AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS

RSS

RSS – Rashtriya Swayamsevak Sangh

RSS ನೋಂದಣಿ ವಿವಾದ: ಗೃಹ ಸಚಿವ ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಆರ್​​. ಅಶೋಕ್​​ ಕೌಂಟರ್​​

ಸಚಿವ ಪ್ರಿಯಾಂಕ್ ಖರ್ಗೆ ಅವರ ಆರ್‌ಎಸ್‌ಎಸ್ ನೋಂದಣಿ ಹೇಳಿಕೆಗೆ ವಿಪಕ್ಷ ನಾಯಕ ಅಶೋಕ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಂವಿಧಾನದಲ್ಲಿ ನೋಂದಣಿ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಅಂಬೇಡ್ಕರ್ ಅವರ ಸಂವಿಧಾನವನ್ನು ಓದಿ ಅರ್ಥಮಾಡಿಕೊಳ್ಳುವಂತೆ ಪ್ರಿಯಾಂಕ್ ಖರ್ಗೆಗೆ ಸವಾಲೆಸೆದ ಅಶೋಕ್, ಬ್ರಿಟಿಷರ ಆಳ್ವಿಕೆಯಲ್ಲೇ ಆರ್‌ಎಸ್‌ಎಸ್ ಸ್ಥಾಪನೆಯಾಗಿದೆ, ಅದನ್ನು ಯಾರೂ ಪ್ರಶ್ನಿಸಿರಲಿಲ್ಲ ಎಂದಿದ್ದಾರೆ.

ನ್ಯೂಯಾರ್ಕ್​ನಲ್ಲಿ ಆಗಸ್ಟ್ 29ರಂದು ಏಕತಾ ಆಚರಣೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿ

ಅಮೆರಿಕ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಆಗಸ್ಟ್ 29ರಂದು ನ್ಯೂಯಾರ್ಕ್‌ನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೂ ನ್ಯೂಯಾರ್ಕ್​ನಲ್ಲಿ ಹೌಡಿ ಮೋದಿ ಎಂಬ ಅದ್ದೂರಿ ಕಾರ್ಯಕ್ರಮವನ್ನು ಅನಿವಾಸಿ ಭಾರತೀಯರು ಆಯೋಜಿಸಿದ್ದರು. ಇದೀಗ ಮೋಹನ್ ಭಾಗವತ್ ಕೂಡ 5000ಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕ ಭೇಟಿ; ನ್ಯೂಯಾರ್ಕ್​ನಲ್ಲಿ ಸಾಂಪ್ರದಾಯಿಕ ಸ್ವಾಗತ

ಈ ವಾರ ಮೋಹನ್ ಭಾಗವತ್ ಅವರು ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಸ್ಟೇಟ್ಸ್ ಮತ್ತು ಕೆನಡಾ ಒಳಗೊಂಡ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಅವರ ಪ್ರವಾಸದ ಪ್ರಮುಖ ಆಕರ್ಷಣೆಯಾಗಿ ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5,000ಕ್ಕೂ ಹೆಚ್ಚು ಜನರ ಸಮಾವೇಶ ನಡೆಯಲಿದೆ. 2014ರಲ್ಲಿ ಇದೇ ಸ್ಥಳದಲ್ಲಿ ಸುಮಾರು 20,000 ಭಾರತೀಯ ಅಮೆರಿಕನ್ನರು ಪ್ರಧಾನಿ ಮೋದಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು.

ಕರ್ನಾಟಕದಲ್ಲಿ RSS ವಿರುದ್ಧ ಯಾವುದೇ ಕೇಸ್ ಇಲ್ಲ: ಗೃಹ ಸಚಿವ ಖರ್ಗೆ ಸ್ಪಷ್ಟನೆ

ಆರ್ ಎಸ್ ಎಸ್ ಸಂಘಟನೆಯ ನೋಂದಣಿ ಹಾಗೂ ಕಾನೂನು ಮಾನ್ಯತೆಯ ಕುರಿತಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರಂತರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದಾರೆ. ಈ ಹಿಂದೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾಗಿದ್ದಾಗಲೂ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಇದೀಗ ರಾಜ್ಯದ ಗೃಹ ಸಚಿವರಾಗಿದ್ದು, ಸಂಘದ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರವನ್ನು ಬರೆದಿದ್ದಾರೆ. ಸದ್ಯ ಇದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುಚರ್ಚಿತ ವಿಚಾರವಾಗಿದೆ. ಇದರ ಮಧ್ಯೆ ಕರ್ನಾಟಕದಲ್ಲಿ ಆರ್​​ಎಸ್​​ಎಸ್ ವಿರುದ್ಧದ ಒಂದೇ ಒಂದು ಕೇಸು ಇಲ್ಲ ಎನ್ನುವುದು ಬಹಿರಂಗವಾಗಿದೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೆನಡಾ ಭೇಟಿಗೆ ಬೆಂಬಲ; ಪ್ರವೇಶ ತಡೆಯುವ ಯತ್ನಕ್ಕೆ 100ಕ್ಕೂ ಹೆಚ್ಚು ಹಿಂದೂ ಸಂಘಟನೆಗಳ ವಿರೋಧ

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕೆನಡಾ ಭೇಟಿಗೆ ಬೆಂಬಲ ಸೂಚಿಸಿ 100ಕ್ಕೂ ಹೆಚ್ಚು ಕೆನಡಿಯನ್ ಸಂಘಟನೆಗಳು ಹಾಗೂ ನಾಗರಿಕ ಹಕ್ಕುಗಳ ಒಕ್ಕೂಟಗಳು ಕೆನಡಾ ಸರ್ಕಾರಕ್ಕೆ ಪತ್ರ ಬರೆದಿವೆ. ರಾಜಕೀಯ ಒತ್ತಡಗಳಿಗೆ ಮಣಿಯದೆ, ಕೇವಲ ಸಾಕ್ಷ್ಯಾಧಾರಗಳು ಮತ್ತು ಕಾನೂನು ಪ್ರಕ್ರಿಯೆಗಳ ಆಧಾರದ ಮೇಲೆ ಅವರ ಪ್ರವೇಶದ ಕುರಿತು ನಿರ್ಧಾರ ಕೈಗೊಳ್ಳಬೇಕು ಎಂದು ಒಟ್ಟಾವಾ ಸರ್ಕಾರವನ್ನು ಒತ್ತಾಯಿಸಲಾಗಿದೆ. ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೆನಡಾ ಪ್ರವೇಶಕ್ಕೆ ಅನುಮತಿ ನೀಡಬಾರದು ಮತ್ತು ಅವರನ್ನು ‘ಅನರ್ಹ’ ಎಂದು ಘೋಷಿಸಬೇಕು ಎಂದು ಎನ್‌ಡಿಪಿ ಸಂಸದರಾದ ಜೆನ್ನಿ ಕ್ವಾನ್, ಹೀಥರ್ ಮೆಕ್‌ಫರ್ಸನ್ ಸೇರಿದಂತೆ ಹಲವು ಸಂಘಟನೆಗಳು ಒತ್ತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಬಿಜೆಪಿಯವರು ತಾಕತ್ತಿದ್ದರೆ RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಬಿ.ಕೆ.ಹರಿಪ್ರಸಾದ್

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸದನ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆಂದು ಆರೋಪಿಸಿ, ಬಿಜೆಪಿ ನಾಯಕರನ್ನು "ಹೇಡಿಗಳು" ಎಂದು ಕರೆದಿದ್ದಾರೆ. ವಂದೇ ಮಾತರಂ ಗೀತೆ ಸಂಬಂಧ ಕಾಂಗ್ರೆಸ್​​ ನಿರ್ಣಯದ ಬಗ್ಗೆಯೂ ಸ್ಪಷ್ಟಪಡಿಸಿದ ಅವರು, ಇವರು ನಮ್ಮನ್ನು ಗಲ್ಲಿಗಾದರೂ ಹಾಕಲಿ, ಜೈಲಿಗಾದರೂ ಹಾಕಲಿ. ನಾವು ಹಾಡುವುದು ವಂದೇ ಮಾತರಂ ಗೀತೆಯ ಎರಡು ಚರಣ ಮಾತ್ರ ಎಂದು ಪುನರುಚ್ಛರಿಸಿದ್ದಾರೆ.

