Rashmika Mandanna
ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.
‘ಮಾನಸಿಕ ನೆಮ್ಮದಿ ನೀಡಿದ್ದು ವಿಜಯ್’; ರಶ್ಮಿಕಾ ಮಂದಣ್ಣ ಮನದಾಳದ ಮಾತು
ವಿಜಯ್ ದೇವರಕೊಂಡ ಹುಟ್ಟುಹಬ್ಬದ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಅವರ ಹಳೆಯ ಹೇಳಿಕೆಯೊಂದು ಮತ್ತೆ ವೈರಲ್ ಆಗಿದೆ. ಹಿಂದಿನ ಸಂಬಂಧದಲ್ಲಿನ ಸಂಕಷ್ಟದ ಸಮಯದಲ್ಲಿ ವಿಜಯ್ ತಮಗೆ ಮಾನಸಿಕ ನೆಮ್ಮದಿ ನೀಡಿದ್ದಾರೆ ಎಂದು ರಶ್ಮಿಕಾ ಸ್ಮರಿಸಿದ್ದಾರೆ. ಸಂತೋಷ ಮತ್ತು ಶಾಂತಿ ನೀಡುವ ವ್ಯಕ್ತಿ ಜೊತೆ ಇರುವುದು ಮುಖ್ಯ ಎಂದಿರುವ ರಶ್ಮಿಕಾ, ವಿಜಯ್ ತಮ್ಮ ಜೀವನದಲ್ಲಿ ಎಷ್ಟು ವಿಶೇಷ ಎಂಬುದನ್ನು ವಿವರಿಸಿದ್ದಾರೆ.
- Rajesh Duggumane
- Updated on: May 9, 2026
- 12:25 pm
ಜಾಗತಿಕ ಅನಿಮೆ ಅವಾರ್ಡ್ಸ್ 2026: ಟೋಕಿಯೋದಲ್ಲಿ ಮಿಂಚಲಿರುವ ರಶ್ಮಿಕಾ ಮಂದಣ್ಣ
ನಟಿ ರಶ್ಮಿಕಾ ಮಂದಣ್ಣ ಅವರಿಗೆ ಜಪಾನ್ನಿಂದ ಕರೆ ಬಂದಿದೆ. ಅಲ್ಲಿನ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ರಶ್ಮಿಕಾ ಭಾಗಿಯಾಗಲಿದ್ದಾರೆ. ಅವರಿಗೆ ಜಾಗತಿಕ ಮಟ್ಟದಲ್ಲಿ ಇರುವ ಜನಪ್ರಿಯತೆಗೆ ಈ ಆಹ್ವಾನವೇ ಸಾಕ್ಷಿ ಆಗಿದೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ರಶ್ಮಿಕಾ ಅವರು ವಿದೇಶದಲ್ಲೂ ಖ್ಯಾತಿ ಹೊಂದಿದ್ದಾರೆ.
- Madan Kumar
- Updated on: Apr 28, 2026
- 3:48 pm
ಆ್ಯಕ್ಷನ್ ಕಲಿಯಲು ಬ್ಯಾಂಕಾಕ್ಗೆ ಹೋದ ರಶ್ಮಿಕಾ ಮಂದಣ್ಣ; ದಿನಕ್ಕೆ 8 ಗಂಟೆ ಟ್ರೇನಿಂಗ್
Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿದ್ದಾರೆ. ಹಾಗಂತ ಅವರು ಹನಿಮೂನ್ಗೆ ಇಲ್ಲಿಗೆ ತೆರಳಿಲ್ಲ. ಅವರು ಹೋಗಿರೋದು ಆ್ಯಕ್ಷನ್ ಕಲಿಯೋದಕ್ಕೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.
