AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Movie

Ramayana Movie

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ದೃಶ್ಯಕಾವ್ಯವಾಗಿದೆ. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಲಂಕಾಧಿಪತಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇವರೊಂದಿಗೆ ಹಿರಿಯ ನಟರು ದಶರಥ ಸೇರಿದಂತೆ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ತಾಂತ್ರಿಕವಾಗಿ ಅತ್ಯುನ್ನತ ಗುಣಮಟ್ಟ ಹೊಂದಿರುವ ಈ ಚಿತ್ರಕ್ಕೆ ಹಕೀಮ್ ಅಲಿ ಅವರ ಛಾಯಾಗ್ರಹಣ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಮತ್ತು ಹನ್ಸ್ ಜಿಮ್ಮರ್ ಅವರ ಹಿನ್ನೆಲೆ ಸಂಗೀತ ಇದೆ. ಹಾಲಿವುಡ್ ಮಟ್ಟದ ಅದ್ದೂರಿ ವಿಎಫ್‌ಎಕ್ಸ್ ತಂತ್ರಜ್ಞಾನವನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಈ ಮಹಾಕಾವ್ಯವು ದೀಪಾವಳಿಗೆ ರಿಲೀಸ್ ಆಗಲಿದೆ. ಈ ಚಿತ್ರ ಎರಡು ಭಾಗದಲ್ಲಿ ಬರಲಿದ್ದು, 4000 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿನಿಮಾ ಸಿದ್ಧವಾಗಿದೆ.

ಇನ್ನೂ ಹೆಚ್ಚು ಓದಿ

‘ರಾಮಾಯಣ’ ಟ್ರೇಲರ್​​ನಲ್ಲಿ ಪ್ರಮುಖ ಪಾತ್ರವೇ ಮಿಸ್; ಅಭಿಮಾನಿಗಳ ಬೇಸರ

ರಾಮಾಯಣ ಟ್ರೇಲರ್: ಬಹುನಿರೀಕ್ಷಿತ 'ರಾಮಾಯಣ' ಸಿನಿಮಾದ ಭವ್ಯ ಟ್ರೇಲರ್ ಇಂದು ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಬಿಡುಗಡೆಯಾಗಿದೆ. ರಣಬೀರ್ ಕಪೂರ್ ಹಾಗೂ ಯಶ್ ಅಬ್ಬರದ ದೃಶ್ಯಗಳು ಅಭಿಮಾನಿಗಳನ್ನು ರೋಮಾಂಚನಗೊಳಿಸಿದ್ದರೆ, ಟ್ರೇಲರ್‌ನಲ್ಲಿ ಹನುಮಂತನ ಪಾತ್ರಧಾರಿ ಸನ್ನಿ ಡಿಯೋಲ್ ಅವರ ದರ್ಶನವಾಗದಿರುವುದು ಸಿನಿಪ್ರಿಯರಲ್ಲಿ ತೀವ್ರ ನಿರಾಸೆ ಮೂಡಿಸಿದೆ.

ರಾಮಾಯಣ ಟ್ರೇಲರ್​ನಲ್ಲಿ ರಾವಣನ ಪಾತ್ರದ ಮೂಲಕ ಅಬ್ಬರಿಸಿ ಬೊಬ್ಬಿರಿದ ಯಶ್

ಚಿತ್ರದಲ್ಲಿ ಲಂಕೇಶ್ವರ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಅವತಾರ ಅತ್ಯಂತ ರೋಮಾಂಚನಕಾರಿಯಾಗಿದೆ. ಬಿಡುಗಡೆಯಾಗಿರುವ ಈ ವಿಶೇಷ ಝಲಕ್‌ಗಳು ಅವರ ಅಪ್ರತಿಮ ಕ್ರೌರ್ಯ, ಅಹಂಕಾರ ಮತ್ತು ಅಧಿಪತ್ಯವನ್ನು ಅದ್ಭುತವಾಗಿ ತೋರ್ಪಡಿಸಿದ್ದು, ಭಾರತೀಯ ಚಿತ್ರರಂಗದಲ್ಲಿ ಈ ಪಾತ್ರ ಹೊಸ ಸಂಚಲನ ಸೃಷ್ಟಿಸುವುದು ಖಚಿತವಾಗಿದೆ.

