AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramayana Movie

Ramayana Movie

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ದೃಶ್ಯಕಾವ್ಯವಾಗಿದೆ. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗೂ ಲಂಕಾಧಿಪತಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಮುಖ್ಯ ಭೂಮಿಕೆಯಲ್ಲಿದ್ದಾರೆ. ಇವರೊಂದಿಗೆ ಹಿರಿಯ ನಟರು ದಶರಥ ಸೇರಿದಂತೆ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ತಾಂತ್ರಿಕವಾಗಿ ಅತ್ಯುನ್ನತ ಗುಣಮಟ್ಟ ಹೊಂದಿರುವ ಈ ಚಿತ್ರಕ್ಕೆ ಹಕೀಮ್ ಅಲಿ ಅವರ ಛಾಯಾಗ್ರಹಣ ಹಾಗೂ ಆಸ್ಕರ್ ಪ್ರಶಸ್ತಿ ವಿಜೇತ ಎ.ಆರ್. ರೆಹಮಾನ್ ಮತ್ತು ಹನ್ಸ್ ಜಿಮ್ಮರ್ ಅವರ ಹಿನ್ನೆಲೆ ಸಂಗೀತ ಇದೆ. ಹಾಲಿವುಡ್ ಮಟ್ಟದ ಅದ್ದೂರಿ ವಿಎಫ್‌ಎಕ್ಸ್ ತಂತ್ರಜ್ಞಾನವನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಈ ಮಹಾಕಾವ್ಯವು ದೀಪಾವಳಿಗೆ ರಿಲೀಸ್ ಆಗಲಿದೆ. ಈ ಚಿತ್ರ ಎರಡು ಭಾಗದಲ್ಲಿ ಬರಲಿದ್ದು, 4000 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿನಿಮಾ ಸಿದ್ಧವಾಗಿದೆ.

ಇನ್ನೂ ಹೆಚ್ಚು ಓದಿ

‘ರಾಮಾಯಣ’ ಸಿನಿಮಾಗೆ ಇನ್ನೂ ಶುರುವಾಗಿಲ್ಲ ಪ್ರಚಾರ; ಕಾರಣವೇನು?

ರಣಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾದ ಪ್ರಚಾರ ಕಾರ್ಯ ಇನ್ನೂ ಆರಂಭವಾಗದಿರುವುದು ಚಿತ್ರರಂಗದಲ್ಲಿ ಅಚ್ಚರಿ ಮೂಡಿಸಿದೆ. 'ಟಾಕ್ಸಿಕ್' ಸಿನಿಮಾ ನಿರೀಕ್ಷಿತ ಮಟ್ಟದ ಯಶಸ್ಸು ಕಂಡಿಲ್ಲ. ಇದು ಅಂತಹ ದೊಡ್ಡ ಬದಲಾವಣೆ ಮಾಡೋದಿಲ್ಲ ಎನ್ನಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ರಾವಣನ ಪಾತ್ರಕ್ಕೆ ರಾಮನಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಸರಿಯಲ್ಲ; ಮುಕೇಶ್ ಖನ್ನಾ

ನಿತೇಶ್ ತಿವಾರಿ ನಿರ್ದೇಶನದ 'ರಾಮಾಯಣ' ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಣಬೀರ್ ಅವರ 'ಅನಿಮಲ್' ಚಿತ್ರದ ಹಿಂಸಾತ್ಮಕ ಇಮೇಜ್ ಈ ಪೌರಾಣಿಕ ಪಾತ್ರದ ಮೇಲೆ ನಕಾರಾತ್ಮಕ ಪ್ರಭಾವ ಬೀರಬಹುದು ಹಾಗೂ ಮಕ್ಕಳಿಗೆ ತಪ್ಪು ಸಂದೇಶ ನೀಡಬಹುದು ಎಂದು ಹಿರಿಯ ನಟ ಮುಕೇಶ್ ಖನ್ನಾ ಕಳವಳ ವ್ಯಕ್ತಪಡಿಸಿದ್ದಾರೆ.

‘ರಾಮಾಯಣದ ರಾವಣನ ಗರ್ಜನೆ ದೇವರಾಜ್​​ ಅವರದ್ದಲ್ಲ’; ಪ್ರಜ್ವಲ್ ಸ್ಪಷ್ಟನೆ

'ರಾಮಾಯಣ' ಸಿನಿಮಾದಲ್ಲಿ ರಾವಣನ ಧ್ವನಿ ನಟ ದೇವರಾಜ್ ಅವರದ್ದು ಎಂಬ ವದಂತಿಗೆ ನಟ ಪ್ರಜ್ವಲ್ ದೇವರಾಜ್ ತೆರೆ ಎಳೆದಿದ್ದಾರೆ. ಆ ಗಂಭೀರ ಗರ್ಜನೆ ಸ್ವತಃ ನಟ ಯಶ್ ಅವರ ಸ್ವಂತ ಧ್ವನಿಯಾಗಿದೆ. ಯಶ್ ಅವರ ಕಂಠಪವರ್ ಬಗ್ಗೆ ಹಿರಿಯ ನಟ ದೇವರಾಜ್ ಅವರ ಬಳಿ ಯಶ್ ಮಾತನಾಡಿದ್ದ ವಿಚಾರವನ್ನು ಪ್ರಜ್ವಲ್ ಹಂಚಿಕೊಂಡಿದ್ದಾರೆ.

ಸ್ಕ್ರೀನ್‌ಎಕ್ಸ್ ಫಾರ್ಮ್ಯಾಟ್‌ನಲ್ಲಿ ಬಿಡುಗಡೆ ಆಗಲಿರುವ ಭಾರತದ ಮೊದಲ ಸಿನಿಮಾ ‘ರಾಮಾಯಣ’

ಈ ವರ್ಷ ದೀಪಾವಳಿ ಹಬ್ಬದ ಸಮಯದಲ್ಲಿ ಜಾಗತಿಕವಾಗಿ ತೆರೆಕಾಣಲಿರುವ ‘ರಾಮಾಯಣ’ ಸಿನಿಮಾದಿಂದ ಪ್ರೇಕ್ಷಕರಿಗೆ ಅದ್ಭುತವಾದ ಅನುಭವ ಸಿಗಲಿದೆ. ಅದಕ್ಕಾಗಿ ಮಾಮೂಲಿ ಚಿತ್ರಮಂದಿರಗಳ ಜೊತೆಗೆ ‘ಸ್ಕ್ರೀನ್‌ಎಕ್ಸ್’ ಮತ್ತು ‘4ಡಿಎಕ್ಸ್’ ರೂಪದಲ್ಲೂ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆಯುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು

‘ರಾಮಾಯಣ: ಪಾರ್ಟ್ 1’ ಸಿನಿಮಾ ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 6ರಂದು ಪ್ರಪಂಚದಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಜಾಗತಿಕ ವಿತರಣೆಯನ್ನು ಸೋನಿ ಪಿಕ್ಚರ್ಸ್ ಸಂಸ್ಥೆ ವಹಿಸಿಕೊಂಡಿದ್ದು, ಚೀನಾದಲ್ಲಿ ‘ರಾಮಾಯಣ: ದಿ ಲೆಜೆಂಡ್ ಆಫ್ ದಿ ಪ್ರಿನ್ಸ್’ ಎಂಬ ಹೆಸರಿನಲ್ಲಿ ಬಿಡುಗಡೆ ಆಗಲಿದೆ.

‘ರಾಮಾಯಣ’ ಚಿತ್ರದ 4 ಸಾವಿರ ಕೋಟಿ ರೂ. ಬಜೆಟ್ ರಹಸ್ಯ ಬಿಚ್ಚಿಟ್ಟ ಯಶ್: ಇದು ಹಾಲಿವುಡ್ ಲೆಕ್ಕಾಚಾರ

ಈವರೆಗೂ ಭಾರತೀಯ ಚಿತ್ರರಂಗ ಕಂಡುಕೇಳರಿಯದ ರೀತಿಯಲ್ಲಿ ‘ರಾಮಾಯಣ’ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾದ ಬಜೆಟ್ ಬರೋಬ್ಬರಿ 4 ಸಾವಿರ ಕೋಟಿ ರೂಪಾಯಿ ಎಂಬುದನ್ನು ಕೇಳಿದ ಬಳಿಕ ಹಲವರಿಗೆ ಅನುಮಾನ ಮೂಡಿತ್ತು. ಆ ಬಗ್ಗೆ ನಟ, ಸಹ-ನಿರ್ಮಾಪಕ ಯಶ್ ಅವರು ಸ್ಪಷ್ಟನೆ ನೀಡಿದ್ದಾರೆ.

‘ರಾವಣನ ಪಾತ್ರವನ್ನು ನನಗಿಂತ ಉತ್ತಮವಾಗಿ ಯಾರೂ ಅಭಿನಯಿಸಲು ಸಾಧ್ಯವಿಲ್ಲ’; ಯಶ್

ದೇಶದ ಜನಪ್ರಿಯ 'ಆಪ್ ಕಿ ಅದಾಲತ್' ಶೋಗೆ ಭೇಟಿ ನೀಡಿದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಭಾಜನರಾಗಿದ್ದಾರೆ. ಈ ವೇದಿಕೆಯಲ್ಲಿ 'ರಾಮಾಯಣ' ಸಿನಿಮಾದಲ್ಲಿ ಶ್ರೀರಾಮನ ಬದಲು ರಾವಣನ ಪಾತ್ರವನ್ನೇ ಯಾಕೆ ಆಯ್ಕೆ ಮಾಡಿಕೊಂಡರು ಎಂಬ ಬಗ್ಗೆ ಯಶ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.

ಚೀನಾದಲ್ಲೂ ಅಬ್ಬರಿಸಲಿದೆ ‘ರಾಮಾಯಣ’ ಸಿನಿಮಾ; ಆದರೆ, ಬದಲಾಗಲಿದೆ ಶೀರ್ಷಿಕೆ

ಯಶ್, ಸಾಯಿ ಪಲ್ಲವಿ, ರಣಬೀರ್ ಕಪೂರ್ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾಗೆ ಸಖತ್ ಬೇಡಿಕೆ ಇದೆ. ಭಾರತದಲ್ಲಿ ಮಾತ್ರವಲ್ಲದೇ ಚೀನಾದಲ್ಲೂ ಈ ಸಿನಿಮಾ ಬಿಡುಗಡೆ ಮಾಡಲು ಸಿದ್ಧತೆ ನಡೆಯುತ್ತಿದೆ. ಈ ಚಿತ್ರದ ಹೆಸರನ್ನು ಬದಲಾಯಿಸಿ ಚೀನಾದಲ್ಲಿ ರಿಲೀಸ್ ಮಾಡಲಾಗುತ್ತಿದೆ.

‘ರಾಮಾಯಣ’ವನ್ನು ವಿಶ್ವಕ್ಕೆ ಪರಿಚಯಿಸುತ್ತಿರುವ ಆಗರ್ಭ ಶ್ರೀಮಂತ ನಮಿತ್ ಮಲ್ಹೋತ್ರಾ ಯಾರು?

Who is Namit Malhotra: ‘ರಾಮಾಯ ಸಿನಿಮಾ ವಿಶ್ವಕ್ಕಾಗಿ ನಿರ್ಮಿಸಲಾಗಿರುವ ಭಾರತೀಯ ಸಿನಿಮಾ’ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಹೇಳಿದ್ದಾರೆ. ಅದರಂತೆಯೇ ಸಿನಿಮಾದ ಪ್ರಚಾರವನ್ನು ಪ್ರತಿಷ್ಠಿತ ಹಾಲಿವುಡ್ ವೇದಿಕೆಗಳಲ್ಲಿ, ಟಾಪ್ ಹಾಲಿವುಡ್​ ಸಿನಿಮಾಗಳ ಜೊತೆಯಲ್ಲಿಯೇ ಮಾಡಲಾಗುತ್ತಿದೆ. ‘ರಾಮಾಯಣ’ದಂತಹಾ ಅಪ್ಪಟ ಭಾರತೀಯ ಕತೆಯನ್ನು ವಿಶ್ವಕ್ಕೆ ಪರಿಚಯಿಸಲು ಊಹಿಸಲಾಗದ ಬಜೆಟ್​​ ಅನ್ನು ಹೂಡಿಕೆ ಮಾಡಿದ್ದಾರೆ ನಿರ್ಮಾಪಕ ನಮಿತ್ ಮಲ್ಹೋತ್ರಾ. ಅಷ್ಟಕ್ಕೂ ಯಾರು ಈ ನಮಿತ್ ಮಲ್ಹೋತ್ರಾ?