- Rajesh Duggumane
- Updated on: Apr 18, 2026
- 1:15 pm
ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ
ಮದುವೆ ನಂತರ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಜೊತೆಯಾಗಿ ಕೆಲಸಕ್ಕೆ ಮರಳಿದ್ದಾರೆ. ‘ರಣಬಾಲಿ’ ಸಿನಿಮಾದ ಚಿತ್ರೀಕರಣಕ್ಕೆ ಬಂದ ಅವರಿಗೆ ಚಿತ್ರತಂಡದವರಿಂದ ಆತ್ಮೀಯ ಸ್ವಾಗತ ಸಿಕ್ಕಿದೆ. ‘ವೈವಾಹಿಕ ಜೀವನಕ್ಕೆ ಶುಭವಾಗಲಿ’ ಎಂದು ಶುಭ ಕೋರಿರುವ ಚಿತ್ರತಂಡದವರು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
- Madan Kumar
- Updated on: Apr 12, 2026
- 11:46 am
ಕೊಡವ ಶೈಲಿಯಲ್ಲಿ ಸೀರೆ ಉಟ್ಟು ಗಮನ ಸೆಳೆದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಅವರು ವಿವಾಹದ ಬಳಿಕ ಮೊದಲ ಬಾರಿಗೆ ಪತಿ ವಿಜಯ್ ದೇವರಕೊಂಡ ಜೊತೆ ಕೊಡಗಿಗೆ ಬಂದಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಖುಷಿ ಖುಷಿಯಿಂದ ಅವರು ಸಮಯ ಕಳೆದಿದ್ದಾರೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.
- Rajesh Duggumane
- Updated on: Apr 10, 2026
- 11:55 am
ಕೊಡವ ಭಾಷೆಯಲ್ಲಿ ವಿಜಯ್ ದೇವರಕೊಂಡ ಬಗ್ಗೆ ಮಾತಾಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಪತಿ ವಿಜಯ್ ದೇವರಕೊಂಡ ಜತೆ ಇತ್ತೀಚೆಗೆ ತವರಿಗೆ ಬಂದಿದ್ದಾರೆ. ಮದುವೆ ಬಳಿಕ ಮೊದಲ ಸಲ ಕೊಡಗಿಗೆ ಬಂದ ಅವರು ಕುಟುಂಬದವರಿಗೆ ಹಾಗೂ ಸ್ನೇಹಿತರಿಗೆ ಔಟಣ ಕೂಟ ಏರ್ಪಡಿಸಿದ್ದರು. ಈ ವೇಳೆ ತಮ್ಮೂರಿನ ಜನರಿಗೆ ಗಂಡನನ್ನು ಪರಿಚಯಿಸಿದರು. ಕೊಡವ ಭಾಷೆಯಲ್ಲೇ ಗಂಡನ ಪರಿಚಯ ಮಾಡಿಸಿದರು.
- Madan Kumar
- Updated on: Apr 7, 2026
- 9:20 pm
ಗ್ಲಾಮರಸ್ ಫೋಟೋ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ ಮಂದಣ್ಣ
‘ಕಾಕ್ಟೇಲ್’ ಚಿತ್ರದ ಬಹುನಿರೀಕ್ಷಿತ ಸೀಕ್ವೆಲ್ ಆಗಿರುವ ‘ಕಾಕ್ಟೇಲ್ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಅವರ ಜೊತೆ ಶಾಹಿದ್ ಕಪೂರ್, ಕೃತಿ ಸನನ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದ ಹೊಸ ಫೋಟೋಗಳು ಗಮನ ಸೆಳೆಯುತ್ತಿವೆ. ಫೋಟೋ ಗ್ಯಾಲರಿ ಇಲ್ಲಿದೆ..
- Madan Kumar
- Updated on: Apr 7, 2026
- 5:40 pm
ಮದುವೆ ಬಳಿಕ ಮೊದಲ ಬಾರಿ ತವರಿಗೆ ಬಂದ ರಶ್ಮಿಕಾ: ಮಗಳಿಗೆ ಬಂಗಲೆ ಗಿಫ್ಟ್ ಕೊಟ್ಟ ತಂದೆ
ನಟಿ ರಶ್ಮಿಕಾ ಮಂದಣ್ಣ ಅವರು ಪತಿ ವಿಜಯ್ ದೇವರಕೊಂಡ ಜೊತೆ ಕೊಡಗಿಗೆ ಬಂದಿದ್ದಾರೆ. ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಗಳಿಗೆ ತಂದೆ ಮದನ್ ಮಂದಣ್ಣ ಅವರು ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ರಶ್ಮಿಕಾ ಪೋಷಕರಿಂದ ಕುಟುಂಬದ ಸದಸ್ಯರು ಮತ್ತು ಸ್ನೇಹಿತರಿಗೆ ಔತಣಕೂಟ ಏರ್ಪಡಿಸಲಾಗಿದೆ.
