Rishab Shetty
ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ
80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ?
ರಿಷಬ್ ಶೆಟ್ಟಿ ನಟಿಸುವ, ನಿರ್ದೇಶಿಸುವ ಸಿನಿಮಾಗಳಿಗೆ ಹಣ ಹೂಡಿದರೆ ನಷ್ಟ ಆಗಲ್ಲ ಎಂಬುದು ಖಚಿತ ಆಗಿದೆ. ಆದ್ದರಿಂದ ಪರಭಾಷೆಯ ದೊಡ್ಡ ದೊಡ್ಡ ನಿರ್ಮಾಪಕರು ರಿಷಬ್ ಶೆಟ್ಟಿ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಹೊಸ ಸಿನಿಮಾಗೆ ರಿಷಬ್ ಶೆಟ್ಟಿ ಅವರು ಬರೋಬ್ಬರಿ 80 ಕೋಟಿ ರೂಪಾಯಿ ಸಂಬಳ ಕೇಳುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ.
- Madan Kumar
- Updated on: Feb 3, 2026
- 2:22 pm
ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ
ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ ಆಧರಿಸಿದ ಈ ಸಿನಿಮಾವನ್ನು ರಿಷಬ್ ಅವರೇ ನಿರ್ದೇಶಿಸಿ, ನಟಿಸಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವಾರು ಪ್ರಯತ್ನಗಳು ವಿಫಲವಾಗಿದ್ದ ಈ ಮಹತ್ವಾಕಾಂಕ್ಷಿ ಯೋಜನೆಗೆ ರಿಷಬ್ ಮರುಜೀವ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.
- Rajesh Duggumane
- Updated on: Feb 2, 2026
- 1:15 pm
ಆಸ್ಕರ್ ರೇಸ್ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ
ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ, ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.
- Rajesh Duggumane
- Updated on: Jan 9, 2026
- 8:40 am
ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್ನಲ್ಲಿ ಸುತ್ತಾಟ
ರಿಷಬ್ ಶೆಟ್ಟಿ ಅವರಿಗೆ ಈ ವರ್ಷ ಸಾಕಷ್ಟು ವಿಶೇಷವಾಗಿತ್ತು. ಸತತ ಮೂರು ವರ್ಷ ಶ್ರಮ ಹಾಕಿ ಮಾಡಿದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಜೊತೆ ಗೋವಾಗೆ ತೆರಳಿದ್ದಾರೆ.
- Rajesh Duggumane
- Updated on: Dec 31, 2025
- 1:15 pm
ವಿಶ್ವ ಬಾಕ್ಸ್ ಆಫೀಸ್ನಲ್ಲಿ ‘ಕಾಂತಾರ: ಚಾಪ್ಟರ್ 1’ ಗಳಿಕೆ ಹಿಂದಿಕ್ಕಿದ ‘ಧುರಂಧರ್’
ರಣವೀರ್ ಸಿಂಗ್ ನಟನೆಯ 'ಧುರಂದರ್' 2025ರ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ಹೊರಹೊಮ್ಮಿದೆ. 935 ಕೋಟಿ ಗಳಿಸಿ, 'ಕಾಂತಾರ: ಚಾಪ್ಟರ್ 1' ದಾಖಲೆ ಮುರಿದಿದೆ. ಭಾರತದಲ್ಲಿ 600 ಕೋಟಿ ಗಳಿಸಿದ್ದು, ಅಲ್ಪಾವಧಿಯಲ್ಲೇ 1000 ಕೋಟಿ ಕ್ಲಬ್ ಸೇರುವ ಸಾಧ್ಯತೆ ಇದೆ.
- Rajesh Duggumane
- Updated on: Dec 25, 2025
- 11:58 am
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಬಿಡುಗಡೆಗೆ ಸಜ್ಜಾಗಿರುವ ‘45’ ಚಿತ್ರದ ಕಾರ್ಯಕ್ರಮದಲ್ಲಿ ಪ್ರಮೋದ್ ಶೆಟ್ಟಿ ಅವರು ಶೆಟ್ಟಿ ಗ್ಯಾಂಗ್ ಬಿರುಕಿನ ಬಗ್ಗೆ ಮೌನ ಮುರಿದರು. ‘ಶಿವಣ್ಣ, ಉಪೇಂದ್ರ ಅವರ ಬಗ್ಗೆ ಮಾತನಾಡಿದ ಬಳಿಕ ನಾನು ರಾಜ್ ಬಿ. ಶೆಟ್ಟಿ ಬಗ್ಗೆ ಮಾತನಾಡಲೇಬೇಕು’ ಎನ್ನುವ ಮೂಲಕ ಅವರು ಮಾತು ಶುರು ಮಾಡಿದರು. ವಿಡಿಯೋ ನೋಡಿ..
- Madan Kumar
- Updated on: Dec 21, 2025
- 10:22 am
ಅವರು ಯಾರನ್ನೂ ದೂರ ತಳ್ಳೋ ವ್ಯಕ್ತಿ ಅಲ್ಲ; ರಿಷಬ್ ಪರ ಬ್ಯಾಟ್ ಬೀಸಿದ ರಾಜ್ ಬಿ ಶೆಟ್ಟಿ
ರಿಷಬ್ ಶೆಟ್ಟಿ ಜೊತೆ ಭಿನ್ನಾಭಿಪ್ರಾಯದ ವದಂತಿಗಳಿಗೆ ರಾಜ್ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. 'ರಿಷಬ್ ಯಾರನ್ನೂ ದೂರ ತಳ್ಳುವ ವ್ಯಕ್ತಿ ಅಲ್ಲ' ಎಂದು ರಾಜ್ ಹೇಳಿದ್ದಾರೆ. 'ಕಾಂತಾರ: ಚಾಪ್ಟರ್ 1' ಭಾಗವಾಗದಿರುವ ಕಾರಣವನ್ನೂ ವಿವರಿಸಿದ್ದಾರೆ. ಅವರ ಮತ್ತು ರಿಷಬ್ ನಡುವೆ ಯಾವುದೇ ಸಮಸ್ಯೆ ಇಲ್ಲ ಎಂದಿದ್ದು, ಚಿತ್ರರಂಗದ ಒಳಿತಿಗಾಗಿ ಬೇರೆ ಬೇರೆ ಯೋಜನೆಗಳಲ್ಲಿ ಕೆಲಸ ಮಾಡುವುದು ಉತ್ತಮ ಎಂದು ಹೇಳಿದ್ದಾರೆ.
- Rajesh Duggumane
- Updated on: Dec 17, 2025
- 7:34 am
ರಿಷಬ್ ಶೆಟ್ಟಿ ಹರಕೆ ನೇಮೋತ್ಸವ ವಿವಾದ: ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ತಿರುಗೇಟು
ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆ ನೇಮೋತ್ಸವ ಸರಿಯಾದ ರೀತಿಯಲ್ಲಿ ಇರಲಿಲ್ಲ ಎಂದು ದೈವರಾಧಕ ತಮ್ಮಣ್ಣ ಶೆಟ್ಟಿ ಗರಂ ಆಗಿದ್ದರು. ಈಗ ಮಂಗಳೂರಿನಲ್ಲಿ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾರೆಬೈಲು ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ತಮ್ಮ ಮೇಲೆ ಮಾಡಿದ ಆರೋಪಗಳಿಗೆ ತಮ್ಮಣ್ಣ ಶೆಟ್ಟಿ ಸ್ಪಷ್ಟನೆ ಕೊಟ್ಟಿದ್ದಾರೆ.
- Ashok
- Updated on: Dec 15, 2025
- 5:41 pm
ರಿಷಬ್ ಶೆಟ್ಟಿ ಹರಕೆ ಕೋಲ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ದೇವಸ್ಥಾನದ ಆಡಳಿತ ಮಂಡಳಿ
ರಿಷಬ್ ಶೆಟ್ಟಿ ಭಾಗವಹಿಸಿದ್ದ ಹರಕೆ ಕೋಲದ ದೈವ ನರ್ತಕರ ವರ್ತನೆ ಕುರಿತು ವಿವಾದ ಮುಂದುವರೆದಿದೆ, ಈ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿದ್ದು, ಜಾರಂದಾಯ ಬಂಟ ಮತ್ತು ವಾರಾಹಿ ಪಂಜುರ್ಲಿ ಕ್ಷೇತ್ರದ ಆಡಳಿತ ಮಂಡಳಿ ಕದ್ರಿ ಠಾಣೆಗೆ ದೂರು ನೀಡಿದೆ. ದೇವಸ್ಥಾನದ ಪ್ರಮುಖರು ಸುದ್ದಿಗೋಷ್ಠಿ ನಡೆಸಿ, ವಿವಾದವು ದೈವ ಕ್ಷೇತ್ರದ ಬೆಳವಣಿಗೆಯನ್ನು ತಡೆಯುವ ಯತ್ನ ಎಂದು ಸ್ಪಷ್ಟಪಡಿಸಿದ್ದಾರೆ.
- Pruthviraj
- Updated on: Dec 12, 2025
- 12:37 pm
20 ವರ್ಷದ ಹಿಂದೆಯೇ ದೈವಾರಾಧನೆ ವ್ಯಾಪಾರ ಆಗಿದೆ: ದೈವಾರಾಧಕ ತಮ್ಮಣ್ಣ ಶೆಟ್ಟಿ ಗರಂ
‘ಕಾಂತಾರ’ ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರು ದೈವಾರಾಧನೆ ಬಗ್ಗೆ ಜನರಿಗೆ ತೋರಿಸಿದರು. ಇತ್ತೀಚೆಗೆ ಅವರು ಹರಕೆ ಕೋಲದಲ್ಲಿ ಪಾಲ್ಗೊಂಡಿದ್ದರು. ಆ ಸಂದರ್ಭದ ವಿಡಿಯೋ ವೈರಲ್ ಆದ ಬಳಿಕ ಪರ-ವಿರೋಧದ ಚರ್ಚೆ ಆರಂಭ ಆಗಿದೆ. ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಕೂಡ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.
- Ashok
- Updated on: Dec 9, 2025
- 8:26 pm
‘ಕಾಂತಾರದಿಂದ ದೈವಗಳು ಬೀದಿಗೆ ಬಂದಿವೆ’: ದೈವಾರಾಧಕ ತಮ್ಮಣ್ಣ ಶೆಟ್ಟಿ ಅಸಮಾಧಾನ
ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಅವರು ಇತ್ತೀಚೆಗೆ ಪಾಲ್ಗೊಂಡ ಹರಕೆಯ ಕೋಲದ ಬಗ್ಗೆ ವಿವಾದ ಶುರುವಾಗಿದೆ. ಈ ಹರಕೆಯ ಕೋಲದ ಸಂದರ್ಭದಲ್ಲಿ ದೈವ ನರ್ತಕ ನಡೆದುಕೊಂಡ ರೀತಿಯನ್ನು ಅನೇಕರು ವಿರೋಧಿಸುತ್ತಿದ್ದಾರೆ. ಈ ಕುರಿತು ದೈವಾರಾಧಕ ತಮ್ಮಣ್ಣ ಶೆಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಅನಿಸಿಕೆಯನ್ನು ಅವರು ತಿಳಿಸಿದ್ದಾರೆ.
- Ashok
- Updated on: Dec 9, 2025
- 7:18 pm
ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್; ನಿಯಮಗಳ ವಿರುದ್ಧ ಹೋದ ನಟ?
ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ದೈವ ನರ್ತಕರ ವರ್ತನೆ ಕುರಿತು ಭಾರೀ ವಿವಾದ ಹುಟ್ಟಿಕೊಂಡಿದೆ. ರಿಷಬ್ ಕಾಲೆ ಮೇಲೆ ಮಲಗಿದ್ದು ದೈವ ನರ್ತಕರೇ ಹೊರತು ದೈವವಲ್ಲ ಎಂಬ ಮಾತು ಕೇಳಿಬಂದಿದೆ. ದೈವಾರಾಧನೆಯ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ದೈವಾರಾಧಕ ತಮ್ಮಣ್ಣ ಶೆಟ್ಟಿ ಸೇರಿದಂತೆ ಹಲವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ashok
- Updated on: Dec 9, 2025
- 10:06 am