RSS
RSS – Rashtriya Swayamsevak Sangh
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್ ಜೋಶಿ ತಿರುಗೇಟು
ಆರ್ಎಸ್ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.
- Ravi H Mooki
- Updated on: Jul 12, 2026
- 8:11 pm
ಆರ್ಎಸ್ಎಸ್ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ
Belagavi RSS Meeting End: ಬೆಳಗಾವಿಯಲ್ಲಿ ನಡೆದ ಆರ್ಎಸ್ಎಸ್ನ ಮೂರು ದಿನಗಳ ವಾರ್ಷಿಕ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಪ್ರಚಾರಕರು ಭಾಗಿಯಾಗಿದ್ದರು. 2026ರ ಶಾಖಾ ವಿಸ್ತರಣೆ ಮತ್ತು ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Sahadev Mane
- Updated on: Jul 12, 2026
- 8:27 pm
ಆರ್ಎಸ್ಎಸ್ನವರು ಯಾವಾಗೆಲ್ಲಾ ಸಭೆ ಸೇರುತ್ತಾರೋ, ಆವಾಗೆಲ್ಲಾ ಗಲಭೆಗಳಾಗಿವೆ: ಪ್ರಿಯಾಂಕ್ ಖರ್ಗೆ
Priyank Kharge Sparks on RSS: ಆರ್ಎಸ್ಎಸ್ ಕುರಿತಾಗಿ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಸದ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದಕ್ಕೆ ಧ್ವನಿ ಗೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ. ‘‘ಈ ಬಗ್ಗೆ ಇಂಟೆಲಿಜೆನ್ಸ್ ಕಡೆಯಿಂದ ನಮಗೂ ಕೆಲ ಮಾಹಿತಿ ಬಂದಿದೆ, ಸೂಕ್ತ ಸಮಯದಲ್ಲಿ ಹೇಳುತ್ತೇನೆ’’ ಎಂದಿದ್ದಾರೆ.
- Sunil MH
- Updated on: Jul 11, 2026
- 4:41 pm
RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಈಗೇನಾಗುತ್ತೆ ನೋಡಬೇಕು; ಬಿಕೆ ಹರಿಪ್ರಸಾದ್
ಬೆಳಗಾವಿಯಲ್ಲಿ ನಡೆಯುತ್ತಿರುವ ಆರ್ಎಸ್ಎಸ್ ಸಭೆ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಹೇಳಿದ್ದಾರೆ. ಇನ್ನು ಅಯೋಧ್ಯೆ ರಾಮಮಂದಿರ ಹುಂಡಿ ಹಣ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.
- Prasanna Gaonkar
- Updated on: Jul 10, 2026
- 6:08 pm
ಆರ್ಎಸ್ಎಸ್ ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್ನಲ್ಲಿ ಬಡ್ತಿ ಸಿಗುತ್ತೆ: ಶಾಸಕ ಯತ್ನಾಳ್ ಆರೋಪ
Basanagouda Patil Yatnal on Congress: ಕಾಂಗ್ರೆಸ್ ಪಕ್ಷದಲ್ಲಿ ಆರ್ಎಸ್ಎಸ್, ಹಿಂದೂ ಧರ್ಮ ಮತ್ತು ದೇಶದ ವಿರುದ್ಧ ಮಾತನಾಡುವವರಿಗೆ ಪ್ರಮೋಷನ್ ನೀಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಯತ್ನಾಳ್ ಆರೋಪಿಸಿದ್ದಾರೆ. ನೇರ ನೇಮಕಾತಿ ಪ್ರಕ್ರಿಯೆಯನ್ನು ಭ್ರಷ್ಟಾಚಾರಕ್ಕೆ ದಾರಿ ಎಂದಿರುವ ಅವರು, ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.
- Anil Kalkere
- Updated on: Jul 9, 2026
- 5:13 pm
ಬೆಳಗಾವಿಯಲ್ಲಿ ಆರ್ಎಸ್ಎಸ್ ವಾರ್ಷಿಕ ಸಭೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಕಾರ್ಯಕ್ರಮ ಬೇಕಿದ್ರೆ ನಡೆಸಿಕೊಳ್ಳಲಿ. ಆದ್ರೆ, ಬೀದಿಗಿಳಿದು ಪರೇಡ್ಗೆ ಅವಕಾಶ ಇಲ್ಲ ಎಂದ ಖಡಕ್ ಆಗಿ ಹೇಳಿದ್ದಾರೆ. ಈಗಾಗಲೇ ನಾನು ಗೃಹ ಸಚಿವನಾಗಿ ಇರುವ ತನಕ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಮ ನಡೆಯುವ ಮೊದಲೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.