‘ರಾಮಾಯಣ’ ಟ್ರೇಲರ್​​: ರಾಮ-ಸೀತೆ-ರಾವಣನ ಪರಿಚಯಿಸಿದ ನಿರ್ದೇಶಕ ನಿತೇಶ್ ತಿವಾರಿ

ಬಹುನಿರೀಕ್ಷಿತ 'ರಾಮಾಯಣ' ಸಿನಿಮಾದ ಭವ್ಯ ಟ್ರೇಲರ್ ಇಂದು ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿರುವ ಈ ಚಿತ್ರದ ಮೊದಲ ಝಲಕ್ ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದ್ದು, ವಿಶ್ಯುಯಲ್ ವೈಭವ ಹಾಗೂ ಪಾತ್ರಧಾರಿಗಳ ನಟನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Ramayana Movie Trailer: ‘ರಾಮಾಯಣ’ ಟ್ರೇಲರ್​ನಲ್ಲಿ ರಾವಣನಾಗಿ ಅಬ್ಬರಿಸಿದ ನಟ ರಾಕಿಂಗ್ ಸ್ಟಾರ್ ಯಶ್

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ, ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದ ಭವ್ಯ ಟ್ರೇಲರ್ ಬಿಡುಗಡೆಯಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಈ ಸಿನಿಮಾ, ಹಾಲಿವುಡ್ ಮಟ್ಟದ ದೃಶ್ಯ ವೈಭವ ಹಾಗೂ ಅದ್ಭುತ ಸಂಗೀತವನ್ನೊಳಗೊಂಡಿದೆ. 2026ರ ದೀಪಾವಳಿಗೆ ಜಾಗತಿಕವಾಗಿ ಸಿನಿಮಾ ತೆರೆಕಾಣಲು ಸಜ್ಜಾಗಿದೆ.

‘ರಾಮಾಯಣ’ ಪ್ರಚಾರಕ್ಕೆ ನಮಿತ್ ಮಲ್ಹೋತ್ರಾ ಮಾಸ್ಟರ್ ಸ್ಟ್ರೋಕ್

Ramayana movie: ‘ರಾಮಾಯಣ’ ಸಿನಿಮಾ ಬಿಡುಗಡೆಗೆ ಇನ್ನೂ ಮೂರು ತಿಂಗಳು ಇದೆ. ಈಗಿನಿಂದಲೂ ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ಚಿತ್ರತಂಡ ಮಾಡುತ್ತಿದೆ. ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅಂತೂ ಬಿಂದಾಸ್ ಆಗಿ ಪ್ರಚಾರಕ್ಕಾಗಿ ಹಣ ಸುರಿಯುತ್ತಿದ್ದಾರೆ. ‘ರಾಮಾಯಣ’ ಸಿನಿಮಾವನ್ನು ಭಾರತದ ಸಿನಿಮಾ ರೀತಿ ಅಲ್ಲದೆ, ಹಾಲಿವುಡ್ ಸಿನಿಮಾ ರೀತಿ ವಿಶ್ವದಾದ್ಯಂತ ಬಿಡುಗಡೆ ಮಾಡಬೇಕು ಎಂಬುದು ಅವರ ಯೋಜನೆ. ಇದೇ ಕಾರಣಕ್ಕೆ ಸಿನಿಮಾದ ಪ್ರಚಾರಕ್ಕಾಗಿ ಇದೀಗ ಮಾಸ್ಟರ್ ಸ್ಟ್ರೋಕ್ ಬಳಸಿದ್ದಾರೆ.

‘ರಾಮಾಯಣ’ ಟ್ರೈಲರ್ ಲೀಕ್, ‘ರಾವಣ’ನಾಗಿ ಯಶ್ ಅಬ್ಬರ ಅಬ್ಬಬ್ಬ

Ramayana movie: ‘ರಾಮಾಯಣ’ ಸಿನಿಮಾದ ಟ್ರೈಲರ್ ಅನ್ನು ಈಗಾಗಲೇ ಚಿತ್ರತಂಡವು ಸ್ಯಾಂಡಿಯಾಗೋದ ಕಾಮಿಕಾನ್​​ನಲ್ಲಿ ಪ್ರದರ್ಶಿಸಿದ್ದಾರೆ. ಹಾಗಾಗಿ ಟ್ರೈಲರ್ ಈಗಾಗಲೇ ಲೀಕ್ ಆಗಿದ್ದು, ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಟ್ರೈಲರ್​​ನಲ್ಲಿ ಹಲವು ಅಂಶಗಳು ಗಮನ ಸೆಳೆಯುತ್ತಿದ್ದು, ವಿಶೇಷವಾಗಿ ರಾವಣನಾಗಿ ಯಶ್ ಅಬ್ಬರ ಬಲು ಅದ್ಧೂರಿಯಾಗಿರುವುದು ತಿಳಿಯುತ್ತಿದೆ.

