AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS

RSS

RSS – Rashtriya Swayamsevak Sangh

ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವಿಕಾಸ್ ವರ್ಗ ತರಬೇತಿ ಶಿಬಿರದ ಸಮಾರೋಪ ಅಧಿವೇಶನವು ನಾಗ್ಪುರದಲ್ಲಿ ಬಹಳ ವೈಭವದಿಂದ ನಡೆಯಿತು. ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಈ ಸಾರ್ವಜನಿಕ ಸಭೆಯಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಮುಖ್ಯ ಭಾಷಣಕಾರರಾಗಿದ್ದರು. ಪ್ರಮುಖ ಕೈಗಾರಿಕೋದ್ಯಮಿ ಮತ್ತು ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಮುಖ್ಯ ಅತಿಥಿಯಾಗಿದ್ದರು. ಇಂದು ಜಗತ್ತು ಎದುರಿಸುತ್ತಿರುವ ಅನೇಕ ಬಿಕ್ಕಟ್ಟುಗಳಿಗೆ ಭಾರತ ಮಾತ್ರ ಪರಿಹಾರವನ್ನು ಹೊಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು

ಮೋಹನ್ ಭಾಗವತ್ ಭೇಟಿ ಬಳಿಕ ಅದ್ನಾನ್ ಸಾಮಿ ಹಂಚಿಕೊಂಡಿದ್ದ ಫೋಟೋ ಸಖತ್ ವೈರಲ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು. ಆ ಘಟನೆಗೆ ಈಗ ಅದ್ನಾನ್ ಸಮಿ ಅವರು ಉತ್ತರ ನೀಡಿದ್ದಾರೆ. ‘ನನಗೆ ಏನು ಸರಿ ಅನಿಸುತ್ತದೋ ಅದನ್ನೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ

ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಅಭಿಜೀತ್ ಮೋಹನ್ ವಾರಂಗ್ ನಿರ್ದೇಶನದ ‘ಆಖ್ರಿ ಸವಾಲ್’ ಚಿತ್ರದಲ್ಲಿ ಸಂಜಯ್ ದತ್, ಅಮಿತ್ ಸಾಧ್, ಸಮೀರಾ ರೆಡ್ಡಿ, ತ್ರಿಧಾ ಚೌಧರಿ, ನೀತು ಚಂದ್ರ ಮತ್ತು ನಮಾಶಿ ಚಕ್ರವರ್ತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಕ್ಷಕರಿಗಾಗಿ ಚಿತ್ರದ ನಿರ್ಮಾಪಕರು ‘ಬೈ ಒನ್ ಗೆಟ್ ಒನ್ ಫ್ರೀ’ ಆಫರ್ ನೀಡಿದ್ದಾರೆ.

ಆರ್​ಎಸ್​ಎಸ್ ಸಿನಿಮಾ: ವಿವಾದದ ನಡುವೆಯೂ ರಾಷ್ಟ್ರಪತಿ ಭವನದಲ್ಲಿ ‘ಆಖ್ರಿ ಸವಾಲ್’ ಪ್ರದರ್ಶನ?

ಸಂಜಯ್ ದತ್ ನಟನೆಯ ‘ಆಖ್ರಿ ಸವಾಲ್’ ಸಿನಿಮಾದಲ್ಲಿ ಆರ್​ಎಸ್​ಎಸ್ ಕುರಿತ ಕಥೆ ಇದೆ. ಬಿಡುಗಡೆಗೂ ಮುನ್ನ ಸಾಕಷ್ಟು ವಿವಾದ ಶುರುವಾಗಿದೆ. ಈ ನಡುವೆ ರಾಷ್ಟ್ರಪತಿ ಭವನದಲ್ಲಿ ಈ ಸಿನಿಮಾದ ವಿಶೇಷ ಪ್ರದರ್ಶನಕ್ಕೆ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಪ್ರದರ್ಶನದ ವಿವರಗಳನ್ನು ಗೌಪ್ಯವಾಗಿ ಇಡಲಾಗಿದೆ.

ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ!

ಮೈಸೂರಿನಲ್ಲಿ ನಡೆದ ಜೆಎಸ್‌ಎಸ್ ಸುವರ್ಣ ಮಹೋತ್ಸವ ಉಪನ್ಯಾಸದಲ್ಲಿ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ದೇಶದ ಪ್ರಗತಿಗೆ ಸಾಮಾಜಿಕ ಸಾಮರಸ್ಯವೇ ಅಡಿಪಾಯ ಎಂದರು. ಜನಸಂಖ್ಯಾ ಅಸಮತೋಲನದ ಬಗ್ಗೆ ಎಚ್ಚರಿಕೆ ನೀಡಿದ ಅವರು, ಜಾತಿ ರಹಿತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಅಲ್ಲದೆ, ಏಕರೂಪ ನಾಗರೀಕ ಸಂಹಿತೆ ಶೀಘ್ರದಲ್ಲೇ ಜಾರಿಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.

ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ

ಸಂಜಯ್ ದತ್ ನಟನೆಯ ‘ಆಖ್ರಿ ಸವಾಲ್’ ಸಿನಿಮಾ ಸಂಕೇತ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಶ್ರವಣ ದೋಷ ಇರುವ ಪ್ರೇಕ್ಷಕರಿಗೂ ಸಿನಿಮಾವನ್ನು ತಲುಪಿಸಬೇಕು ಎಂಬ ಉದ್​ದೇಶದಿಂದ ಹೊಸ ಪ್ರಯತ್ನ ಮಾಡಲಾಗಿದೆ. ಈ ಸಿನಿಮಾದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತ ಕಥೆ ಇದೆ.

ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

ಉಪಚುನಾವಣೆ ಪ್ರಚಾರದ ಮಧ್ಯೆ ಟಿವಿ9 ಜೊತೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಡವರ ಪರ ನಿಲುವಿನ ಕಾರಣ ಬಿಜೆಪಿ ತನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ದೂರಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಕಾರ್ಯಕ್ರಮಗಳು ಮತ್ತು ಸಾಧನೆಗಳನ್ನು ಜನರಿಗೆ ತಿಳಿಸುತ್ತಿದ್ದು, ಜನ ಅವುಗಳನ್ನು ವಿಮರ್ಶಿಸಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ಮಾಡೋದನ್ನು ಬಿಟ್ಟು ಮತ್ತೇನನ್ನು ಮಾಡುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.

ಆರ್​ಎಸ್​ಎಸ್​ ಕುರಿತ ‘ಆಖ್ರಿ ಸವಾಲ್’ ಸಿನಿಮಾ ಟೀಸರ್; ಈ ಚಿತ್ರದಲ್ಲಿದೆ ವಿವಾದಿತ ಕಥೆ

ಆರ್​ಎಸ್​ಎಸ್​ ಬಗ್ಗೆ ಪರ-ವಿರೋಧದ ಅಭಿಪ್ರಾಯಗಳಿವೆ. ಅವುಗಳನ್ನೇ ಇಟ್ಟುಕೊಂಡು ‘ಆಖ್ರಿ ಸವಾಲ್’ ಸಿನಿಮಾ ಮಾಡಲಾಗಿದೆ. ಸಂಜಯ್ ದತ್ ಅವರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಲಾಗಿದೆ. ಮೇ 8ರಂದು ಈ ಸಿನಿಮಾ ತೆರೆಕಾಣಲಿದೆ. ಈಗ ಟೀಸರ್ ಗಮನ ಸೆಳೆಯುತ್ತಿದೆ.

RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್​​ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ ಅವರು ಆರ್​ಎಸ್​ಎಸ್​ ನಿಷೇಧದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಆರ್​ಎಸ್​ಎಸ್​ ಅನ್ನು ನಿಷೇಧಿಸುವುದು ಅಸಾಧ್ಯ ಎಂದು ಜಾರಕಿಹೊಳಿ ಹೇಳಿದ್ದಾರೆ. ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ.

ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್: ಹಳೇ ಸಂದೇಶ ಮುಂದಿಟ್ಟು ಖರ್ಗೆಗೆ ಖಡಕ್ ಉತ್ತರ ಕೊಟ್ಟ RSS

ಸಚಿವ ಪ್ರಿಯಾಂಕ್ ಖರ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಮತ್ತು ಆರ್ಥಿಕ ಮೂಲಗಳ ಬಗ್ಗೆ ಪ್ರಶ್ನೆ ಮಾಡಿ, ಟೀಕೆ ಮಾಡಿದ ಬೆನ್ನಲ್ಲೇ ಸಂಘ ಮತ್ತೆ ಅದಕ್ಕೆ ಉತ್ತರ ನೀಡಿದೆ. ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್ ಎಂದು ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು ಮತ್ತೆ ಹಂಚಿಕೊಂಡು ಟೀಕಾಕಾರರಿಗೆ ಖಡಕ್ ಉತ್ತರ ನೀಡಿದೆ.

ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ ಸಿಂಗ್ ಅವರಿಗೆ ಶಶಿ ತರೂರ್ ಬೆಂಬಲಿಸಿದ್ದಾರೆ.

ಕಿಡಿಗೇಡಿತನ; ಆರ್‌ಎಸ್‌ಎಸ್-ಬಿಜೆಪಿ ಕುರಿತ ದಿಗ್ವಿಜಯ ಸಿಂಗ್ ಹೊಗಳಿಕೆಗೆ ರಾಹುಲ್ ಗಾಂಧಿ ಅಸಮಾಧಾನ

ಆರ್‌ಎಸ್‌ಎಸ್-ಬಿಜೆಪಿ ಕುರಿತು ಹೊಗಳಿ ಪೋಸ್ಟ್ ಮಾಡುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಕಾಂಗ್ರೆಸ್ ಹೈಕಮಾಂಡ್​​ಗೆ ಮುಜುಗರ ಉಂಟುಮಾಡಿದ್ದರು. ಈ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಂಘಟನಾತ್ಮಕ ಬಲವನ್ನು ಸಾರ್ವಜನಿಕವಾಗಿ ಹೊಗಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.