೆ. ಅದಕ್ಕಾಗಿ ಮಾಮೂಲಿ ಚಿತ್ರಮಂದಿರಗಳ ಜೊತೆಗೆ ‘ಸ್ಕ್ರೀನ್‌ಎಕ್ಸ್’ ಮತ್ತು ‘4ಡಿಎಕ್ಸ್’ ರೂಪದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು

‘ರಾಮಾಯಣ: ಪಾರ್ಟ್ 1’ ಸಿನಿಮಾ ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 6ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಜಾಗತಿಕ ವಿತರಣೆಯನ್ನು ಸೋನಿ ಪಿಕ್ಚರ್ಸ್ ಸಂಸ್ಥೆ ವಹಿಸಿಕೊಂಡಿದ್ದು, ಚೀನಾದಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್ ದಿ ಪ್ರಿನ್ಸ್’ ಎಂಬ ಹೆಸರಿನಲ್ಲಿ ಬಿಡುಗಡೆ ಆಗಲಿದೆ.

‘ರಾಮಾಯಣ’ ಚಿತ್ರದ 4 ಸಾವಿರ ಕೋಟಿ ರೂ. ಬಜೆಟ್ ರಹಸ್ಯ ಬಿಚ್ಚಿಟ್ಟ ಯಶ್: ಇದು ಹಾಲಿವುಡ್ ಲೆಕ್ಕಾಚಾರ

ಈವರೆಗೂ ಭಾರತೀಯ ಚಿತ್ರರಂಗ ಕಂಡುಕೇಳರಿಯದ ರೀತಿಯಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಬಜೆಟ್ ಬರೋಬ್ಬರಿ 4 ಸಾವಿರ ಕೋಟಿ ರೂಪಾಯಿ ಎಂಬುದನ್ನು ಕೇಳಿದ ಬಳಿಕ ಹಲವರಿಗೆ ಅನುಮಾನ ಮೂಡಿತ್ತು. ಆ ಬಗ್ಗೆ ನಟ, ಸಹ-ನಿರ್ಮಾಪಕ ಯಶ್ ಅವರು ಸ್ಪಷ್ಟನೆ ನೀಡಿದ್ದಾರೆ.

‘ರಾವಣನ ಪಾತ್ರವನ್ನು ನನಗಿಂತ ಉತ್ತಮವಾಗಿ ಯಾರೂ ಅಭಿನಯಿಸಲು ಸಾಧ್ಯವಿಲ್ಲ’; ಯಶ್

ದೇಶದ ಜನಪ್ರಿಯ 'ಆಪ್ ಕಿ ಅದಾಲತ್' ಶೋಗೆ ಭೇಟಿ ನೀಡಿದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಭಾಜನರಾಗಿದ್ದಾರೆ. ಈ ವೇದಿಕೆಯಲ್ಲಿ 'ರಾಮಾಯಣ' ಸಿನಿಮಾದಲ್ಲಿ ಶ್ರೀರಾಮನ ಬದಲು ರಾವಣನ ಪಾತ್ರವನ್ನೇ ಯಾಕೆ ಆಯ್ಕೆ ಮಾಡಿಕೊಂಡರು ಎಂಬ ಬಗ್ಗೆ ಯಶ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.

ಚೀನಾದಲ್ಲೂ ಅಬ್ಬರಿಸಲಿದೆ ‘ರಾಮಾಯಣ’ ಸಿನಿಮಾ; ಆದರೆ, ಬದಲಾಗಲಿದೆ ಶೀರ್ಷಿಕೆ

ಯಶ್, ಸಾಯಿ ಪಲ್ಲವಿ, ರಣಬೀರ್ ಕಪೂರ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾಗೆ ಸಖತ್ ಬೇಡಿಕೆ ಇದೆ. ಭಾರತದಲ್ಲಿ ಮಾತ್ರವಲ್ಲದೇ ಚೀನಾದಲ್ಲೂ ಈ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಚಿತ್ರದ ಹೆಸರನ್ನು ಬದಲಾಯಿಸಿ ಚೀನಾದಲ್ಲಿ ರಿಲೀಸ್ ಮಾಡಲಾಗುತ್ತಿದೆ.

‘ರಾಮಾಯಣ’ವನ್ನು ವಿಶ್ವಕ್ಕೆ ಪರಿಚಯಿಸುತ್ತಿರುವ ಆಗರ್ಭ ಶ್ರೀಮಂತ ನಮಿತ್ ಮಲ್ಹೋತ್ರಾ ಯಾರು?

Who is Namit Malhotra: ‘ರಾಮಾಯ ಸಿನಿಮಾ ವಿಶ್ವಕ್ಕಾಗಿ ನಿರ್ಮಿಸಲಾಗಿರುವ ಭಾರತೀಯ ಸಿನಿಮಾ’ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಹೇಳಿದ್ದಾರೆ. ಅದರಂತೆಯೇ ಸಿನಿಮಾದ ಪ್ರಚಾರವನ್ನು ಪ್ರತಿಷ್ಠಿತ ಹಾಲಿವುಡ್ ವೇದಿಕೆಗಳಲ್ಲಿ, ಟಾಪ್ ಹಾಲಿವುಡ್​ ಸಿನಿಮಾಗಳ ಜೊತೆಯಲ್ಲಿಯೇ ಮಾಡಲಾಗುತ್ತಿದೆ. ‘ರಾಮಾಯಣ’ದಂತಹಾ ಅಪ್ಪಟ ಭಾರತೀಯ ಕತೆಯನ್ನು ವಿಶ್ವಕ್ಕೆ ಪರಿಚಯಿಸಲು ಊಹಿಸಲಾಗದ ಬಜೆಟ್​​ ಅನ್ನು ಹೂಡಿಕೆ ಮಾಡಿದ್ದಾರೆ ನಿರ್ಮಾಪಕ ನಮಿತ್ ಮಲ್ಹೋತ್ರಾ. ಅಷ್ಟಕ್ಕೂ ಯಾರು ಈ ನಮಿತ್ ಮಲ್ಹೋತ್ರಾ?

‘ರಾಮಾಯಣ ಟ್ರೇಲರ್‌ ನನ್ನನ್ನು ಇಂಪ್ರೆಸ್ ಮಾಡಿಲ್ಲ: ‘ಮಹಾಭಾರತ’ ಖ್ಯಾತಿಯ ಗಜೇಂದ್ರ ಚೌಹಾಣ್ ಪ್ರತಿಕ್ರಿಯೆ

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಅದನ್ನು ನೋಡಿ ಜನರು ಹಲವು ಬಗೆಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಖ್ಯಾತ ನಟ ಗಜೇಂದ್ರ ಚೌಹಾಣ್ ಅವರಿಗೆ ಈ ಟ್ರೇಲರ್​ನಲ್ಲಿ ಕೆಲವು ಅಂಶಗಳು ಇಷ್ಟ ಆಗಿಲ್ಲ. ಅದನ್ನು ಅವರು ನೇರವಾಗಿ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ರಾಮಾಯಣ’ ಗ್ರಾಫಿಕ್ಸ್​ ಟೀಕೆ ಮಾಡಿದವರಿಗೆ ರಣಬೀರ್ ಖಡಕ್ ಉತ್ತರ

‘ರಾಮಾಯಣ’ ಸಿನಿಮಾದ ಗ್ರಾಫಿಕ್ಸ್ ಮತ್ತು ವಿಎಫ್‌ಎಕ್ಸ್ ಬಗ್ಗೆ ಬಂದಿರುವ ತೀವ್ರ ಟೀಕೆಗಳಿಗೆ ನಟ ರಣಬೀರ್ ಕಪೂರ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಖಡಕ್ ಉತ್ತರ ನೀಡಿದ್ದಾರೆ. ಮೊಬೈಲ್ ಪರದೆಯಲ್ಲಿ ನೋಡಿ ತೀರ್ಮಾನಿಸಬೇಡಿ. ಚಿತ್ರಮಂದಿರಗಳಲ್ಲಿ ಐಮ್ಯಾಕ್ಸ್ ರೂಪದಲ್ಲಿ ನೋಡಿ ಅನುಭವಿಸಿ ಎಂದು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡಿದ್ದಾರೆ. ಪ್ರಸ್ತುತ ಸಿನಿಮಾದ ಕೊನೆಯ ಹಂತದ ಕೆಲಸಗಳು ಜಾರಿಯಲ್ಲಿವೆ.

ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್

ರಣ್‌ಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶದಲ್ಲಿ ರಿಲೀಸ್ ಆಗಲಿದೆ. ನವೆಂಬರ್ 6ರಂದು ವಿದೇಶ ಹಾಗೂ ನವೆಂಬರ್ 8ಕ್ಕೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಪೈರೆಸಿ ಮತ್ತು ಲೀಕ್ ಭೀತಿಯಿಂದ ಭಾರತೀಯ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನ ಪಾತ್ರಕ್ಕೆ ಹೃತಿಕ್, ದಶರಥನ ಪಾತ್ರಕ್ಕೆ ಅಮಿತಾಭ್; ಈ ಕಥೆ ಗೊತ್ತಾ?

ನಿತೇಶ್ ತಿವಾರಿ ಅವರ 'ರಾಮಾಯಣ' ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ನಟಿಸುತ್ತಿದ್ದಾರೆ. ಆದರೆ 2008ರಲ್ಲೇ ನಿರ್ದೇಶಕ ಸಂಜಯ್ ಖಾನ್ 'ದಿ ಲೆಜೆಂಡ್ ಆಫ್ ರಾಮ' ಚಿತ್ರಕ್ಕೆ ಹೃತಿಕ್ ರೋಷನ್ ಅವರನ್ನು ರಾಮನನ್ನಾಗಿ ಹಾಗೂ ಅಮಿತಾಭ್ ಬಚ್ಚನ್ ಅವರನ್ನು ದಶರಥನಾಗಿ ಆಯ್ಕೆ ಮಾಡಲು ನಿರ್ಧರಿಸಿದ್ದರು. ಈ ಬಿಗ್ ಬಜೆಟ್ ಸಿನಿಮಾ ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು.

‘ಆಸ್ಕರ್ ಸಿಗಲೇ ಬೇಕು’: ‘ರಾಮಾಯಣ’ ಸಿನಿಮಾವನ್ನು ಕೊಂಡಾಡಿದ ಮಹಾರಾಷ್ಟ್ರ ಸಿಎಂ

Ramayana movie: ‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ, ಇತ್ತೀಚೆಗೆ ಕೆಲವರು ತಮಗೆ ಸಿನಿಮಾ ತೋರಿಸಬೇಕೆಂದು, ಇನ್ನು ಕೆಲವರು ಪಾತ್ರಗಳ ಆಯ್ಕೆ ತಪ್ಪಾಗಿದೆ ಎಂದು ಟೀಕಿಸಲು ಆರಂಭಿಸಿದ್ದರು. ಆದರೆ ಇದೀಗ ಬಿಜೆಪಿಯ ಹಿರಿಯ ನಾಯಕ, ಮಹರಾಷ್ಟ್ರ ಸಿಎಂ ದೇವೇಂದ್ರ ಫಡ್ಣವೀಸ್ ಅವರು ‘ರಾಮಾಯಣ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ.

‘ರಾಮಾಯಣ’ ರಿಲೀಸ್ ದಿನಾಂಕದ ಕುತೂಹಲಕ್ಕೆ ತೆರೆ? ಚಿತ್ರತಂಡದ ಪ್ಲ್ಯಾನ್ ಬಹಿರಂಗ

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ ಎಂಬುದು ತಿಳಿದಿದ್ದರೂ ಕೂಡ ನಿರ್ದಿಷ್ಟ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಕೊಂಚ ಗೊಂದಲ ಇತ್ತು. ಈಗ ಆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಚಿತ್ರತಂಡದ ರಿಲೀಸ್ ಪ್ಲ್ಯಾನ್ ಬಗ್ಗೆ ಒಂದಷ್ಟು ವಿಷಯ ತಿಳಿದುಬಂದಿದೆ.

RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್