‘ಪುಷ್ಪ 2’ ದಾಖಲೆ ಮುರಿದ ‘ರಾಮಾಯಣ’? ಕೋಟಿ ಕೋಟಿಗೆ ಮಾರಾಟವಾಯ್ತು ಮ್ಯೂಸಿಕ್ ಹಕ್ಕು

ರಣಬೀರ್ ಕಪೂರ್ ಮತ್ತು ಯಶ್ ನಟನೆಯ ಬಿಗ್ ಬಜೆಟ್ ಸಿನಿಮಾ 'ರಾಮಾಯಣ' ಮ್ಯೂಸಿಕ್ ಡೀಲ್ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಟಿ-ಸೀರೀಸ್ ಸಂಸ್ಥೆಯು 75 ಕೋಟಿ ರೂಪಾಯಿಗೆ ಈ ಚಿತ್ರದ ಆಡಿಯೋ ಹಕ್ಕುಗಳನ್ನು ಖರೀದಿಸಿದೆ. ಆ ಮೂಲಕ 'ಪುಷ್ಪ 2' ಚಿತ್ರದ 65 ಕೋಟಿ ರೂಪಾಯಿಯ ದಾಖಲೆಯನ್ನು ರಾಮಾಯಣ ಮುರಿದಿದೆ.

ದಾಖಲೆಯ ಮೊತ್ತಕ್ಕೆ ಮಾರಾಟ ಆಗಲಿದೆ ‘ರಾಮಾಯಣ’ ಆಡಿಯೋ ಹಕ್ಕು

Ramayana movie: ‘ರಾಮಾಯಣ’ ಸಿನಿಮಾದ ಪ್ರಚಾರವನ್ನು ಬಲು ಅದ್ಧೂರಿಯಾಗಿ ನಿರ್ಮಾಪಕ ನಮಿತ್ ಮಲ್ಹೋತ್ರಾ ಮಾಡುತ್ತಿದ್ದಾರೆ. ಸಿನಿಮಾದ ಭಾರತದ ವಿತರಣೆ ಹಕ್ಕುಗಳ ಮಾರಾಟವನ್ನು ನಿರ್ಮಾಪಕರು ಇತ್ತೀಚೆಗಷ್ಟೆ ಮಾಡಿದ್ದು, ಕರಣ್ ಜೋಹರ್ ಹಾಗೂ ಇತರೆ ಕೆಲವರು ಸುಮಾರು 250 ಕೋಟಿಗೆ ಖರೀದಿ ಮಾಡಿದ್ದಾರೆ. ಇದೀಗ ಸಿನಿಮಾದ ಆಡಿಯೋ ಹಕ್ಕುಗಳನ್ನು ದಾಖಲೆಯ ಮೊತ್ತಕ್ಕೆ ಮಾರಾಟ ಮಾಡಲು ನಮಿತ್ ಮಲ್ಹೋತ್ರಾ ಪ್ರಯತ್ನಿಸುತ್ತಿದ್ದಾರೆ.

‘ರಾಮಾಯಣ’ ಶೂಟಿಂಗ್ ಸೆಟ್‌ನಲ್ಲಿ ಶಿವನ ಹಾಡುಗಳನ್ನು ದೊಡ್ಡದಾಗಿ ಹಾಕುತ್ತಿದ್ದ ನಟ ಯಶ್

ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರಕ್ಕಾಗಿ ನಟ ಯಶ್ ಸೆಟ್‌ನಲ್ಲಿ ದೊಡ್ಡ ಸ್ಪೀಕರ್ ಇಟ್ಟು ಶಿವನ ಹಾಡುಗಳನ್ನು ಗಟ್ಟಿಯಾಗಿ ಹಾಕುತ್ತಿದ್ದರಂತೆ. ಚಿತ್ರದ ದ್ವಿತೀಯಾರ್ಧದಲ್ಲಿ ರಣಬೀರ್ ಮತ್ತು ಯಶ್ ಮುಖಾಮುಖಿಯಾಗುವ ಸಾಧ್ಯತೆ ದಟ್ಟವಾಗಿದೆ. ಇವರಿಬ್ಬರ ಯುದ್ಧದ ದೃಶ್ಯಗಳ ಚಿತ್ರೀಕರಣ ಇನ್ನು ಬಾಕಿ ಇದೆ ಎಂದು ರಣಬೀರ್ ಕಪೂರ್ ತಿಳಿಸಿದ್ದಾರೆ.

‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ

ರಣಬೀರ್ ಕಪೂರ್ ಹಾಗೂ ಯಶ್ ಕಾಂಬಿನೇಷನ್‌ನ 'ರಾಮಾಯಣ' ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗವು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸುವ ಕ್ಲಿಫ್‌ಹ್ಯಾಂಗರ್ ತಿರುವಿನೊಂದಿಗೆ ಕೊನೆಗೊಳ್ಳಲಿದೆ ಎಂದು ನಿರ್ದೇಶಕ ನಿತೇಶ್ ತಿವಾರಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈ ವಿಷಯ ಕುತೂಹಲ ಹೆಚ್ಚಿಸಿದೆ.

ವಿದೇಶಿಗರಿಗೆ ಹಿಂದೂ ಧರ್ಮ ಪರಿಚಯಿಸುವ ಕಾರ್ಯ ಮಾಡಿದ ‘ರಾಮಾಯಣ’ ತಂಡ

Ramayana movie: ‘ರಾಮಾಯಣ’ ಸಿನಿಮಾವನ್ನು ಬಲು ಅದ್ಧೂರಿಯಾಗಿ ವಿಶ್ವದಾದ್ಯಂತ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೇ ಕಾರಣಕ್ಕೆ ವಿದೇಶಗಳಲ್ಲಿ ಸಿನಿಮಾದ ಪ್ರಚಾರಕ್ಕೆ ಹೆಚ್ಚು ಒತ್ತು ಕೊಡಲಾಗಿದೆ. ಇತ್ತೀಚೆಗೆ ಸ್ಯಾನ್ ಡಿಯಾಗೊನಲ್ಲಿ ನಡೆದ ಕಾಮಿಕಾನ್​​ನಲ್ಲಿ ಚಿತ್ರತಂಡ ಭಾಗಿ ಆಗಿತ್ತು. ರಣ್​​ಬೀರ್ ಕಪೂರ್, ಯಶ್, ನಮಿತ್ ಮಲ್ಹೋತ್ರಾ, ನಿತೀಶ್ ತಿವಾರಿ ಅವರುಗಳು ಸಿನಿಮಾ ಬಗ್ಗೆ ಹಲವಾರು ಸಂದರ್ಶನಗಳನ್ನು ನೀಡಿದರು. ವಿಶೇಷವೆಂದರೆ ಈ ಕಾರ್ಯಕ್ರಮದಲ್ಲಿ ‘ರಾಮಾಯಣ’ ಚಿತ್ರತಂಡ ನೀಡಿದ ಉಡುಗೊರೆ ಇದೀಗ ಸಖತ್ ವೈರಲ್ ಆಗಿದೆ.

‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡ್ತಿದ್ರು ಸಖತ್ ಕ್ವಾಟ್ಲೆ

Yash in Ramayana movie: ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಇತ್ತೀಚೆಗಷ್ಟೆ ‘ರಾಮಾಯಣ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಯಶ್ ಅವರ ಪರವಾಗಿ ಅಭಿಮಾನಿಗಳ ಕರತಾಡನ, ಕಿರುಚಾಟಗಳೇ ಅವರ ಸ್ಟಾರ್​​ ಡಮ್ ಅನ್ನು ಸಾರಿ ಹೇಳುತ್ತಿದ್ದವು. ಅವರು ಜನರ ನಡುವೆ ಮಾತ್ರವಲ್ಲ, ಸೆಟ್​​ನಲ್ಲಿ ಇದ್ದಾಗಲೂ ಅವರದ್ದೇ ಹವಾ. ‘ರಾಮಾಯಣ’ ಸೆಟ್​​ನಲ್ಲಿ ಸಹ ಸಖತ್ ಕ್ವಾಟ್ಲೆ ಕೊಡುತ್ತಿದ್ದಿದ್ದಾಗಿ ಯಶ್ ನೆನಪು ಮಾಡಿಕೊಂಡಿದ್ದಾರೆ.

ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು