AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI

RBI

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಕೇಂದ್ರ ಬ್ಯಾಂಕಿಂಗ್ ಸಂಸ್ಥೆಯಾಗಿದ್ದು, ಭಾರತದ ಆರ್ಥಿಕ ಚೌಕಟ್ಟಿನಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 1935 ರಲ್ಲಿ ಸ್ಥಾಪಿತವಾದ ಆರ್‌ಬಿಐ ಭಾರತೀಯ ರೂಪಾಯಿಯನ್ನು ವಿತರಿಸುವ ಮತ್ತು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದೆ, ರಾಷ್ಟ್ರದ ಹಣಕಾಸು ನೀತಿಯನ್ನು ನಿಯಂತ್ರಿಸುತ್ತದೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುತ್ತದೆ. ಮುಂಬೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಇದು ಕೇಂದ್ರೀಯ ನಿರ್ದೇಶಕರ ಮಂಡಳಿಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತದೆ. ಆರ್‌ಬಿಐ ಬ್ಯಾಂಕುಗಳನ್ನು ನಿಯಂತ್ರಿಸುತ್ತದೆ ಮತ್ತು ಮೇಲ್ವಿಚಾರಣೆ ಮಾಡುತ್ತದೆ, ಹಣದುಬ್ಬರವನ್ನು ನಿಯಂತ್ರಿಸಲು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ನೀತಿಗಳನ್ನು ಜಾರಿಗೊಳಿಸುತ್ತದೆ.

ಇನ್ನೂ ಹೆಚ್ಚು ಓದಿ

ಎಸ್ಸೆಮ್ಮೆಸ್ ಅಲರ್ಟ್​ಗಳಿಗೆ ಗ್ರಾಹಕರಿಂದ ಹಣ ಪಡೆಯುವಂತಿಲ್ಲ; ಆರ್​ಬಿಐ ನಿಯಮದಿಂದ ಬ್ಯಾಂಕುಗಳಿಗೆ 300 ಕೋಟಿ ರೂ ಆದಾಯನಷ್ಟ?

New banking rules by RBI to cut SMS fee income of Banks: ಭಾರತದ ಕೆಲ ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಅದರಲ್ಲಿ ಎಸ್ಸೆಮ್ಮೆಸ್ ಅಲರ್ಟ್​ಗಳಿಗೆ ಗ್ರಾಹಕರಿಂದ ಶುಲ್ಕ ಪಡೆಯುವುದನ್ನು ನಿರ್ಬಂಧಿಸಲಾಗಿದೆ. ಆರ್​ಬಿಐನ ಈ ಹೊಸ ನಿಯಮವು ಬ್ಯಾಂಕುಗಳಿಗೆ ವಾರ್ಷಿಕ 300 ಕೋಟಿ ರೂ ಆದಾಯ ನಷ್ಟ ಆಗಬಹುದು.

ಜುಲೈನಲ್ಲಿ ದೇಶಾದ್ಯಂತ 13 ಬ್ಯಾಂಕ್ ರಜಾ ದಿನಗಳು; ಕರ್ನಾಟಕದಲ್ಲೆಷ್ಟು?

Banks have upto 13 days holiday in July month: 2026ರ ಜುಲೈ ತಿಂಗಳಲ್ಲಿ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜಾದಿನಗಳು ಇವೆ. ಇದರಲ್ಲಿ 6 ರೆಗ್ಯುಲರ್ ರಜೆಗಳಾದರೆ, ಇನ್ನೇಳು ದಿನಗಳು ಪ್ರಾದೇಶಿಕ ವಿಶೇಷಗಳಾಗಿವೆ. ಕರ್ನಾಟಕದಲ್ಲಿ ಜುಲೈನಲ್ಲಿ ವಿಶೇಷ ರಜೆಗಳಿಲ್ಲ. ರೆಗ್ಯುಲರ್ ರಜೆಗಳೇ ಎಲ್ಲವೂ.

ಎಐ ‘ಕಿಲ್ ಸ್ವಿಚ್’ ಕಡ್ಡಾಯ: ಬ್ಯಾಂಕುಗಳಿಗೆ ಆರ್​ಬಿಐ ಹೊಸ ಪ್ರಸ್ತಾಪಿತ ನಿಯಮ

RBI proposes Model Risk Management Framework for financial institutions: ಕೃತಕ ಬುದ್ಧಿಮತ್ತೆಯಿಂದ ತಪ್ಪುಗಳಾಗುವುದು ಸಾಮಾನ್ಯ. ಆದರೆ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಪ್ಪಿಗೆ ಅವಕಾಶ ಇರಕೂಡದು. ಬ್ಯಾಂಕು, ಎನ್​ಬಿಎಫ್​ಸಿ ಇತ್ಯಾದಿ ಹಣಕಾಸು ಸಂಸ್ಥೆಗಳು ತಮ್ಮ ಎಐ ಸಿಸ್ಟಂಗೆ ಕಿಲ್ ಸ್ವಿಚ್ ವ್ಯವಸ್ಥೆ ರೂಪಿಸಬೇಕಾಗುತ್ತದೆ. ಆರ್​ಬಿಐ ಇಂಥ ಕೆಲ ನಿಯಮಗಳನ್ನು ಪ್ರಸ್ತಾಪಿಸಿದೆ. ಈ ಕರಡು ನಿಯಮಗಳ ವಿವರ ಇಲ್ಲಿದೆ.

ಡಿಜಿಟಲ್ ಟ್ರಾನ್ಸಾಕ್ಷನ್ಸ್​ನಲ್ಲಿ ಸಣ್ಣ ಮೊತ್ತದ ವಂಚನೆ ಸಿಗಲಿದೆ ಪರಿಹಾರ; ಆರ್​ಬಿಐನಿಂದ ಹೊಸ ನಿಯಮಗಳು ಜಾರಿಗೆ

RBI expands digital fraud protection rules: ಡಿಜಿಟಲ್ ವಹಿವಾಟುಗಳಲ್ಲಿ ವಂಚನೆಗಳಾಗುವುದನ್ನು ನಿಗ್ರಹಿಸಲು ಆರ್​ಬಿಐ ಸೂಕ್ತ ನಿಯಮಗಳನ್ನು ರೂಪಿಸಿದೆ. ಸಣ್ಣ ಮೊತ್ತದ ಡಿಜಿಟಲ್ ವಹಿವಾಟು ವಂಚನೆಗೆ ಒಳಗಾದರೆ ಗ್ರಾಹಕರಿಗೆ ಪರಿಹಾರ ಒದಗಿಸಲಾಗುತ್ತದೆ. ಗ್ರಾಹಕರಿಂದ ದೂರು ಬಂದ ಒಂದೂವರೆ ತಿಂಗಳಲ್ಲಿ ಇತ್ಯರ್ಥ ಆಗಬೇಕು ಎಂದು ನಿರ್ದೇಶಿಸಲಾಗಿದೆ.

ಎನ್​ಆರ್​ಐಗಳ ಡೆಪಾಸಿಟ್​ಗಳನ್ನು ಕೈಬೀಸಿ ಕರೆಯುತ್ತಿವೆ ಭಾರತದ ಹೊಸ FCNR(B) ದರಗಳು; ಅನಿವಾಸಿ ಭಾರತೀಯರಿಗೆ ಹೇಗೆ ಲಾಭ?

How India's new FCNR B rates can benefit NRIs: ಆರ್​ಬಿಐ FCNR (B) ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಅದರ ಪರಿಣಾಮವಾಗಿ ಹಲವು ಬ್ಯಾಂಕುಗಳು ಇದರ ದರಗಳನ್ನು ಹೆಚ್ಚಿಸಿವೆ. ಅನಿವಾಸಿ ಭಾರತೀಯರು ತಾವು ಕೆಲಸ ಮಾಡುವ ದೇಶಗಳ ಕರೆನ್ಸಿಯಲ್ಲೇ ಭಾರತದ ಬ್ಯಾಂಕುಗಳಲ್ಲಿ ಠೇವಣಿ ಇಡಬಹುದು. ಭಾರತೀಯರಿಗೆ ಸಿಗುವ ಎಫ್​ಡಿ ದರಗಳು ಆ ಎನ್​ಆರ್​ಐ ಠೇವಣಿಗಳಿಗೂ ಸಿಗುತ್ತವೆ. ಕರೆನ್ಸಿ ವಿನಿಮಯದ ಅಗತ್ಯವೇ ಇರುವುದಿಲ್ಲ.

ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು

RBI Under Pressure as India's Retail Inflation Jumps: ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ 3.93% ಕ್ಕೆ ಏರಿ, ಸತತ ಐದನೇ ತಿಂಗಳು ಹೆಚ್ಚಳ ಕಂಡಿದೆ. ಆಹಾರ ಪದಾರ್ಥಗಳ ಬೆಲೆ ಏರಿಕೆ, ಸಾರಿಗೆ ವೆಚ್ಚ ಮತ್ತು ಚಿನ್ನದ ದರಗಳ ಜಿಗಿತವೇ ಇದಕ್ಕೆ ಪ್ರಮುಖ ಕಾರಣ. ಗ್ರಾಮೀಣ ಪ್ರದೇಶಗಳಲ್ಲಿ ಬೆಲೆ ಏರಿಕೆಯ ಬಿಸಿ ತೀವ್ರವಾಗಿದೆ. ಆರ್‌ಬಿಐ ತನ್ನ ಗುರಿಯ ಸಮೀಪ ಹಣದುಬ್ಬರವನ್ನು ತಲುಪುತ್ತಿದ್ದು, ಮುಂಗಾರು ವೈಫಲ್ಯ ಅಥವಾ ಕಚ್ಚಾ ತೈಲ ಏರಿಕೆಯಾದರೆ ಬಡ್ಡಿದರ ಹೆಚ್ಚಳದ ಸವಾಲು ಎದುರಿಸಲಿದೆ.

ಷೇರುಬಜಾರಿನಲ್ಲಿ ಭಾರಿ ಗೂಳಿ ಓಟ; ಗರಿಬಿಚ್ಚಿದ ಸೆನ್ಸೆಕ್ಸ್, ನಿಫ್ಟಿ; ಮಾರುಕಟ್ಟೆಯ ಭರ್ಜರಿ ಆಟಕ್ಕೆ ಕಾರಣಗಳೇನು?

Indian Stock Market Surges: ಭಾರತೀಯ ಷೇರು ಮಾರುಕಟ್ಟೆ ಇಂದು ಭಾರಿ ಏರಿಕೆ ಕಂಡಿದೆ, ಸೆನ್ಸೆಕ್ಸ್ 1,700 ಅಂಕ, ನಿಫ್ಟಿ 23,600 ದಾಟಿದೆ. ಹೂಡಿಕೆದಾರರ ಸಂಪತ್ತು ₹7 ಲಕ್ಷ ಕೋಟಿ ಹೆಚ್ಚಾಗಿದೆ. ಯುಎಸ್-ಇರಾನ್ ಶಾಂತಿ ಭರವಸೆ, ಕಚ್ಚಾ ತೈಲ ಬೆಲೆ ಇಳಿಕೆ, ಜಾಗತಿಕ ಮಾರುಕಟ್ಟೆಗಳ ಸಕಾರಾತ್ಮಕ ಟ್ರೆಂಡ್, ಬಲಗೊಂಡ ರೂಪಾಯಿ ಮತ್ತು ಆರ್‌ಬಿಐ ಕ್ರಮಗಳು ಈ ಏರಿಕೆಗೆ ಪ್ರಮುಖ ಕಾರಣಗಳಾಗಿವೆ. ಬ್ಯಾಂಕಿಂಗ್, ಐಟಿ ಸೇರಿದಂತೆ ಎಲ್ಲಾ ವಲಯಗಳು ಲಾಭ ಕಂಡಿವೆ.

ಅನಿವಾಸಿ ಭಾರತೀಯರ FCNR-B ಠೇವಣಿಗಳಿಗೆ ಭಾರತದ ಬ್ಯಾಂಕುಗಳಿಂದ ಭರ್ಜರಿ ಬಡ್ಡಿ ಆಫರ್

High Interest FCNR-B Rates: ಆರ್‌ಬಿಐ ನಿಯಮ ಬದಲಾವಣೆಯ ನಂತರ, ಭಾರತೀಯ ಬ್ಯಾಂಕ್‌ಗಳು ಅನಿವಾಸಿ ಭಾರತೀಯರಿಗೆ (NRI) FCNR-B ಠೇವಣಿಗಳ ಮೇಲೆ ಬಡ್ಡಿ ದರಗಳನ್ನು ಗಣನೀಯವಾಗಿ ಹೆಚ್ಚಿಸಿವೆ, ಇದು 7.1% ವರೆಗೆ ತಲುಪಿದೆ. ಈ ಠೇವಣಿಗಳು ವಿದೇಶಿ ಕರೆನ್ಸಿಯಲ್ಲಿ ಹಣವನ್ನು ಇಡಲು, ತೆರಿಗೆ-ಮುಕ್ತ ಬಡ್ಡಿ ಗಳಿಸಲು ಮತ್ತು ಸುಲಭವಾಗಿ ಹಣವನ್ನು ವಾಪಸ್ ವರ್ಗಾಯಿಸಲು ಅವಕಾಶ ನೀಡುತ್ತವೆ. ಇದು NRIs ಗೆ ಹೆಚ್ಚಿನ ಆದಾಯದೊಂದಿಗೆ, ದೇಶದ ವಿದೇಶಿ ವಿನಿಮಯ ಸಂಪತ್ತಿಗೆ ಸಹ ಸಹಕಾರಿಯಾಗಿದೆ.

ಬಂಡವಾಳ ಆಕರ್ಷಿಸಲು ಬ್ಯಾಂಕುಗಳಿಗೆ ಹೆಡ್ಡಿಂಗ್ ಸಪೋರ್ಟ್​ನಿಂದ ಹಿಡಿದು ಎನ್​ಆರ್​ಐ ಹೂಡಿಕೆ ಮಿತಿ ಹೆಚ್ಚಳದವರೆಗೆ ಆರ್​ಬಿಐನಿಂದ 5 ಕ್ರಮಗಳು

RBI Unveils 5 Measures To Boost Capital Inflows: ಭಾರತಕ್ಕೆ ಬಹಳ ಅಗತ್ಯ ಇರುವ ವಿದೇಶಿ ಬಂಡವಾಳವನ್ನು ಆಕರ್ಷಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಕೆಲ ಪ್ರಮುಖ ಕ್ರಮಗಳನ್ನು ಕೈಗೊಂಡಿದೆ. ಷೇರು ಮಾರುಕಟ್ಟೆಯಲ್ಲಿ ಎನ್​ಆರ್​ಐಗಳಿಗೆ ಇರುವ ಹೂಡಿಕೆ ಮಿತಿಯನ್ನು ಹೆಚ್ಚಿಸಲಾಗಿದೆ. ಬ್ಯಾಂಕುಗಳಿಗೆ ಹೆಡ್ಜಿಂಗ್ ಸಪೋರ್ಟ್ ನೀಡಲಾಗಿದೆ. ರಫ್ತು ಆದಾಯ ತರುವ ಅವಧಿ 9 ತಿಂಗಳಿಗೆ ಕಡಿತಗೊಳಿಸಲಾಗಿದೆ.

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ

RBI MPC announcements: ಆರ್​ಬಿಐ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಜೂನ್ 3ರಿಂದ ನಡೆದ ಎಂಪಿಸಿ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವರ್ಷ ಜಿಡಿಪಿ ಬೆಳವಣಿಗೆ ಶೇ. 6.9 ಅಲ್ಲ, ಶೇ. 6.6ರಷ್ಟು ಮಾತ್ರ ಬೆಳೆಯಬಹುದು. ಹಣದುಬ್ಬರ ಶೇ. 5.1ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜಿಸಿದೆ.

ರಿಸರ್ವ್ ಬ್ಯಾಂಕ್ ಎಂಪಿಸಿ ಸಭೆ; ರೆಪೋ ದರ ಇಳಿಕೆಯಾಗುತ್ತಾ? ಶುಕ್ರವಾರ ನಿರ್ಧಾರ ಪ್ರಕಟಿಸಲಿದ್ದಾರೆ ಆರ್​ಬಿಐ ಗವರ್ನರ್

RBI MPC meeting, policy announcements on June 5th: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿ ಸಭೆ ಜೂನ್ 3ರಿಂದ 5ರವರೆಗೆ ನಡೆಯುತ್ತಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನಾಳೆ ಶುಕ್ರವಾರ ಎಂಪಿಸಿ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ರೆಪೋ ದರ ಶೇ. 5.25ರಷ್ಟು ಇದ್ದು, ಆ ಯಥಾಸ್ಥಿತಿಯೇ ಮುಂದುವರಿಯುವ ನಿರೀಕ್ಷೆ ಇದೆ. ಇತರ ನೀತಿಗಳಲ್ಲೂ ಬದಲಾವಣೆ ಆಗದೇ ಹೋಗಬಹುದು.

ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ

RBI Denies $12B Gold Sale Claims: ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಚಿನ್ನದ ದಾಸ್ತಾನನ್ನು ಮಾರಾಟ ಮಾಡಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ಮತ್ತು RBI ಸ್ಪಷ್ಟವಾಗಿ ನಿರಾಕರಿಸಿವೆ. ದೇಶದ ಭೌತಿಕ ಚಿನ್ನದ ಸಂಗ್ರಹ 880.52 ಮೆಟ್ರಿಕ್ ಟನ್‌ಗಳಷ್ಟು ಸುರಕ್ಷಿತವಾಗಿದೆ. ಜಾಗತಿಕ ಚಿನ್ನದ ಬೆಲೆಗಳಲ್ಲಿನ ಏರಿಳಿತ ಮತ್ತು ರೂಪಾಯಿ ಮೌಲ್ಯದ ವ್ಯತ್ಯಾಸದಿಂದ ವಿದೇಶಿ ವಿನಿಮಯ ನಿಧಿಯ ಚಿನ್ನದ ಮೌಲ್ಯದಲ್ಲಿ ಬದಲಾವಣೆಯಾಗಿದೆ ಹೊರತು, ಮಾರಾಟದಿಂದಲ್ಲ ಎಂದು RBI ತಿಳಿಸಿದೆ. ಸಾರ್ವಜನಿಕರು ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಲು ಮನವಿ ಮಾಡಲಾಗಿದೆ.

ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