RSS
RSS – Rashtriya Swayamsevak Sangh
ಮೀಸಲಾತಿ ವ್ಯವಸ್ಥೆ ಬಗ್ಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯ ಇರುವವರೆಗೆ ದೇಶದಲ್ಲಿ ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆ ಮುಂದುವರಿಯಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟಪಡಿಸಿದ್ದಾರೆ. ಆದರೆ, ಮೀಸಲಾತಿಯ ಪ್ರಯೋಜನವನ್ನು ಪಡೆದು ಆರ್ಥಿಕ ಹಾಗೂ ಸಾಮಾಜಿಕವಾಗಿ ಶಕ್ತಿಯುತರಾದವರು ಉದಾರ ಮನಸ್ಸಿನಿಂದ ಆ ಸೌಲಭ್ಯವನ್ನು ಬಿಟ್ಟುಕೊಡಲು ಮುಂದೆ ಬರಬೇಕು ಎಂದು ಅವರು ಕರೆ ನೀಡಿದ್ದಾರೆಮುಂಬೈನಲ್ಲಿ ಯುವಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೀಸಲಾತಿಯ ಕುರಿತು ಪ್ರಸ್ತುತ ನಡೆಯುತ್ತಿರುವ ಚರ್ಚೆಗಳ ನಡುವೆ ಸಂಘದ ನಿಲುವನ್ನು ಸ್ಪಷ್ಟಪಡಿಸಿದರು.
- Sushma Chakre
- Updated on: Aug 6, 2026
- 9:55 pm
‘ಜೆನ್-ಜಿ ದೇಶವಿರೋಧಿಗಳಲ್ಲ, ಅವರ ಬಗ್ಗೆ ಅತಿಯಾದ ನಂಬಿಕೆಯಿದೆ’; ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಇಂದು ನಡೆದ ವಿಶ್ವದ ಬೃಹತ್ ಯುವ ಸಮಾವೇಶವೊಂದರಲ್ಲಿ ಭಾಗವಹಿಸಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಜೆನ್-ಜಿ (ಯುವ ಪೀಳಿಗೆ)ಯನ್ನು ನಾನು ಕುರುಡಾಗಿ ನಂಬುತ್ತೇನೆ. ಅವರು ಪ್ರತಿಭಟನೆ ನಡೆಸಿದರು ಎಂಬ ಕಾರಣಕ್ಕೆ ಅವರನ್ನು ದೇಶವಿರೋಧಿಗಳು ಎಂದು ಹೇಳಲು ಸಾಧ್ಯವಿಲ್ಲ. ಅವರು ನಮ್ಮದೇ ಜನರು, ನಮ್ಮ ಮುಂದಿನ ಪೀಳಿಗೆ" ಎಂದು ಹೇಳಿದರು. 'ಭಾರತೀಯ ಮಾರ್ಗದಲ್ಲಿ ವಿಶ್ವವನ್ನು ಒಂದುಗೂಡಿಸುವಲ್ಲಿ ಯುವಜನತೆಯ ಪಾತ್ರ' ಎಂಬ ಕುರಿತು ಸಮ್ಮೇಳನದಲ್ಲಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಭಾಗವತ್ ಹಲವು ವಿಚಾರಗಳನ್ನು ಹಂಚಿಕೊಂಡರು.
- Sushma Chakre
- Updated on: Aug 6, 2026
- 8:10 pm
ಜೆನ್ ಜಿ, ಜೆನ್ ಅಲ್ಫಾ ಜತೆ ನಾಳೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಂವಾದ
ನೀಟ್ ವಿಚಾರದಲ್ಲಿ ಪ್ರತಿಭಟನೆ ನಡೆಸಿದ ನಂತರ ದೇಶದಲ್ಲಿ ಜೆನ್ ಜಿ ಯುವ ಸಮೂಹದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಇದೀಗ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಜೆನ್ ಜಿ, ಜೆನ್ ಅಲ್ಫಾ ಯುವ ಜನರ ಜತೆ ಸಂವಾದ ನಡೆಸಲಿದ್ದಾರೆ.