‘ರಾಮಾಯಣ ಟ್ರೇಲರ್‌ ನನ್ನನ್ನು ಇಂಪ್ರೆಸ್ ಮಾಡಿಲ್ಲ: ‘ಮಹಾಭಾರತ’ ಖ್ಯಾತಿಯ ಗಜೇಂದ್ರ ಚೌಹಾಣ್ ಪ್ರತಿಕ್ರಿಯೆ

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಅದನ್ನು ನೋಡಿ ಜನರು ಹಲವು ಬಗೆಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಖ್ಯಾತ ನಟ ಗಜೇಂದ್ರ ಚೌಹಾಣ್ ಅವರಿಗೆ ಈ ಟ್ರೇಲರ್​ನಲ್ಲಿ ಕೆಲವು ಅಂಶಗಳು ಇಷ್ಟ ಆಗಿಲ್ಲ. ಅದನ್ನು ಅವರು ನೇರವಾಗಿ ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ರಾಮಾಯಣ’ ಗ್ರಾಫಿಕ್ಸ್​ ಟೀಕೆ ಮಾಡಿದವರಿಗೆ ರಣಬೀರ್ ಖಡಕ್ ಉತ್ತರ

‘ರಾಮಾಯಣ’ ಸಿನಿಮಾದ ಗ್ರಾಫಿಕ್ಸ್ ಮತ್ತು ವಿಎಫ್‌ಎಕ್ಸ್ ಬಗ್ಗೆ ಬಂದಿರುವ ತೀವ್ರ ಟೀಕೆಗಳಿಗೆ ನಟ ರಣಬೀರ್ ಕಪೂರ್ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಖಡಕ್ ಉತ್ತರ ನೀಡಿದ್ದಾರೆ. ಮೊಬೈಲ್ ಪರದೆಯಲ್ಲಿ ನೋಡಿ ತೀರ್ಮಾನಿಸಬೇಡಿ. ಚಿತ್ರಮಂದಿರಗಳಲ್ಲಿ ಐಮ್ಯಾಕ್ಸ್ ರೂಪದಲ್ಲಿ ನೋಡಿ ಅನುಭವಿಸಿ ಎಂದು ಪ್ರೇಕ್ಷಕರಲ್ಲಿ ವಿನಂತಿಸಿಕೊಂಡಿದ್ದಾರೆ. ಪ್ರಸ್ತುತ ಸಿನಿಮಾದ ಕೊನೆಯ ಹಂತದ ಕೆಲಸಗಳು ಜಾರಿಯಲ್ಲಿವೆ.

ಭಾರತಕ್ಕೂ ಮುನ್ನ ವಿದೇಶದಲ್ಲಿ ‘ರಾಮಾಯಣ’ ರಿಲೀಸ್; ಲೀಕ್ ಭೀತಿಯಲ್ಲಿ ಫ್ಯಾನ್ಸ್ ಅಪ್ಸೆಟ್

ರಣ್‌ಬೀರ್ ಕಪೂರ್ ಹಾಗೂ ಯಶ್ ಅಭಿನಯದ 'ರಾಮಾಯಣ' ಸಿನಿಮಾ ಭಾರತಕ್ಕಿಂತ ಎರಡು ದಿನ ಮುಂಚಿತವಾಗಿ ವಿದೇಶದಲ್ಲಿ ರಿಲೀಸ್ ಆಗಲಿದೆ. ನವೆಂಬರ್ 6ರಂದು ವಿದೇಶ ಹಾಗೂ ನವೆಂಬರ್ 8ಕ್ಕೆ ಭಾರತದಲ್ಲಿ ಬಿಡುಗಡೆಯಾಗುತ್ತಿದ್ದು, ಪೈರೆಸಿ ಮತ್ತು ಲೀಕ್ ಭೀತಿಯಿಂದ ಭಾರತೀಯ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