- Gopal AS
- Updated on: Apr 6, 2026
- 8:28 pm
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ರಣಬಾಲಿ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಶ್ಮಿಕಾ ಜನ್ಮದಿನಕ್ಕೆ ಈ ಸಿನಿಮಾದ ಮೇಕಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ.
- Madan Kumar
- Updated on: Apr 5, 2026
- 2:08 pm
ಅಪರೂಪದ ಅಂತಾರಾಷ್ಟ್ರೀಯ ಸಾಧನೆ ಮಾಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ, ರಾಷ್ಟ್ರೀಯ ಕ್ರಶ್, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರು ಕ್ರಂಚೈರೋಲ್ ಅನಿಮೆ ಪ್ರಶಸ್ತಿ ಸಮಾರಂಭಕ್ಕೆ ಎರಡನೇ ಬಾರಿ ಆಹ್ವಾನ ಪಡೆದ ಮೊದಲ ಭಾರತೀಯ ಸೆಲೆಬ್ರಿಟಿ. ಜಪಾನ್ನಲ್ಲಿ ನಡೆಯುವ ಈ ಪ್ರತಿಷ್ಠಿತ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪುಷ್ಪ ಚಿತ್ರದ ಮೂಲಕ ಜಪಾನ್ನಲ್ಲಿ ಭಾರಿ ಜನಪ್ರಿಯತೆ ಗಳಿಸಿದ ರಶ್ಮಿಕಾ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆಯಾಗಿದ್ದಾರೆ.
- Shreelaxmi H
- Updated on: Apr 4, 2026
- 11:27 am
‘ಈಗ ನಾವು ಮೂವರು’; ಮದುವೆ ಆದ ಒಂದೇ ತಿಂಗಳಿಗೆ ಸಿಹಿ ಸುದ್ದಿ ಕೊಟ್ರಾ ರಶ್ಮಿಕಾ?
ರಶ್ಮಿಕಾ ಮಂದಣ್ಣ ಇನ್ಸ್ಟಾಗ್ರಾಮ್ನಲ್ಲಿ "ಈಗ ನಾವು ಮೂವರು" ಎಂಬ ಪೋಸ್ಟ್ನಿಂದ ಸುದ್ದಿಯಾಗಿದ್ದಾರೆ. ವಿಜಯ್ ದೇವರಕೊಂಡ ಜೊತೆಗಿನ ವೈರಲ್ ಗ್ರಾಫಿಕ್ ವಿಡಿಯೋ, ಪ್ರೆಗ್ನೆನ್ಸಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಈ ನಿಗೂಢ ಪೋಸ್ಟ್ ಅಭಿಮಾನಿಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದು ವೈಯಕ್ತಿಕ ಸುದ್ದಿಯೋ ಅಥವಾ ಹೊಸ ಸಿನಿಮಾದ ಪ್ರಚಾರದ ಭಾಗವೋ ಎಂಬ ಕುತೂಹಲ ಮೂಡಿಸಿದೆ.
- Shreelaxmi H
- Updated on: Apr 4, 2026
- 10:21 am
ಸಿಂಪಲ್ ಸುನಿ ನಿರ್ದೇಶನದ ಹೊಸ ಸಿನಿಮಾಗೆ ಶುಭ ಕೋರಿದ ರಶ್ಮಿಕಾ ಮಂದಣ್ಣ
‘ಮೋಡ ಕವಿದ ವಾತಾವರಣ’ ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರು ಶುಭ ಹಾರೈಸಿದ್ದಾರೆ. ಸಿಂಪಲ್ ಸುನಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಶೀಲಮ್, ಮೋಕ್ಷಾ ಕುಶಾಲ್, ಸಾತ್ವಿಕಾ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಜೂನ್ 26ಕ್ಕೆ ಈ ಸಿನಿಮಾ ತೆರೆಕಾಣಲಿದೆ.
- Madan Kumar
- Updated on: Apr 3, 2026
- 10:52 pm