AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna

Rashmika Mandanna

ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.

ಇನ್ನೂ ಹೆಚ್ಚು ಓದಿ

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ.

  • Gopal AS
  • Updated on: Jan 6, 2026
  • 7:28 pm

ಮದುವೆಗೂ ಮುನ್ನ ವಿದೇಶದಲ್ಲಿ ಕಾಲ ಕಳೆದು ಬಂದ ರಶ್ಮಿಕಾ, ವಿಜಯ್ ದೇವರಕೊಂಡ

ಹಲವು ವರ್ಷಗಳಿಂದ ಆಪ್ತವಾಗಿರುವ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ಆಗಲಿದ್ದಾರೆ. ಮದುವೆಗೂ ಮುನ್ನ ಅವರು ವಿದೇಶಕ್ಕೆ ತೆರಳಿ ಒಟ್ಟಿಗೆ ಕಾಲ ಕಳೆದಿದ್ದಾರೆ. ಈಗ ಭಾರತಕ್ಕೆ ವಾಪಸ್ ಬಂದಿದ್ದಾರೆ. ಫೆಬ್ರವರಿ ತಿಂಗಳಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಹಸೆಮಣೆ ಏರಲಿದ್ದಾರೆ.

ರೋಮ್​​​ನಲ್ಲಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ರೊಮ್ಯಾನ್ಸ್

ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ವಿದೇಶದಲ್ಲಿ ಇದ್ದಾರೆ. ಹೊಸ ವರ್ಷದ ಆಚರಣೆಗೆ ಅವರು ರೋಮ್​​ಗೆ ತೆರಳಿದ್ದಾರೆ. ಅವರ ಜೊತೆ ಗೆಳೆಯರಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವಿಜಯ್ ದೇವರಕೊಂಡ ಕೂಡ ಇದ್ದರು. ಮದುವೆಗೂ ಮೊದಲು ತೆರಳಿದ ಟ್ರಿಪ್ ಇದಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

‘ಮೈಸಾ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದ್ದು, ಕಥೆಯ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಹೆಚ್ಚುವಂತಾಗಿದೆ. ಪ್ರಸ್ತುತ ತೆಲಂಗಾಣ ಹಾಗೂ ಕೇರಳದ ಅರಣ್ಯ ಪ್ರದೇಶಗಳಲ್ಲಿ ‘ಮೈಸಾ’ ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ.

ಸಮಂತಾ ಬಳಿಕ ಮದುವೆಗೆ ರೆಡಿ ಆದ ದಕ್ಷಿಣದ ಮತ್ತೋರ್ವ ಸ್ಟಾರ್ ನಟಿ

ನಟಿ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ಅವರನ್ನು ವರಿಸಿದ್ದಾರೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಮಂತಾ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈಗ ದಕ್ಷಿಣದಲ್ಲಿ ಸೆಲೆಬ್ರಿಟಿ ಜೋಡಿ ಮದುವೆಗೆ ರೆಡಿ ಆಗಿದೆ. ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ಇವರ ವಿವಾಹ ನಡೆಯಲಿದೆ ಎನ್ನಲಾಗಿದೆ. ಇತ್ತೀಚೆಗೆ ಇವರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

ರಶ್ಮಿಕಾ ನಟನೆಯ ‘ದಿ ಗರ್ಲ್​ಫ್ರೆಂಡ್’ ಒಟಿಟಿ ರಿಲೀಸ್ ದಿನಾಂಕ ಘೋಷಣೆ

ರಾಷ್ಟ್ರೀಯ ಕ್ರಶ್ ರಶ್ಮಿಕಾ ಮಂದಣ್ಣ ನಟನೆಯ 'ದಿ ಗರ್ಲ್‌ಫ್ರೆಂಡ್' ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರ ಈಗ ಒಟಿಟಿಗೆ ಬರುತ್ತಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಈ ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಿರಲಿದೆ. ರಾಹುಲ್ ರವೀಂದ್ರನ್ ನಿರ್ದೇಶನದ ಈ ಮಹಿಳಾ ಪ್ರಧಾನ ಸಿನಿಮಾ ಟಾಕ್ಸಿಕ್ ಸಂಬಂಧಗಳ ಕುರಿತಾಗಿತ್ತು.

Rashmika Mandanna: ಸಾಲುಮರದ ತಿಮ್ಮಕ್ಕ ಬಗ್ಗೆ ಮಾತಾಡಲು ಒದ್ದಾಡಿದ್ದ ರಶ್ಮಿಕಾ; ನಂತರ ಆಗಿದ್ದೇನು?

Saalumarada Thimmakka: ಪರಿಸರಕ್ಕೆ ಗಣನೀಯ ಕೊಡುಗೆ ನೀಡಿದ ಸಾಲು ಮರದ ತಿಮ್ಮಕ್ಕ 114ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಸಿ ನೆಡುವ ಕಾರ್ಯಕ್ಕೆ ಅನೇಕ ವೇದಿಕೆಗಳಲ್ಲಿ ಗೌರವ ಸಂದಿತ್ತು. ಜೆಎಫ್‌ಡಬ್ಲ್ಯೂ ಪ್ರಶಸ್ತಿ ಸಮಾರಂಭದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ತಿಮ್ಮಕ್ಕರ ಬಗ್ಗೆ ಅರಿವಿಲ್ಲದಿದ್ದಾಗ, ಪರಭಾಷಾ ನಟ ವಿವೇಕ್ ಅವರು ತಿಮ್ಮಕ್ಕರ ಸಾಧನೆಯನ್ನು ಕೊಂಡಾಡಿದ್ದರು.

Rashmika Mandanna: ಟಾಕ್ಸಿಕ್ ಸಂಬಂಧದಲ್ಲಿ ಇದ್ದೆ ಎಂದ ರಶ್ಮಿಕಾ; ಸುಳ್ಳು ಎನ್ನಲು ಸಾಕ್ಷಿ ಸಮೇತ ಬಂದ ರಕ್ಷಿತ್ ಫ್ಯಾನ್ಸ್

Rakshith Shetty - Rashmika Mandanna Relationship: ರಶ್ಮಿಕಾ ಮಂದಣ್ಣ ತಮ್ಮ ಹಳೆಯ ಸಂಬಂಧವನ್ನು 'ಟಾಕ್ಸಿಕ್' ಎಂದು ಪರೋಕ್ಷವಾಗಿ ಹೇಳಿ, ರಕ್ಷಿತ್ ಶೆಟ್ಟಿ ಅಭಿಮಾನಿಗಳಲ್ಲಿ ಆಕ್ರೋಶ ಮೂಡಿಸಿದ್ದಾರೆ. 'ಗರ್ಲ್​ಫ್ರೆಂಡ್' ಸಿನಿಮಾ ಈವೆಂಟ್‌ನಲ್ಲಿ ರಶ್ಮಿಕಾ ಈ ಬಗ್ಗೆ ಮಾತನಾಡಿದ್ದು, ತಮ್ಮ ವೈಯಕ್ತಿಕ ನೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ರಕ್ಷಿತ್ ಬ್ರೇಕಪ್ ಕುರಿತು ಪ್ರಬುದ್ಧವಾಗಿ ಮಾತನಾಡಿದ ಹಳೆಯ ವಿಡಿಯೋಗಳನ್ನು ಅಭಿಮಾನಿಗಳು ಹಂಚಿಕೊಂಡಿದ್ದಾರೆ. 

ಎಲ್ಲರ ಎದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಟ್ಟ ವಿಜಯ್ ದೇವರಕೊಂಡ; ವಿಡಿಯೋ ನೋಡಿ

ನಟಿ ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್‌ಫ್ರೆಂಡ್' ಸಕ್ಸಸ್ ಮೀಟ್‌ನಲ್ಲಿ ವಿಜಯ್ ದೇವರಕೊಂಡ ಎಲ್ಲರೆದುರೇ ಅವರ ಕೈಗೆ ಮುತ್ತಿಟ್ಟ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ವಿಜಯ್-ರಶ್ಮಿಕಾ ನಿಶ್ಚಿತಾರ್ಥದ ಸುದ್ದಿಗಳಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಇವರಿಬ್ಬರ ಸಂಬಂಧ ಬಹುತೇಕ ಖಚಿತ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಮದುವೆ ಬಗ್ಗೆ ಸುದ್ದಿಗೋಷ್ಠಿ ನಡೆಸಲಿರುವ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್​ಫ್ರೆಂಡ್’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ವಿಜಯ್ ದೇವರಕೊಂಡ ಭಾಗಿ ಆಗಲಿದ್ದಾರೆ. ನಿಶ್ಚಿತಾರ್ಥದ ಗಾಸಿಪ್ ಹಬ್ಬಿದ ನಂತರ ಅವರಿಬ್ಬರು ಇದೇ ಮೊದಲ ಬಾರಿಗೆ ಮಾಧ್ಯಮಗಳ ಎದುರು ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ನಿಶ್ಚಿತಾರ್ಥದ ಬಗ್ಗೆ ಪ್ರಶ್ನೆ ಎದುರಾಗುವುದು ಖಚಿತ. ಹಾಗಾಗಿ ಈ ಸುದ್ದಿಗೋಷ್ಠಿ ಬಗ್ಗೆ ಭಾರಿ ನಿರೀಕ್ಷೆ ಮೂಡಿದೆ.

ರಶ್ಮಿಕಾ ಜೊತೆ ಸಿನಿಮಾ ಮಾಡಿ ಕೋಟಿ ಕೋಟಿ ಕೈ ಸುಟ್ಟುಕೊಂಡ ನಿರ್ಮಾಪಕ?

ರಶ್ಮಿಕಾ ಮಂದಣ್ಣ ಅವರ 'ದಿ ಗರ್ಲ್ ಫ್ರೆಂಡ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷೆ ಹುಸಿ ಮಾಡಿದೆ. 40 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರ ಕೇವಲ 7 ಕೋಟಿ ರೂ. ಕಲೆಕ್ಷನ್ ಮಾಡಿದೆ. ಮೊದಲ ಬಾರಿಗೆ ದೊಡ್ಡ ಹೀರೋ ಇಲ್ಲದೆ ನಟಿಸಿರುವ ರಶ್ಮಿಕಾ ಅವರಿಗೆ ಇದು ದೊಡ್ಡ ಸವಾಲಾಗಿದೆ. ಈ ಚಿತ್ರ ನಿರ್ಮಾಪಕರಿಗೆ ಭಾರೀ ನಷ್ಟ ತರುವ ಭೀತಿ ಮೂಡಿಸಿದೆ.

‘ಗಂಡುಮಕ್ಕಳಿಗೂ ಋತುಚಕ್ರದ ನೋವು ಗೊತ್ತಾಗಬೇಕು’; ರಶ್ಮಿಕಾ ಹೇಳಿಕೆಗೆ ತೀವ್ರ ವಿರೋಧ

ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಜೀ ತೆಲುಗಿನ ಶೋನಲ್ಲಿ ಭಾಗಿ ಆದರು. ಈ ಶೋನ ತೆಲುಗಿನಲ್ಲಿ ವಿಲನ್ ಪಾತ್ರಗಳನ್ನು ಮಾಡುವ ಜಗಪತಿ ಬಾಬು ನಡೆಸಿಕೊಟ್ಟಿದ್ದಾರೆ. ಯಾವುದೋ ವಿಷಯ ಮಾತನಾಡುವಾಗ ‘ಗಂಡುಮಕ್ಕಳಿಗೂ ಪೀರಿಯಡ್ಸ್ ಆಗಿದ್ರೆ ಚೆನ್ನಾಗಿರುತ್ತಿತ್ತು ಎಂದು ಅನಿಸಿದೆಯೇ’ ಎಂದು ಜಗಪತಿ ಬಾಬು ಅವರು ರಶ್ಮಿಕಾಗೆ ಕೇಳಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್