AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI

RBI

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಕೇಂದ್ರ ಬ್ಯಾಂಕಿಂಗ್ ಸಂಸ್ಥೆಯಾಗಿದ್ದು, ಭಾರತದ ಆರ್ಥಿಕ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 1935 ರಲ್ಲಿ ಸ್ಥಾಪಿತವಾದ ಆರ್‌ಬಿಐ ಭಾರತೀಯ ರೂಪಾಯಿಯನ್ನು ವಿತರಿಸುವ ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ, ರಾಷ್ಟ್ರದ ಹಣಕಾಸು ನೀತಿಯನ್ನು ನಿಯಂತ್ರಿಸುತ್ತದೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುತ್ತದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇದು ಕೇಂದ್ರೀಯ ನಿರ್ದೇಶಕರ ಮಂಡಳಿಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತದೆ. ಆರ್‌ಬಿಐ ಬ್ಯಾಂಕುಗಳನ್ನು ನಿಯಂತ್ರಿಸುತ್ತದೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ, ಹಣದುಬ್ಬರವನ್ನು ನಿಯಂತ್ರಿಸಲು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನೀತಿಗಳನ್ನು ಜಾರಿಗೊಳಿಸುತ್ತದೆ.

ಇನ್ನೂ ಹೆಚ್ಚು ಓದಿ

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ

HSBC Forecasts 6% GDP by FY27, Citing Inflation & Climate Woes: ಜಾಗತಿಕ ಹಣಕಾಸು ಸಂಸ್ಥೆ ಎಚ್‌ಎಸ್‌ಬಿಸಿ, ಭಾರತದ ಜಿಡಿಪಿ ಬೆಳವಣಿಗೆ FY27ಕ್ಕೆ ಶೇ. 6ಕ್ಕೆ ಕುಸಿಯಬಹುದು ಎಂದು ಆತಂಕಕಾರಿ ವರದಿ ನೀಡಿದೆ. ಇಂಧನ ಬಿಕ್ಕಟ್ಟು, ಅನಿಶ್ಚಿತ ಹವಾಮಾನ ಮತ್ತು ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ ಆರ್ಥಿಕ ವೇಗ ಕುಂಠಿತವಾಗಲಿದೆ ಎಂದಿದೆ. ಇದನ್ನು ನಿಯಂತ್ರಿಸಲು ಆರ್‌ಬಿಐ ರೆಪೊ ದರ ಏರಿಕೆ ಮಾಡುವ ಸಾಧ್ಯತೆಯಿದೆ. ಸಣ್ಣ ಉದ್ಯಮಗಳು ಮತ್ತು ಗ್ರಾಮೀಣ ಕುಟುಂಬಗಳ ಮೇಲೆ ಇದರ ಪರಿಣಾಮ ಬೀರುವ ಎಚ್ಚರಿಕೆಯನ್ನೂ ವರದಿ ನೀಡಿದೆ.

ಬ್ಯಾಂಕ್ ಸಾಲಗಾರರ ಗಮನಕ್ಕೆ; ಅಡಮಾನ ಆಸ್ತಿ ವಿಚಾರದಲ್ಲಿ ಆರ್​ಬಿಐ ಕರಡು ನಿಯಮಗಳಿವು…

RBI draft rules on how banks should handle immovable assets against loans: ಬ್ಯಾಂಕುಗಳಲ್ಲಿ ಸಾಲಕ್ಕಾಗಿ ಅಡಮಾನವಾಗಿ ಇಡುವ ಆಸ್ತಿಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬಿತ್ಯಾದಿ ಅಂಶಗಳ ಬಗ್ಗೆ ಆರ್​ಬಿಐ ಹೊಸ ನಿಯಮಗಳನ್ನು ರೂಪಿಸಿದೆ. ಸದ್ಯ ಈ ನಿಯಮಗಳು ಕರಡು ರೂಪದಲ್ಲಿದ್ದು, ಸಾರ್ವಜನಿಕ ಪರಾಮರ್ಶೆಗೆ ಒಳಪಡುತ್ತಿವೆ. ಸಾಲ ವಸೂಲಿ ಆಗದೇ ಇದ್ದಾಗ ಅಡಮಾನ ಆಸ್ತಿಗಳನ್ನು ನಿರ್ದಿಷ್ಟ ಅವಧಿಯೊಳಗೆ ಮಾರಬೇಕಾಗುತ್ತದೆ.

ಬ್ಯಾಂಕ್​ಗಳಲ್ಲಿ ಕೆಟ್ಟ ಸಾಲಗಳು; ಆರ್​ಬಿಐನಿಂದ ಹೊಸ ನಿಯಮಗಳ ಪ್ರಸ್ತಾಪ; ಏನಿವು ರೂಲ್ಸ್?

RBI's New NPA Rules 2027: ಭಾರತೀಯ ರಿಸರ್ವ್ ಬ್ಯಾಂಕ್ (RBI) ಎನ್‌ಪಿಎ ವರ್ಗೀಕರಣ ಮತ್ತು ಪ್ರಾವಿಷನಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. 2027 ರಿಂದ ಜಾರಿಯಾಗುವ ಈ ಹೊಸ ನಿರ್ದೇಶನಗಳು, ಒಂದು ಸಾಲ ಮಿಸ್ ಆದರೆ ಉಳಿದೆಲ್ಲಾ ಸಾಲಗಳೂ ಎನ್‌ಪಿಎ ಆಗುವುದನ್ನು ಕಡ್ಡಾಯಗೊಳಿಸುತ್ತವೆ. 'ಎಕ್ಸ್‌ಪೆಕ್ಟೆಡ್ ಕ್ರೆಡಿಟ್ ಲಾಸ್' (ECL) ಮಾದರಿ, ಸ್ವಯಂಚಾಲಿತ ಪತ್ತೆ ವ್ಯವಸ್ಥೆ ಮತ್ತು ಬಲವಾದ ಭದ್ರತೆ ಇರುವ ಸಾಲಗಳಿಗೆ ವಿನಾಯಿತಿ ಈ ಬದಲಾವಣೆಗಳ ಪ್ರಮುಖ ಅಂಶಗಳಾಗಿವೆ.

ಭಾರತದ ವಿದೇಶ ವಿನಿಮಯ ಮೀಸಲು ನಿಧಿಯಲ್ಲಿ ಚಿನ್ನದ ಪಾಲು ಗಣನೀಯ ಏರಿಕೆ

India forex reserves down by 4 billion USD: ಏಪ್ರಿಲ್ 24ಕ್ಕೆ ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ 698 ಬಿಲಿಯನ್ ಡಾಲರ್​ಗೆ ಇಳಿದಿದೆ ಎಂದು ಆರ್​ಬಿಐನ ದತ್ತಾಂಶ ಹೇಳುತ್ತಿದೆ. ಹಾಗೆಯೇ, ಮಾರ್ಚ್ 31ಕ್ಕೆ ಫಾರೆಕ್ಸ್ ರಿಸರ್ವ್ಸ್​ನಲ್ಲಿ ಚಿನ್ನದ ಪಾಲು ಶೇ. 16.7ಕ್ಕೆ ಏರಿದೆ. ಇನ್ನು, ಕಳೆದ ಎರಡು ವರ್ಷಗಳಿಂದ ಆರ್​ಬಿಐ ವಿದೇಶಗಳಲ್ಲಿ ಇರಿಸಲಾಗಿದ್ದ ತನ್ನ ಸಾಕಷ್ಟು ಚಿನ್ನವನ್ನು ಭಾರತಕ್ಕೆ ಮರಳಿ ತಂದಿದೆ.

ಆರ್​ಬಿಐ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

Rohit Jain: ಕೇಂದ್ರ ಸರ್ಕಾರ ರೋಹಿತ್ ಜೈನ್ ಅವರನ್ನು ಆರ್‌ಬಿಐ ಉಪ ಗವರ್ನರ್ ಆಗಿ ನೇಮಕ ಮಾಡಿದೆ. ರೋಹಿತ್ ಜೈನ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ನೂತನ ಉಪ ಗವರ್ನರ್ ಆಗಿ ನೇಮಿಸಲಾಗಿದೆ. ಇದು ಮೇ 3ರಿಂದ ಅಥವಾ ನಂತರ ಜಾರಿಗೆ ಬರುತ್ತದೆ. ಕ್ಯಾಬಿನೆಟ್ ನೇಮಕಾತಿ ಸಮಿತಿ (ಎಸಿಸಿ) ರೋಹಿತ್ ಜೈನ್ ಅವರನ್ನು 3 ವರ್ಷಗಳ ಕಾಲ ಡಿಜಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ. ಟಿ. ರವಿಶಂಕರ್ ಅವರ ಅಧಿಕಾರಾವಧಿ ಇಂದು ಕೊನೆಗೊಳ್ಳುತ್ತದೆ. ಅವರ ಸ್ಥಾನವನ್ನು ರೋಹಿತ್ ಜೈನ್ ವಹಿಸಿಕೊಳ್ಳಲಿದ್ದಾರೆ.

ಭಾರತದ ಫಾರೆಕ್ಸ್ ರಿಸರ್ವ್ಸ್ ಸತತ 3 ವಾರ ಏರಿಕೆ; ಒಟ್ಟು ರಿಸರ್ವ್ಸ್ 703 ಬಿಲಿಯನ್ ಡಾಲರ್

India's forex reserves crosses 703 billion USD: ಏಪ್ರಿಲ್ 17ಕ್ಕೆ ಅಂತ್ಯಗೊಂಡ ವಾರದಲ್ಲಿ ಭಾರತದ ಫಾರೆಕ್ಸ್ ರಿಸರ್ವ್ಸ್ 2.362 ಬಿಲಿಯನ್ ಡಾಲರ್​ನಷ್ಟು ಏರಿದೆ. ಇದರೊಂದಿಗೆ ಒಟ್ಟು ವಿದೇಶೀ ವಿನಿಮಯ ಮೀಸಲು ನಿಧಿ 703 ಬಿಲಿಯನ್ ಡಾಲರ್ ದಾಟಿದೆ. ವಿದೇಶೀ ಕರೆನ್ಸಿ ಆಸ್ತಿ, ಚಿನ್ನ ಸೇರಿದಂತೆ ಫಾರೆಕ್ಸ್​ನ ಎಲ್ಲಾ ಭಾಗಗಳಲ್ಲೂ ಹೆಚ್ಚಳ ಆಗಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ?

RBI cancels licence of Paytm Payments Bank: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸಂಸ್ಥೆಗೆ ನೀಡಿದ್ದ ಬ್ಯಾಂಕಿಂಗ್ ಲೈಸೆನ್ಸ್ ಅನ್ನು ಆರ್​​ಬಿಐ ಅಧಿಕೃತವಾಗಿ ಹಿಂಪಡೆದಿದೆ. 2022ರಿಂದಲೂ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ವಿವಿಧ ನಿರ್ಬಂಧಗಳನ್ನು ಎದುರಿಸುತ್ತಿದೆ. ಈಗ ತತ್​ಕ್ಷಣವೇ ಜಾರಿಯಾಗುವಂತೆ ಲೈಸೆನ್ಸ್ ರದ್ದಾಗಿದೆ. ಇನ್ಮುಂದೆ ಈ ಸಂಸ್ಥೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ.

ಆರ್​ಬಿಐನಿಂದ ಹೊಸ ಇ-ಮ್ಯಾಂಡೇಟ್ ಫ್ರೇಮ್​ವರ್ಕ್; 15,000 ರೂವರೆಗಿನ ರಿಕರಿಂಗ್ ಪೇಮೆಂಟ್ಸ್​ಗೆ ಒಟಿಪಿ ಬೇಕಿಲ್ಲ

RBI updates e-mandate norms: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಸುಲಭಗೊಳಿಸಲು 'ಇ-ಮ್ಯಾಂಡೇಟ್' (e-mandate) ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿದೆ. ಏಪ್ರಿಲ್ 21, ಮಂಗಳವಾರದಿಂದ ಇದು ಜಾರಿಗೆ ಬರುತ್ತಿದೆ. 15,000 ರೂವರೆಗಿನ ರಿಕರಿಂಗ್ ಪೇಮೆಂಟ್​ಗಳಿಗೆ ಒಟಿಪಿ ಇತ್ಯಾದಿ ಹೆಚ್ಚುವರಿ ದೃಢೀಕರಣದ ಅಗತ್ಯ ಇರುವುದಿಲ್ಲ. ಈ ಕುರಿತು ಒಂದು ವರದಿ.

ರಾಜ್‌ಕೋಟ್ ಸೈಬರ್ ವಂಚನೆ: 2,500 ಕೋಟಿ ರೂ ಹಗರಣ ಬಯಲು, ಪ್ರಮುಖ ಬ್ಯಾಂಕ್ ಅಧಿಕಾರಿಗಳ ಬಂಧನ

Rs 2500 Crore Cyber Fraud in Rajkot: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ₹2,500 ಕೋಟಿ ಸೈಬರ್ ವಂಚನೆ ಜಾಲ ಬಯಲಾಗಿದೆ. ಯೆಸ್, ಆಕ್ಸಿಸ್, HDFC ಬ್ಯಾಂಕ್ ಅಧಿಕಾರಿಗಳು ಸೇರಿದಂತೆ 20 ಜನರನ್ನು ಬಂಧಿಸಲಾಗಿದೆ. ಇವರು ನಕಲಿ ಖಾತೆ (ಮ್ಯೂಲ್ ಅಕೌಂಟ್) ತೆರೆದು ಅಪರಾಧಿಗಳಿಗೆ ಸಹಕರಿಸಿದ್ದಾರೆ. ಹಣವನ್ನು ಹವಾಲಾ ಮೂಲಕ ವರ್ಗಾಯಿಸುತ್ತಿದ್ದರು. ಈ ಬೃಹತ್ ಹಗರಣವು ದೇಶಾದ್ಯಂತ 535 ದೂರುಗಳಿಗೆ ಸಂಬಂಧಿಸಿದೆ.

ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ

NBFC Branch Expansion Simplified by RBI Reforms: ಭಾರತೀಯ ರಿಸರ್ವ್ ಬ್ಯಾಂಕ್ (RBI) NBFCಗಳಿಗೆ ಶಾಖೆ ತೆರೆಯುವ ನಿಯಮ ಸಡಿಲಗೊಳಿಸಿದೆ. ಇನ್ನು ಮುಂದೆ ಪೂರ್ವಾನುಮತಿ ಇಲ್ಲದೆ ಹೊಸ ಶಾಖೆ ತೆರೆಯಬಹುದು. ಇದು NBFCಗಳ ಕಾರ್ಯನಿರ್ವಹಣಾ ಸ್ವಾತಂತ್ರ್ಯ ಹೆಚ್ಚಿಸಿ, ವ್ಯವಹಾರವನ್ನು ಸುಲಭಗೊಳಿಸಲಿದೆ. ಠೇವಣಿ ಪಡೆಯುವ NBFCಗಳಿಗೆ ನಿವ್ವಳ ಹಣ ಮತ್ತು ಕ್ರೆಡಿಟ್ ರೇಟಿಂಗ್ ಆಧರಿಸಿ ನಿಯಮಗಳಿವೆ. ಕೋರ್ ಇನ್ವೆಸ್ಟ್‌ಮೆಂಟ್ ಕಂಪನಿಗಳ ನಿಯಮಗಳಲ್ಲೂ ಬದಲಾವಣೆ ತರಲಾಗಿದೆ. ಈ ಹೊಸ ಸುಧಾರಣೆಗಳು ತಕ್ಷಣದಿಂದ ಜಾರಿಗೆ ಬಂದಿವೆ.

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ!

ಬೆಂಗಳೂರಿನ ಆರ್‌ಬಿಐ ಕಚೇರಿಯಲ್ಲಿ 7.5 ಲಕ್ಷ ಮೌಲ್ಯದ 2000 ರೂ. ನಕಲಿ ನೋಟುಗಳನ್ನು ಬದಲಾಯಿಸಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಚಲಾವಣೆ ರದ್ದಾದ ನೋಟುಗಳನ್ನು ಅಕ್ರಮವಾಗಿ ಬದಲಾಯಿಸಲು ಯತ್ನಿಸಿದ ರಮೇಶ್ ಎಂಬಾತ ಹಲಸೂರು ಗೇಟ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನ ಬಳಿ 375 ನಕಲಿ ನೋಟುಗಳು ಪತ್ತೆಯಾಗಿವೆ. ನಕಲಿ ನೋಟುಗಳ ಜಾಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೂವರೆ ವರ್ಷದಲ್ಲಿ 4 ಪಟ್ಟು ಲಾಭ ಕೊಟ್ಟ ಗೋಲ್ಡ್ ಬಾಂಡ್; ಒಂದು ಲಕ್ಷಕ್ಕೆ 4 ಲಕ್ಷ ರಿಟರ್ನ್ಸ್

Premature redemption offer for 2019-20 SGB Series-V bonds: ಆರ್​ಬಿಐನಿಂದ ವಿತರಿಸಲಾಗುತ್ತಿದ್ದ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್ ಹೂಡಿಕೆದಾರರಿಗೆ ಭರ್ಜರಿ ಲಾಭ ತರುತ್ತಿತ್ತು. 2019ರ ಏಪ್ರಿಲ್ 15ರಂದು ಬಿಡುಗಡೆ ಮಾಡಿದ್ದ ಗೋಲ್ಡ್ ಬಾಂಡ್ 2027ಕ್ಕೆ ಮೆಚ್ಯೂರ್ ಆಗುತ್ತದೆ. ಈಗ ಪ್ರೀಮೆಚ್ಯೂರ್ ಆಗಿ ವಿತ್​ಡ್ರಾ ಮಾಡಿಕೊಳ್ಳಲು ಆಫರ್ ಕೊಡಲಾಗಿದೆ. ಆರೂವರೆ ವರ್ಷದಲ್ಲಿ ಯೂನಿಟ್ ಮೌಲ್ಯ 3,738 ರೂನಿಂದ 15,002 ರೂಗೆ ಹೆಚ್ಚಿದೆ.

ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