RSS
RSS – Rashtriya Swayamsevak Sangh
RSS ಬಗ್ಗೆ ಮತ್ತೆ ಪ್ರಿಯಾಂಕ್ ಖರ್ಗೆ ಕಿಡಿ: ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಗೃಹ ಸಚಿವ
ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ತನ್ನ ಚಟುವಟಿಕೆಗಳಿಗೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಮತ್ತೆ ಪುನರುಚ್ಛರಿಸಿರುವ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನೋಂದಣಿಗೆ ಬೇಕಾದ ಎಲ್ಲ ಸಹಕಾರವನ್ನು ತಾವೇ ನೀಡುವುದಾಗಿ ಹೇಳಿದ್ದಾರೆ. ವಿಶ್ವದ ಅತಿ ದೊಡ್ಡ ಸಂಸ್ಥೆ ಆರ್ಎಸ್ಎಸ್ ಏಕೆ ನೋಂದಣಿ ಆಗಿಲ್ಲಎಂದು ಕೇಳೋದೇ ತಪ್ಪಾ? ಎಂದು ಪ್ರಶ್ನಿಸಿದ್ದಾರೆ.
- Prasanna Gaonkar
- Updated on: Jun 28, 2026
- 12:31 pm
RSS ನೋಂದಾಣಿ ಮಾಡಿಸಿದ್ರೆ ಒಳ್ಳೆದು ಅಂತ ಪೇಜಾವರಶ್ರೀಗಳೇ ಹೇಳಿದ್ದಾರೆ: ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು (ಆರ್ಎಸ್ಎಸ್) ನೋಂದಣಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಜೋರಾಗಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎತ್ತಿದ ಆರ್ಎಸ್ಎಸ್ ನೋಂದಣಿ ವಿಚಾರಕ್ಕೆ ಬಿಜೆಪಿ ನಾಯಕರು ಸಹ ತಿರುಗೇಟು ನೀಡುತ್ತಿದ್ದಾರೆ. ಇನ್ನು ಆರೆಸ್ಸೆಸ್ ಅನ್ನು ಕಾನೂನು ಪ್ರಕಾರ ನೋಂದಣಿ ಮಾಡಬೇಕು ಎಂಬ ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆಗ್ರಹದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ (Pejawar Shree) ಪ್ರವೇಶಿಸಿ, ನೋಂದಣಿ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ ಎಂದಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಪೇಜಾವರಶ್ರೀಗಳ ಹೇಳಿಕೆ ಪ್ರಸ್ತಾಪಿಸಿ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
- Ramesh B Jawalagera
- Updated on: Jun 27, 2026
- 8:41 pm
ರಾಂಚಿಯ ಆರ್ಎಸ್ಎಸ್ ಕಚೇರಿಯ ದಾಳಿಗೆ ಐಎಸ್ಐ ನಂಟು; ಭಯೋತ್ಪಾದನಾ ಕೃತ್ಯಕ್ಕೆ ಪಾಕಿಸ್ತಾನದಿಂದ ಫಂಡಿಂಗ್
ರಾಂಚಿಯಲ್ಲಿರುವ ಆರ್ಎಸ್ಎಸ್ (RSS) ಕಚೇರಿ ಮೇಲಿನ ದಾಳಿಯ ತನಿಖೆಯ ವೇಳೆ ಈ ದಾಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲಿತ ಉಗ್ರಗಾಮಿ ಸಂಘಟನೆಯ ಲಿಂಕ್ ಇರುವುದು ಪತ್ತೆಯಾಗಿದೆ. ಜಾರ್ಖಂಡ್ನ ರಾಂಚಿಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲಿನ ದಾಳಿ ಪ್ರಕರಣದ ತನಿಖೆ ನಡೆಸುತ್ತಿರುವ ಭದ್ರತಾ ಸಂಸ್ಥೆಗಳಿಗೆ ಭಾರಿ ಸುಳಿವು ಸಿಕ್ಕಿದೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ಐ ಹಣಕಾಸು ನೆರವು ಪಡೆಯುತ್ತಿರುವ 'ತೆಹ್ರೀಕ್-ಎ-ತಾಲಿಬಾನ್ ಹಿಂದೂಸ್ತಾನ್' (TTH) ಉಗ್ರಗಾಮಿ ಸಂಘಟನೆಯ ಕೈವಾಡ ಇರುವುದು ಪ್ರಾಥಮಿಕ ತನಿಖೆಯಿಂದ ಬಯಲಾಗಿದೆ.
- Sushma Chakre
- Updated on: Jun 19, 2026
- 3:27 pm
ಆರ್ಎಸ್ಎಸ್ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ
ಸಚಿವ ಯತೀಂದ್ರ ಸಿದ್ದರಾಮಯ್ಯ ಆರ್ಎಸ್ಎಸ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಆರ್ಎಸ್ಎಸ್ ಸದಸ್ಯರು ಹಿಂದುಗಳಲ್ಲ, ಬದಲಾಗಿ ಹಿಂದುತ್ವವಾದಿಗಳು ಅಷ್ಟೇ ಎಂದು ಅವರು ಪ್ರತಿಪಾದಿಸಿದ್ದಾರೆ. ಆರ್ಎಸ್ಎಸ್ ಕೇವಲ ಸಾಂಸ್ಕೃತಿಕ ಸಂಘಟನೆ ಅಲ್ಲ, ಬದಲಿಗೆ ಬಿಜೆಪಿಗೆ ಕೆಲಸ ಮಾಡುವ ರಾಜಕೀಯ ಸಂಘಟನೆ ಎಂದಿರುವ ಯತೀಂದ್ರ, ಅದರ ಆರ್ಥಿಕ ವ್ಯವಹಾರಗಳ ಪಾರದರ್ಶಕತೆ ಮತ್ತು ಕಡ್ಡಾಯ ನೋಂದಣಿಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
- Ram
- Updated on: Jun 16, 2026
- 2:00 pm
RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ
ಆರ್ಎಸ್ಎಸ್ ನೋಂದಣಿ ಪ್ರಶ್ನಿಸಿದ್ದ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಬಹಿರಂಗ ಪತ್ರದ ಮೂಲಕ ತಿರುಗೇಟು ನೀಡಿದ್ದು, ಕಾಂಗ್ರೆಸ್ ಕೇವಲ ಹಿಂದೂ ಸಂಘಟನೆಗಳನ್ನೇ ಗುರಿಯಾಗಿಸುತ್ತಿದೆ ಎಂದವರು ಆರೋಪಿಸಿದ್ದಾರೆ. ಪಾರದರ್ಶಕತೆ ಮತ್ತು ಉತ್ತರದಾಯಿತ್ವದ ಬಗ್ಗೆ ನಿಮ್ಮ ಕಾಳಜಿ ನಿಜವಾಗಿಯೂ ಪ್ರಾಮಾಣಿಕವಾಗಿದ್ದರೆ ಅದೇ ಮಾನದಂಡವನ್ನು ಧಾರ್ಮಿಕ, ಸಾಮಾಜಿಕ, ರಾಜಕೀಯ, ಸೈದ್ಧಾಂತಿಕ ಹಿನ್ನೆಲೆಯ ಎಲ್ಲ ಸಂಘಟನೆಗಳಿಗೂ ಅನ್ವಯಿಸಬೇಕು ಎಂದವರು ತಿಳಿಸಿದ್ದಾರೆ.
- Kiran Haniyadka
- Updated on: Jun 16, 2026
- 11:32 am
ಹಿಂದೂ ಧರ್ಮ ನೋಂದಣಿ ಆಗಿದೆಯೇ? ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ತಿರುಗೇಟು
ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, 'ರಾಷ್ಟ್ರೀಯ ಸ್ವಯಂಸೇವಕ ಸಂಘ'ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸುತ್ತಲೇ, ಸಂಘಟನೆಯ 'ಕಾನೂನುಬದ್ಧ ಸ್ಥಾನಮಾನ' ಮತ್ತು ಪಾರದರ್ಶಕತೆಯ ಬಗ್ಗೆ ಅವರು ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಇನ್ನು ಇದಕ್ಕೆ ಮೋಹನ್ ಭಾಗವತ್ ಅವರು ಸಹ ಪ್ರತಿಕ್ರಿಯಿಸಿದ್ದು, ಹಿಂದೂ ಧರ್ಮ ರಿಜಿಸ್ಟರ್ ಆಗಿದೆಯೇ? ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದಾರೆ.
