Rishab Shetty
ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ
ವಿಶ್ವ ಬಾಕ್ಸ್ ಆಫೀಸ್ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’
ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.
- Rajesh Duggumane
- Updated on: Dec 25, 2025
- 11:58 am
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇಬೇಕು’ ಎನ್ನುವ ಮೂಲಕ ಅವರು ಮಾತು ಶುರು ಮಾಡಿದರು. ವಿಡಿಯೋ ನೋಡಿ..
- Madan Kumar
- Updated on: Dec 21, 2025
- 10:22 am
ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ
ರಿಷಬ್ ಶೆಟ್ಟಿ ಜೊತೆ ಭಿನ್ನಾಭಿಪ್ರಾಯದ ವದಂತಿಗಳಿಗೆ ರಾಜ್ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. 'ರಿಷಬ್ ಯಾರನ್ನೂ ದೂರ ತಳ್ಳುವ ವ್ಯಕ್ತಿ ಅಲ್ಲ' ಎಂದು ರಾಜ್ ಹೇಳಿದ್ದಾರೆ. 'ಕಾಂತಾರ: ಚಾಪ್ಟರ್ 1' ಭಾಗವಾಗದಿರುವ ಕಾರಣವನ್ನೂ ವಿವರಿಸಿದ್ದಾರೆ. ಅವರ ಮತ್ತು ರಿಷಬ್ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದು, ಚಿತ್ರರಂಗದ ಒಳಿತಿಗಾಗಿ ಬೇರೆ ಬೇರೆ ಯೋಜನೆಗಳಲ್ಲಿ ಕೆಲಸ ಮಾಡುವುದು ಉತ್ತಮ ಎಂದು ಹೇಳಿದ್ದಾರೆ.
- Rajesh Duggumane
- Updated on: Dec 17, 2025
- 7:34 am
ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ: ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ತಿರುಗೇಟು
ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆ ನೇಮೋತ್ಸವ ಸರಿಯಾದ ರೀತಿಯಲ್ಲಿ ಇರಲಿಲ್ಲ ಎಂದು ದೈವರಾಧಕ ತಮ್ಮಣ್ಣ ಶೆಟ್ಟಿ ಗರಂ ಆಗಿದ್ದರು. ಈಗ ಮಂಗಳೂರಿನಲ್ಲಿ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾರೆಬೈಲು ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ತಮ್ಮ ಮೇಲೆ ಮಾಡಿದ ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ಸ್ಪಷ್ಟನೆ ಕೊಟ್ಟಿದ್ದಾರೆ.
- Ashok
- Updated on: Dec 15, 2025
- 5:41 pm
ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ
ರಿಷಬ್ ಶೆಟ್ಟಿ ಭಾಗವಹಿಸಿದ್ದ ಹರಕೆ ಕೋಲದ ದೈವ ನರ್ತಕರ ವರ್ತನೆ ಕುರಿತು ವಿವಾದ ಮುಂದುವರೆದಿದೆ, ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ಕದ್ರಿ ಠಾಣೆಗೆ ದೂರು ನೀಡಿದೆ. ದೇವಸ್ಥಾನದ ಪ್ರಮುಖರು ಸುದ್ದಿಗೋಷ್ಠಿ ನಡೆಸಿ, ವಿವಾದವು ದೈವ ಕ್ಷೇತ್ರದ ಬೆಳವಣಿಗೆಯನ್ನು ತಡೆಯುವ ಯತ್ನ ಎಂದು ಸ್ಪಷ್ಟಪಡಿಸಿದ್ದಾರೆ.
- Pruthviraj
- Updated on: Dec 12, 2025
- 12:37 pm
20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ
‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Ashok
- Updated on: Dec 9, 2025
- 8:26 pm
‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ
ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ಶುರುವಾಗಿದೆ. ಈ ಹರಕೆಯ ಕೋಲದ ಸಂದರ್ಭದಲ್ಲಿ ದೈವ ನರ್ತಕ ನಡೆದುಕೊಂಡ ರೀತಿಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಈ ಕುರಿತು ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನಿಸಿಕೆಯನ್ನು ಅವರು ತಿಳಿಸಿದ್ದಾರೆ.
