Republic Day

Republic Day

ಭಾರತದ ರಿಪಬ್ಲಿಕ್ ಡೇ ಅಥವಾ ಗಣತಂತ್ರ ದಿನ ಜನವರಿ 26ರಂದು ಆಚರಿಸಲಾಗುತ್ತದೆ. ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಘೋಷಣೆ ಆದರೂ, ಬ್ರಿಟಿಷರ ಕೊಂಡಿಯಿಂದ ಅಧಿಕೃತವಾಗಿ ಕಳಚಿಕೊಂಡಿದ್ದು 1950ರ ಜನವರಿ 26ರಂದು. ಅಂದು ಭಾರತಕ್ಕೆ ಸಂವಿಧಾನ ಅಳವಡಿಕೆ ಆಯಿತು. ಜನವರಿ 26ರ ದಿನಕ್ಕೆ ಮತ್ತೊಂದು ಮಹತ್ವ ಇದೆ. 1930ರ ವರ್ಷದ ಇದೇ ದಿನದಂದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸ್ವರಾಜ್ಯ ಘೋಷಣೆ ಮಾಡಿತು. ಜನವರಿ 26 ಅನ್ನು ಸ್ವರಾಜ್ಯ ದಿನವಾಗಿ ಆಚರಿಸುತ್ತಾ ಬರಲಾಗುತ್ತಿತ್ತು. ಕೊನೆಗೆ 1950ರಲ್ಲಿ ಸಂವಿಧಾನ ಅಳವಡಿಕೆಗೆ ಅದೇ ದಿನವನ್ನು ಸರ್ಕಾರ ಆಯ್ಕೆ ಮಾಡಿಕೊಂಡಿತು. ಗಣರಾಜ್ಯೋತ್ಸವ ದಿನವನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ರಾಷ್ಟ್ರಪತಿ, ಪ್ರಧಾನಿ ಮತ್ತಿತರ ಗಣ್ಯರು ಉಪಸ್ಥಿತರಿರುತ್ತಾರೆ. ರಕ್ಷಣಾ ಪಡೆಗಳ ವಿವಿಧ ತಂಡಗಳು ನಡೆಸುವ ಪೆರೇಡ್ ಬಹಳ ಅಮೋಘವಾಗಿರುತ್ತದೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳ ಮೆರವಣಿಗೆಯೂ ನಡೆಯುತ್ತದೆ. ಇದೇ ಗಣತಂತ್ರ ದಿನದಂದು ರಾಷ್ಟ್ರಪತಿಗಳು ವಿವಿಧ ಪದ್ಮ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾರೆ.

ಇನ್ನೂ ಹೆಚ್ಚು ಓದಿ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭದ್ರತಾ ಲೋಪ: KPSC ಪರೀಕ್ಷೆ ಬರೆದಿದ್ದ ಪರಶುರಾಮ ಸಿಎಂ ಬಳಿ ಬಂದಿದ್ದು ಏಕೆ? ಇಲ್ಲಿದೆ ಮಾಹಿತಿ

ಶುಕ್ರವಾರ ಜನವರಿ 26 ರಂದು ಬೆಂಗಳೂರಿನ ಮಾಣೀಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿದ್ದರು. ಈ ವೇಳೆ ಧಿಡೀರನೆ ಓರ್ವ ವ್ಯಕ್ತಿ ಮೈದಾನದ ಒಳಗೆ ನುಗ್ಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಯತ್ನಿಸಿದ್ದರು. ಅಷ್ಟಕ್ಕೂ ಯಾರು ಈ ವ್ಯಕ್ತಿ? ಇಲ್ಲಿದೆ ಓದಿ

Republic Day: ತನ್ನ ಫಾರ್ಮ್‌ಹೌಸ್‌ನಲ್ಲಿ ಧ್ವಜಾರೋಹಣ ಮಾಡಿದ ಎಂಎಸ್ ಧೋನಿ: ವಿಡಿಯೋ ನೋಡಿ

MS Dhoni: ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಡ 75ನೇ ಗಣರಾಜ್ಯೋತ್ಸವವನ್ನು ಆಚರಿಸಿದ್ದು, ಇದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಈ ವಿಡಿಯೋವನ್ನು ಅವರ ಪತ್ನಿ ಸಾಕ್ಷಿ ಧೋನಿ ಹಂಚಿಕೊಂಡಿದ್ದಾರೆ.

France-India: ಫ್ರಾನ್ಸ್​ನ ನಾಲ್ವರಿಗೆ ಪದ್ಮ ಪ್ರಶಸ್ತಿ; ಯಾವುದೇ ದೇಶದ ನಾಗರಿಕರಿಗೆ ಒಮ್ಮೆಗೇ ಇಷ್ಟು ಪ್ರಶಸ್ತಿ ಸಿಕ್ಕಿದ್ದು ಇದೇ ಮೊದಲು; ಈ ನಾಲ್ವರ ಸಾಧನೆ ಏನು?

Republic Day Padma Awards: ಗಣರಾಜ್ಯೋತ್ಸವದಂದು ಆರ್ವರು ವಿದೇಶಿ ಪ್ರಜೆಗಳಿಗೆ ಪದ್ಮ ಪ್ರಶಸ್ತಿ ಬಂದಿದೆ. ಅದರಲ್ಲಿ ಫ್ರಾನ್ಸ್ ದೇಶದ ನಾಲ್ವರು ಪ್ರಜೆಗಳಿದ್ದಾರೆ. ಕಿರಣ್ ವ್ಯಾಸ್, ಚಾರ್ಲೊಟ್ಟೆ ಚಾಪಿನ್, ಪಿಯೆರೆ ಸಿಲ್ವಿಯನ್ ಫಿಲಿಯೋಜಾಟ್ ಮತ್ತು ಫ್ರೆಡ್ ನೆಗ್ರಿಟ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಕ್ಕಿದೆ. ಈ ನಾಲ್ವರೂ ಕೂಡ ಭಾರತ ಹಾಗೂ ಭಾರತೀಯ ಸಂಸ್ಕೃತಿಯೊಂದಿಗೆ ಜೋಡಿತಗೊಂಡವರೇ ಆಗಿರುವುದು ವಿಶೇಷ.

Republic Day: 40 ವರ್ಷಗಳ ನಂತರ ಸಾರೋಟಿನಲ್ಲಿ ಬಂದ ಮುರ್ಮು, ಮ್ಯಾಕ್ರನ್, ಇದಕ್ಕಾಗಿ ಪಾಕಿಸ್ತಾನದ ಜತೆಗೆ ಟಾಸ್ ಗೆದ್ದ ಭಾರತ

buggy: ಭಾರತದ ಪದ್ಧತಿಯಂತೆ ಈ ವರ್ಷದ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್​​​​ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರು ರಾಷ್ಟ್ರಪತಿಯವರ (ದ್ರೌಪದಿ ಮುರ್ಮು) ಜತೆಗೆ ದೆಹಲಿಯ ಕರ್ತವ್ಯ ಪಥಕ್ಕೆ ಸಾರೋಟುನಲ್ಲಿ ಬಂದಿದ್ದಾರೆ. ಒಂದು ದೇಶದ ನಾಯಕನಿಗೆ ಭದ್ರತೆ ವಿಚಾರವಾಗಿ ಅನೇಕ ಬೆಂಗಾವಲು ವ್ಯವಸ್ಥೆಗಳನ್ನು ನೀಡಲಾಗುತ್ತದೆ. ಆದರೆ ಈ ಬಾರಿ ಆ ಪದ್ಧತಿಯನ್ನು ಮುರಿದು, ಭಾರತದ ರಾಷ್ಟ್ರಪತಿ ಹಾಗೂ ಫ್ರಾನ್ಸ್​​ ಅಧ್ಯಕ್ಷರು ಜತೆಯಾಗಿ ಸಾರೋಟುನಲ್ಲಿ ಬಂದಿದ್ದಾರೆ.

