AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna

Rashmika Mandanna

ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.

ಇನ್ನೂ ಹೆಚ್ಚು ಓದಿ

‘ಯಶ್ ಮಿಸ್ಟರ್ ಶೋಆಫ್’ ಎಂದಿದ್ದ ರಶ್ಮಿಕಾಗೆ ಈಗ ಪ್ರತಿಕ್ರಿಯೆ ನೀಡಿದ ರಾಕಿ ಭಾಯ್

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣ ಆಗಿತ್ತು. ಯಶ್ ಅವರನ್ನು ಮಿಸ್ಟರ್ ಶೋ ಆಫ್ ಎಂದು ರಶ್ಮಿಕಾ ಕರೆದಿದ್ದರು. ಅದಕ್ಕೆ ಯಶ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆ ಬಗ್ಗೆ ಇಷ್ಟು ವರ್ಷಗಳ ಬಳಿಕ ಯಶ್ ಅವರು ಮೌನ ಮುರಿದಿದ್ದಾರೆ.

ಒಟಿಟಿಗೆ ಬಂತು ರಶ್ಮಿಕಾ, ಶಾಹಿದ್ ಕಪೂರ್, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ

ಹಾಡುಗಳ ಮೂಲಕ ಸದ್ದು ಮಾಡಿದ್ದ ‘ಕಾಕ್‌ಟೇಲ್ 2’ ಸಿನಿಮಾ ಈಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನನ್, ಶಾಹಿದ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಚಿತ್ರಮಂದಿರದಲ್ಲಿ ‘ಕಾಕ್‌ಟೇಲ್ 2’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ

ತೀವ್ರ ಗಾಯದ ನಡುವೆಯೂ ನಟಿ ರಶ್ಮಿಕಾ ಮಂದಣ್ಣ ತಮ್ಮ ಬಹುನಿರೀಕ್ಷಿತ 'ರಣಬಲಿ' ಚಿತ್ರದ ಶೂಟಿಂಗ್‌ಗೆ ಮರಳಲು ಸಿದ್ಧರಾಗಿದ್ದಾರೆ. ವೈದ್ಯರ ಸಲಹೆಯಂತೆ ಚೇತರಿಸಿಕೊಳ್ಳುತ್ತಿರುವ ಅವರು, ಅಕ್ಟೋಬರ್ 30 ರಂದು ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ತಮ್ಮ ಭಾಗದ ಚಿತ್ರೀಕರಣವನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ.

ಆರೋಗ್ಯದ ಬಗ್ಗೆ ಹೊಸ ಅಪ್​​​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

ಗಾಯದಿಂದಾಗಿ ವಿಶ್ರಾಂತಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ತಮ್ಮ ಆರೋಗ್ಯದ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ. ಬಿಡುವಿನ ವೇಳೆಯಲ್ಲಿ ಮದುವೆಯ ಫೋಟೋಗಳನ್ನು ನೋಡುತ್ತಾ, ವಿಶ್ರಾಂತಿ ಪಡೆಯುತ್ತಿರುವ ದಿನಚರಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು, ಸದ್ಯವೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ. ವೈದ್ಯರು ಆರು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಸೊಂಟಕ್ಕೆ ಪೆಟ್ಟಾಗಿದ್ದು ಹೇಗೆ? ಎಲ್ಲವನ್ನೂ ವಿವರಿಸಿದ ನಟಿ

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಿಂದ ದೂರವಿದ್ದ ನಟಿ ರಶ್ಮಿಕಾ ಮಂದಣ್ಣ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಯಿಗಳೊಂದಿಗೆ ಕಾಲ ಕಳೆಯುತ್ತ, ಆಪ್ತರಿಂದ ಉಡುಗೊರೆಗಳನ್ನು ಸ್ವೀಕರಿಸುತ್ತಾ ಕಾಲ ಕಳೆಯುತ್ತಿದ್ದಾರೆ. ತಮಗೆ ಎದುರಾಗಿರುವ ಆರೋಗ್ಯದ ಸಮಸ್ಯೆ ಬಗ್ಗೆ ಅವರು ಈ ಮೂಲಕ ಮಾಹಿತಿ ನೀಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ: ಮುಂದಿನ 6 ವಾರಗಳ ಕಾಲ ವಿಶ್ರಾಂತಿ ಅಗತ್ಯ

