AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI

RBI

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಕೇಂದ್ರ ಬ್ಯಾಂಕಿಂಗ್ ಸಂಸ್ಥೆಯಾಗಿದ್ದು, ಭಾರತದ ಆರ್ಥಿಕ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 1935 ರಲ್ಲಿ ಸ್ಥಾಪಿತವಾದ ಆರ್‌ಬಿಐ ಭಾರತೀಯ ರೂಪಾಯಿಯನ್ನು ವಿತರಿಸುವ ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ, ರಾಷ್ಟ್ರದ ಹಣಕಾಸು ನೀತಿಯನ್ನು ನಿಯಂತ್ರಿಸುತ್ತದೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುತ್ತದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇದು ಕೇಂದ್ರೀಯ ನಿರ್ದೇಶಕರ ಮಂಡಳಿಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತದೆ. ಆರ್‌ಬಿಐ ಬ್ಯಾಂಕುಗಳನ್ನು ನಿಯಂತ್ರಿಸುತ್ತದೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ, ಹಣದುಬ್ಬರವನ್ನು ನಿಯಂತ್ರಿಸಲು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನೀತಿಗಳನ್ನು ಜಾರಿಗೊಳಿಸುತ್ತದೆ.

ಇನ್ನೂ ಹೆಚ್ಚು ಓದಿ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ; ಸಣ್ಣ ಎನ್​ಬಿಎಫ್​ಸಿಗಳಿಗೆ ನೊಂದಣಿ ವಿನಾಯಿತಿ

RBI rises collateral-free loan limit for MSMEs: ಎಂಎಸ್​ಎಂಇಗಳಿಗೆ ಅಡಮಾನರಹಿತವಾಗಿ ನೀಡುವ ಸಾಲದ ಮಿತಿಯನ್ನು 10 ಲಕ್ಷ ರೂನಿಂದ 20 ಲಕ್ಷ ರೂಗೆ ಏರಿಸಲಾಗಿದೆ. ಎಂಪಿಸಿ ಸಭೆ ಬಳಿಕ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಈ ನಿರ್ಧಾರ ಪ್ರಕಟಿಸಿದ್ದಾರೆ. 1,000 ಕೋಟಿ ರೂಗಿಂತ ಕಡಿಮೆ ಅಸೆಟ್ ಹೊಂದಿರುವ ಎನ್​ಬಿಎಫ್​ಸಿಗಳಿಗೆ ನೊಂದಣಿಯಿಂದ ವಿನಾಯಿತಿ ಕೂಡ ಕೊಡಲಾಗಿದೆ.

ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್​ಬಿಐ

RBI repo rate remain unchanged on 5.25pc: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿಯು ರಿಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ತೀರ್ಮಾನಿಸಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಶುಕ್ರವಾರ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಆರ್​ಬಿಐನ ಪಾಲಿಸಿ ನಿಲುವನ್ನು ನ್ಯೂಟ್ರಲ್​ನಲ್ಲೇ ಮುಂದುವರಿಸುವ ತೀರ್ಮಾನವನ್ನೂ ಮಾಡಲಾಗಿದೆ.

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ

RBI Sachet Portal helps filing complaint against online fraud: ವಂಚನೆಯ ಸ್ಕೀಮ್​ಗಳಲ್ಲಿ ಹಣ ಕಳೆದುಕೊಂಡಿದ್ದೀರಾ? sachet.rbi.org.in ನಲ್ಲಿ ನಿಮ್ಮ ದೂರು ದಾಖಲಿಸಬಹುದು. RBI ನ ಸಚೇತ್ ಪೋರ್ಟಲ್​ನಲ್ಲಿ ದಾಖಲಾಗುವ ದೂರಿಗೆ ಸಂಬಂಧಿಸಿ ಕ್ರಮಕ್ಕಾಗಿ ಸೂಕ್ತ ಅಧಿಕಾರಿಗಳಿಗೆ ಪ್ರಕರಣ ರವಾನಿಸುತ್ತದೆ. ಸ್ಕೀಮ್ ಆಫರ್ ಮಾಡುವ ಕಂಪನಿಗಳು ರೆಗ್ಯುಲೇಟರಿ ಮಾನ್ಯತೆ ಹೊಂದಿದೆಯಾ ಎಂದು ಈ ಪೋರ್ಟಲ್​ನಲ್ಲಿ ಪರಿಶೀಲಿಸಬಹುದು.

ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು

Govt dismisses viral news of Rs 500 notes being stopped: 500 ರೂ ನೋಟುಗಳನ್ನು ಅಮಾನ್ಯಗೊಳಿಸಲಾಗುವುದು. ಮಾರ್ಚ್​ನಿಂದ ಎಟಿಎಂಗಳಲ್ಲಿ ಈ ನೋಟು ಸಿಗಲ್ಲ ಎನ್ನುವಂತಹ ಸುದ್ದಿ ವೈರಲ್ ಆಗಿದೆ. ಆದರೆ, ಸರ್ಕಾರ ಮತ್ತೊಮ್ಮೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, 500 ರೂ ನೋಟುಗಳ ಚಲಾವಣೆ ನಿಲ್ಲಿಸುವುದಿಲ್ಲ ಎಂದಿದೆ. ಪಿಐಬಿ ಫ್ಯಾಕ್ಟ್ ಚೆಕ್ ತಂಡವು ಎಕ್ಸ್​ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ.

ಜನವರಿಯಲ್ಲಿ ಹೊಸ ವರ್ಷಾಚರಣೆಯಿಂದ ಗಣರಾಜ್ಯೋತ್ಸವವರೆಗೂ 16 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ

2026 January total 16 days holidays as per RBI calendar: 2026ರ ಜನವರಿ ತಿಂಗಳಲ್ಲಿ ಹೊಸ ವರ್ಷಾಚರಣೆ, ಗಣರಾಜ್ಯೋತ್ಸವ, ಮಕರ ಸಂಕ್ರಾಂತಿ ಇತ್ಯಾದಿ ವಿವಿಧ ವಿಶೇಷ ದಿನಗಳಿಗೆ. ಆರ್​ಬಿಐ ಬಿಡುಗಡೆ ಮಾಡಿದ ಕ್ಯಾಲೆಂಡರ್ ಪ್ರಕಾರ ಜನವರಿಯಲ್ಲಿ ಒಟ್ಟು 16 ರಜಾದಿನಗಳಿವೆ. ಇದರಲ್ಲಿ ಶನಿವಾರ ಮತ್ತು ಭಾನುವಾರದ ರಜೆಗಳು, ಪ್ರಾದೇಶಿಕ ರಜೆಗಳೂ ಒಳಗೊಂಡಿವೆ.

ಕರ್ನಾಟಕದ ವಿವಿಧ ಬ್ಯಾಂಕುಗಳಲ್ಲಿ ಕ್ಲೇಮ್ ಆಗದೇ ಉಳಿದಿರುವ ಹಣ ಎಷ್ಟು ಗೊತ್ತಾ? ಅನ್​ಕ್ಲೇಮ್ಡ್ ಡೆಪಾಸಿಟ್ ಮರಳಿಪಡೆಯುವುದು ಹೇಗೆ?

RBI campaign to return unclaimed bank deposits: ಹತ್ತಕ್ಕೂ ಹೆಚ್ಚು ವರ್ಷಗಳಿಂದ ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗಳು ಮತ್ತು ಠೇವಣಿಗಳನ್ನು ವಿಶೇಷ ನಿಧಿಗೆ ವರ್ಗಾವಣೆ ಮಾಡಲಾಗುತ್ತದೆ. ಈ ರೀತಿ ದೇಶಾದ್ಯಂತ 75,000 ಕೋಟಿ ರೂನಷ್ಟು ಮೊತ್ತದ ಹಣ ಈ ನಿಧಿಯಲ್ಲಿದೆ. ಕರ್ನಾಟಕದ ವಿವಿಧ ಬ್ಯಾಂಕುಗಳ ಇಂಥ ಹಣವೇ 3,400 ಕೋಟಿ ರೂ ಇದೆ ಎನ್ನಲಾಗಿದೆ.

ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

Know what happens if government prints more money: ಸರ್ಕಾರಗಳು ಹೆಚ್ಚೆಚ್ಚು ನೋಟುಗಳನ್ನು ಪ್ರಿಂಟ್ ಮಾಡಿ ಸಾಲ ಇತ್ಯಾದಿ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾ? ಹಾಗೆ ಮಾಡಿದಲ್ಲಿ ಅರ್ಥ ವ್ಯವಸ್ಥೆಯೇ ಹಾಳಾಗಿ ಹೋಗುತ್ತದೆ. ಅಂಥ ದುಸ್ಸಾಹಸ ಮಾಡಿದ ದೇಶಗಳು ಈಗಲೂ ಒದ್ದಾಡುತ್ತಿವೆ. ನೋಟು ಎಷ್ಟು ಪ್ರಿಂಟ್ ಮಾಡಬೇಕು, ಹಣ ಎಷ್ಟು ಹೆಚ್ಚಿಸಬೇಕು ಎಂಬುದಕ್ಕೆ ಒಂದು ಲೆಕ್ಕಾಚಾರ ಇರುತ್ತದೆ. ಆ ಕ್ರಮ ಮೀರಿದರೆ ದೇಶ ಹಾಳಾಗುತ್ತದೆ.

RBI campaign: ಜ. 1ರಿಂದ ಬ್ಯಾಂಕ್ ಗ್ರಾಹಕರ ದೂರುಗಳ ಶೀಘ್ರ ವಿಲೇವಾರಿಗೆ ಎರಡು ತಿಂಗಳ ಅಭಿಯಾನ

RBI to start 2 month campaign from Jan 1st to resolve ombudsman grievances: ಆರ್​ಬಿಐನ ಒಂಬುಡ್ಸ್​ಮನ್ ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ಬಾಕಿ ಇರುವ ದೂರುಗಳನ್ನು ಇತ್ಯರ್ಥಪಡಿಸಲು ಅಭಿಯಾನ ನಡೆಯಲಿದೆ. ಜನವರಿ 1ರಿಂದ ಫೆಬ್ರುವರಿ 28ರವರೆಗೆ ಎರಡು ತಿಂಗಳ ಅಭಿಯಾನ ನಡೆಸುವುದಾಗಿ ಆರ್​ಬಿಐ ಹೇಳಿದೆ. ಆರ್​ಬಿಐ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಗವರ್ನರ್ ಸಂಜಯ್ ಮಲ್ಹೋತ್ರಾ ಈ ವಿಚಾರ ತಿಳಿಸಿದ್ದಾರೆ.

ಆರ್​ಬಿಐನಿಂದ ಲಕ್ಷ ಕೋಟಿ ರೂ ಒಎಂಒ ಖರೀದಿ; 5 ಬಿಲಿಯನ್ ಡಾಲರ್ ಕರೆನ್ಸಿ ಖರೀದಿಗೆ ನಿರ್ಧಾರ; ಏನಿದರ ಮಹತ್ವ

RBI announces decisions of Rs 1 lakh crore OMO purchase and 5 billion USD currency swap: ಭಾರತೀಯ ರಿಸರ್ವ್ ಬ್ಯಾಂಕ್​ನ ಎಂಪಿಸಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳಲ್ಲಿ ಓಪನ್ ಮಾರ್ಕೆಟ್ ಆಪರೇಷನ್ಸ್ ಖರೀದಿಯೂ ಒಂದು. ಈ ತಿಂಗಳು ಆರ್​ಬಿಐ 1 ಲಕ್ಷ ಕೋಟಿ ರೂ ಮೊತ್ತದಷ್ಟು ಒಎಂಒ ಖರೀದಿ ಮಾಡಲಿದೆ. ಹಾಗೆಯೇ, 5 ಬಿಲಿಯನ್ ಡಾಲರ್ ಕರೆನ್ಸಿಯನ್ನು ಖರೀದಿಸಲಿದೆ. ಈ ಎರಡು ಕ್ರಮದಿಂದ ಹಣದ ಹರಿವು ಹೆಚ್ಚಲಿದೆ.

