AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty

Rishab Shetty

ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ

ಇನ್ನೂ ಹೆಚ್ಚು ಓದಿ

ರಿಷಬ್ ಶೆಟ್ಟಿ ನಟನೆಯ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರಕ್ಕೆ ‘ಗೇಮ್ ಆಫ್ ಥ್ರೋನ್ಸ್’ ಸಾಹಸ ನಿರ್ದೇಶಕ

ಬಹುನಿರೀಕ್ಷಿತ ‘ಛತ್ರಪತಿ ಶಿವಾಜಿ ಮಹಾರಾಜ್’ ಚಿತ್ರವು ಕನ್ನಡ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ನಟ ರಿಷಬ್ ಶೆಟ್ಟಿ ಅವರು ಶಿವಾಜಿ ಪಾತ್ರ ಮಾಡುತ್ತಿದ್ದು, ಹಾಲಿವುಡ್ ಮಟ್ಟದ ಆ್ಯಕ್ಷನ್ ಸೀಕ್ವೆನ್ಸ್‌ಗಳಲ್ಲಿ ಅವರು ಅಬ್ಬರಿಸಲಿದ್ದಾರೆ.

ಬ್ರಹ್ಮಕಲಶ: 1 ಮಿಲಿಯನ್ ಇನ್‌ಸ್ಟಾಗ್ರಾಮ್ ರೀಲ್ಸ್ ಮೈಲಿಗಲ್ಲು ತಲುಪಿದ ಮೊದಲ ಕನ್ನಡ ಹಾಡು

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಹಾಡುಗಳು ಮಾಡಿದ ದಾಖಲೆ ಸಣ್ಣದಲ್ಲ. ಅಜನೀಶ್ ಲೋಕನಾಥ್ ಸಂಗೀತದಲ್ಲಿ ಮೂಡಿಬಂದ ಹಾಡುಗಳು ಈಗಲೂ ಸದ್ದು ಮಾಡುತ್ತಿವೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಈಗಲೂ ‘ಬ್ರಹ್ಮಕಲಶ’ ಹಾಡು ಟ್ರೆಂಡಿಂಗ್​ನಲ್ಲಿದೆ. 10 ಲಕ್ಷಕ್ಕೂ ಅಧಿಕ ರೀಲ್ಸ್ ಮೂಲಕ ಈ ಹಾಡು ದಾಖಲೆ ಬರೆದಿದೆ.

‘ರಿಷಬ್ ಶೆಟ್ಟಿ ಫೌಂಡೇಷನ್’ ಮೂಲಕ ಬಡ ಮಕ್ಕಳ ಸಹಾಯಕ್ಕೆ ನಿಂತ ಡಿವೈನ್ ಸ್ಟಾರ್

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ತಮ್ಮ ‘ರಿಷಬ್ ಶೆಟ್ಟಿ ಫೌಂಡೇಷನ್’ ಮೂಲಕ ಸದ್ದಿಲ್ಲದೆ ಸಮಾಜಸೇವೆ ಮಾಡುತ್ತಿದ್ದಾರೆ. ಬಡ ಮತ್ತು ಅಶಕ್ತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವ ಹಾಗೂ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಅವರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗಳಿಸಿದ್ದರಲ್ಲಿ ಸಮಾಜಕ್ಕೆ ಮರಳಿ ನೀಡುವ ಮೂಲಕ ಅವರು ರಿಯಲ್ ಸ್ಟಾರ್ ಎನಿಸಿಕೊಂಡಿದ್ದಾರೆ.

ಬಿಗ್ ಅಪ್​ಡೇಟ್​; ‘ಕಾಂತಾರ: ಚಾಪ್ಟರ್ 2’ ಸ್ಕ್ರಿಪ್ಟ್ ಆರಂಭಿಸಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ 'ಕಾಂತಾರ ಚಾಪ್ಟರ್ 2' ಸ್ಕ್ರಿಪ್ಟ್ ಕೆಲಸ ಆರಂಭಿಸಿರುವುದಾಗಿ ಘೋಷಿಸಿದ್ದಾರೆ. ಫ್ರಾಂಚೈಸಿಯ ಮೂರನೇ ಭಾಗವಾಗಿರುವ ಈ ಚಿತ್ರದಲ್ಲಿ ಬುಡಕಟ್ಟು ಮತ್ತು ರಾಜಮನೆತನದ ನಡುವಿನ ಮುಂದಿನ ತಲೆಮಾರಿನ ದೈವಿಕ ಸಂಘರ್ಷವನ್ನು ಅನಾವರಣಗೊಳಿಸಲಾಗುತ್ತದೆ. ನಿರ್ದೇಶನದ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ರಿಷಬ್, 'ಕಾಂತಾರ: ಚಾಪ್ಟರ್ 1' ಯಶಸ್ಸಿನ ಬಳಿಕ ಮತ್ತೊಂದು ರೋಚಕ ಕಥೆಗೆ ಸಜ್ಜಾಗಿದ್ದಾರೆ.

ಅಂದು ಸಣ್ಣ ಪಾತ್ರ, ಇಂದು ಸೂಪರ್​ ಸ್ಟಾರ್; ರಿಷಬ್ ಶೆಟ್ಟಿ ಬದುಕು ಬದಲಿಸಿದ ಸಿನಿಮಾ

Rishab Shetty Birthday: ಇಂದು 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅವರ ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ 13 ವರ್ಷಗಳ ಹಿಂದೆ ತೆರೆಕಂಡಿದ್ದ 'ಲೂಸಿಯಾ' ಚಿತ್ರದಲ್ಲಿ ಅವರು ನಿರ್ವಹಿಸಿದ್ದ ಸಣ್ಣ ಪೊಲೀಸ್ ಪಾತ್ರದ ಹಳೆಯ ವಿಡಿಯೋ ಭಾರಿ ವೈರಲ್ ಆಗಿದೆ. ಸಣ್ಣ ಪುಟ್ಟ ಪಾತ್ರಗಳಿಂದ ಚಿತ್ರರಂಗದ ಜರ್ನಿ ಆರಂಭಿಸಿ, ಇಂದು ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ 'ಕಾಂತಾರ: ಚಾಪ್ಟರ್ 1' ಮೂಲಕ ವಿಶ್ವಮಟ್ಟದಲ್ಲಿ ಯಶಸ್ಸಿನ ಶಿಖರ ಏರಿ ನಿಂತಿರುವ ರಿಷಬ್ ಶೆಟ್ಟಿ ಅವರ ಈ ಕಠಿಣ ಪರಿಶ್ರಮ ಮತ್ತು ಸ್ಪೂರ್ತಿದಾಯಕ ಯಶಸ್ಸಿನ ಪಯಣ ಇಂದಿನ ತಲೆಮಾರಿಗೆ ಮಾದರಿಯಾಗಿದೆ.

ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಪ್ರವಾಸೋದ್ಯಮ ನೀತಿ ಬಗ್ಗೆ ಸಮಾಲೋಚನೆ

ಪ್ಯಾನ್ ಇಂಡಿಯಾ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು (ಜುಲೈ 5) ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಸಮಾಲೋಚನೆ ನಡೆಸಿದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರದ ಕರಾವಳಿ ಹಾಗೂ ಮಲೆನಾಡು ಪ್ರವಾಸೋದ್ಯಮದ ಅಧಿಕೃತ ಪ್ರಚಾರ ರಾಯಭಾರಿಯಾಗಿ ಅವರು ನೇಮಕಗೊಂಡಿದ್ದರು.

ಛತ್ರಪತಿ ಶಿವಾಜಿ ಮಹಾರಾಜ್: ರಿಷಬ್ ಶೆಟ್ಟಿ ನಟನೆಯ 2 ಪಾರ್ಟ್ ಸಿನಿಮಾಗೆ 500 ಕೋಟಿ ಬಜೆಟ್

ಖ್ಯಾತ ನಟ ರಿಷಬ್ ಶೆಟ್ಟಿ ಅವರು ಅಭಿನಯಿಸುತ್ತಿರುವ ‘ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾವನ್ನು ಎರಡು ಭಾಗದಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಹೊಸ ಪ್ಲಾನ್ ಪ್ರಕಾರ, ಮೊದಲ ಭಾಗ 2028ರಲ್ಲಿ ತೆರೆಕಾಣಲಿದೆ. ಎರಡನೇ ಭಾಗ 2029ರಲ್ಲಿ ಬಿಡುಗಡೆಯಾಗಲಿದೆ. ಹಿಂದಿ, ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ಈ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್

ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಗೆಳೆಯ ರಿಷಬ್ ಶೆಟ್ಟಿ ಮಾಡಿದ ವಿಭಿನ್ನ ವಿಶ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರ ನಡುವೆ ಮನಸ್ತಾಪದ ವದಂತಿಗಳಿಗೆ ರಿಷಬ್ ಪೋಸ್ಟ್ ಪೂರ್ಣವಿರಾಮ ಇಟ್ಟಿದೆ. ಅಲ್ಲದೆ, ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಪ್‌ಡೇಟ್ ಬಗ್ಗೆಯೂ ಸುಳಿವು ನೀಡಿದ್ದಾರೆ.

ಟಿವಿಕೆ ಜಯಭೇರಿ: ದಳಪತಿ ವಿಜಯ್ ಗೆಲುವಿಗೆ ರಿಷಬ್ ಶೆಟ್ಟಿ ಅಭಿನಂದನೆ

ಖ್ಯಾತ ನಟ ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗುವ ಸಮಯ ಬಂದಿದೆ. ಅವರ ಈ ಸಾಧನೆಗಾಗಿ ಅನೇಕ ಸೆಲೆಬ್ರಿಟಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕನ್ನಡದ ಸ್ಟಾರ್ ನಟರಾದ ಶಿವರಾಜ್​ಕುಮಾರ್, ರಿಷಬ್ ಶೆಟ್ಟಿ ಕೂಡ ಅಭಿನಂದನೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ..

ಸದ್ದಿಲ್ಲದೆ ತೆಲುಗಿನಲ್ಲಿ ರಿಲೀಸ್ ಆಗೋಕೆ ರೆಡಿ ಆಯ್ತು ರಿಷಬ್ ಶೆಟ್ಟಿ ಸಿನಿಮಾ

'ಕಾಂತಾರ' ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ ಅವರ 'ಹರಿಕಥೆ ಅಲ್ಲ ಗಿರಿಕಥೆ' ಸಿನಿಮಾ ತೆಲುಗಿಗೆ ಡಬ್ ಆಗಿ ಬಿಡುಗಡೆಯಾಗುತ್ತಿದೆ. 'ಎ ಫಿಲ್ಮ್ ಬೈ ಗಿರಿ' ಹೆಸರಿನಲ್ಲಿ ಮೇ 8ರಂದು ಆಂಧ್ರ, ತೆಲಂಗಾಣದಲ್ಲಿ ತೆರೆಗೆ ಬರಲಿದೆ. 'ಕಾಂತಾರ'ಕ್ಕೂ ಮುನ್ನ ತೆರೆಕಂಡಿದ್ದ ಈ ಚಿತ್ರವನ್ನು ಈಗ ಬಿಡುಗಡೆ ಮಾಡಲು ರಿಷಬ್ ಅವರ ಜನಪ್ರಿಯತೆಯೇ ಕಾರಣ ಎನ್ನಲಾಗುತ್ತಿದೆ. ಈ ನಿರ್ಧಾರ ಹಲವರಲ್ಲಿ ಕುತೂಹಲ ಮೂಡಿಸಿದೆ.

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..

‘ಜೈ ಹನುಮಾನ್’ ಸಿನಿಮಾ ಶೂಟ್ ಆರಂಭಕ್ಕೂ ಮೊದಲೇ ಮಹತ್ವದ ಬದಲಾವಣೆ

ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ 'ಜೈ ಹನುಮಾನ್' ಸಿನಿಮಾದಲ್ಲಿ ಹನುಮಾನ್ ಪಾತ್ರ ಮಾಡುತ್ತಿದ್ದಾರೆ. ಫೆಬ್ರವರಿಯಲ್ಲಿ ಮುಹೂರ್ತ ಕಂಡ ಈ ಚಿತ್ರದಲ್ಲಿ ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನಿಮಿಷ್ ರವಿ ಬದಲಿಗೆ ಎಸ್ ತಿರುನವುಕ್ಕರಸು ಛಾಯಾಗ್ರಾಹಕರಾಗಿ ಸೇರ್ಪಡೆಯಾಗಿದ್ದಾರೆ.

‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