AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Republic Day

Republic Day

ಭಾರತದ ರಿಪಬ್ಲಿಕ್ ಡೇ ಅಥವಾ ಗಣತಂತ್ರ ದಿನ ಜನವರಿ 26ರಂದು ಆಚರಿಸಲಾಗುತ್ತದೆ. ಭಾರತಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಘೋಷಣೆ ಆದರೂ, ಬ್ರಿಟಿಷರ ಕೊಂಡಿಯಿಂದ ಅಧಿಕೃತವಾಗಿ ಕಳಚಿಕೊಂಡಿದ್ದು 1950ರ ಜನವರಿ 26ರಂದು. ಅಂದು ಭಾರತಕ್ಕೆ ಸಂವಿಧಾನ ಅಳವಡಿಕೆ ಆಯಿತು. ಜನವರಿ 26ರ ದಿನಕ್ಕೆ ಮತ್ತೊಂದು ಮಹತ್ವ ಇದೆ. 1930ರ ವರ್ಷದ ಇದೇ ದಿನದಂದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಸ್ವರಾಜ್ಯ ಘೋಷಣೆ ಮಾಡಿತು. ಜನವರಿ 26 ಅನ್ನು ಸ್ವರಾಜ್ಯ ದಿನವಾಗಿ ಆಚರಿಸುತ್ತಾ ಬರಲಾಗುತ್ತಿತ್ತು. ಕೊನೆಗೆ 1950ರಲ್ಲಿ ಸಂವಿಧಾನ ಅಳವಡಿಕೆಗೆ ಅದೇ ದಿನವನ್ನು ಸರ್ಕಾರ ಆಯ್ಕೆ ಮಾಡಿಕೊಂಡಿತು. ಗಣರಾಜ್ಯೋತ್ಸವ ದಿನವನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತದೆ. ರಾಷ್ಟ್ರಪತಿ, ಪ್ರಧಾನಿ ಮತ್ತಿತರ ಗಣ್ಯರು ಉಪಸ್ಥಿತರಿರುತ್ತಾರೆ. ರಕ್ಷಣಾ ಪಡೆಗಳ ವಿವಿಧ ತಂಡಗಳು ನಡೆಸುವ ಪೆರೇಡ್ ಬಹಳ ಅಮೋಘವಾಗಿರುತ್ತದೆ. ವಿವಿಧ ರಾಜ್ಯಗಳ ಸ್ತಬ್ಧ ಚಿತ್ರಗಳ ಮೆರವಣಿಗೆಯೂ ನಡೆಯುತ್ತದೆ. ಇದೇ ಗಣತಂತ್ರ ದಿನದಂದು ರಾಷ್ಟ್ರಪತಿಗಳು ವಿವಿಧ ಪದ್ಮ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಾರೆ.

ಇನ್ನೂ ಹೆಚ್ಚು ಓದಿ

ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ; ಕೂದಲೆಳೆ ಅಂತರದಿಂದ ಸಚಿವ ಪಾರು

ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುತ್ತಿದ್ದಾಗ ಧ್ವಜಸ್ತಂಭ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಕೂದಲೆಳೆ ಅಂತರದಿಂದ ಭಾರಿ ಅನಾಹುತವೊಂದು ತಪ್ಪಿದೆ. ತೆಲಂಗಾಣದ ಪಶುಸಂಗೋಪನಾ ಸಚಿವ ವಿ. ಶ್ರೀಹರಿ ಧ್ವಜಾರೋಹಣ ಮಾಡುತ್ತಿದ್ದಾಗ ಧ್ವಜಸ್ತಂಭ ಮುರಿದು ಬಿದ್ದಿದೆ. ಅವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಒಗ್ಗಟ್ಟಿನ ಶಕ್ತಿಯನ್ನು ತೋರಿಸುವ ವಿಜಯೋತ್ಸವದ ಮಾದರಿಯನ್ನು ಇಂದು ಗಣರಾಜ್ಯೋತ್ಸವದ ಪರೇಡ್​​ನಲ್ಲಿ ಪ್ರದರ್ಶಿಸಲಾಯಿತು. ಯುರೋಪಿನ ಮುಖ್ಯ ಅತಿಥಿಗಳು, ವಿದೇಶಿ ನಿಯೋಗಗಳು, ಗಣ್ಯರು ಮತ್ತು ಸಾವಿರಾರು ಪ್ರೇಕ್ಷಕರು ಭಾರತದ ಪರಂಪರೆ ಮತ್ತು ಅದರ ಕಾರ್ಯತಂತ್ರದ ರಕ್ಷಣಾ ವಿಕಸನ ಎರಡನ್ನೂ ಒತ್ತಿಹೇಳುವ ಅಸಾಧಾರಣ ಮೆರವಣಿಗೆಗೆ ಸಾಕ್ಷಿಯಾದರು.

ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್!

ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ (Republic Day 2026) ನೆರವೇರಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಮಾಡಿದರು. ಅಧಿಕಾರಿಗಳು ಮತ್ತು ಗಣ್ಯರು ಬೋಟ್ ಮೂಲಕ ದ್ವೀಪಕ್ಕೆ ತೆರಳಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು. ಈ ವಿಶೇಷ ಸಂದರ್ಭದಲ್ಲಿ, ಸಶಸ್ತ್ರ ಪಡೆಗಳ ವತಿಯಿಂದ ರಾಷ್ಟ್ರೀಯ ವಂದನಾ ಪರೇಡ್ ಹಾಗೂ ಸಶಸ್ತ್ರ ಪರೇಡ್ ಜರುಗಿತು. ಇದು ಕಾರ್ಯಕ್ರಮಕ್ಕೆ ಸಾಂಪ್ರದಾಯಿಕ ಮತ್ತು ಗಾಂಭೀರ್ಯದ ಸ್ಪರ್ಶ ನೀಡಿತು. ಸೈಂಟ್ ಮೇರಿಸ್ ದ್ವೀಪದಲ್ಲಿ ನಡೆದ ಈ ವಿಶಿಷ್ಟ ಆಚರಣೆಯು 77ನೇ ಗಣರಾಜ್ಯೋತ್ಸವದ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.

ಹಲವು ವಿಶೇಷಗಳಿಂದ ಗಮನ ಸೆಳೆದ ಗಣರಾಜ್ಯೋತ್ಸವ! ಈ ಬಾರಿ ಏನೆಲ್ಲ ಇತ್ತು? ಇಲ್ಲಿದೆ ನೋಡಿ

Republic Day 2026: ನವದೆಹಲಿಯ ಕರ್ತವ್ಯಪಥದಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಈ ವರ್ಷ ವಂದೇ ಮಾತರಂನ 150ನೇ ವರ್ಷಾಚರಣೆ, ಆತ್ಮನಿರ್ಭರ ಭಾರತ ಥೀಮ್, ಆಪರೇಷನ್ ಸಿಂದೂರ್ ಪ್ರದರ್ಶನ ಮತ್ತು ಸೇನೆಯ ಆಧುನಿಕ ಶಕ್ತಿ ಪ್ರಮುಖ ಆಕರ್ಷಣೆಯಾಗಿತ್ತು. ಇನ್ನೂ ಏನೇನು ವಿಶೇಷಗಳಿದ್ದವು ಎಂಬ ಮಾಹಿತಿ ಇಲ್ಲಿದೆ.

ಗದಗ: ಚಿನ್ನದ ನಿಧಿ ಒಪ್ಪಿಸಿದ ಲಕ್ಕುಂಡಿಯ ಕುಟುಂಬಕ್ಕೆ ಗಣರಾಜ್ಯೋತ್ಸವ ದಿನ ಭರ್ಜರಿ ಉಡುಗೊರೆ ನೀಡಿದ ಸರ್ಕಾರ

ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವಾಗ ಚಿನ್ನದ ನಿಧಿ ಪತ್ತೆಹಚ್ಚಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ರಾಜ್ಯ ಸರ್ಕಾರ ಗಣರಾಜ್ಯೋತ್ಸವದ ದಿನ ಬಂಪರ್ ಉಡುಗೊರೆ ಘೋಷಿಸಿದೆ. ಪ್ರಾಮಾಣಿಕವಾಗಿ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದಕ್ಕೆ ಗೌರವಿಸಿ, 30x40 ನಿವೇಶನ, 5 ಲಕ್ಷ ರೂ. ನಗದು, ಹಾಗೂ ತಾಯಿಗೆ ಸರ್ಕಾರಿ ಕೆಲಸ ನೀಡಲಾಗಿದೆ. ಸಚಿವ ಎಚ್​.ಕೆ. ಪಾಟೀಲ್ ಈ ಘೋಷಣೆ ಮಾಡಿದರು.

ಕರ್ನಾಟಕದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಹೇಗಿತ್ತು ನೋಡಿ!

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಸಂವಿಧಾನ ರಕ್ಷಣೆ, ಸಾಮಾಜಿಕ ನ್ಯಾಯದ ಬಗ್ಗೆ ಸಂದೇಶ ನೀಡಿದರು. ಮೈದಾನದಲ್ಲಿ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು, ಭದ್ರತಾ ವ್ಯವಸ್ಥೆ ಹಾಗೂ ಕೈದಿಗಳ ಸಿಹಿ ವಿತರಣೆ ಫೋಟೋಗಳು ಇಲ್ಲಿವೆ ನೋಡಿ.

ರಾಜ್ಯಪಾಲರ ಆಕ್ಷೇಪ ಬೆನ್ನಲ್ಲೇ ಸರ್ಕಾರದ ಎಚ್ಚರಿಕೆ ನಡೆ, ಗಣರಾಜ್ಯೋತ್ಸವ ಭಾಷಣದಲ್ಲಿಲ್ಲ ಕೇಂದ್ರದ ಟೀಕೆ!

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗಣರಾಜ್ಯೋತ್ಸವ ಭಾಷಣವು ಈ ಬಾರಿ ಕೇಂದ್ರ ಸರ್ಕಾರದ ವಿರುದ್ಧದ ಅಂಶಗಳನ್ನು ಹೊಂದಿರಲಿಲ್ಲ. ವಿಧಾಸಭೆ ವಿಶೇಷ ಅಧಿವೇಶನದ ಸಂದರ್ಭದ ಬೆನ್ನಲ್ಲೇ ರಾಜ್ಯಪಾಲರ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದ್ದು, ರಾಜ್ಯದ ಸಾಧನೆಗಳು, ಜನಕಲ್ಯಾಣ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಮೇಲೆ ಮಾತ್ರ ಕೇಂದ್ರೀಕರಿಸಿ ಭಾಷಣ ಸಿದ್ಧಪಡಿಸಿತ್ತು. ರಾಜಭವನ ಮತ್ತು ಸರ್ಕಾರದ ನಡುವೆ ಯಾವುದೇ ಸಂಘರ್ಷವಿಲ್ಲದೆ ಭಾಷಣವು ಸುಸೂತ್ರವಾಗಿ ಪೂರ್ಣಗೊಂಡಿತು.

ಗಣರಾಜ್ಯೋತ್ಸವ: ಜಿಬಿಎ ಎಡವಟ್ಟು, ಸ್ವಾಗತ ಫಲಕಗಳಲ್ಲಿ ಇನ್ನೂ ಬಿಬಿಎಂಪಿ ಹೆಸರು!