- Ramesh B Jawalagera
- Updated on: Jun 15, 2026
- 7:22 pm
RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ಸಂಸದ ತೇಜಸ್ವಿ ಸೂರ್ಯ ಖಡಕ್ ಉತ್ತರ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ಆರ್ಎಸ್ಎಸ್ನ ನೋಂದಣಿ, ಆದಾಯ, ಆಸ್ತಿಪಾಸ್ತಿ ಸೇರಿದಂತೆ ಇತರೆ ವಿವರ ನೀಡುವಂತೆ ಆಗ್ರಹಿಸಿದ್ದಾರೆ. ಇನ್ನು ಇದಕ್ಕೆ ದೆಹಲಿಯಲ್ಲಿಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸುರ್ಯ ಪ್ರತಿಕ್ರಿಯಿಸಿದ್ದು, ಅವರ ಪ್ರಶ್ನೆಗಳಿಗೆ ಆರ್ಎಸ್ಎಸ್ನವರು ಕಾನೂನಾತ್ಮಕವಾಗಿ ಉತ್ತರಿಸ್ತಾರೆ. ಸಂಘ ಸಂಸ್ಥೆ ಸ್ಥಾಪಿಸುವ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಆರ್ಎಸ್ಎಸ್ಗೆ ಮಾತ್ರ ಅವಕಾಶ ನೀಡಿಲ್ಲ. ಗ್ರಾಮೀಣ ಭಾಗದ ನಾಲ್ವರು ಯುವಕರು ಸೇರಿ ಸಂಘ ಕಟ್ಟಬಹುದು. ಸಂವಿಧಾನ ಇಲ್ಲದಾಗಲೂ, ಬ್ರಿಟಿಷರ ಕಾಲದಲ್ಲೂ ಕೆಲಸ ಮಾಡಿದೆ. ಸಂಘದ ಆಸ್ತಿ, ವಹಿವಾಟುಗಳು ನಿಯಮಗಳ ಅಡಿಯಲ್ಲಿ ನಡೆಯುತ್ತಿವೆ. ಸಚಿವ ಪ್ರಿಯಾಂಕ್ ಖರ್ಗೆ ಇದೇ ಮೊದಲ ಅಲ್ಲ ಆಡಿಟ್ ಕೇಳ್ತಿರೋದು. ಐಟಿ-ಬಿಟಿ ಇಲಾಖೆಯಲ್ಲಿ ರಿಸರ್ಚ್ ಇನೋವೇಷನ್ ಮಾಡಬೇಕಿತ್ತು. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ರಿಸರ್ಚ್ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
- Mahantesh Kurbet
- Updated on: Jun 15, 2026
- 6:00 pm
RSS ವಿಚಾರವಾಗಿ ಮೋಹನ್ ಭಾಗವತ್ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಸರ್ಕಾರದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವ ನಿಯಮದಿಂದ ಯಾವ ಕಾನೂನಿನ ಅಡಿ ವಿನಾಯಿತಿ ಪಡೆದಿದೆ ಎಂಬುದನ್ನು ಸಾಬೀತುಪಡಿಸುವಂತೆ ಆಗ್ರಹಿಸಿದ್ದರು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಸಂಘದ ನೋಂದಣಿ ವಿಚಾರವಾಗಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದು, 8 ವಿವರಗಳ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.
- Prasanna Gaonkar
- Updated on: Jun 15, 2026
- 4:49 pm
RSS ವಿರುದ್ಧ ಮತ್ತೆ ಸಮರ ಸಾರಿದ ಪ್ರಿಯಾಂಕ್ ಖರ್ಗೆ: ಏಕಾಏಕಿ ಖಡಕ್ ಎಚ್ಚರಿಕೆ ಕೊಟ್ಟಿದ್ದೇಕೆ ಗೃಹ ಸಚಿವ?
ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ (RSS) ನೋಂದಣಿ ದಾಖಲೆ ಸಿದ್ಧವಿಟ್ಟುಕೊಳ್ಳುವಂತೆ ಎಚ್ಚರಿಸಿದ್ದಾರೆ. ಇದಕ್ಕೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ರಾಜಕೀಯ ಜಟಾಪಟಿ ಆರಂಭವಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿಯೂ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಸಚಿವರಾಗಿದ್ದ ಪ್ರಿಯಾಂಕ್, ಆರ್ಎಸ್ಎಸ್ ವಿರುದ್ಧ ಸಮರ ಸಾರಿದ್ದರು ಎನ್ನುವುದಿಲ್ಲಿ ಗಮನಾರ್ಹ.
- Prasanna Hegde
- Updated on: Jun 9, 2026
- 5:30 pm
ಜಾಗತಿಕ ಬಿಕ್ಕಟ್ಟುಗಳಿಗೆ ಭಾರತ ಒಂದೇ ಪರಿಹಾರ; ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿಕಾಸ್ ವರ್ಗ ತರಬೇತಿ ಶಿಬಿರದ ಸಮಾರೋಪ ಅಧಿವೇಶನವು ನಾಗ್ಪುರದಲ್ಲಿ ಬಹಳ ವೈಭವದಿಂದ ನಡೆಯಿತು. ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಈ ಸಾರ್ವಜನಿಕ ಸಭೆಯಲ್ಲಿ ಆರ್ಎಸ್ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಮುಖ್ಯ ಭಾಷಣಕಾರರಾಗಿದ್ದರು. ಪ್ರಮುಖ ಕೈಗಾರಿಕೋದ್ಯಮಿ ಮತ್ತು ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಮುಖ್ಯ ಅತಿಥಿಯಾಗಿದ್ದರು. ಇಂದು ಜಗತ್ತು ಎದುರಿಸುತ್ತಿರುವ ಅನೇಕ ಬಿಕ್ಕಟ್ಟುಗಳಿಗೆ ಭಾರತ ಮಾತ್ರ ಪರಿಹಾರವನ್ನು ಹೊಂದಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
- Sushma Chakre
- Updated on: Jun 4, 2026
- 10:50 pm
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್; ಅದ್ನಾನ್ ಸಮಿ ತಿರುಗೇಟು
ಮೋಹನ್ ಭಾಗವತ್ ಭೇಟಿ ಬಳಿಕ ಅದ್ನಾನ್ ಸಾಮಿ ಹಂಚಿಕೊಂಡಿದ್ದ ಫೋಟೋ ಸಖತ್ ವೈರಲ್ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು. ಆ ಘಟನೆಗೆ ಈಗ ಅದ್ನಾನ್ ಸಮಿ ಅವರು ಉತ್ತರ ನೀಡಿದ್ದಾರೆ. ‘ನನಗೆ ಏನು ಸರಿ ಅನಿಸುತ್ತದೋ ಅದನ್ನೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.
- Madan Kumar
- Updated on: May 21, 2026
- 4:56 pm
‘ಆಖ್ರಿ ಸವಾಲ್’ ವೀಕ್ಷಕರಿಗೆ ಭರ್ಜರಿ ಆಫರ್: ಒಂದು ಟಿಕೆಟ್ ಕೊಂಡರೆ ಮತ್ತೊಂದು ಉಚಿತ
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಅಭಿಜೀತ್ ಮೋಹನ್ ವಾರಂಗ್ ನಿರ್ದೇಶನದ ‘ಆಖ್ರಿ ಸವಾಲ್’ ಚಿತ್ರದಲ್ಲಿ ಸಂಜಯ್ ದತ್, ಅಮಿತ್ ಸಾಧ್, ಸಮೀರಾ ರೆಡ್ಡಿ, ತ್ರಿಧಾ ಚೌಧರಿ, ನೀತು ಚಂದ್ರ ಮತ್ತು ನಮಾಶಿ ಚಕ್ರವರ್ತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಪ್ರೇಕ್ಷಕರಿಗಾಗಿ ಚಿತ್ರದ ನಿರ್ಮಾಪಕರು ‘ಬೈ ಒನ್ ಗೆಟ್ ಒನ್ ಫ್ರೀ’ ಆಫರ್ ನೀಡಿದ್ದಾರೆ.
- Madan Kumar
- Updated on: May 19, 2026
- 1:05 pm