AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna

Rashmika Mandanna

ರಶ್ಮಿಕಾ ಮಂದಣ್ಣ ಕನ್ನಡ, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ನಟಿ. 1996ರ ಏಪ್ರಿಲ್ 5ರಂದು ಕರ್ನಾಟಕದ ವಿರಾಜಪೇಟೆಯಲ್ಲಿ ಜನಿಸಿದರು. 2016ರ ಕನ್ನಡ ಸಿನಿಮಾ ‘ಕಿರಿಕ್ ಪಾರ್ಟಿ’ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಈ ಸಿನಿಮಾ ವ್ಯಾಪಕ ಮನ್ನಣೆ ಮತ್ತು ಪುರಸ್ಕಾರಗಳನ್ನು ಪಡೆಯಿತು. ಅವರ ನಟನೆಯು ಇಷ್ಟ ಆಯಿತು. ಅವರು ಕರ್ನಾಟಕ ಕ್ರಶ್ ಆದರು. ‘ಗೀತ ಗೋವಿಂದಂ’, ‘ಪುಷ್ಪ’ ಸೇರಿ ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಅನಿಮಲ್’ ಚಿತ್ರದಿಂದ ಅವರಿಗೆ ಬಾಲಿವುಡ್ನಲ್ಲಿ ದೊಡ್ಡ ಗೆಲುವು ಸಿಕ್ಕಿದೆ. ಇದಲ್ಲದೆ ತಮಿಳು ಚಿತ್ರರಂಗದಲ್ಲೂ ಅವರಿಗೆ ಸಖತ್ ಬೇಡಿಕೆ ಇದೆ. ಅವರ ಇನ್ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಿದೆ. ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಡೇಟ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟನೆ ಇಲ್ಲ.

ಇನ್ನೂ ಹೆಚ್ಚು ಓದಿ

ವಿಜಯ್ ದೇವರಕೊಂಡ-ರಶ್ಮಿಕಾ ಹೊಸ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಎರಡು ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ‘ಗೀತಾ ಗೋವಿಂದಂ’ ಮತ್ತು ‘ಡಿಯರ್ ಕಾಮ್ರೆಡ್’ ಎರಡೂ ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಇದೀಗ ಮೂರನೇ ಬಾರಿಗೆ ಈ ರಿಯಲ್ ಲೈಫ್ ಜೋಡಿ ತೆರೆಯ ಮೇಲೆ ಜೋಡಿಯಾಗಿ ನಟಿಸಿದ್ದಾರೆ. ಸಿನಿಮಾದ ಹೆಸರು ‘ರಣಬಾಲಿ’ ಈ ಸಿನಿಮಾದ ಬಿಡುಗಡೆ ದಿನಾಂಕನ್ನು ಇದೀಗ ಚಿತ್ರತಂಡ ಘೋಷಣೆ ಮಾಡಿದೆ.

ತೆಲುಗು ಮಾತನಾಡಿ ಟ್ರೋಲ್ ಆದ ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ 'ಎಪಿಕ್' ಟ್ರೇಲರ್ ಲಾಂಚ್‌ನಲ್ಲಿ ತೆಲಂಗಾಣ ಶೈಲಿಯಲ್ಲಿ ಮಾತನಾಡಿದ್ದು ಸಖತ್ ವೈರಲ್ ಆಗಿದೆ. ಕೆಲವರು ಅವರ ಭಾಷೆಯ ಪ್ರಯತ್ನವನ್ನು ಶ್ಲಾಘಿಸಿದರೆ, ಮತ್ತೆ ಕೆಲವರು ಟೀಕಿಸಿದ್ದಾರೆ. ಹೈದರಾಬಾದ್ ಸೊಸೆಯಾಗಿರುವ ರಶ್ಮಿಕಾ ಹೊಸ ಭಾಷೆ ಕಲಿಯಲು ನಡೆಸುತ್ತಿರುವ ಈ ಪ್ರಯತ್ನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇನ್ನು ಕೆಲವರು ಜೋರಾಗಿಯೇ ಟೀಕಿಸಿದ್ದಾರೆ.

ಗಾಯದಿಂದ ರಶ್ಮಿಕಾ ಮಂದಣ್ಣಗೆ ಲಾಭ ಆಗಿದ್ದೇ ಹೆಚ್ಚು; ವಿವರಿಸಿದ ನಟಿ

ಸೊಂಟದ ಗಾಯದಿಂದ ಚೇತರಿಸಿಕೊಂಡಿರುವ ನಟಿ ರಶ್ಮಿಕಾ ಮಂದಣ್ಣ ಮತ್ತೆ ಶೂಟಿಂಗ್‌ಗೆ ಮರಳಿದ್ದಾರೆ. ಈ ವಿಶ್ರಾಂತಿಯ ಸಮಯವು ಪತಿ ವಿಜಯ್ ದೇವರಕೊಂಡ ಜೊತೆ ಉತ್ತಮ ಸಮಯ ಕಳೆಯಲು ನೆರವಾಯಿತು ಎಂದು ಅವರು ಹೇಳಿದ್ದಾರೆ. ರಶ್ಮಿಕಾ ನಟನೆಯ 'ರಣಬಾಲಿ' ಹಾಗೂ 'ಮೈಸಾ' ಸಿನಿಮಾಗಳು 2026ರ ಕೊನೆಯಲ್ಲಿ ಸಾಲಾಗಿ ಬಿಡುಗಡೆಯಾಗಲಿವೆ.

