Rashmika Mandanna

Rashmika Mandanna

ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.

ಇನ್ನೂ ಹೆಚ್ಚು ಓದಿ

700 ಬ್ಯಾಕ್​ಗ್ರೌಂಡ್ ಡಾನ್ಸರ್​ಗಳ ಜೊತೆ ನೃತ್ಯ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ

ಡ್ಯಾನ್ಸ್​ ಮಾಡುವಾಗ ಸಾಮನ್ಯವಾಗಿ ಬ್ಯಾಕ್​ಗ್ರೌಂಡ್​ನಲ್ಲಿ ಡ್ಯಾನ್ಸರ್​ಗಳು ಇರುತ್ತಾರೆ. ಈ ವೇಳೆ 50-100 ಮಂದಿ ಕಾಣಿಸಿಕೊಳ್ಳೋದು ಸಾಮಾನ್ಯ. ಆದರೆ, ಬರೋಬ್ಬರಿ 700 ಮಂದಿ ಕಾಣಿಸಿಕೊಂಡರೆ? ಹೀಗೊಂದು ಅಪರೂಪದ ಘಟನೆಗೆ ‘ಛವ್ವಾ’ ಸಿನಿಮಾ ಸಾಕ್ಷಿ ಆಗಲಿದೆ.

ಅಲ್ಲು ಅರ್ಜುನ್-ರಶ್ಮಿಕಾ ರೀತಿ ಡ್ರೆಸ್ ಮಾಡಿಕೊಂಡು ರಸ್ತೆಯಲ್ಲಿ ಮಕ್ಕಳ ಡ್ಯಾನ್ಸ್

ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್​ ಅವರು ಈ ವಿಡಿಯೋ ನೋಡಿದರೆ ಖಂಡಿತವಾಗಿಯೂ ಖುಷಿಪಡುತ್ತಾರೆ. ಅಲ್ಲದೇ ಅವರು ಪ್ರತಿಕ್ರಿಯೆ ಕೂಡ ನೀಡುತ್ತಾರೆ. ಅಷ್ಟರಮಟ್ಟಿಗೆ ಈ ಮಕ್ಕಳ ಡ್ಯಾನ್ಸ್​ ಮುದ್ದಾಗಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ‘ಸೂಸೇಕಿ..’ ಹಾಡಿನ ಹಿಂದಿ ವರ್ಷನ್​ಗೆ ಮಕ್ಕಳಿಬ್ಬರು ಸಖತ್​ ಆಗಿ ಡ್ಯಾನ್ಸ್​ ಮಾಡಿದ ವಿಡಿಯೋ ವೈರಲ್​ ಆಗುತ್ತಿದೆ.

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್​ ರೀತಿಯಲ್ಲಿ ಗಣಪನ ಮೂರ್ತಿ ಕೂರಿಸಿದ ಅಭಿಮಾನಿಗಳು

‘ಪುಷ್ಪ 2’ ಸಿನಿಮಾ ಎಷ್ಟು ಹೈಪ್​ ಸೃಷ್ಟಿ ಮಾಡಿದೆ ಎಂಬುದಕ್ಕೆ ಇದೇ ಸಾಕ್ಷಿ. ಗಣೇಶ ಚತುರ್ಥಿ ಆಚರಣೆಯಲ್ಲೂ ಅಭಿಮಾನಿಗಳು ಈ ಸಿನಿಮಾದ ಥೀಮ್​ ಬಳಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ಅಲ್ಲು ಅರ್ಜುನ್​ ಅವರ ಗೆಟಪ್​ ರೀತಿಯಲ್ಲಿ ಗಣಪನ ಮೂರ್ತಿ ಕೂರಿಸಿ ಪೂಜೆ ಮಾಡಲಾಗಿದೆ. ಈ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.

ರಶ್ಮಿಕಾ ಮಂದಣ್ಣಗೆ ಅಪಘಾತ; ಕ್ಷಣಿಕ ಜೀವನದ ಬಗ್ಗೆ ಮಾತನಾಡಿದ ‘ಪುಷ್ಪ 2’ ನಟಿ

ನಟಿ ರಶ್ಮಿಕಾ ಮಂದಣ್ಣ ಅವರು ಒಂದು ಶಾಕಿಂಗ್ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಅವರಿಗೆ ಅಪಘಾತ ಆಗಿತ್ತು. ಇಷ್ಟು ದಿನ ಗೌಪ್ಯವಾಗಿದ್ದ ವಿಷಯವನ್ನು ಅವರು ಈಗ ಬಹಿರಂಗಪಡಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿರುವ ಅವರಿಗೆ ಈ ಜೀವನ ಕ್ಷಣಿಕ ಎಂಬುದು ಅರಿವಾಗಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಮಹೇಶ್ ಬಾಬು ಮಗಳ ಇಷ್ಟದ ನಟಿ ಕನ್ನಡದವರು ಅನ್ನೋದು ಗೊತ್ತಾ?

ಮಹೇಶ್ ಬಾಬು ಅವರ ಮಗಳು ಸಿತಾರಾ ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಅವರು ಇತ್ತೀಚೆಗೆ ಸಂದರ್ಶನ ಒಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ಅವರು ಕನ್ನಡದ ನಟಿಯೊಬ್ಬರ ಬಗ್ಗೆ ಮಾತನಾಡಿದ್ದಾರೆ.

ಒಂದೇ ದಿನ ರಿಲೀಸ್ ಆಗಲಿವೆ ರಶ್ಮಿಕಾ ಮಂದಣ್ಣ ನಟನೆಯ 2 ಬಹುನಿರೀಕ್ಷಿತ ಸಿನಿಮಾಗಳು

ರಶ್ಮಿಕಾ ಮಂದಣ್ಣ ಅವರು ನಟಿಸಿರುವ ಬಾಲಿವುಡ್​ನ ‘ಛಾವ’ ಸಿನಿಮಾ ಡಿಸೆಂಬರ್​ 6ರಂದು ರಿಲೀಸ್​ ಆಗಲಿದೆ. ಅದೇ ದಿನ ‘ಪುಷ್ಪ 2’ ಸಿನಿಮಾ ಕೂಡ ತೆರೆಕಾಣಲಿದೆ ಎಂಬುದು ವಿಶೇಷ. ಈ ಎರಡೂ ಸಿನಿಮಾಗಳು ಬೇರೆ ಬೇರೆ ಕಾರಣದಿಂದ ನಿರೀಕ್ಷೆ ಸೃಷ್ಟಿ ಮಾಡಿವೆ. ‘ಛಾವ’ ಸಿನಿಮಾದ ಟೀಸರ್​ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ. ಈ ಚಿತ್ರಕ್ಕೆ ವಿಕ್ಕಿ ಕೌಶಲ್​ ಹೀರೋ.

‘ಕಿರಿಕ್ ಪಾರ್ಟಿ’ಗಿಂತ ಮೊದಲು ರಶ್ಮಿಕಾ ಎಷ್ಟು ಬಾರಿ ರಿಜೆಕ್ಟ್ ಆಗಿದ್ದರು ಗೊತ್ತಾ?

ಪ್ರತಿ ಯಶಸ್ಸಿನ ಹಿಂದೆ ಸಾಕಷ್ಟು ಶ್ರಮ ಇರುತ್ತದೆ. ರಶ್ಮಿಕಾ ಇಂದು ಸ್ಟಾರ್ ಹೀರೋಯಿನ್ ಆಗಿ ಮಿಂಚುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೂಡ ಆರಂಭದಲ್ಲಿ ಸಾಕಷ್ಟು ಕಷ್ಟ ಅನುಭವಿಸಿ ಬಂದಿದ್ದಾರೆ. ಆ ಬಗ್ಗೆ ಅವರು ಹೇಳಿಕೊಂಡಿದ್ದಾರೆ. ಅವರು 20-25 ಆಡಿಷನ್​ಗಳಲ್ಲಿ ರಿಜೆಕ್ಟ್ ಆಗಿದ್ದಾರಂತೆ.  

ಮರಾಠಿ ಭಾಷೆ ಕಲಿತ ನಟಿ ರಶ್ಮಿಕಾ ಮಂದಣ್ಣ; ಕಾರಣ ಏನು ಗೊತ್ತಾ?

ಕೊಡಗಿನ ಸುಂದರಿ ರಶ್ಮಿಕಾ ಮಂದಣ್ಣ ಅವರು ಭಾಷೆಗಳ ಗಡಿ ಮೀರಿ ಬೆಳೆಯುತ್ತಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಪಾತ್ರಕ್ಕೆ ತಕ್ಕಂತೆ ಭಾಷೆಗಳನ್ನು ಅವರು ಕಲಿಯುತ್ತಿದ್ದಾರೆ. ಮರಾಠಿ ಭಾಷೆ ಕಲಿಯಲು ರಶ್ಮಿಕಾ ಮಂದಣ್ಣ ಅವರು 4 ವಾರಗಳ ತರಬೇತಿ ಪಡೆದಿದ್ದಾರೆ ಎನ್ನಲಾಗಿದೆ. ಅವರ ಜೊತೆ ವಿಕ್ಕಿ ಕೌಶಲ್​ ಅವರು ಕೂಡ ಮರಾಠಿ ಕಲಿಕೆಯಲ್ಲಿ ನಿರತರಾಗಿದ್ದಾರೆ.

ಖಡಕ್ ಲುಕ್​ನಲ್ಲಿ ಬಂದ ವಿಜಯ್ ದೇವರಕೊಂಡ; ಫಸ್ಟ್​ ಲುಕ್​​ಗೆ ರಶ್ಮಿಕಾ ಕೂಡ ಫಿದಾ

ವಿಜಯ್ ದೇವರಕೊಂಡ ಅವರು ಬಿಗ್ ಬಜೆಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದು ತುಂಬಾನೇ ಕಡಿಮೆ. ಅವರು ಈ ಮೊದಲು ಬಿಗ್ ಬಜೆಟ್ ಸಿನಿಮಾ ‘ಲೈಗರ್’ನಲ್ಲಿ ನಟಿಸಿದ್ದರು. ಆದರೆ, ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿಲ್ಲ. ಈಗ ಅವರ ‘VD 12’ ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ.

ವಯನಾಡ್​ ದುರಂತ: ಸೂರ್ಯ ಫ್ಯಾಮಿಲಿ 50 ಲಕ್ಷ ರೂ. ದೇಣಿಗೆ; ಬೇರೆ ಕಲಾವಿದರು ನೀಡಿದ್ದೆಷ್ಟು?

ಕೇರಳದ ವಯನಾಡಿನಲ್ಲಿ ಭೂಕುಸಿತಕ್ಕೆ ಸಿಲುಕಿದ ಸಂತ್ರಸ್ತರಿಗೆ ಅನೇಕ ಸೆಲೆಬ್ರಿಟಿಗಳು ನೆರವಾಗಿದ್ದಾರೆ. ಸೂರ್ಯ, ಜ್ಯೋತಿಕಾ, ಕಾರ್ತಿ, ಮಮ್ಮುಟಿ, ವಿಕ್ರಮ್​, ಫಹಾದ್​ ಫಾಸಿಲ್​, ದುಲ್ಖರ್​ ಸಲ್ಮಾನ್​, ರಶ್ಮಿಕಾ ಮಂದಣ್ಣ ಮುಂತಾದವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಲಕ್ಷಾಂತರ ರೂಪಾಯಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಯಾರು, ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ವಿವರ ಇಲ್ಲಿದೆ..

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