AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty

Rishab Shetty

ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ

ಇನ್ನೂ ಹೆಚ್ಚು ಓದಿ

‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಪೈಪೋಟಿ ನೀಡುತ್ತಾ ಅಕ್ಷಯ್ ಕುಮಾರ್ ಸಿನಿಮಾ?

ಅಕ್ಟೋಬರ್ 2ರಂದು ಬಹಳ ಅದ್ದೂರಿಯಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಲಿದೆ. ಅದೇ ದಿನ ‘ಜಾಲಿ ಎಲ್​ಎಲ್​ಬಿ 3’ ಸಿನಿಮಾ ಕೂಡ ಬಿಡುಗಡೆ ಆಗುವ ಸಾಧ್ಯತೆ ದಟ್ಟವಾಗಿದೆ. ಈ ಸಿನಿಮಾದಲ್ಲಿ ಅರ್ಷದ್ ವಾರ್ಸಿ, ಅಕ್ಷಯ್ ಕುಮಾರ್ ಮುಂತಾದವರು ನಟಿಸಿದ್ದಾರೆ. ಎರಡೂ ಸಿನಿಮಾಗಳ ಮೇಲೆ ನಿರೀಕ್ಷೆ ಜಾಸ್ತಿ ಇದೆ.

ಕೈ ಹಿಡಿದ ವಾಟರ್ ಕ್ಯಾನ್ ಬಿಸ್ನೆಸ್ ಬಿಟ್ಟಿದ್ದ ರಿಷಬ್ ಶೆಟ್ಟಿ; ಇದಕ್ಕಿದೆ ಕಾರಣ

Rishab Shetty Birthday: ರಿಷಬ್ ಶೆಟ್ಟಿ ಅವರು ಯಶಸ್ವಿ ಉದ್ಯಮಿಗಳಾಗಿದ್ದರು. ಆದರೆ ಸಿನಿಮಾ ರಂಗದ ಬಗ್ಗೆ ಅವರ ಆಸಕ್ತಿಯು ಅವರನ್ನು ಈ ಕ್ಷೇತ್ರಕ್ಕೆ ತಂದಿತು. ಅವರು ನಿರ್ಮಾಣ ಮತ್ತು ವಾಟರ್ ಕ್ಯಾನ್ ವ್ಯವಹಾರಗಳಲ್ಲಿ ಯಶಸ್ಸನ್ನು ಕಂಡರು. ಆದರೆ ತಮ್ಮ ಸಿನಿಮಾ ಕನಸನ್ನು ಈಡೇರಿಸಲು ಅವುಗಳನ್ನು ತ್ಯಜಿಸಿದರು. 'ಕಾಂತಾರ' ಚಿತ್ರ ಅವರ ವೃತ್ತಿ ಜೀವನದಲ್ಲಿ ಮಹತ್ವದ ತಿರುವು ತಂದಿದೆ ಮತ್ತು ಅವರನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.

ರಿಷಬ್ ಶೆಟ್ಟಿ ಜನ್ಮದಿನಕ್ಕೆ ‘ಕಾಂತಾರ: ಚಾಪ್ಟರ್ 1’ ಚಿತ್ರದ ಕಡೆಯಿಂದ ಬಿಗ್ ಅಪ್​ಡೇಟ್​

Rishab Shetty Birthday: ರಿಷಬ್ ಶೆಟ್ಟಿ ಅವರಿಗೆ ಇಂದು ಜನ್ಮದಿನ. ಇದರ ಪ್ರಯುಕ್ತ ‘ಕಾಂತಾರ: ಚಾಪ್ಟರ್ 1’ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಈ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಲಾಗಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. ಪೋಸ್ಟರ್‌ನಲ್ಲಿ ರಿಷಬ್ ಶೆಟ್ಟಿ ಆಕ್ರೋಶದಿಂದ ಕೂಡಿದ್ದಾರೆ.