- Ganapathi Sharma
- Updated on: Aug 5, 2026
- 9:50 am
‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್ ಮಾಡಿದವರಿಗೆ ಕಂಗನಾ ತಿರುಗೇಟು
ನಟಿ ಕಂಗನಾ ರಣಾವತ್ ಅವರು ಒಂದರ ಮೇಲೊಂದು ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ರೀತಿಯನ್ನು ಟೀಕಿಸುವುದರಿಂದ ಆರಂಭವಾದ ಅವರ ವಿವಾದ ಈಗ ಇನ್ನೊಂದು ಹಂತಕ್ಕೆ ಏರಿದೆ. ‘ನಾನು ಸಂಘಿ ಆಗಬೇಕು’ ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Aug 3, 2026
- 10:47 pm
‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್
ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂದು ಸಂಸತ್ ಅಧಿವೇಶನದಲ್ಲಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಅವರೇ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಕುರಿತು ಸಂಸತ್ತನ್ನು ಎದುರಿಸುವ ಮತ್ತು ಮಾತನಾಡುವ ಧೈರ್ಯ ಈಗ ಗೃಹ ಸಚಿವರಿಗೆ ಇಲ್ಲ" ಎಂದು ಲೇವಡಿ ಮಾಡಿದರು. ಅಮಿತ್ ಶಾ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.
- Sushma Chakre
- Updated on: Jul 29, 2026
- 3:33 pm
ಆರ್ಎಸ್ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ: ಸಂವಾದದಲ್ಲಿ ಭಾಗಿಯಾಗಲಿರುವ ಪ್ರಿಯಾಂಕ್ ಖರ್ಗೆ
ಆರ್ಎಸ್ಎಸ್ ನೋಂದಣಿ ಅಭಿಯಾನವು ರಾಷ್ಟ್ರಮಟ್ಟದಲ್ಲಿ ಚುರುಕುಗೊಂಡಿದೆ. ಇದರ ಭಾಗವಾಗಿ, ದೆಹಲಿಯ ಸುರ್ಜಿತ್ ಭವನದಲ್ಲಿ ಸಮಾಜವಾದಿ ಸಂಗಮ್ ವತಿಯಿಂದ "ಆರ್ಎಸ್ಎಸ್ ನೋಂದಣಿ ಯಾಕೆ ಅಗತ್ಯ?" ಎಂಬ ಸಂವಾದ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಎಸ್ಎಸ್ ಹಣಕಾಸು ಮೂಲಗಳ ಕುರಿತು ಚರ್ಚಿಸಲಿದ್ದಾರೆ.
- Harish GR
- Updated on: Jul 28, 2026
- 12:23 pm
ಸಮಾಜ ನಿರ್ಮಾಣದ ಅಡಿಪಾಯವೇ ತಾಯ್ತನ; ಮಾತೃತ್ವದ ಕುರಿತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ
ನವದೆಹಲಿಯಲ್ಲಿ ವಿಶ್ವ ಮಾಂಗಲ್ಯ ಸಭಾ ಆಯೋಜಿಸಿದ್ದ 2 ದಿನಗಳ ರಾಷ್ಟ್ರೀಯ ಜಾಗೃತಿ ಸಮ್ಮೇಳನವು ಬಹಳ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆಧುನಿಕ ಯುಗದಲ್ಲಿ ಮಾತೃತ್ವದ ವಿಷಯದ ಕುರಿತು ನಡೆದ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಭಾಗವಹಿಸಿ ಮಾತೃತ್ವ, ಕುಟುಂಬ ವ್ಯವಸ್ಥೆ ಮತ್ತು ಭಾರತೀಯ ಸಂಸ್ಕೃತಿಯ ಮಹತ್ವದ ಕುರಿತು ಹಲವು ಹೇಳಿಕೆಗಳನ್ನು ನೀಡಿದರು. ಈ ವಿಷಯವು ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದೆ. ಆದರೆ ಭಾರತೀಯ ಸಂಪ್ರದಾಯ, ಸಂಸ್ಕೃತಿ ಮತ್ತು ಸಮಾಜದ ರಚನೆಯಲ್ಲಿ ತಾಯ್ತನವು ಬಹಳ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ಅವರು ಹೇಳಿದರು.
- Sushma Chakre
- Updated on: Jul 24, 2026
- 11:00 pm
RSS ವಿರುದ್ಧ ಅವಹೇಳನಕಾರಿ ಪೋಸ್ಟ್ :ಸಚಿವ ಪ್ರಿಯಾಂಕ್ ಖರ್ಗೆ,ನಲಪಾಡ್ಗೆ ಬಿಗ್ ಶಾಕ್
ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (Rashtriya Swayamsevak Sangh) ವಿರುದ್ಧ ಮುಗಿಬಿದ್ದಿದ್ದಾರೆ. ಕಳೆದೊಂದು ತಿಂಗಳಿನಿಂದ ಆರ್ಎಸ್ಎಸ್ ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ್ದಾರೆ. ಇದರ ಮಧ್ಯೆ ಆರ್ಎಸ್ಎಸ್ (RSS) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಕೇಳಿಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಖರ್ಗೆ ಹಾಗೂ ಮೊಹಮ್ಮದ್ ನಲಪಾಡ್ಗೆ ಬಿಗ್ ಶಾಕ್ ಕೊಟ್ಟಿದೆ.
- Ramesha M
- Updated on: Jul 21, 2026
- 6:09 pm
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಪ್ರಿಯಾಂಕ್ ಖರ್ಗೆಗೆ ಪ್ರಲ್ಹಾದ್ ಜೋಶಿ ತಿರುಗೇಟು
ಆರ್ಎಸ್ಎಸ್ ಸಭೆಗಳ ನಂತರ ಗಲಭೆಗಳು ಸಂಭವಿಸುತ್ತವೆ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬಲವಾಗಿ ಖಂಡಿಸಿದ್ದಾರೆ. ಖರ್ಗೆಯವರ ಹೇಳಿಕೆಯನ್ನು ಮಕ್ಕಳಾಟಿಕೆ ಎಂದು ಕರೆದ ಜೋಶಿ, ಆಡಳಿತ ಪಕ್ಷವು ರಾಜ್ಯದ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಅನಗತ್ಯ ವಿಷಯಗಳ ಮೇಲೆ ಗಮನ ಹರಿಸುತ್ತಿದೆ ಎಂದು ತೀವ್ರವಾಗಿ ಟೀಕಿಸಿದ್ದಾರೆ.
- Ravi H Mooki
- Updated on: Jul 12, 2026
- 8:11 pm
ಆರ್ಎಸ್ಎಸ್ ಸಭೆ ಮುಕ್ತಾಯ: ರಾಮಮಂದಿರ ದೇಣಿಗೆ ದುರ್ಬಳಕೆಗೆ ವಿಷಾದ, ಜನಸಂಖ್ಯೆ ಅಸಮತೋಲನದ ಬಗ್ಗೆ ಕಳವಳ
Belagavi RSS Meeting End: ಬೆಳಗಾವಿಯಲ್ಲಿ ನಡೆದ ಆರ್ಎಸ್ಎಸ್ನ ಮೂರು ದಿನಗಳ ವಾರ್ಷಿಕ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮೋಹನ್ ಭಾಗವತ್, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಪ್ರಚಾರಕರು ಭಾಗಿಯಾಗಿದ್ದರು. 2026ರ ಶಾಖಾ ವಿಸ್ತರಣೆ ಮತ್ತು ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Sahadev Mane
- Updated on: Jul 12, 2026
- 8:27 pm
ಆರ್ಎಸ್ಎಸ್ನವರು ಯಾವಾಗೆಲ್ಲಾ ಸಭೆ ಸೇರುತ್ತಾರೋ, ಆವಾಗೆಲ್ಲಾ ಗಲಭೆಗಳಾಗಿವೆ: ಪ್ರಿಯಾಂಕ್ ಖರ್ಗೆ
Priyank Kharge Sparks on RSS: ಆರ್ಎಸ್ಎಸ್ ಕುರಿತಾಗಿ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಸದ್ಯ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮಧ್ಯೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಇದಕ್ಕೆ ಧ್ವನಿ ಗೂಡಿಸಿದ್ದು, ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ. ‘‘ಈ ಬಗ್ಗೆ ಇಂಟೆಲಿಜೆನ್ಸ್ ಕಡೆಯಿಂದ ನಮಗೂ ಕೆಲ ಮಾಹಿತಿ ಬಂದಿದೆ, ಸೂಕ್ತ ಸಮಯದಲ್ಲಿ ಹೇಳುತ್ತೇನೆ’’ ಎಂದಿದ್ದಾರೆ.
- Sunil MH
- Updated on: Jul 11, 2026
- 4:41 pm
RSS ಸಭೆ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ: ಈಗೇನಾಗುತ್ತೆ ನೋಡಬೇಕು; ಬಿಕೆ ಹರಿಪ್ರಸಾದ್
ಬೆಳಗಾವಿಯಲ್ಲಿ ನಡೆಯುತ್ತಿರುವ ಆರ್ಎಸ್ಎಸ್ ಸಭೆ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯಿಸಿದ್ದು, RSS ಸಭೆ ಮಾಡಿದ ಬಳಿಕ ಏನಾದರೂ ಅನಾಹುತ ಆಗೇ ಆಗಿದೆ. ಈ ಸಭೆ ಬಳಿಕ ಏನಾಗುತ್ತೆ ಅಂತಾ ನೋಡಬೇಕು ಎಂದು ಹೇಳಿದ್ದಾರೆ. ಇನ್ನು ಅಯೋಧ್ಯೆ ರಾಮಮಂದಿರ ಹುಂಡಿ ಹಣ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ.
- Prasanna Gaonkar
- Updated on: Jul 10, 2026
- 6:08 pm