- Ashok
- Updated on: Dec 9, 2025
- 7:18 pm
ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?
ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ದೈವ ನರ್ತಕರ ವರ್ತನೆ ಕುರಿತು ಭಾರೀ ವಿವಾದ ಹುಟ್ಟಿಕೊಂಡಿದೆ. ರಿಷಬ್ ಕಾಲೆ ಮೇಲೆ ಮಲಗಿದ್ದು ದೈವ ನರ್ತಕರೇ ಹೊರತು ದೈವವಲ್ಲ ಎಂಬ ಮಾತು ಕೇಳಿಬಂದಿದೆ. ದೈವಾರಾಧನೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿದಂತೆ ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ashok
- Updated on: Dec 9, 2025
- 10:06 am
ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್
‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂತರ ‘ಕಾಂತಾರ: ಚಾಪ್ಟರ್ 3’ ಚಿತ್ರೀಕರಣ ಶುರು ಆಗುವ ಸಾಧ್ಯತೆ ಇದೆ.
- Pruthviraj
- Updated on: Dec 5, 2025
- 6:48 pm
‘ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ’; ರಿಷಬ್ಗೆ ಅಭಯ ನೀಡಿದ ದೈವ
ರಿಬಷ ಶೆಟ್ಟಿ ಅವರು ದೈವದ ಬಗ್ಗೆ ಅಪಾರ ಭಕ್ತಿ ಹೊಂದಿದವರು. ಅವರು ಈಗ ಪಂಜುರ್ಲಿಗೆ ಹರಕೆ ಕೋಲ ನೀಡಿ ಸಂತುಷ್ಟಗೊಂಡಿದ್ದಾರೆ. ಈ ವೇಳೆ ದೈವವು ನಿನ್ನ ಪರವಾಗಿ ಇರೋದಾಗಿ ಅಭಯ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.
- Rajesh Duggumane
- Updated on: Dec 5, 2025
- 8:30 am
ಪಂಜುರ್ಲಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹರಕೆ ತೀರಿಸಿದ ರಿಷಬ್ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಚಿತ್ರತಂಡದವರು ಹರಕೆ ತೀರಿಸಲು ಬಂದಿದ್ದಾರೆ. ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ಪತ್ನಿ, ಮಕ್ಕಳ ಜತೆ ನೇಮೋತ್ಸವಕ್ಕೆ ರಿಷಬ್ ಶೆಟ್ಟಿ ಆಗಮಿಸಿದ್ದಾರೆ. ಕಳೆದ ಎಪ್ರಿಲ್ ತಿಂಗಳಲ್ಲಿ ಕೂಡ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ರಿಷಬ್ ಶೆಟ್ಟಿ ಮತ್ತು ಕುಟುಂಬದವರು ಭಾಗಿ ಆಗಿದ್ದರು.
- Pruthviraj
- Updated on: Dec 4, 2025
- 9:53 pm
ಭಾರತದ ಅತ್ಯಂತ ಜನಪ್ರಿಯ ತಾರೆಯರ ಪಟ್ಟಿಯಲ್ಲಿ ಕನ್ನಡದ ಮೂವರಿಗೆ ಸ್ಥಾನ
IMDb 2025ರ ಭಾರತದ ಅತ್ಯಂತ ಜನಪ್ರಿಯ ತಾರೆಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಬಾರಿ ಶಾರುಖ್, ಸಲ್ಮಾನ್ ಸ್ಥಾನ ಪಡೆದಿಲ್ಲ. ಟಾಪ್ 10ರಲ್ಲಿ ಬಹುತೇಕ ಹೊಸ ಮುಖಗಳಿದ್ದು, ಮೂವರು ಕನ್ನಡದ ಕಲಾವಿದರಾದ ರಶ್ಮಿಕಾ ಮಂದಣ್ಣ (6), ರುಕ್ಮಿಣಿ ವಸಂತ್ (9), ರಿಷಬ್ ಶೆಟ್ಟಿ (10) ಸ್ಥಾನ ಗಳಿಸಿದ್ದಾರೆ.
- Rajesh Duggumane
- Updated on: Dec 4, 2025
- 10:58 am