ಜಾತಿವಾದ, ಕೋಮುವಾದ, ಮನುವಾದದ ವಿಷ ತುಂಬಿರುವ ಸಾವಿರ ತಲೆಯ ವಿಷಪೂರಿತ ಹಾವು; ಯತೀಂದ್ರ ಸಿದ್ದರಾಮಯ್ಯ

ಆರ್​​​ಎಸ್​​​ಎಸ್ ನೋಂದಣಿ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಖ್ಯವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರ್​​​ಎಸ್​​ಎಸ್​​ ವಿರುದ್ಧ ಮುಗಿಬಿದ್ದಿದ್ದಾರೆ. ಇದರ ಮಧ್ಯೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸಹ ಆರ್​​​ಎಸ್​​ಎಸ್​​​ ಅನ್ನು ವಿಷದ ಸರ್ಪಕ್ಕೆ ಹೋಲಿಸಿ ವಾಗ್ದಾಳಿ ನಡೆಸಿದ್ದು, ಇದೀಗ ಈ ವಿಡಿಯೋ ಫುಲ್ ವೈರಲ್ ಆಗಿದೆ.

  • Ram
  • Updated on: Aug 17, 2026
  • 4:29 pm

RSS ನೋಂದಣಿ ಆಗಿಲ್ಲ, ಆಗೋದು ಇಲ್ಲ: ಪ್ರಿಯಾಂಕ್ ಖರ್ಗೆ ಸಂತೋಷ್​​ ತಿರುಗೇಟು

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರ್ಯಕ್ರಮ ಮಾಡಲು ಪೂರ್ವನುಮತಿ ಕಡ್ಡಾಯಗೊಳಿಸವು ಸಂಬಂಧ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಈ ಮೂಲಕ ಆರ್​​​​​ಎಸ್​​​​​ಎಸ್​​ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ನಾಯಕರ ನಡುವಿನ ಆರೋಪ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಪ್ರತಿಕ್ರಿಯಿಸಿದ್ದು, ಸಂಘ ನೋಂದಣಿ ಮಾಡುವ ಅವಶ್ಯಕತೆ ಇಲ್ಲ. ಆರ್​ಎಸ್​​ಎಸ್​ ರಿಜಿಸ್ಟ್ರೇಷನ್ ಆಗಿರಲಿಲ್ಲ, ಮುಂದೆಯೂ ಆಗಲ್ಲ ಎಂದು ಪ್ರಿಯಾಂಕ್ ಖರ್ಗೆಗೆ ತಿರುಗೇಟು ನೀಡಿದ್ದಾರೆ.

ಹೊಸ ಕಾಯ್ದೆ ಮೂಲಕ RSS ಚಟುವಟಿಕೆಗಳಿಗೆ ಬ್ರೇಕ್ ಆರೋಪ: ವಿಧೇಯಕದ ಅಂಶಗಳನ್ನ ಬಿಚ್ಚಿಟ್ಟ ಗೃಹ ಸಚಿವ

ವಿಧೇಯಕದ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ವಿಪಕ್ಷಗಳು ವಿಧೇಯಕವನ್ನು ಓದಿದ್ದಾರಾ? ವಿಧೇಯಕದ ಚರ್ಚೆ ಮಾಡಲಿ, ಏನಾದರೂ ತಪ್ಪಿದ್ರೆ ನೋಡೋಣ. ಈ ವಿಧೇಯಕದಲ್ಲಿ ಆರ್​ಎಸ್​ಎಸ್ ಬಗ್ಗೆ ಇದೆಯಾ? ಸರ್ಕಾರಿ ಜಾಗವನ್ನು ಉಪಯೋಗಿಸುವುದಕ್ಕೆ ಅನುಮತಿ ಬೇಕಲ್ವಾ? ಇದರಲ್ಲಿ ಸಮಸ್ಯೆ ಏನಿದೆ? ನಮ್ಮ ಪಕ್ಷ 140 ವರ್ಷ ಹಳೆಯದ್ದು, ಆದ್ರೂ ಅನುಮತಿ ಪಡೆಯುತ್ತೇವೆ. ಈ ವಿಧೇಯಕಕ್ಕೂ ನೋಂದಣಿ ಆಗದಿರುವುದಕ್ಕೂ ಸಂಬಂಧವಿಲ್ಲ. ನೀವು ಸಲಹೆ ಕೊಡಿ ನಾವು ಸ್ವಾಗತ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಭಾರತದ ಉಜ್ವಲ ಭವಿಷ್ಯಕ್ಕಾಗಿ ಸಾಮೂಹಿಕ ಹೊಣೆಗಾರಿಕೆ: ಸುನಿಲ್ ಅಂಬೇಕರ್