ಕಾಂತಾರ ಚಿತ್ರತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ

ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಅವಘಡ ಆಗಿತ್ತು ಎಂಬ ಸುದ್ದಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರತಂಡದ ಯಾರಿಗೂ ತೊಂದರೆ ಆಗಿಲ್ಲ ಎಂದು ಅವರು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಕಾಂತಾರ ಚಿತ್ರತಂಡಕ್ಕೆ ಹೊಸನಗರ ತಹಶೀಲ್ದಾರ್ ನೋಟಿಸ್; ಅನುಮತಿ ಪತ್ರ ಹಾಜರುಪಡಿಸಲು ಸೂಚನೆ

ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಎದುರಾಗುತ್ತಿರುವ ಸಂಕಷ್ಟಗಳು ಒಂದೆರಡಲ್ಲ. ಇತ್ತೀಚೆಗೆ ಚಿತ್ರದ ಶೂಟಿಂಗ್ ವೇಳೆ ದೋಣಿ ಮಗುಚಿದೆ. ಆ ಬಗ್ಗೆ ಹೊಸನಗರ ತಹಶೀಲ್ದಾರ್ ಸ್ಪಷ್ಟನೆ ಕೇಳಿದ್ದಾರೆ. ಚಿತ್ರೀಕರಣಕ್ಕಾಗಿ ಪಡೆದಿರುವ ಅನುಮತಿ ಪತ್ರಗಳನ್ನು ಹಾಜರುಪಡಿಸುವಂತೆ ಈ ನೋಟಿಸ್​ನಲ್ಲಿ ಸೂಚಿಸಲಾಗಿದೆ. ಆ ಕುರಿತು ಇಲ್ಲಿದೆ ಮಾಹಿತಿ..

ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಬದುಕಲಿಲ್ಲ: ಕಾಂತಾರ ನಟನ ಸಾವಿಗೂ ಮುನ್ನ ಏನಾಯ್ತು?

‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲು ಬಂದಿದ್ದ ಕೇರಳ ಮೂಲದ ಕಲಾವಿದ ವಿಜು ವಿ.ಕೆ. ನಿಧನರಾಗಿದ್ದಾರೆ. ಅವರು ಸಾಯುವುದಕ್ಕೂ ಮುನ್ನ ಏನೆಲ್ಲ ಆಯ್ತು ಎಂಬ ಮಾಹಿತಿ ಸಿಕ್ಕಿದೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ತಂಡಕ್ಕೆ ಸಹ-ಕಲಾವಿದರನ್ನು ಪೂರೈಕೆ ಮಾಡಿದ ಹಬೀಬ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರಕ್ಕೆ ಸಾಲು ಸಾಲು ಹಿನ್ನಡೆ; ದೈವದ ಎಚ್ಚರಿಕೆ ನಿಜವಾಯ್ತಾ?

Rishab Shetty: ರಿಷಬ್ ಶೆಟ್ಟಿ ಅವರ ‘ಕಾಂತಾರ’ ಚಿತ್ರದ ಶೂಟಿಂಗ್ ಸಮಯದಲ್ಲಿ ಹಲವಾರು ಅಪಘಾತಗಳು ಮತ್ತು ಮರಣಗಳು ಸಂಭವಿಸಿವೆ. ಚಿತ್ರೀಕರಣದ ಸಮಯದಲ್ಲಿ ಬಸ್ ಅಪಘಾತ, ಕಲಾವಿದರ ಸಾವು ಮತ್ತು ಇತರ ಅನಾಹುತಗಳು ಸಂಭವಿಸಿವೆ. ಇದರಿಂದಾಗಿ ಚಿತ್ರತಂಡದ ಮೇಲೆ ದೈವದ ಎಚ್ಚರಿಕೆಯ ನಂಬಿಕೆ ಹೆಚ್ಚಾಗಿದೆ.

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ನಿಧನ; ಹೃದಯಘಾತದಿಂದ ಕೊನೆಯುಸಿರು

Kantara: Chapter 1 Junior Artist Death: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ‘ಕಾಂತಾರ: ಚಾಪ್ಟರ್ 1’ ಚಿತ್ರದ ಜೂನಿಯರ್ ಆರ್ಟಿಸ್ಟ್ ಒಬ್ಬರು ಮೃತಪಟ್ಟಿದ್ದಾರೆ. ಮೃತನನ್ನು ವಿಜು ವಿಕೆ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಇಬ್ಬರು ಕಲಾವಿದರು ನಿಧನರಾಗಿದ್ದರು. ಈ ದುರ್ಘಟನೆ ಚಿತ್ರರಂಗಕ್ಕೆ ಆಘಾತ ತಂದಿದೆ.

21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ರಿಷಬ್ ಶೆಟ್ಟಿ ಭೇಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟ ರಾಕೇಶ್ ಪೂಜಾರಿ ಅವರು ಅಭಿನಯಿಸುತ್ತಿದ್ದರು. ಆದರೆ ಹೃದಯಾಘಾತದಿಂದ ನಿಧನರಾದ ರಾಕೇಶ್ ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಬಂದಿರಲಿಲ್ಲ. 21 ದಿನಗಳು ಕಳೆದ ನಂತರ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ಅವರು ರಾಕೇಶ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಹಲವು ಅಡ್ಡಿ-ಆತಂಕ; ಆದರೂ ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್

Rishab Shety: 'ಕಾಂತಾರ: ಚಾಪ್ಟರ್ 1' ಸಿನಿಮಾದ ಚಿತ್ರೀಕರಣದಲ್ಲಿ ಅನೇಕ ಅಡಚಣೆಗಳು ಎದುರಾಗಿದೆ. ಆದರೂ ಸಿನಿಮಾ ಅಕ್ಟೋಬರ್ 2 ರಂದು ಬಿಡುಗಡೆಯಾಗಲಿದೆ. ಬಸ್ ಅಪಘಾತ, ರಿಷಬ್ ಶೆಟ್ಟಿ ಅವರಿಗೆ ದೈವದ ಎಚ್ಚರಿಕೆ, ಕಲಾವಿದರ ನಿಧನದಂತಹ ದುರ್ಘಟನೆಗಳ ನಡುವೆಯೂ ಚಿತ್ರತಂಡ ಚಿತ್ರದ ಕೆಲಸವನ್ನು ಪೂರ್ಣಗೊಳಿಸಿದೆ.

ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಮಗಳೊಟ್ಟಿಗೆ ಕಾಪು ಮಾರಿಗುಡಿ ದೇವಾಲಯಕ್ಕೆ ಅಶ್ವಿನಿ ಪುನೀತ್​​ ರಾಜ್​​ಕುಮಾರ್
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಸಿಎಂ ಜೊತೆಗಿದ್ದ ಶಾಸಕರೆಲ್ಲ ಸ್ವಂತ ಖರ್ಚಿನಲ್ಲಿ ದೆಹಲಿ ಹೋಗಿದ್ದರೇ?
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಕೆಲದಿನಗಳ ಮಟ್ಟಿಗೆ ಮುಂದೂಡಲ್ಪಟ್ಟ ಮುಖ್ಯಮಂತ್ರಿ ಗಾದಿಯ ಸಂಘರ್ಷ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಯಶ್ ವಿಚಾರದಲ್ಲಿ ಅಷ್ಟು ಕಟುತ್ವ ಏಕೆ? ಉತ್ತರಿಸಿದ ತಾಯಿ ಪುಷ್ಪಾ
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ಧಾರ್ಮಿಕ ಸ್ಥಳಕ್ಕೆ ಬಂದಾಗ ರಾಜಕೀಯ ಮಾತಾಡಲಾರೆ: ಪರಮೇಶ್ವರ್
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ!
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ: ಅಶೋಕ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಸಹಾಯಕ ತಂದೆ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಗಜಲಕ್ಷ್ಮಿ, ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಚಾಮುಂಡೇಶ್ವರಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ
ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ 300 ಅಡಿ ಆಳದ ಕಂದಕಕ್ಕೆ ಬಿದ್ದ ವ್ಯಕ್ತಿ