ಧ್ವಜಾರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ, ಗ್ರಾ.ಪಂ.ಅಧ್ಯಕ್ಷೆ ಸೋಮವ್ವಗೆ ಗಾಯ

ಗ್ರಾಮ ಪಂಚಾಯತಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ಸಂದರ್ಭದಲ್ಲಿ ಪಂಚಾಯತಿ ಎದುರಿಗೆ ಕನ್ನಡಪರ ಸಂಘಟನೆ ಮುಖಂಡ ಮಲ್ಲು ಗಿನ್ನಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಸೋಮವ್ವ ಅವರ ತೊಡೆಗೆ ತಾಗಿದೆ. ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಸೋಮವ್ವ ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Republic Day: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

ದೇಶದಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ಮಾರೆವ್ವ ಸುರಪುರ ಅವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಗಿದೆ.

Republic Day 2024 Parade: ಭಾರತದ ರಕ್ಷಣಾ ಸಾಮರ್ಥ್ಯ, ಸಾಂಸ್ಕೃತಿಕ ವೈವಿಧ್ಯತೆಯ ಪ್ರದರ್ಶನ ಇಲ್ಲಿದೆ

ಭಾರತ ಇಂದು 75ನೇ ಗಣರಾಜ್ಯೋತ್ಸವ ಆಚರಣೆ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮಕ್ಕೆ ಫ್ರಾನ್ಸ್​​​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಪರೇಡ್​​​ ಪ್ರದರ್ಶನ ಕೂಡ ನಡೆಯಿತು.

ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ; 700ಕ್ಕೂ ಹೆಚ್ಚು ಮಕ್ಕಳಿಂದ ನೃತ್ಯ

ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಜೋರಾಗಿದೆ. 700ಕ್ಕೂ ಹೆಚ್ಚು ಮಕ್ಕಳು ವಂದೇ ಮಾತರಂ ಗೀತೆಗೆ ನೃತ್ಯ ಮಾಡಿದರು. 38 ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸರು, ಗೃಹರಕ್ಷಕ ದಳ, ಕೇರಳ ಪೊಲೀಸ್, ಸ್ಕೌಟ್ಸ್-ಗೈಡ್ಸ್, NCC ಸೇರಿದಂತೆ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪರೇಡ್ ನಡೆಸಿ ಗಮನಸೆಳೆದರು.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ ಮಹಮೂದ್ ಅಲಿ

ಹೈದರಾಬಾದ್​ನಲ್ಲಿ ನಡೆದ ಗಣರಾಜ್ಯೋತ್ಸವ(Republic Day) ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿರುವ ಘಟನೆ ನಡೆದಿದೆ. ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಭಾರತ ಇಂದು ತನ್ನ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ.

Republic Day 2024: ಗಣರಾಜ್ಯೋತ್ಸವದಂದು ಧ್ವಜ ಅರಳಿಸುವಿಕೆ ಮತ್ತು ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ, ಈ ಎರಡು ಪದದ ಒಳಾರ್ಥವೇನು?

ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಧ್ವಜಾರೋಹಣ ನೆರವೇರಿದೆ. ಆದರೆ ಗಣರಾಜ್ಯೋತ್ಸವದಂದು, ರಾಷ್ಟ್ರಪತಿಗಳು ತ್ರಿವರ್ಣ ಧ್ವಜವನ್ನು ಅರಳಿಸುತ್ತಾರೆ. ಆದರೆ ದೇಶವು ಸ್ವಾತಂತ್ರ್ಯ ಪಡೆದಿರುವ ದಿನವಾದ ಆಗಸ್ಟ್ 15 ರಂದು ಪ್ರಧಾನ ಮಂತ್ರಿಗಳು ರಾಷ್ಟ್ರಧ್ವಜವನ್ನು ಹಾರಿಸುತ್ತಾರೆ. ಈ ಎರಡು ದಿನವನ್ನು ರಾಷ್ಟ್ರೀಯ ದಿನವಾಗಿ ಆಚರಿಸಲಾಗುತ್ತಿದ್ದು, ಆದರೆ ಎರಡು ಪದಗಳ ಅರ್ಥವು ಭಿನ್ನವಾಗಿದ್ದು, ಒಳಅರ್ಥವನ್ನು ಹೊಂದಿದೆ.

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