- Ramesh B Jawalagera
- Updated on: Jul 8, 2026
- 12:28 pm
ಅಯೋಧ್ಯೆಯ ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್ ಖರ್ಗೆ
ಅಯೋಧ್ಯೆ ರಾಮಮಂದಿರ ನಿರ್ಮಾಣದಲ್ಲಿ ಶೇ.40ರಷ್ಟು ಕಮಿಷನ್ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಆರೋಪಿಸಿದ್ದಾರೆ. ನಿರ್ಮಾಣ ಉಸ್ತುವಾರಿ ಗೋಪಾಲ್ ಜಿ ತಮ್ಮ ಅಳಿಯನಿಗೆ ಗುತ್ತಿಗೆ ನೀಡಿದ್ದಾರೆ. ಬಿಜೆಪಿ ಈ ಕಮಿಷನ್ ಹಗರಣಕ್ಕೆ ಕಾರಣವಾಗಿದೆ ಎಂದು ಹೇಳಿದ ಖರ್ಗೆ, ರಾಮಮಂದಿರ ಟ್ರಸ್ಟ್ ಸದಸ್ಯರು ಆರ್ಎಸ್ಎಸ್ ತರಬೇತಿ ಪಡೆದಿದವರು ಎಂದು ತಿಳಿಸಿದ್ದಾರೆ.
- Dattatraya Patil
- Updated on: Jul 6, 2026
- 12:43 pm
ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
Priyank Kharge: ನಾನು ಗೃಹಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಸಂಘಟನೆಯ ನೋಂದಣಿ ಹಾಗೂ ದೇಣಿಗೆ ಕುರಿತು ಮತ್ತೆ ವಾಗ್ದಾಳಿ ನಡೆಸಿದ್ದಾರೆ. ನಾಳೆ ನೀವೂ ಒಂದು ಧ್ವಜದ ಮೇಲೆ ಸಂಘಟನೆ ಮಾಡಿ, ಚಂದಾ ಕಲೆಕ್ಟ್ ಮಾಡಿ. ಅವಾಗ ಐಟಿ,ಇಡಿಯವರು ಸುಮ್ನೆ ಕೂರುತ್ತಾರಾ? ಎಂದೂ ಅವರು ಪ್ರಶ್ನಿಸಿದ್ದಾರೆ.
- Dattatraya Patil
- Updated on: Jul 6, 2026
- 11:55 am
RSS ತರಾಟೆ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ: ಸುಧಾಕರ್-SR ವಿಶ್ವನಾಥ್ ಸಂಧಾನ ಸಕ್ಸಸ್
ಶಿಸ್ತಿನ ಸಂಘಟನೆ ಬಿಜೆಪಿ ಎಂಬುದು ಕರ್ನಾಟಕದ ಮಟ್ಟಿಗೆ ಅತಿದೊಡ್ಡ ಜೋಕ್ ಆಗಿ ಕಾಣಿಸುತ್ತಿದೆ. ಹೌದು....ಈಗಾಗಲೇ, ಅಡ್ಡ ಮತದಾನದಿಂದ ಆಂತರಿಕ ಸಂಘರ್ಷ ಏರ್ಪಟ್ಟಿರುವ ಹೊತ್ತಿನಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಕಚ್ಚಾಟಗಳು ನಡೆಯುತ್ತಿವೆ. ಬಿಜೆಪಿಯ ಪ್ರಭಾವಿಗಳು ಬೀದಿ ಕಾಳಗದಲ್ಲಿ ತೊಡಗಿದ್ದಾರೆ. ಈ ಒಳಜಗಳಿಗೆ ಬ್ರೇಕ್ ಹಾಕಲು ಆರ್ಎಸ್ಎಸ್, ಹಿರಿಯ ಬಿಜೆಪಿ ನಾಯಕರು ಮಧ್ಯೆ ಪ್ರವೇಶ ಮಾಡಿದ್ದು, ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಹಾಗೂ ಯಲಹಂಕ ಶಾಸಕ S.R.ವಿಶ್ವನಾಥ್ ಸಂಧಾನ ಸಭೆ ಸಕ್ಸಸ್ ಆಗಿದೆ. ಅಷ್ಟಕ್ಕೂ ಸಂಧಾನ ಸಭೆ ಏನೆಲ್ಲಾ ಆಯ್ತು ಎನ್ನುವುದು ಇಲ್ಲಿದೆ.
- Anil Kalkere
- Updated on: Jul 5, 2026
- 9:15 pm
ರಾಮಮಂದಿರ ದೇಣಿಗೆ ಕಳ್ಳತನ; ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಅಯೋಧ್ಯೆಯ ರಾಮಮಂದಿರಕ್ಕೆ ಬಂದ ದೇಣಿಗೆಯಲ್ಲಿ ದುರುಪಯೋಗ ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಶ್ರೀರಾಮನ ಮೇಲಿನ ಭಕ್ತಿಯನ್ನು ಕುಗ್ಗಿಸಲು ಕೆಲವು ಶಕ್ತಿಗಳು ಯತ್ನಿಸುತ್ತಿವೆಯೇ? ಎಂಬ ಪ್ರಶ್ನೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅತ್ಯಂತ ಚುಟುಕಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರು ಈ ವಿವಾದದ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ, ಮೋಹನ್ ಭಾಗವತ್ ಅವರು ಕೇವಲ "ರಾಮ್-ರಾಮ್" ಎಂದು ಹೇಳಿ ಅಲ್ಲಿಂದ ಚುರುಕಾಗಿ ಜಾಗ ಖಾಲಿ ಮಾಡಿದ್ದಾರೆ.
- Sushma Chakre
- Updated on: Jul 4, 2026
- 4:48 pm
ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನಿಷ್ಪಕ್ಷಪಾತ ತನಿಖೆಗೆ ಆರ್ಎಸ್ಎಸ್ ಕರೆ
ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ (RSS) ಮೊದಲ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಈ ಬಗ್ಗೆ ಹೇಳಿಕೆ ನೀಡಿದ್ದು, ರಾಮ ಜನ್ಮಭೂಮಿ ಕೋಟ್ಯಂತರ ರಾಮಭಕ್ತರ ಶ್ರದ್ಧೆ, ಆಸ್ಥೆ ಮತ್ತು ಭಕ್ತಿಯ ಕೇಂದ್ರವಾಗಿದೆ. ರಾಮ ಮಂದಿರದ ದಾನ ಪಾತ್ರೆಗಳಿಂದ ಹಣ ಕಳುವಾಗಿರುವ ಘಟನೆಯು ಅತ್ಯಂತ ದುರದೃಷ್ಟಕರ. ಈ ಕುರಿತು ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು. ಹಿಂದೂಗಳು ಸಂಯಮದಿಂದ ವರ್ತಿಸಬೇಕೆಂದು ಕರೆ ನೀಡಿದ್ದಾರೆ.
- Sushma Chakre
- Updated on: Jul 3, 2026
- 4:19 pm
ಆರ್ಎಸ್ಎಸ್ ನೋಂದಣಿ, ಸದಸ್ಯತ್ವದ ಬಗ್ಗೆ ಕೋರ್ಟ್ನಲ್ಲೂ ಪ್ರಿಯಾಂಕ್ ತಕರಾರು: ಸಚಿವರಿಗೆ ಉತ್ತರಿಸಿಯೇ ನ್ಯಾಯಾಲಯದಿಂದ ಸಮನ್ಸ್
Priyank Kharge: ಆರ್ಎಸ್ಎಸ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ, ಮೊಹಮ್ಮದ್ ಹ್ಯಾರಿಸ್ ನಲಪಾಡ್ಗೆ ಸಮನ್ಸ್ ಜಾರಿಗೂ ಮುನ್ನ ಕೋರ್ಟ್ ಸಚಿವರ ವಾದವನ್ನೂ ಪರಿಗಣಿಸಿದೆ. ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವ ಯತ್ನವೇ ಆರ್ಎಸ್ಎಸ್ ಗುರುತಿಸಬಹುದಾದ ಗುಂಪೆಂಬುದಕ್ಕೆ ನಿದರ್ಶನ. ಕೇರಳ ಹೈಕೋರ್ಟ್ RSS ಗುರುತಿಸಬಹುದಾದ ಗುಂಪೆಂದು ತೀರ್ಪು ನೀಡಿದೆ. ಹೀಗಾಗಿ RSS ಸದಸ್ಯರು ದಾಖಲಿಸಿದ ಮಾನನಷ್ಟ ಕೇಸ್ ವಿಚಾರಣೆಗೆ ಪರಿಗಣಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
- Ramesha M
- Updated on: Jul 2, 2026
- 11:47 am