ಪೈಪೋಟಿ ತಪ್ಪಿಸಿಕೊಳ್ಳಲು ಮುಂದಾದ ರಶ್ಮಿಕಾ ಮಂದಣ್ಣ ಅಭಿನಯದ ‘ಮೈಸಾ’

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಪ್ಯಾನ್-ಇಂಡಿಯಾ ಆಕ್ಷನ್ ಸಿನಿಮಾ 'ಮೈಸಾ' ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ನವೆಂಬರ್ 27 ರಂದು ಈ ಚಿತ್ರ ತೆರೆಕಾಣಲಿದೆ. ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ರಶ್ಮಿಕಾ ಪೋಸ್ಟರ್ ವೈರಲ್ ಆಗಿದ್ದು, ಪ್ರೇಕ್ಷಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಈ ಸಿನಿಮಾ ಭಾರಿ ನಿರೀಕ್ಷೆ ಹಾಗೂ ಕುತೂಹಲ ಮೂಡಿಸಿದೆ.

ಗಾಯದಿಂದ ಚೇತರಿಸಿಕೊಂಡ ರಶ್ಮಿಕಾ ಮಂದಣ್ಣ; ಶೀಘ್ರದಲ್ಲೇ ಶೂಟಿಂಗ್‌ಗೆ ವಾಪಸ್

‘ಮೈಸಾ’ ಸಿನಿಮಾದ ಶೂಟಿಂಗ್ ವೇಳೆ ತೊಡೆಯ ಭಾಗಕ್ಕೆ ಗಾಯ ಮಾಡಿಕೊಂಡಿದ್ದ ನಟಿ ರಶ್ಮಿಕಾ ಮಂದಣ್ಣ ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಮರಳುವುದಾಗಿ ತಿಳಿಸಿದ್ದಾರೆ. ನೆಚ್ಚಿನ ನಟಿ ಗುಣಮುಖರಾಗಿ ಕೆಲಸಕ್ಕೆ ಮರಳುತ್ತಿರುವುದಕ್ಕೆ ಅಭಿಮಾನಿಗಳು ತೀವ್ರ ಸಂತಸ ಮತ್ತು ಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ನಲ್ಲಿ ರಶ್ಮಿಕಾ ಮಂದಣ್ಣ

ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಬಯೋಪಿಕ್‌ನಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಲಿದ್ದಾರೆ. ಸಾಯಿ ಪಲ್ಲವಿ ಕಾಲ್‌ಶೀಟ್ ಸಮಸ್ಯೆಯಿಂದ ಹೊರನಡೆದ ಬಳಿಕ ರಶ್ಮಿಕಾ ಈ ಪಾತ್ರಕ್ಕೆ ಆಯ್ಕೆಯಾಗಿದ್ದಾರೆ. ಗೌತಮ್ ತಿನ್ನನುರಿ ನಿರ್ದೇಶನದ ಈ ಸಿನಿಮಾವನ್ನು ಸೆಪ್ಟೆಂಬರ್ 16 ರಂದು ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿಯಂದು ಅಧಿಕೃತವಾಗಿ ಘೋಷಿಸಲಾಗುತ್ತದೆ.

‘ಇರುಮುಡಿ’ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಮೆಚ್ಚುಗೆ: ‘ಟಾಕ್ಸಿಕ್’ ಸಿನಿಮಾಗೂ ನಟಿಯಿಂದ ಸಿಗುತ್ತಾ ಹೊಗಳಿಕೆ?

ರವಿ ತೇಜ ಅಭಿನಯದ 'ಇರುಮುಡಿ' ಸಿನಿಮಾವನ್ನು ವೀಕ್ಷಿಸಿದ ನಟಿ ರಶ್ಮಿಕಾ ಮಂದಣ್ಣ ಚಿತ್ರತಂಡವನ್ನು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅವರು, ತಂದೆ-ಮಗಳ ಬಾಂಧವ್ಯದ ಈ ಸುಂದರ ಕಥೆಯು ತಮ್ಮ ಮನಸ್ಸಿಗೆ ತೀವ್ರವಾಗಿ ಸ್ಪರ್ಶಿಸಿದೆ ಎಂದು ಬರೆದುಕೊಂಡಿದ್ದಾರೆ. ಬಾಕ್ಸ್ ಆಫೀಸ್‌ನಲ್ಲೂ ಚಿತ್ರ ಭಾರಿ ಸದ್ದು ಮಾಡುತ್ತಿದೆ.

‘ಯಶ್ ಮಿಸ್ಟರ್ ಶೋಆಫ್’ ಎಂದಿದ್ದ ರಶ್ಮಿಕಾಗೆ ಈಗ ಪ್ರತಿಕ್ರಿಯೆ ನೀಡಿದ ರಾಕಿ ಭಾಯ್

ನಟಿ ರಶ್ಮಿಕಾ ಮಂದಣ್ಣ ಅವರು ಹಲವು ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯು ವಿವಾದಕ್ಕೆ ಕಾರಣ ಆಗಿತ್ತು. ಯಶ್ ಅವರನ್ನು ಮಿಸ್ಟರ್ ಶೋ ಆಫ್ ಎಂದು ರಶ್ಮಿಕಾ ಕರೆದಿದ್ದರು. ಅದಕ್ಕೆ ಯಶ್ ಅಭಿಮಾನಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆ ಬಗ್ಗೆ ಇಷ್ಟು ವರ್ಷಗಳ ಬಳಿಕ ಯಶ್ ಅವರು ಮೌನ ಮುರಿದಿದ್ದಾರೆ.

ಒಟಿಟಿಗೆ ಬಂತು ರಶ್ಮಿಕಾ, ಶಾಹಿದ್ ಕಪೂರ್, ಕೃತಿ ಸನನ್ ನಟನೆಯ ‘ಕಾಕ್‌ಟೇಲ್ 2’ ಸಿನಿಮಾ

ಹಾಡುಗಳ ಮೂಲಕ ಸದ್ದು ಮಾಡಿದ್ದ ‘ಕಾಕ್‌ಟೇಲ್ 2’ ಸಿನಿಮಾ ಈಗ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನನ್, ಶಾಹಿದ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಚಿತ್ರಮಂದಿರದಲ್ಲಿ ‘ಕಾಕ್‌ಟೇಲ್ 2’ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಗಾಯಗೊಂಡರೂ ಶೂಟಿಂಗ್‌ಗೆ ಮರಳಲು ರಶ್ಮಿಕಾ ಮಂದಣ್ಣ ಉತ್ಸುಕ: ‘ರಣಬಾಲಿ’ ಚಿತ್ರತಂಡಕ್ಕೆ ಆಸರೆ

ತೀವ್ರ ಗಾಯದ ನಡುವೆಯೂ ನಟಿ ರಶ್ಮಿಕಾ ಮಂದಣ್ಣ ತಮ್ಮ ಬಹುನಿರೀಕ್ಷಿತ 'ರಣಬಲಿ' ಚಿತ್ರದ ಶೂಟಿಂಗ್‌ಗೆ ಮರಳಲು ಸಿದ್ಧರಾಗಿದ್ದಾರೆ. ವೈದ್ಯರ ಸಲಹೆಯಂತೆ ಚೇತರಿಸಿಕೊಳ್ಳುತ್ತಿರುವ ಅವರು, ಅಕ್ಟೋಬರ್ 30 ರಂದು ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ತಮ್ಮ ಭಾಗದ ಚಿತ್ರೀಕರಣವನ್ನು ನಿಗದಿತ ಸಮಯಕ್ಕೆ ಪೂರ್ಣಗೊಳಿಸಲು ನಿರ್ಧರಿಸಿದ್ದಾರೆ.

ಆರೋಗ್ಯದ ಬಗ್ಗೆ ಹೊಸ ಅಪ್​​​ಡೇಟ್​ ನೀಡಿದ ನಟಿ ರಶ್ಮಿಕಾ ಮಂದಣ್ಣ

ಗಾಯದಿಂದಾಗಿ ವಿಶ್ರಾಂತಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ತಮ್ಮ ಆರೋಗ್ಯದ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ. ಬಿಡುವಿನ ವೇಳೆಯಲ್ಲಿ ಮದುವೆಯ ಫೋಟೋಗಳನ್ನು ನೋಡುತ್ತಾ, ವಿಶ್ರಾಂತಿ ಪಡೆಯುತ್ತಿರುವ ದಿನಚರಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದು, ಸದ್ಯವೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ. ವೈದ್ಯರು ಆರು ವಾರಗಳ ವಿಶ್ರಾಂತಿ ಸೂಚಿಸಿದ್ದಾರೆ.

ರಶ್ಮಿಕಾ ಮಂದಣ್ಣ ಸೊಂಟಕ್ಕೆ ಪೆಟ್ಟಾಗಿದ್ದು ಹೇಗೆ? ಎಲ್ಲವನ್ನೂ ವಿವರಿಸಿದ ನಟಿ

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಿಂದ ದೂರವಿದ್ದ ನಟಿ ರಶ್ಮಿಕಾ ಮಂದಣ್ಣ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಯಿಗಳೊಂದಿಗೆ ಕಾಲ ಕಳೆಯುತ್ತ, ಆಪ್ತರಿಂದ ಉಡುಗೊರೆಗಳನ್ನು ಸ್ವೀಕರಿಸುತ್ತಾ ಕಾಲ ಕಳೆಯುತ್ತಿದ್ದಾರೆ. ತಮಗೆ ಎದುರಾಗಿರುವ ಆರೋಗ್ಯದ ಸಮಸ್ಯೆ ಬಗ್ಗೆ ಅವರು ಈ ಮೂಲಕ ಮಾಹಿತಿ ನೀಡಿದ್ದಾರೆ.

ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’