ಭಾರತದ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನ ಸಾಮೂಹಿಕ ಹೊಣೆಗಾರಿಕೆ ಪ್ರಮುಖವಾಗಿದೆ ಎಂದು ಆರ್‌ಎಸ್‌ಎಸ್ ನಾಯಕ ಸುನಿಲ್ ಅಂಬೇಕರ್ ತಿಳಿಸಿದ್ದಾರೆ. ಕೇವಲ ಆರ್ಥಿಕ ಅಭಿವೃದ್ಧಿಯಷ್ಟೇ ಅಲ್ಲದೆ ನೈತಿಕ ಮೌಲ್ಯಗಳು, ಸಾಮಾಜಿಕ ಸಾಮರಸ್ಯ ಹಾಗೂ 'ಪಂಚ ಪ್ರಾಣ' ತತ್ತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶವನ್ನು ಸಶಕ್ತಗೊಳಿಸಲು ಸಾಧ್ಯ ಎಂದು ಅವರು ತಮ್ಮ ಲೇಖನದಲ್ಲಿ ಪ್ರತಿಪಾದಿಸಿದ್ದಾರೆ.

ಹೊಸ ಕಾಯ್ದೆಯೊಂದಿಗೆ ಕರ್ನಾಟಕದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ?

ಕರ್ನಾಟಕದಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಹೊಸ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಂಘಟನೆಗಳು ನಡೆಸುವ ಪಥಸಂಚಲನ, ಸಭೆ, ಕಾರ್ಯಕ್ರಮ ಹಾಗೂ ಇತರೆ ಚಟುವಟಿಕೆಗಳಿಗೆ ನಿಯಂತ್ರಣ ಹೇರುವ ಉದ್ದೇಶದ ಮಹತ್ವದ ವಿಧೇಯಕವೊಂದು ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದ್ದು, ಇದೇ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಿದೆ. ಏನಿದು ಕಾಯ್ದೆ?

ವಿಶಾಖಪಟ್ಟಣದಲ್ಲಿ ಆಗಸ್ಟ್ 19ರಿಂದ ಆರ್​ಎಸ್​ಎಸ್​ ಅಖಿಲ ಭಾರತ ಸಮನ್ವಯ ಬೈಠಕ್

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಆರ್‌ಎಸ್‌ಎಸ್ ಅಖಿಲ ಭಾರತ ಸಮನ್ವಯ ಬೈಠಕ್ ನಡೆಯಲಿದೆ. ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಳ್ಳಲಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ, ರಾಜಕೀಯ ಮತ್ತು ನೀತಿ ವಿಷಯಗಳ ಕುರಿತು ಪ್ರಮುಖ ನಿರ್ದೇಶನಗಳನ್ನು ನೀಡಲು ಸಜ್ಜಾಗಿದೆ. ಈ ಬಾರಿ, ಅತ್ಯಂತ ಮಹತ್ವದ ಅಖಿಲ ಭಾರತ ಸಮನ್ವಯ ಬೈಠಕ್ ಆಂಧ್ರಪ್ರದೇಶದಲ್ಲಿ ನಡೆಯಲಿದೆ. ಈ ವಾರ್ಷಿಕ ಸಭೆ ಆಗಸ್ಟ್ 19ರಿಂದ 21ರವರೆಗೆ ವಿಶಾಖಪಟ್ಟಣಂ ಜಿಲ್ಲೆಯ ಗುಡಿಲೋವಾದಲ್ಲಿ 3 ದಿನಗಳ ಕಾಲ ನಡೆಯಲಿದೆ.