Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day

Republic Day

ಭಾರತದ ರಿಪಬ್ಲಿಕ್ ಡೇ ಅಥವಾ ಗಣತಂತ್ರ ದಿನ ಜನವರಿ 26ರಂದು ಆಚರಿಸಲಾಗುತ್ತದೆ. ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಘೋಷಣೆ ಆದರೂ, ಬ್ರಿಟಿಷರ ಕೊಂಡಿಯಿಂದ ಅಧಿಕೃತವಾಗಿ ಕಳಚಿಕೊಂಡಿದ್ದು 1950ರ ಜನವರಿ 26ರಂದು. ಅಂದು ಭಾರತಕ್ಕೆ ಸಂವಿಧಾನ ಅಳವಡಿಕೆ ಆಯಿತು. ಜನವರಿ 26ರ ದಿನಕ್ಕೆ ಮತ್ತೊಂದು ಮಹತ್ವ ಇದೆ. 1930ರ ವರ್ಷದ ಇದೇ ದಿನದಂದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸ್ವರಾಜ್ಯ ಘೋಷಣೆ ಮಾಡಿತು. ಜನವರಿ 26 ಅನ್ನು ಸ್ವರಾಜ್ಯ ದಿನವಾಗಿ ಆಚರಿಸುತ್ತಾ ಬರಲಾಗುತ್ತಿತ್ತು. ಕೊನೆಗೆ 1950ರಲ್ಲಿ ಸಂವಿಧಾನ ಅಳವಡಿಕೆಗೆ ಅದೇ ದಿನವನ್ನು ಸರ್ಕಾರ ಆಯ್ಕೆ ಮಾಡಿಕೊಂಡಿತು. ಗಣರಾಜ್ಯೋತ್ಸವ ದಿನವನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ರಾಷ್ಟ್ರಪತಿ, ಪ್ರಧಾನಿ ಮತ್ತಿತರ ಗಣ್ಯರು ಉಪಸ್ಥಿತರಿರುತ್ತಾರೆ. ರಕ್ಷಣಾ ಪಡೆಗಳ ವಿವಿಧ ತಂಡಗಳು ನಡೆಸುವ ಪೆರೇಡ್ ಬಹಳ ಅಮೋಘವಾಗಿರುತ್ತದೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳ ಮೆರವಣಿಗೆಯೂ ನಡೆಯುತ್ತದೆ. ಇದೇ ಗಣತಂತ್ರ ದಿನದಂದು ರಾಷ್ಟ್ರಪತಿಗಳು ವಿವಿಧ ಪದ್ಮ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾರೆ.

ಇನ್ನೂ ಹೆಚ್ಚು ಓದಿ

ರಾಷ್ಟ್ರಪತಿ ಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಲ್ಲಿ ಮೈಸೂರು ಪಾಕ್ ಘಮ

ರಾಷ್ಟ್ರಪತಿ ಭವನವು ಎಷ್ಟು ವಿಶೇಷವಾಗಿದೆಯೋ, ಇಲ್ಲಿ ಏರ್ಪಡಿಸುವ ಔತಣಕೂಟವು ವಿವಿಧ ಖಾದ್ಯಗಳಿಂದ ಅಷ್ಟೇ ವಿಶೇಷತೆಯಿಂದ ಕೂಡಿರುತ್ತದೆ. ದೇಶ ವಿದೇಶಗಳಿಂದ ಬರುವ ಅತಿಥಿಗಳು ಈ ಔತಣಕೂಟದಲ್ಲಿ ಭಾಗಿಯಾಗಿ ಭಾರತದ ವಿವಿಧ ಬಗೆಯ ಖಾದ್ಯಗಳ ರುಚಿಯನ್ನು ಸವಿಯುತ್ತಾರೆ. ಈ ಬಾರಿಯ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿದ್ದ ‘ಅಟ್ ಹೋಮ್’ ಔತಣಕೂಟವು ದಕ್ಷಿಣ ಭಾರತದ ಪಾಕ ಪದ್ಧತಿ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯ ಮೇಲೆ ಕೇಂದ್ರೀಕೃತವಾಗಿತ್ತು. ಹಾಗಾದ್ರೆ ಈ ಔತಣಕೂಟವು ಏನೆಲ್ಲಾ ವಿಶೇಷತೆಗಳನ್ನೊಳಗೊಂಡಿತ್ತು? ಊಟದ ಮೆನುವಿನಲ್ಲಿ ಯಾವೆಲ್ಲಾ ಖಾದ್ಯಗಳಿದ್ದವು ಎನ್ನುವ ಮಾಹಿತಿ ಇಲ್ಲಿದೆ.

Republic Day 2025: ಬಿಳಿ ಬಣ್ಣದ ಕುರ್ತಾ, ಕಾಫಿ ಬಣ್ಣದ ಜಾಕೆಟ್, ಕೇಸರಿ, ಹಳದಿ ಮಿಶ್ರಿತ ಪೇಟದಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿಶೇಷ ಶೈಲಿಯಲ್ಲಿ ಕಾಣಿಸಿಕೊಂಡರು, ಬಿಳಿ ಬಣ್ಣದ ಕುರ್ತಾ, ಪೈಜಾ, ಕಾಫಿ ಬಣ್ಣದ ಜಾಕೆಟ್​, ಹಳಸಿ, ಕೇಸರಿ ಮಿಶ್ರಿತ ಪೇಟದಲ್ಲಿ ಸುಂದರವಾಗಿ ಕಂಡರು. ವರ್ಣರಂಜಿತ ಪೇಟವನ್ನು ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರೆಸಿದರು.ಈ ಹಿಂದೆ 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಹುವರ್ಣದ ಬಾಂಧನಿ ಪ್ರಿಂಟ್ ಪೇಟವನ್ನು ಧರಿಸಿದ್ದರು.

Republic Day 2025: ಗಣರಾಜ್ಯೋತ್ಸವ: ಮೊದಲ ಬಾರಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರ ಪ್ರದರ್ಶನ

76ನೇ ಗಣರಾಜ್ಯೋತ್ಸವದ ಸಂಭ್ರಮ ದೇಶದೆಲ್ಲೆಡೆ ಇದೆ. ದೆಹಲಿಯ ಕರ್ತವ್ಯಪಥದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ 3 ಸೇನಾಪಡೆಗಳ ಜಂಟಿ ಸ್ತಬ್ಧಚಿತ್ರವನ್ನು ಪ್ರದರ್ಶನ ಮಾಡಲಾಗಿದೆ.. ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಥೀಮ್‌ನ್ನು ಈ ಜಂಟಿ ಸ್ತಬ್ಧಚಿತ್ರ ಒಳಗೊಂಡಿತ್ತು. ಜಂಟಿ ಆಪರೇಷನ್‌ ಕೊಠಡಿ, ಅರ್ಜುನ್‌ ಟ್ಯಾಂಕರ್‌, ತೇಜಸ್‌, ಐಎನ್‌ಎಸ್‌ ವಿಶಾಖಪಟ್ಟಣ ನೌಕೆ ಮಾದರಿಯನ್ನು ಹೊಂದಿದೆ.

ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​

76ನೇ ಗಣರಾಜ್ಯೋತ್ಸವದಂದು ಕರ್ನಾಟಕದ ಬೆಂಗಳೂರಿನಲ್ಲಿ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿದರು. ಅವರು ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಮಹಿಳಾ ಸಬಲೀಕರಣ, ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಅಭಿವೃದ್ಧಿ ಕುರಿತು ಮಾತನಾಡಿದರು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಬಗ್ಗೆ ವಿವರಿಸಿ, ರಾಜ್ಯದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಯನ್ನು ಎತ್ತಿ ಹಿಡಿದರು.

Video:ಗಣರಾಜ್ಯೋತ್ಸವ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಇಂದು ದೇಶಕ್ಕೆ ಹೆಮ್ಮೆಯ ಕ್ಷಣ. ದೇಶವು ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕರ್ತವ್ಯದ ಹಾದಿಯಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಬಾರಿ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂತೋ ಮುಖ್ಯ ಅತಿಥಿಯಾಗಿದ್ದಾರೆ. ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪ್ರಧಾನಿ ಮೋದಿ ತೆರಳಿ. ಇಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Video: ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ಪ್ರಧಾನಿ ಮೋದಿ ನಮನ

ದೇಶದಾದ್ಯಂತ 76ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

Republic Day 2025: 76ನೇ ಗಣರಾಜ್ಯೋತ್ಸವಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.ನಮ್ಮ ಸಂವಿಧಾನವನ್ನು ರಚಿಸಿದ ಮತ್ತು ನಮ್ಮ ಪ್ರಯಾಣವು ಪ್ರಜಾಪ್ರಭುತ್ವ, ಘನತೆ ಮತ್ತು ಏಕತೆಯಲ್ಲಿ ಬೇರೂರಿದೆ ಎಂದು ಖಚಿತಪಡಿಸಿದ ಎಲ್ಲಾ ಮಹಾನ್ ಮಹಿಳೆಯರು ಮತ್ತು ಪುರುಷರಿಗೆ ನಾವು ನಮಸ್ಕರಿಸುತ್ತೇವೆ ಎಂದು ಮೋದಿ ಹೇಳಿದ್ದಾರೆ.

Republic Day: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಗಣರಾಜ್ಯೋತ್ಸವ ಸಂಭ್ರಮದ ಲೈವ್​

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿ, ಭಾಷಣ ಮಾಡಲಿದ್ದಾರೆ. ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಬಹುಮಾನ ವಿತರಣೆ ಕಾರ್ಯಕ್ರಮದ ಮುಖ್ಯಾಂಶಗಳಾಗಿವೆ. ರಾಷ್ಟ್ರಗೀತೆ ಮತ್ತು ನಾಡಗೀತೆಯೊಂದಿಗೆ ಕಾರ್ಯಕ್ರಮ ಸಮಾರೋಪಗೊಳ್ಳಲಿದೆ.

Republic Day 2025 Parade: ಗಮನ ಸೆಳೆದ ಕರ್ನಾಟಕ ಲಕ್ಕುಂಡಿ ಸ್ತಬ್ಧಚಿತ್ರ

76th Republic Day Live Updates: ಭಾರತದ ಸಂವಿಧಾನದ ಅಂಗೀಕಾರ ಮತ್ತು ಗಣರಾಜ್ಯವಾದ ಸ್ಮರಣಾರ್ಥ ಪ್ರತಿ ವರ್ಷ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. 2025ನೇ ಸಾಲಿನ ಗಣರಾಜ್ಯೋತ್ಸವದ ಥೀಮ್ "ಸುವರ್ಣ ಭಾರತ ಪರಂಪರೆ ಮತ್ತು ಪ್ರಗತಿ". ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ನವದೆಹಲಿಯಲ್ಲಿ ಕರ್ತವ್ಯ ಪಥದಲ್ಲಿ ಪರೇಡ್ ನಡೆಯುತ್ತಿದೆ. ಮತ್ತು ರಾಷ್ಟ್ರಪತಿಗಳು ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸರ್ಕಾರದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.

Republic Day 2025: ವಿವಿಧತೆಯಲ್ಲಿ ಏಕತೆ, ಧೋತಿ-ಕುರ್ತಾ ತೊಟ್ಟ ಪ್ರಾಣಿಗಳು, ಇದು ಈ ಬಾರಿಯ ಗೂಗಲ್​-ಡೂಡಲ್

ಇಡೀ ದೇಶ ಇಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಗೂಗಲ್ ಕೂಡ ಈ ವಿಶೇಷ ದಿನವನ್ನು ತನ್ನದೇ ಆದ ವಿಶಿಷ್ಟ ಶೈಲಿಯಲ್ಲಿ ಆಚರಿಸುತ್ತಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲಿ ಗೂಗಲ್ ವಿಶೇಷ ಡೂಡಲ್ ಮಾಡಿದೆ. ಈ ಡೂಡಲ್ ಭಾರತೀಯ ವನ್ಯಜೀವಿ ಥೀಮ್ ಅನ್ನು ಆಧರಿಸಿದೆ. ಭಾರತದ ಶ್ರೀಮಂತ ಜೀವವೈವಿಧ್ಯವನ್ನು ಡೂಡಲ್‌ನಲ್ಲಿ ತೋರಿಸಲಾಗಿದೆ. ಭಾರತದ ವೈವಿಧ್ಯಮಯ ವನ್ಯಜೀವಿಗಳಿಂದ ಸ್ಫೂರ್ತಿ ಪಡೆದ ಇಂದಿನ ಗೂಗಲ್ ಡೂಡಲ್ ದೇಶದ ವಿವಿಧ ಪ್ರದೇಶಗಳನ್ನು ಪ್ರತಿನಿಧಿಸುವ ಪ್ರಾಣಿಗಳನ್ನು ಪ್ರದರ್ಶಿಸುತ್ತದೆ. ಇದು ಉತ್ತರದಲ್ಲಿ ಹಿಮಭರಿತ ಹಿಮಾಲಯದಿಂದ ದಕ್ಷಿಣದಲ್ಲಿ ಪಶ್ಚಿಮ ಘಟ್ಟಗಳ ಸಮೃದ್ಧ ಮಳೆಕಾಡುಗಳವರೆಗೆ ವ್ಯಾಪಿಸಿದೆ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್