Rashmika Mandanna Injury: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ. ಕಠಿಣವಾದ ಸಾಹಸ ದೃಶ್ಯಗಳಲ್ಲಿ ಮತ್ತು ಡ್ಯಾನ್ಸ್ ಚಿತ್ರೀಕರಣದಲ್ಲಿ ಸತತವಾಗಿ ಭಾಗಿಯಾಗಿದ್ದರಿಂದ ಅವರಿಗೆ ಗಾಯ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ತಪಾಸಣೆ ಮಾಡಿರುವ ವೈದ್ಯರು ಆರು ವಾರಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

‘ಮೈಸಾ’ ಚಿತ್ರಕ್ಕಾಗಿ ನೀರಿನಾಳದೊಳಗೆ ಇಳಿದು ಫೈಟ್ ಮಾಡಿದ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ 'ಮೈಸಾ' ಚಿತ್ರದ ಮೂಲಕ ಮಹಿಳಾ ಪ್ರಧಾನ ಸಿನಿಮಾ ರಂಗಕ್ಕೆ ಅದ್ಧೂರಿಯಾಗಿ ಕಾಲಿಟ್ಟಿದ್ದಾರೆ. ಇದು ಭಾರತೀಯ ಚಿತ್ರರಂಗದಲ್ಲೇ ಮೊದಲ ಬಾರಿಗೆ, ನಾಯಕಿಯೇ ಸ್ವತಃ ಬಾಡಿ ಡಬಲ್ ಇಲ್ಲದೆ ಅಂಡರ್ ವಾಟರ್ ಫೈಟಿಂಗ್ ಮಾಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಈ ಕಠಿಣ ಸಾಹಸಕ್ಕಾಗಿ ಸತತ 20 ಗಂಟೆಗಳ ಕಾಲ ನೀರಿನಲ್ಲಿದ್ದ ರಶ್ಮಿಕಾ, ಇದು ತಮ್ಮ ವೃತ್ತಿಜೀವನದ ಅತ್ಯಂತ ದೊಡ್ಡ ಸವಾಲು ಎಂದಿದ್ದಾರೆ. ಇದು ಹೊಸ ದಾಖಲೆ ಬರೆಯುವುದು ಖಚಿತ.

ಮತ್ತೆ ಒಂದಾಗಲಿದ್ದಾರೆ ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ; ಶೀಘ್ರವೇ ಮುಂಬೈನಲ್ಲಿ ‘ರಾಕಾ’ ಶೂಟಿಂಗ್ ಆರಂಭ

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ 'ರಾಕಾ' ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ಅಟ್ಲಿ ನಿರ್ದೇಶನದ ಈ 700 ಕೋಟಿ ಬೃಹತ್ ಬಜೆಟ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ಮೃಣಾಲ್ ಠಾಕೂರ್, ಜಾನ್ವಿ ಕಪೂರ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. 2027ರಲ್ಲಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

‘ಎಲ್ಲರೂ ರಶ್ಮಿಕಾ ಮಂದಣ್ಣ ಆಗಲು ಸಾಧ್ಯವಿಲ್ಲ’; ಹಾಡಿ ಹೊಗಳಿದ ನಟಿ ಐಶ್ವರ್ಯಾ ಲಕ್ಷ್ಮಿ

ನಟಿ ಐಶ್ವರ್ಯಾ ಲಕ್ಷ್ಮಿ, ರಶ್ಮಿಕಾ ಮಂದಣ್ಣ ಅವರ ಅದ್ಭುತ ಬೆಳವಣಿಗೆಯನ್ನು ಹಾಡಿ ಹೊಗಳಿದ್ದಾರೆ. ರಶ್ಮಿಕಾ ಯಶಸ್ಸು ಕೇವಲ ಅದೃಷ್ಟವಲ್ಲ, ಅದು ಅವರ ಅಪಾರ ಪರಿಶ್ರಮ ಮತ್ತು ವಿಶಿಷ್ಟ ಪ್ರತಿಭೆಯ ಫಲ ಎಂದಿದ್ದಾರೆ. ಅವರ ಎನರ್ಜಿಟಿಕ್ ನಟನೆ, ನೃತ್ಯ ಸಾಮರ್ಥ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ‘ಎಲ್ಲರೂ ರಶ್ಮಿಕಾ ಆಗಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಇದು ರಶ್ಮಿಕಾ ಕಠಿಣ ಪರಿಶ್ರಮಕ್ಕೆ ಸಿಕ್ಕ ದೊಡ್ಡ ಮನ್ನಣೆ.

‘ಕಾಕ್​​ಟೇಲ್ 2’ ಚಿತ್ರದಲ್ಲಿ ರಶ್ಮಿಕಾ ಮೂಲೆಗುಂಪು​; ಹಿಂದಿ ಉಚ್ಚಾರಣೆ ಬಗ್ಗೆಯೂ ಟೀಕೆ

ಬಾಲಿವುಡ್‌ನ ಬಹುನಿರೀಕ್ಷಿತ 'ಕಾಕ್‌ಟೇಲ್ 2' ಸಿನಿಮಾ ಅದ್ದೂರಿಯಾಗಿ ಬಿಡುಗಡೆಯಾಗಿ ಭರ್ಜರಿ ಪ್ರತಿಕ್ರಿಯೆ ಪಡೆದಿದೆ. ತರಣ್ ಆದರ್ಶ್ ರಶ್ಮಿಕಾ ಮಂದಣ್ಣ ಅವರ ಹಿಂದಿ ಡೈಲಾಗ್ ಡೆಲಿವರಿ ಸುಧಾರಣೆಗೆ ಸಲಹೆ ನೀಡಿದ್ದು, ಇದು ಚರ್ಚೆಗೆ ಕಾರಣವಾಗಿದೆ. ಆದ್ರೆ, ಕೃತಿ ಸನೋನ್ ಮತ್ತು ಶಾಹಿದ್ ಕಪೂರ್ ತಮ್ಮ ನಟನೆಗೆ ಮೆಚ್ಚುಗೆ ಪಡೆದಿದ್ದಾರೆ. ಈ ರೋಮ್ಯಾಂಟಿಕ್ ಡ್ರಾಮಾ ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಾಣುವ ನಿರೀಕ್ಷೆಯಿದೆ.

ರಶ್ಮಿಕಾ-ವಿಜಯ್ ಚಿತ್ರಕ್ಕೆ ವಿಲನ್ ಆದ ಹಾಲಿವುಡ್​ನ ‘ದಿ ಮಮ್ಮಿ’ ಚಿತ್ರದ ಖಳ

ನಟ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ 'ರಣಬಾಲಿ' ಚಿತ್ರದಲ್ಲಿ ಮತ್ತೆ ಒಂದಾಗುತ್ತಿದ್ದಾರೆ. ವಿಶೇಷವೆಂದರೆ, 'ದಿ ಮಮ್ಮಿ' ಖ್ಯಾತಿಯ ಹಾಲಿವುಡ್ ನಟ ಅರ್ನಾಲ್ಡ್ ವೋಸ್ಲೂ ಪವರ್‌ಫುಲ್ ವಿಲನ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಬೃಹತ್ ಕಾಸ್ಟಿಂಗ್ ಅನ್ನು ಅನಾವರಣಗೊಳಿಸಿದೆ. ಸರ್ ಥಿಯೋಡರ್ ಹೆಕ್ಟರ್ ಪಾತ್ರದಲ್ಲಿ ಅರ್ನಾಲ್ಡ್ ವೋಸ್ಲೂ ಅವರನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ರಶ್ಮಿಕಾ ಮಂದಣ್ಣ ಮತ್ತು ಕೃತಿ ಸನನ್

ಶೀಘ್ರದಲ್ಲೇ ‘ಕಾಕ್‌ಟೇಲ್ 2’ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿರುವ ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ ಅವರು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳೊಂದಿಗಿನ ಭೇಟಿಯ ಅವಕಾಶಕ್ಕಾಗಿ ರಶ್ಮಿಕಾ ಹಾಗೂ ಕೃತಿ ಅವರು ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?