RBI MPC Meet: ಬಡ್ಡಿದರ 25 ಮೂಲಾಂಕಗಳಷ್ಟು ಇಳಿಸಿದ ಆರ್​ಬಿಐ; ರಿಪೋ ದರ ಶೇ. 5.25ಕ್ಕೆ ಇಳಿಕೆ

RBI Governor Sanjay Malhotra announces policy decisions of MPC: ತತ್​ಕ್ಷಣವೇ ಜಾರಿಗೆ ಬರುವಂತೆ ಆರ್​ಬಿಐ ತನ್ನ ರಿಪೋ ದರವನ್ನು ಶೇ. 5.5ರಿಂದ ಶೇ. 5.25ಕ್ಕೆ ಇಳಿಸಿದೆ. ಆರ್​ಬಿಐನ ಪಾಲಿಸಿ ಸ್ಟ್ಯಾನ್ಸ್ ಅಥವಾ ನೀತಿ ನಿಲುವನ್ನು ನ್ಯೂಟ್ರಲ್​ಗೆ ಇಡಲಾಗಿದೆ. ಈ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು. ಹಣದುಬ್ಬರ ಶೇ. 2ರಷ್ಟಿರಬಹುದು ಎಂದೂ ಅಂದಾಜಿಸಲಾಗಿದೆ.

ಟ್ಯಾರಿಫ್​ನಿಂದ ರುಪಾಯಿ ಮೌಲ್ಯ ಕುಸಿದಿದೆ, ಆದರೆ, ಕರೆನ್ಸಿ ದುರ್ಬಲಗೊಂಡಿಲ್ಲ: ಎಸ್​ಬಿಐ ರಿಸರ್ಚ್

SBI Research report defends Rupee: ಡಾಲರ್ ಎದುರು ರುಪಾಯಿ ಮೌಲ್ಯ ಗುರುವಾರ ಒಂದು ಹಂತದಲ್ಲಿ 90.56ರವರೆಗೂ ಕುಸಿದಿದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ರುಪಾಯಿ ಮೌಲ್ಯ ಅತಿಹೆಚ್ಚು ಕುಸಿದಿದೆಯದರೂ, ಕರೆನ್ಸಿ ದುರ್ಬಲಗೊಂಡಿಲ್ಲ. ಅತಿ ಕಡಿಮೆ ಪ್ರಕ್ಷುಬ್ದತೆಯ ಕರೆನ್ಸಿಗಳಲ್ಲಿ ರುಪಾಯಿಯೂ ಒಂದು ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಭಾರತದಲ್ಲಿ ಈ 3 ಬ್ಯಾಂಕುಗಳು ಅತೀ ಸುರಕ್ಷಿತವೆಂದು ಆರ್​ಬಿಐ ಘೋಷಣೆ; ಇವುಗಳಿಗೆ ವಿಶೇಷ ಮಾರ್ಗಸೂಚಿ

RBI declares these 3 as safest banks in India: ದೇಶದ ಮೂರು ಅಗ್ರಗಣ್ಯ ಬ್ಯಾಂಕುಗಳನ್ನು ಡೊಮೆಸ್ಟಿಕ್ ಸಿಸ್ಟಮಿಕಲಿ ಇಂಪಾರ್ಟೆಂಟ್ ಬ್ಯಾಂಕುಗಳೆಂದು ಆರ್​ಬಿಐ ವರ್ಗೀಕರಿಸಿದೆ. ಎಸ್​ಬಿಐ, ಎಚ್​ಡಿಎಫ್​ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕುಗಳು ದೇಶದ ಅತ್ಯಂತ ಸುರಕ್ಷಿತ ಮತ್ತು ಅತಿ ಮುಖ್ಯ ಬ್ಯಾಂಕುಗಳೆನಿಸಿವೆ. ಈ ಮೂರು ಬ್ಯಾಂಕುಗಳಿಗೆ ಆರ್​​ಬಿಐ ವಿಶೇಷ ಮತ್ತು ಹೆಚ್ಚುವರಿ ಮಾರ್ಗಸೂಚಿ ನೀಡಿದೆ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು