AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS

RSS

RSS – Rashtriya Swayamsevak Sangh

ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂಗಳು ಒಗ್ಗಟ್ಟಾಗಿರಬೇಕು. ಸನಾತನ ಧರ್ಮವನ್ನು ಬಲಪಡಿಸುವ ಮತ್ತು ಉನ್ನತೀಕರಿಸುವ ಸಮಯ ಬಂದಿದೆ ಎಂದು ಕರೆ ನೀಡಿದ್ದಾರೆ. ಎಲ್ಲಾ ಹಿಂದೂಗಳು ಸನಾತನ ಧರ್ಮವನ್ನು ಉನ್ನತೀಕರಿಸುವ ಸಮಯ ಬಂದಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ

Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿತು ಭಾಷಣ ಕೇಳುತ್ತಿರುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಾದವರು ಸಿಎಂ ಮತ್ತು ಪಿಎಂ ಆಗುತ್ತಾರೆ. ಅದು ಸಂಘಟನೆಯ ಶಕ್ತಿ ಎಂದು ದಿಗ್ವಿಜಯ ಸಿಂಗ್ ಹೊಗಳಿದ್ದಾರೆ.

500ಕ್ಕೂ ಹೆಚ್ಚು RSS ಕಾರ್ಯಕ್ರಮ, ಪಥಸಂಚಲನ: ಒಂದೇ ಒಂದು ಕಡೆಯೂ ಗಲಾಟೆ, ದೊಂಬಿ ಆಗಿಲ್ಲವೆಂದ ಕಾಂಗ್ರೆಸ್ ಸರ್ಕಾರ!

ಕಾನೂನು ಸುವ್ಯವಸ್ಥೆಗೆ ಅಡ್ಡಿಯಾಗಬಹುದೆಂಬ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಆರ್​​ಎಸ್​ಎಸ್ ಪಥಸಂಚಲನವನ್ನು ವಿರೋಧಿಸಿದ್ದರು. ಆದರೆ, ಅದೇ ಕಾಂಗ್ರೆಸ್ ಆಡಳಿತ ಇರುವ ಕರ್ನಾಟಕ ಸರ್ಕಾರ, ರಾಜ್ಯಾದ್ಯಂತ 518 ಆರ್​ಎಸ್​ಎಸ್ ಪಥಸಂಚಲನಗಳು ಶಾಂತಿಯುತವಾಗಿ ನಡೆದಿವೆ ಎಂದು ವಿಧಾನಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದೆ. ಯಾವುದೇ ಗಲಾಟೆ ಅಥವಾ ಕಾನೂನು ಸುವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.

ಭಾರತೀಯರಿಗೆ ಅವರ ಭಾಷೆಗಳೇ ಗೊತ್ತಿಲ್ಲ ಎನ್ನುವಂತಾಗಿದೆ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

Mohan Bhagwat urges Indians to use mother tongue: ಕೆಲ ಭಾರತೀಯರಿಗೆ ಅವರ ಸ್ವಂತ ಭಾಷೆಗಳೇ ಅರ್ಥ ಆಗದಂತಹ ಪರಿಸ್ಥಿತಿ ಬಂದಿದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಒಂದೊಮ್ಮೆ ದೇಶದಲ್ಲಿ ಎಲ್ಲಾ ಸಂವಹನವೂ ಸಂಸ್ಕೃತದಲ್ಲೇ ನಡೆಯುತ್ತಿತ್ತು. ಈಗ ವಿದೇಶಿಗರು ಸಂಸ್ಕೃತ ಕಲಿಸುತ್ತಿದ್ದಾರೆ ಎಂದವರು ತಿಳಿಸಿದ್ದಾರೆ. ನಾಗಪುರ್​ನಲ್ಲಿ 13ನೇ ಶತಮಾನದ ಸಂತ ಜ್ಞಾನೇಶ್ವರ್ ವಿರಚಿತ ಕೃತಿಯ ಇಂಗ್ಲೀಷ್ ಅವತರಣಿಕೆಯ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಇಂದು ಶಾಂತಿ ಸಿಕ್ಕಿರಬಹುದು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

"ಸತ್ಯ ಮತ್ತು ಧರ್ಮದ ಸಂಕೇತವಾದ ಈ ರಾಮ ಮಂದಿರವು ಇಂದು ಎದ್ದು ನಿಂತಿದೆ. ಧರ್ಮ, ಜ್ಞಾನ ಮತ್ತು ಸತ್ಯವನ್ನು ಜಗತ್ತಿಗೆ ಹರಡುವ ಕೆಲಸ ಪ್ರಾರಂಭವಾಗಿದೆ. ನಾವು ಎಲ್ಲಾ ಅಡೆತಡೆಗಳ ನಡುವೆಯೂ ಧೈರ್ಯದಿಂದ ಮುಂದುವರಿಯಬೇಕು. ಈ ದೇಶದಲ್ಲಿ ಜನಿಸಿದವರು ಹಿರಿಯ ಸಹೋದರರಂತೆ. ಜಗತ್ತು ನಮ್ಮ ಮೇಲೆ ನಿರೀಕ್ಷೆಗಳನ್ನು ಇಟ್ಟಿದೆ. ನಾವು ಅವುಗಳನ್ನು ಪೂರೈಸಲು ಕೆಲಸ ಮಾಡಬೇಕು" ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

RSSಗೆ ಪರೋಕ್ಷ ಅಂಕುಶ: ಹೈಕೋರ್ಟ್​​ನ ಧಾರವಾಡ ವಿಭಾಗೀಯ ಪೀಠದಲ್ಲಿ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ

ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿರ್ಬಂಧಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ ಆಗಿದೆ. ಮಧ್ಯಂತರ ತಡೆಯಾಜ್ಞೆಯನ್ನು ಅರ್ಜಿದಾರರಿಗೆ ಸೀಮಿತಗೊಳಿಸುವ ಸರ್ಕಾರದ ಮನವಿಯನ್ನು ಹೈಕೋರ್ಟ್​ನ ಧಾರವಾಡ ವಿಭಾಗೀಯ ಪೀಠ ನಿರಾಕರಿಸಿದೆ. ಸರ್ಕಾರದ ಆದೇಶವು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಪ್ರಿಯಾಂಕ್ ಖರ್ಗೆ ತವರು ಚಿತ್ತಾಪುರದಲ್ಲಿ RSS ಅದ್ಧೂರಿ ಪಥಸಂಚಲನ: ಹೈಸೆಕ್ಯುರಿಟಿ ನಡುವೆ ಹೆಜ್ಜೆ ಹಾಕಿದ ಗಣವೇಷಧಾರಿಗಳು 

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ, ಇಡೀ ದೇಶದ ಗಮನ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್​ಎಸ್​ಎಸ್​ ಪಥಸಂಚಲನ ಇಂದು ಯಾವುದೇ ಗದ್ದಲ, ಗಲಾಟೆ ಇಲ್ಲದೆ ಸುಸೂತ್ರವಾಗಿ ಜರುಗಿತು. ಪಥಸಂಚಲನ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆಗೆ ಟಕ್ಕರ್ ಕೊಡಲಾಗಿದೆ. ಜೊತೆಗೆ ಆರ್‌ಎಸ್‌ಎಸ್ ಶಕ್ತಿ ಪ್ರದರ್ಶನ ಮಾಡಿದ್ದಂತು ಸುಳ್ಳಲ್ಲ.

ಚಿತ್ತಾಪುರದಲ್ಲಿ ಮೊಳಗಿದ ಆರ್​​ಎಸ್​ಎಸ್​​ ಗೀತೆ: ವಿಡಿಯೋ ನೋಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ರಾಷ್ಟ್ರೀಯ ಸೇಯಂಸೇವಕ ಸಂಘ​ ಪಥಸಂಚಲನ ಆಯೋಜಿಸಲಾಗಿತ್ತು. ನೂರಾರು ಗಣವೇಷಧಾರಿಗಳು ಪಥಸಂಚಲನದಲ್ಲಿ ಖುಷಿಯಿಂದ ಭಾಗವಹಿಸಿದ್ದರು. ಆಯೋಜಕರು ನೀಡಿದ್ದ ಪಟ್ಟಿಯಲ್ಲಿ ಹೆಸರಿದ್ದವರಿಗಷ್ಟೇ ಅವಕಾಶ ನೀಡಲಾಗಿತ್ತು. ಪಥಸಂಚಲನ ಆರಂಭಕ್ಕೂ ಮುನ್ನ ಚಿತ್ತಾಪುರದಲ್ಲಿ ಗಣವೇಷಧಾರಿಗಳಿಂದ RSS ಗೀತೆ ಮೊಳಗಿತು. ವಿಡಿಯೋ ನೋಡಿ.

ಇವರೆಂತಹ ದರೋಡೆಕೋರರೆಂದು ದಾಖಲೆ ಸಮೇತ ಬಹಿರಂಗ ಮಾಡುವೆ: RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಚಿತ್ತಾಪುರದಲ್ಲಿ ನಡೆದ ಪಥಸಂಚಲನ ಅಂತ್ಯವಲ್ಲ, ಆರಂಭ. ದೇವಾಲಯಗಳ ಹುಂಡಿ ಹಣವನ್ನು ಸರ್ಕಾರ ಲೆಕ್ಕ ಹಾಕುತ್ತದೆ, ಅಂಥಾದ್ದರಲ್ಲಿ ಆರ್​ಎಸ್ಎಸ್ ಹಣದ ಲೆಕ್ಕ ಕೇಳಬಾರದಾ? RSS ತೆರಿಗೆ ವಂಚನೆ ಬಗ್ಗೆ ದಾಖಲೆ ಸಮೇತ ಬಹಿರಂಗಪಡಿಸುವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರ್​​ಎಸ್ಎಸ್ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Chittapur RSS Pathsanchalan Live: ಚಿತ್ತಾಪುರದಲ್ಲಿ RSS ಪಥಸಂಚಲನ; ಲೈವ್​ ನೋಡಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್​​ಎಸ್​ಎಸ್​​ ಪಥಸಂಚಲನ ನಡೆಯಿತು. ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಶುರುವಾಗಿದೆ. ಕೇವಲ 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರಿಗೆ ಅವಕಾಶ ನೀಡಲಾಗಿದೆ. ಸಂವಿಧಾನ ಗೆದ್ದಿದೆ, ನಾವು ಇಂದು ಪಥಸಂಚಲನ ಮಾಡುತ್ತಿದ್ದೇವೆ ಎಂದು ಗಣವೇಷಧಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಕ್ಷಣಗಣನೆ: ಸಿದ್ಧತೆ ಹೇಗಿದೆ?

ಭಾರಿ ವಿವಾದದ ಬಳಿಕ ಆರ್​ಎಸ್​ಎಸ್ ಪಥಸಂಚಲನಕ್ಕೆ ಚಿತ್ತಾಪುರದಲ್ಲಿ ಕ್ಷಣಗಣನೆ ಶುರುವಾಗಿದೆ. ಮಧ್ಯಾಹ್ನ 3.30 ರಿಂದ 5.15ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. 300 ಗಣವೇಷಧಾರಿಗಳು ಮತ್ತು 50 ಬ್ಯಾಂಡ್ ವಾದಕರು ಪಥಸಂಚಲನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬಜಾಜ್ ಕಲ್ಯಾಣ ಮಂಟಪದಿಂದ ಪಥಸಂಚಲನ ಆರಂಭವಾಗಲಿದೆ.

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಮ್ಮತಿ: RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಬಹುತೇಕ ಕಡೆ RSS ಪಥಸಂಚಲನಕ್ಕೆ ಅವಕಾಶ ಸಿಕ್ಕಿದ್ದರೂ ಚಿತ್ತಾಪುರದಲ್ಲಿ ಮಾತ್ರ ಕಗ್ಗಂಟಾಗಿತ್ತು. ಇದೀಗ ಅಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬೆನ್ನಲ್ಲೇ ಟ್ವೀಟ್​ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು