
Rishab Shetty
ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ
ರಿಷಬ್ ಶೆಟ್ಟಿ ಬಳಿಕ ಬಾಲಿವುಡ್ ನಟನ ಮನೆಗೂ ಬಂತು ಈ ಐಷಾರಾಮಿ ಕಾರು
ಸಿದ್ದಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ. ಈಗ ಅವರು ಹೊಸ ಕಾರು ಖರೀದಿಸಿದ್ದಾರೆ. 1.22 ಕೋಟಿ ರೂಪಾಯಿ ಬೆಲೆ ಬಾಳುವ ಟೊಯೋಟಾ ವೆಲ್ಫೈರ್ ಕಾರು ಅವರ ಮನೆಗೆ ಬಂದಿದೆ. ಸಖತ್ ಬ್ಯಸಿ ಆಗಿರುವ ಅವರಿಬ್ಬರು ಪ್ರತಿ ಸಿನಿಮಾಗೆ ಕೈ ತುಂಬ ಸಂಭಾವನೆ ಪಡೆಯುತ್ತಾರೆ.
- Swathi NK
- Updated on: Apr 25, 2025
- 5:34 pm
‘ಕಾಂತಾರ: ಚಾಪ್ಟರ್ 1’ ಚಿತ್ರದ ಹವಾ; ಸೂಪರ್ ಸ್ಟಾರ್ಗಳನ್ನು ಹಿಂದಿಕ್ಕಿದ ರಿಷಬ್ ಶೆಟ್ಟಿ
ಪರಭಾಷೆಯ ಘಟಾನುಘಟಿ ನಟರ ಸಿನಿಮಾಗಳನ್ನು ‘ಕಾಂತಾರ: ಚಾಪ್ಟರ್ 1’ ಚಿತ್ರ ಹಿಂದಿಕ್ಕಿದೆ. ಆ ಮೂಲಕ ನಂಬರ್ ಒನ್ ಸ್ಥಾನ ಪಡೆದಿದೆ. ರಿಷಬ್ ಶೆಟ್ಟಿ ಅವರ ಮೇಲೆ ಸಿನಿಪ್ರಿಯರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಇದೇ ಸಾಕ್ಷಿ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.
- Madan Kumar
- Updated on: Apr 24, 2025
- 6:16 pm
1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋಸ್ ನೋಡಿ
ಹೊಸ ಕಾರು ಖರೀದಿಸಿರುವ ರಿಷಬ್ ಶೆಟ್ಟಿ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ರಿಷಬ್ ಶೆಟ್ಟಿ ಖರೀದಿಸಿದ ಟೊಯೊಟಾ ವೆಲ್ ಫೈರ್ ಕಾರಿನ ಬೆಲೆ ಬರೋಬ್ಬರಿ 1.3 ಕೋಟಿ ರೂಪಾಯಿ. ಹೊಸ ಕಾರಿನ ಫೋಟೋಗಳು ವೈರಲ್ ಆಗುತ್ತಿವೆ. ರಿಷಬ್ ಶೆಟ್ಟಿ ಮಡದಿ ಮತ್ತು ಮಕ್ಕಳು ಕಾರಿನ ಎದುರು ಪೋಸ್ ನೀಡಿದ್ದಾರೆ.
- Madan Kumar
- Updated on: Apr 14, 2025
- 10:31 pm
ಶಿವಾಜಿ ಸಿನಿಮಾ ಈಗಲೇ ನಿಲ್ಲಿಸಿ: ರಿಷಬ್ ಶೆಟ್ಟಿಗೆ ವಾಟಾಳ್ ನಾಗರಾಜ್ ವಾರ್ನಿಂಗ್
ನಟ ರಿಷಬ್ ಶೆಟ್ಟಿ ಅವರು ಶಿವಾಜಿ ಬಯೋಪಿಕ್ನಲ್ಲಿ ನಟಿಸುತ್ತಿದ್ದಾರೆ. ಆದರೆ ಈ ಸಿನಿಮಾ ಮಾಡಬಾರದು ಎಂದು ವಾಟಾಳ್ ನಾಗರಾಜ್ ಅವರು ಎಚ್ಚರಿಕೆ ನೀಡಿದ್ದಾರೆ. ಕೋಲಾರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಒಂದು ವೇಳೆ ಶಿವಾಜಿ ಸಿನಿಮಾ ಬಿಡುಗಡೆಯಾದರೆ ಪ್ರತಿಭಟನೆ ಆಗುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
- Madan Kumar
- Updated on: Apr 11, 2025
- 9:13 pm
ರಿಷಬ್ ಶೆಟ್ಟಿ ಸಂಸಾರದ ಬಗ್ಗೆ ದೈವ ಹೇಳಿದ್ದೇನು? ಸಂಸಾರ ಪದಕ್ಕೆ ಇದೆ ಬೇರೆ ಅರ್ಥ
ರಿಷಬ್ ಶೆಟ್ಟಿ ಅವರು ವಾರಾಹಿ ಪಂಜುರ್ಲಿ ದೈವದ ಎದುರು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಈ ವೇಳೆ ದೈವ ಹೇಳಿದ ಮಾತುಗಳ ಬಗ್ಗೆ ಕೆಲವರಿಗೆ ಗೊಂದಲ ಮೂಡಿದೆ. ರಿಷಬ್ ಶೆಟ್ಟಿ ಸಂಸಾರದ ಬಗ್ಗೆ ದೈವ ನುಡಿದಿದೆ. ಆದರೆ ಇಲ್ಲಿ ಸಂಸಾರ ಎಂದರೆ ಬೇರೆಯೇ ಅರ್ಥ ಇದೆ.
- Ashok
- Updated on: Apr 7, 2025
- 6:22 pm
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು? ಇಲ್ಲಿದೆ ವಿವರ
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ವಾರಾಹಿ ಪಂಜುರ್ಲಿ ದೈವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಏನೆಲ್ಲ ನಡೆಯಿತು ಎಂಬುದನ್ನು ದೈವಸ್ಥಾನದ ಗೌರವಾಧ್ಯಕ್ಷರಾದ ರವಿ ಪ್ರಸನ್ನ ಅವರು ವಿವರಿಸಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಬಂದು ರಿಷಬ್ ಶೆಟ್ಟಿ ಅವರು ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.
- Ashok
- Updated on: Apr 7, 2025
- 4:30 pm
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮೂರು ದಿನಗಳ ಕಾಲ ವಾರಾಹಿ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಕೊನೇ ದಿನ ರಿಷಬ್ ಶೆಟ್ಟಿ ಅವರು ಪತ್ನಿ ಮತ್ತು ಮಕ್ಕಳ ಜೊತೆ ಬಂದು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮುಂಜಾನೆವರೆಗೂ ಇದ್ದ ಅವರು ದೈವದ ಬಳಿ ಪ್ರಾರ್ಥನೆ ಮಾಡಿಕೊಂಡರು. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..
- Ashok
- Updated on: Apr 7, 2025
- 3:57 pm
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
Rishab Shetty: ರಿಷಬ್ ಶೆಟ್ಟಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಘೋಷಣೆ ಈಗಾಗಲೇ ಆಗಿದ್ದು, ಪೋಸ್ಟರ್ ಸಹ ಬಿಡುಗಡೆ ಆಗಿದೆ. ಇದೊಂದು ಹಿಂದಿ ಸಿನಿಮಾ ಆಗಿದ್ದು, ರಿಷಬ್ ಶೆಟ್ಟಿ ಸಹ ಉತ್ಸುಕರಾಗಿದ್ದಾರೆ. ಆದರೆ ರಿಷಬ್ ಶೆಟ್ಟಿ, ಶಿವಾಜಿ ಪಾತ್ರ ಮಾಡುವುದನ್ನು ಕೆಲ ಕನ್ನಡಪರ ಸಂಘಟನೆಗಳು ವಿರೋಧಿಸುತ್ತಿವೆ. ಇದೀಗ ವಾಟಾಳ್ ನಾಗರಾಜ್ ಮತ್ತೊಮ್ಮೆ ಈ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...
- Manjunatha C
- Updated on: Apr 3, 2025
- 5:42 pm
ಕಾಂತಾರ ತಂಡ ನಿಯಮ ಉಲ್ಲಂಘಿಸಿದ್ದರೆ ಶೂಟಿಂಗ್ ನಿರ್ಬಂಧ: ಅರಣ್ಯ ಸಚಿವ ಈಶ್ವರ ಖಂಡ್ರೆ
ದೊಡ್ಡ ಬಜೆಟ್ನಲ್ಲಿ ಮೂಡಿಬರುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಶೂಟಿಂಗ್ ನಡೆಯುತ್ತಿದೆ. ಚಿತ್ರೀಕರಣದ ಸಂದರ್ಭದಲ್ಲಿ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಆರೋಪ ಇದೆ. ಈ ಬಗ್ಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಪ್ರತಿಕ್ರಿಯಿಸಿದ್ದಾರೆ. ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
- Madan Kumar
- Updated on: Jan 20, 2025
- 5:48 pm
‘ಕಾಂತಾರ 2’ ಚಿತ್ರದ ಶೂಟ್ ವೇಳೆ ಅರಣ್ಯಕ್ಕೆ ಹಾನಿ? ಎಚ್ಚರಿಕೆ ಕೊಟ್ಟ ಗ್ರಾಮಸ್ಥರು
ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಆರೋಪದಿಂದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪರಿಸರ ಹಾನಿ ಹಾಗೂ ವನ್ಯಜೀವಿಗಳಿಗೆ ಉಂಟಾಗಬಹುದಾದ ಅಪಾಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
- Manjunath KB
- Updated on: Jan 21, 2025
- 7:55 am