77ನೇ ಗಣರಾಜ್ಯೋತ್ಸವ ಸಂಭ್ರಮದ ನಡುವೆ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ದೊಡ್ಡ ಎಡವಟ್ಟು ಮಾಡಿದೆ. ಸ್ವಾಗತ ಫಲಕಗಳಲ್ಲಿ ಜಿಬಿಎ ಬದಲಿಗೆ ಹಳೆಯ ಬಿಬಿಎಂಪಿ ಹೆಸರನ್ನೇ ಬಳಸಲಾಗಿದೆ. ಮುಖ್ಯಮಂತ್ರಿಗಳು, ರಾಜ್ಯಪಾಲರು ಭಾಗವಹಿಸುವ ಈ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

Live: ಮಾಣೆಕ್​ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಸಿಎಂ, ರಾಜ್ಯಪಾಲರ ಭಾಷಣ ಲೈವ್

ಬೆಂಗಳೂರಿನ ಮಾಣೆಕ್​ ಶಾ ಪರೇಡ್​​ ಮೈದಾನದಲ್ಲಿ ಗಣರಾಜ್ಯೋತ್ಸವ ಸಂದರ್ಭ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಪಡೆ​, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದರು. ತೆರೆದ ಜೀಪ್​ನಲ್ಲಿ ರಾಜ್ಯಪಾಲರಿಂದ ಗೌರವ ವಂದನೆ ಸ್ವೀಕಾರದ ಬಳಿಕ ರಾಜ್ಯಪಾಲರಿಂದ ಹಾಗೂ ಸಿಎಂ ಸಿದ್ದರಾಮಯ್ಯರಿಂದ ಭಾಷಣ ನಡೆಯುತ್ತಿದ್ದು, ನೇರ ಪ್ರಸಾರ ಇಲ್ಲಿದೆ.

Republic Day 2026: 77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ

ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಹ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Happy Republic Day 2026: ಇಲ್ಲಿವೆ ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಲು ಗಣರಾಜ್ಯೋತ್ಸವದ ಅರ್ಥಪೂರ್ಣ ಸಂದೇಶಗಳು

ಜನವರಿ 26 ಭಾರತದ ಇತಿಹಾಸದಲ್ಲಿ ಬಹಳ ವಿಶೇಷವಾದ ದಿನ. 1950 ರ ಈ ದಿನದಂದು, ನಮ್ಮ ದೇಶದ ಸಂವಿಧಾನ ಜಾರಿಗೆ ಬಂದಿತು ಮತ್ತು ಭಾರತವು ಸಂಪೂರ್ಣ ಪ್ರಜಾಪ್ರಭುತ್ವ ರಾಷ್ಟ್ರವಾಯಿತು. ಪ್ರತಿಯೊಬ್ಬ ಭಾರತೀಯನ ಪಾಲಿನ ಹೆಮ್ಮೆಯ ದಿನವಾದ ಗಣರಾಜ್ಯೋತ್ಸವದ ಸುದಿನದಂದು ನಿಮ್ಮ ಸ್ನೇಹಿತರು, ಆಪ್ತರೊಂದಿಗೆ ಹಂಚಿಕೊಳ್ಳಲು ಇಲ್ಲಿವೆ ಶುಭ ಸಂದೇಶಗಳು.

Republic Day 2026 Parade Live: ದೆಹಲಿಯ ಕರ್ತವ್ಯಪಥದಿಂದ ಗಣರಾಜ್ಯೋತ್ಸವ ಸಂಭ್ರಮದ ನೇರ ಪ್ರಸಾರ

77th Republic Day Live Updates: 77ನೇ ಗಣರಾಜ್ಯೋತ್ಸವ ದಿಮಾಚರಣೆ ದೆಹಲಿಯಲ್ಲಿ ಸಂಭ್ರಮದಿಂದ ನೆರವೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್​ರೌಪದಿ ಮುರ್ಮು, ಯೂರೋಪಿಯನ್‌ ಕೌನ್ಸಿಲ್ ಅಧ್ಯ ಆಂಟೋನಿಯಾ ಕೋಸ್ಟಾ ಹಾಗೂ ಯೂರೋಪಿಯನ್‌ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್‌ ಡೆರ್‌ ಭಾಗವಹಿಸುತ್ತಿರುವ ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