AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty

Rishab Shetty

ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ

ಇನ್ನೂ ಹೆಚ್ಚು ಓದಿ

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ಮದುವೆಯ ಆಹ್​ವಾನ ತಲುಪಿದೆ.

ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ರಿಷಬ್ ಶೆಟ್ಟಿ, ಜಗ್ಗೇಶ್ ಮುಂತಾದವರು ಅದರಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು.

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮುಹೂರ್ತ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ರಾಮ ಹಾಗೂ ಹನುಮ ಭಕ್ತರು ಖುಷಿ ಪಡುತ್ತಾರೆ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆ.22) ಕರ್ನಾಟಕದಲ್ಲಿ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ‘ಜೈ ಹನುಮಾನ್’ ಚಿತ್ರತಂಡ ಆಗಮಿಸಿದೆ.

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ

ಕಾಂತಾರ ಯಶಸ್ಸಿನ ನಂತರ ರಿಷಬ್ ಶೆಟ್ಟಿ 'ಜೈ ಹನುಮಾನ್' ಚಿತ್ರದ ಮೂಲಕ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಪ್ರಶಾಂತ್ ವರ್ಮ ನಿರ್ದೇಶನದ, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದ ಈ ಚಿತ್ರದ ಮುಹೂರ್ತ ಫೆಬ್ರವರಿ 22 ರಂದು ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನೆರವೇರಲಿದೆ. ಹನುಮಂತನ ಜನ್ಮಸ್ಥಳವೆಂದು ನಂಬಲಾಗಿರುವ ಈ ಪವಿತ್ರ ಸ್ಥಳದಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ ನೋಡಿ.

‘ಕಾಂತಾರ’ ಮೂಲಕ ಭಾರಿ ಯಶಸ್ಸು ಪಡೆದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದರು. ಪತ್ನಿ, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ಸಂದರ್ಭದ ವಿಡಿಯೋವನ್ನು ಅವರು ಪೋಸ್ಟ್ ಮಾಡಿದ್ದಾರೆ.

ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ

ಥಿಯೇಟರ್, ಒಟಿಟಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಬ್ಬರಿಸಿದೆ. ‘ಜೀ ಕನ್ನಡ’ದಲ್ಲಿ ಪ್ರಸಾರವಾದ ಈ ಸಿನಿಮಾವನ್ನು ಟಿವಿ ಪ್ರೇಕ್ಷಕರು ದಾಖಲೆ ಪ್ರಮಾಣದಲ್ಲಿ ವೀಕ್ಷಿಸಿದ್ದಾರೆ. ನಗರ ಹಾಗೂ ಗ್ರಾಮೀಣ ಪ್ರದೇಶದಿಂದ ಒಟ್ಟು 11.56 ಟಿವಿಆರ್ ದಾಖಲಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ರಿಷಬ್ ಶೆಟ್ಟಿ ವಿವಾಹ ವಾರ್ಷಿಕೋತ್ಸವ: ಪತ್ನಿ ಪ್ರಗತಿ ಶೆಟ್ಟಿಗೆ ಹೊಗಳಿಕೆಯ ಸುರಿಮಳೆ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪತ್ನಿ ಪ್ರಗತಿ ಶೆಟ್ಟಿ ಅವರಿಗೆ ಇಂದು (ಫೆಬ್ರವರಿ 9) ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಆ ಪ್ರಯುಕ್ತ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪತ್ನಿಗೆ ಶುಭಾಶಯ ಕೋರಿದ್ದಾರೆ.

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ?

ರಿಷಬ್ ಶೆಟ್ಟಿ ನಟಿಸುವ, ನಿರ್ದೇಶಿಸುವ ಸಿನಿಮಾಗಳಿಗೆ ಹಣ ಹೂಡಿದರೆ ನಷ್ಟ ಆಗಲ್ಲ ಎಂಬುದು ಖಚಿತ ಆಗಿದೆ. ಆದ್ದರಿಂದ ಪರಭಾಷೆಯ ದೊಡ್ಡ ದೊಡ್ಡ ನಿರ್ಮಾಪಕರು ರಿಷಬ್ ಶೆಟ್ಟಿ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಹೊಸ ಸಿನಿಮಾಗೆ ರಿಷಬ್ ಶೆಟ್ಟಿ ಅವರು ಬರೋಬ್ಬರಿ 80 ಕೋಟಿ ರೂಪಾಯಿ ಸಂಬಳ ಕೇಳುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ.

ನಿಂತು ಹೋಗಿದ್ದ ಬಿಗ್ ಬಜೆಟ್ ಚಿತ್ರ ಕೈಗೆತ್ತಿಕೊಂಡ ರಿಷಬ್? ನಟನೆಯ ಜೊತೆಗೆ ನಿರ್ದೇಶನ

ಕಾಂತಾರ ಗೆಲುವಿನ ಬಳಿಕ ರಿಷಬ್ ಶೆಟ್ಟಿ ಅವರು ವಿಶ್ರಾಂತಿ ಪಡೆಯುತ್ತಿದ್ದು, ಈಗ ನಿಂತುಹೋಗಿದ್ದ ದೊಡ್ಡ ಬಜೆಟ್ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಎಂಬ ಸುದ್ದಿ ಇದೆ. ಎಂ.ಟಿ. ವಾಸುದೇವನ್ ನಾಯರ್ ಅವರ 'ರಂಡಮೂಳಂ' ಕಾದಂಬರಿ ಆಧರಿಸಿದ ಈ ಸಿನಿಮಾವನ್ನು ರಿಷಬ್ ಅವರೇ ನಿರ್ದೇಶಿಸಿ, ನಟಿಸಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವಾರು ಪ್ರಯತ್ನಗಳು ವಿಫಲವಾಗಿದ್ದ ಈ ಮಹತ್ವಾಕಾಂಕ್ಷಿ ಯೋಜನೆಗೆ ರಿಷಬ್ ಮರುಜೀವ ನೀಡಲಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ 'ಅತ್ಯುತ್ತಮ ಚಿತ್ರ' ವಿಭಾಗದಲ್ಲಿ ಸ್ಪರ್ಧಿಸುತ್ತಿದೆ. 850 ಕೋಟಿಗೂ ಹೆಚ್ಚು ಗಳಿಸಿ, ಒಟಿಟಿಯಲ್ಲೂ ಮೆಚ್ಚುಗೆ ಪಡೆದ ಈ ಚಿತ್ರ ಹಾಲಿವುಡ್ ಸಿನಿಮಾಗಳ ಜೊತೆ ಸ್ಪರ್ಧಿಸಲಿದೆ.

ಕುಟುಂಬದ ಜೊತೆ ಗೋವಾದಲ್ಲಿ ಸಮಯ ಕಳೆದ ರಿಷಬ್; ಖಾಸಗಿ ಯಾಚ್​​ನಲ್ಲಿ ಸುತ್ತಾಟ

ರಿಷಬ್ ಶೆಟ್ಟಿ ಅವರಿಗೆ ಈ ವರ್ಷ ಸಾಕಷ್ಟು ವಿಶೇಷವಾಗಿತ್ತು. ಸತತ ಮೂರು ವರ್ಷ ಶ್ರಮ ಹಾಕಿ ಮಾಡಿದ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಆ ಬಳಿಕ ಅವರು ಒಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಕುಟುಂಬದ ಜೊತೆ ಗೋವಾಗೆ ತೆರಳಿದ್ದಾರೆ.