AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS

RSS

RSS – Rashtriya Swayamsevak Sangh

ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ

ಹುಬ್ಬಳ್ಳಿ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿಯನ್ನು ಮೆರವಣಿಗಯಲ್ಲಿ ತಗೆದುಕೊಂಡು ಬಂದು ಈದ್ಗಾ ಮೈದಾನದಲ್ಲಿ ಪ್ರತಿಷ್ಟಾಪನೆ ಮಾಡಲಾಯಿತು. ಈ ಬಾರಿ ತಲೆ ಮೇಲೆ ಆರ್ ಎಎಸ್ ಎಸ್ ಗಣವೇಷದಾರಿ ದರಿಸೋ ಕಪ್ಪು ಟೋಪಿಯನ್ನು ಗಣೇಶ ಮೂರ್ತಿ ತಲೆ ಮೇಲೆ ಹಾಕಿದ್ದು ಕೈಯಲ್ಲಿ ಭಗವಾ ಧ್ವಜ ನೀಡಲಾಗಿತ್ತು. ಈದ್ಗಾ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೂಬಸ್ಥ ನಿಯೋಜನೆ ಮಾಡಲಾಗಿದೆ. ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ.

ವಿಭಜಿಸುವುದಕ್ಕಿಂತ ಒಗ್ಗೂಡಿಸುವ ಅಂಶಗಳಿಗೆ ಒತ್ತು ನೀಡಿದರೆ ಜಗತ್ತು ಇನ್ನಷ್ಟು ಸುಂದರವಾಗಲಿದೆ: ಮೋಹನ್ ಭಾಗವತ್

ಲಂಡನ್‌ನಲ್ಲಿ ನಡೆದ ‘ಸೆಲೆಬ್ರೇಷನ್ ಆಫ್ ಒನ್​ನೆಸ್’ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್, ಸಮಾಜವನ್ನು ವಿಭಜಿಸುವ ವಿಚಾರಗಳಿಗಿಂತ ಒಗ್ಗೂಡಿಸುವ ಅಂಶಗಳಿಗೆ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ಹಿಂದೂ ಚಿಂತನೆ, ಸೇವೆ, ಯುವ ಪೀಳಿಗೆ ಹಾಗೂ ಬ್ರಿಟನ್‌ನಲ್ಲಿನ ಹಿಂದೂಗಳ ನಿಷ್ಠೆ ಕುರಿತು ಅವರು ಮಾತನಾಡಿದ್ದಾರೆ.

‘ಪ್ರತಿಯೊಬ್ಬರ ಮೇಲಿನ ಸಾತ್ವಿಕ ಪ್ರೇಮವೇ ಹಿಂದೂವಿನ ಮೂಲ ಸ್ವಭಾವ’: ಲಂಡನ್​ನಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್

ಪ್ರಕೃತಿ ಮೇಲಿನ ಗೌರವವೇ ಹಿಂದೂ ಸಂಸ್ಕೃತಿ. ಪ್ರತಿಯೊಬ್ಬರ ಮೇಲೆ ಸಾತ್ವಿಕ ಪ್ರೇಮ ಹೊಂದಿರುವುದು ಹಿಂದೂವಿನ ಸಹಜ ಸ್ವಭಾವ ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ. ಆರೆಸ್ಸೆಸ್​ನ ಶತಾಬ್ದಿ ಆಚರಣೆಯ ಭಾಗವಾಗಿ ಬ್ರಿಟನ್ ಪ್ರವಾಸದಲ್ಲಿರುವ ಭಾಗವತ್, ಲಂಡನ್​ನಲ್ಲಿ ಸೆಲಬ್ರೇಶನ್ ಆಫ್ ಒನ್​ನೆಸ್ ಎನ್ನುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಯುಕೆ ಭೇಟಿ; ಲಂಡನ್‌ನಲ್ಲಿ ಸುನಿಲ್ ಅಂಬೇಕರ್ ಸುದ್ದಿಗೋಷ್ಠಿ

ಆರ್​ಎಸ್​ಎಸ್​ ಶತಮಾನೋತ್ಸವ ವರ್ಷದ ಅಂಗವಾಗಿ ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಕೈಗೊಂಡಿರುವ ವಿದೇಶಿ ಪ್ರವಾಸದ ಭಾಗವಾಗಿ ಸೆಪ್ಟೆಂಬರ್‌ 2ರಂದು ಯುಕೆಗೆ ಭೇಟಿ ನೀಡಿದ್ದಾರೆ. ಮೋಹನ್ ಭಾಗವತ್ ಅವರ ಇಂಗ್ಲೆಂಡ್ ಭೇಟಿಯ ಬಗ್ಗೆ ಇಂದು ಲಂಡನ್​​ನಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಅವರು ಲಂಡನ್​ನ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

RSS ಪಥಸಂಚನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರಿಗೆ ಬಿಗ್ ರಿಲೀಫ್: ಸರ್ಕಾರಕ್ಕೆ ಹಿನ್ನಡೆ

ಆರ್​​ಎಸ್​​​ ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ ಅಮಾನತುಗೊಂಡಿದ್ದ ಯಾದಗಿರಿಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಶಿಕ್ಷಕರರಾದ ಗುರುರಾಜ್ ಜೋಷಿ ಹಾಗೂ ಅಣ್ಣಾ ಸಾಹೇಬ್ ದೇಶಮುಖ ಅವರ ಅಮಾನತು ರಾಜಕೀಯ ಸ್ವರೂಪ ಪಡೆದುಕೊಂಡು ಕೊನೆಗೆ ಕಾನೂನು ಹೋರಾಟ ನಡೆದಿದ್ದು, ಇದರಲ್ಲಿ ಅಂತಿಮವಾಗಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಉದಿತ್ ರಾಜ್ ಪೊಲೀಸ್ ವಶಕ್ಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ದೆಹಲಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ 'ಆಲ್ ಇಂಡಿಯಾ ಅನ್‌ಆರ್ಗನೈಸ್ಡ್ ವರ್ಕರ್ಸ್ ಆ್ಯಂಡ್ ಎಂಪ್ಲಾಯೀಸ್ ಕಾಂಗ್ರೆಸ್' (KKC) ರಾಷ್ಟ್ರೀಯ ಅಧ್ಯಕ್ಷ ಡಾ. ಉದಿತ್ ರಾಜ್ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು 'ಡೋಮಾ ಪರಿಸಂಘ' ಒಕ್ಕೂಟ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯ ವೇಳೆ ಕೇಶವ್ ಕುಂಜ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಘೋಷಣೆಗಳನ್ನು ಕೂಗುತ್ತಾ ಪುರಾತನ ಗ್ರಂಥವಾದ ಮನುಸ್ಮೃತಿಯ ಪ್ರತಿಗಳನ್ನು ಹಾಗೂ ಆರ್‌ಎಸ್‌ಎಸ್‌ನ ಸಮವಸ್ತ್ರಗಳನ್ನು ಸುಟ್ಟು ಹಾಕಿದರು.

‘ಮಾನವೀಯತೆಯ ಸೇವೆಯಿಂದಲೇ ಭಾರತ ವಿಶ್ವಗುರುವಾಗಿದೆ’; ಕೆನಡಾದಲ್ಲಿ ಮೋಹನ್ ಭಾಗವತ್ ಹೇಳಿಕೆ

ಯಾವುದೇ ಭೇದಭಾವವಿಲ್ಲದೆ ಇತರರಿಗೆ ಸಹಾಯ ಮಾಡುವ ತತ್ವದಿಂದ ಭಾರತದ ನಾಗರಿಕತೆಯ ಪರಂಪರೆಯು ಮಾರ್ಗದರ್ಶಿಸಲ್ಪಟ್ಟಿದೆ. ಭಾರತವು ಜಗತ್ತಿಗೆ 'ವಿಶ್ವಗುರು'ವಾಗಿ ಸೇವೆ ಸಲ್ಲಿಸಿದೆಯೇ ಹೊರತು 'ಸೂಪರ್ ಪವರ್' ಆಗಿ ಅಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕೆನಡಿಯನ್ ಹಿಂದೂಸ್ ಫಾರ್ ಔಟ್‌ರೀಚ್, ರಿಲೇಶನ್ಸ್ ಆ್ಯಂಡ್ ಡೈಲಾಗ್ ಸಂಸ್ಥೆಯು ಕೆನಡಾದ ಟೊರೊಂಟೋದಲ್ಲಿ ಆಯೋಜಿಸಿದ್ದ 'ಹಿಂದೂ ವಿಶ್ವ ಬಂಧು - ಪ್ರಪಂಚವನ್ನು ಸ್ನೇಹದಿಂದ ಆಲಂಗಿಸಿ' ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಜೀವನದೃಷ್ಟಿಯು 'ವಸುಧೈವ ಕುಟುಂಬಕಂ' ಅಂದರೆ ಇಡೀ ಜಗತ್ತೇ ಒಂದು ಕುಟುಂಬ ಎಂಬ ಸಾರ್ವತ್ರಿಕ ತತ್ವವನ್ನು ಆಧರಿಸಿದೆ ಎಂದರು.

ಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಭಾರತ ಮಹಾಶಕ್ತಿಯಲ್ಲ, ಜಗತ್ತಿಗೆ ವಿಶ್ವಗುರು ಎಂದ ಭಾಗವತ್

ಕೆನಡಾದಲ್ಲಿ ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಮಾತನಾಡಿ, ಭಾರತದ ಇತಿಹಾಸವು ಆಕ್ರಮಣದ್ದಲ್ಲ, ಜ್ಞಾನ ಹಂಚಿಕೆಯ ಪರಂಪರೆ ಎಂದು ಹೇಳಿದರು. ಹಿಂದೂ ಧರ್ಮವು ಜಗತ್ತನ್ನು ಒಗ್ಗೂಡಿಸುತ್ತದೆ, ವಿಭಜಿಸುವುದಿಲ್ಲ. 'ವಸುಧೈವ ಕುಟುಂಬಕಂ' ಪರಿಕಲ್ಪನೆಯಡಿ ಭಾರತವು ಯಾವಾಗಲೂ ಜಗತ್ತನ್ನು ಕುಟುಂಬವೆಂದು ಪರಿಗಣಿಸಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಗೌರವಿಸುವ ಭಾರತದ ಪರಂಪರೆ ವಿಶ್ವಕ್ಕೆ ವಿಶ್ವಗುರು ಸ್ಥಾನ ನೀಡಿದೆ.

ವೈವಿಧ್ಯತೆಯಲ್ಲಿ ಏಕತೆಯೇ ಭಾರತ ಮತ್ತು ಅಮೆರಿಕದ ಡಿಎನ್‌ಎ: ಮೋಹನ್ ಭಾಗವತ್

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಅವರು ಭಾರತ ಮತ್ತು ಅಮೆರಿಕದ 'ಡಿಎನ್‌ಎ ವೈವಿಧ್ಯತೆಯಲ್ಲಿ ಏಕತೆ' ಎಂದು ಪ್ರತಿಪಾದಿಸಿದರು. ಮುಸ್ಲಿಮರನ್ನು ಹೊರಗಿಡುವುದು ನಿಜವಾದ ಹಿಂದುತ್ವವಲ್ಲ, ಎಲ್ಲರಿಗೂ ಘನತೆ ಇದೆ ಎಂದು ನಂಬುವುದೇ ನೈಜ ಹಿಂದುತ್ವ ಎಂದರು. ಚರ್ಖಿ ದಾದ್ರಿ ಘಟನೆ ಉದಾಹರಿಸಿ ಆರ್‌ಎಸ್‌ಎಸ್‌ನ ನಿಸ್ವಾರ್ಥ ಸೇವೆಯನ್ನು ವಿವರಿಸಿದರು. ವಿರೋಧಗಳ ನಡುವೆಯೂ ಸಾರ್ವತ್ರಿಕ ಏಕತೆ ಮತ್ತು ಸೇವೆಗೆ ಒತ್ತು ನೀಡಿದರು.

‘ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವವರು ಹಿಂದೂಗಳೇ ಅಲ್ಲ’; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

"ನಮ್ಮ ಸಮಾಜ ಮತ್ತು ನಮ್ಮ ದೇಶವು ವಿದೇಶಿ ಆಕ್ರಮಣಗಳಿಗೆ ಬಲಿಯಾಗಿ ಬಹಳಷ್ಟು ಕಳೆದುಕೊಂಡಿದೆ, ಆದರೆ ಆ ಸಂಪ್ರದಾಯ ಇಂದಿಗೂ ಮುಂದುವರೆದಿದೆ, ಸಾಮಾನ್ಯ ಜನರಿಗೆ ಒಂದೇ ವಿಷಯವನ್ನು ಕಲಿಸುತ್ತದೆ. ಒಂದು ಜಗತ್ತು, ಒಂದು ಮಾನವೀಯತೆ. ಆದರೆ ಜನರು ಅನಗತ್ಯವಾಗಿ ಹೊರುವ ಕೆಲವು ವಿಷಯಗಳು ಅಥವಾ ಹೊರೆಗಳಿವೆ. ನಮ್ಮ ಭಾರತದಲ್ಲಿ, ಭಾರತವು ಸಾಂಪ್ರದಾಯಿಕವಾಗಿ ಎಲ್ಲರಿಗೂ ಆಶ್ರಯ ನೀಡಿರುವುದರಿಂದ ಎಲ್ಲಾ ಧರ್ಮಗಳು ಮತ್ತು ಸಮುದಾಯಗಳ ಜನರು ಸಾಮರಸ್ಯದಿಂದ ಒಟ್ಟಿಗೆ ವಾಸಿಸುತ್ತಾರೆ" ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

RSS ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾ

ಆರ್​ಎಸ್​ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್​ಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇನ್ನೊಂದು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಮರುಪರಿಶೀಲನಾ ಅರ್ಜಿ‌ ವಜಾಗೊಂಡಿದೆ.

ನ್ಯೂಯಾರ್ಕ್​ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇಂದು ರಾತ್ರಿ ಮೋಹನ್ ಭಾಗವತ್ ಭಾಷಣ

ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ನ್ಯೂಯಾರ್ಕ್ ಪ್ರವಾಸದಲ್ಲಿದ್ದಾರೆ. ನ್ಯೂಯಾರ್ಕ್‌ನ ವಿಶ್ವಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸುವ 'ಯುನಿವರ್ಸಲ್ ಒನ್ನೆಸ್' (ವಿಶ್ವ ಏಕತೆ) ಬೃಹತ್ ಸಮಾವೇಶದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ರಾತ್ರಿ 11.30ಕ್ಕೆ (ಭಾರತೀಯ ಕಾಲಮಾನ) ಭಾಷಣ ಮಾಡಲಿದ್ದಾರೆ. ಅಮೆರಿಕದ 39 ರಾಜ್ಯಗಳಿಂದ ಆಗಮಿಸುವ 5 ಸಾವಿರಕ್ಕೂ ಹೆಚ್ಚು ಭಾರತೀಯ ಮೂಲದ ನಿವಾಸಿಗಳು ಮತ್ತು ಅಂತಾಷ್ಟ್ರೀಯ ಪ್ರತಿನಿಧಿಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಟಿ ನರಸೀಪುರದಲ್ಲಿ ಬಿಗಿ ಭದ್ರತೆ: 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