AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty

Rishab Shetty

ರಿಷಬ್ ಶೆಟ್ಟಿ ಕನ್ನಡದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ. ಕನ್ನಡ ಸಿನಿಮಾಗಳನ್ನು ಮಾಡಿ ಫೇಮಸ್ ಆಗಿದ್ದಾರೆ. ಮೊದಲು ಅವರು ನಟನಾಗಿ ಫೇಮಸ್ ಆದರು. ಆ ಬಳಿಕ ‘ರಿಕ್ಕಿ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದರು. ‘ಕಿರಿಕ್ ಪಾರ್ಟಿ’ (2016) ಅವರಿಗೆ ಜನಪ್ರಿಯತೆ ನೀಡಿತು. ನಂತರ ನಿರ್ದೇಶನದಲ್ಲಿ ಹೆಚ್ಚು ತೊಡಗಿಕೊಂಡರು. ನಟನಾಗಿಯೂ ಗಮನ ಸೆಳೆದರು. ‘ಕಾಂತಾರ’ (2022) ಚಿತ್ರದಿಂದ ಅವರು ಅಪಾರ ಮನ್ನಣೆ ಪಡೆದರು. ಇದರಿಂದ ಪ್ಯಾನ್ ಇಂಡಿಯಾ ಹೀರೋ ಆದರು. ಈ ಸಿನಿಮಾ ವಿಮರ್ಶಾತ್ಮಕ ಮೆಚ್ಚುಗೆಯನ್ನು ಗಳಿಸುವುದರೊಂದಿಗೆ ಭಾರಿ ಯಶಸ್ಸನ್ನು ಗಳಿಸಿತು. ವಿಶಿಷ್ಟವಾದ ಪ್ರಾದೇಶಿಕ ನಿರೂಪಣೆಗಳೊಂದಿಗೆ ಸಿನಿಮಾ ಗೆದ್ದಿತ್ತು. ಅವರ ಸಿನಿಮಾದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಜಾನಪದ ಅಂಶವನ್ನು ತಮ್ಮ ಸಿನಿಮಾದಲ್ಲಿ ತರುತ್ತಾರೆ. ಅವರು ಪ್ರಗತಿ ಶೆಟ್ಟಿಯನ್ನು ಮದುವೆ ಆಗಿದ್ದಾರೆ

ಇನ್ನೂ ಹೆಚ್ಚು ಓದಿ

ರಾಜ್ ಬಿ. ಶೆಟ್ಟಿಗೆ ಕೇಳಿ ರಿಷಬ್ ಶೆಟ್ಟಿ ಫೋನ್ ನಂಬರ್ ತಗೊಂಡೆ: ಟೊವಿನೋ ಥಾಮಸ್

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ಟೊವಿನೋ ಥಾಮಸ್ ಅವರು ಬೆಂಗಳೂರಿಗೆ ಬಂದಿದ್ದಾರೆ. ತಮ್ಮ ಮುಂದಿನ ಸಿನಿಮಾದ ಪ್ರಚಾರದ ಸಲುವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಟಿವಿ9 ಜೊತೆ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ತಮಗೆ ಇರುವ ನಂಟಿನ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ..

‘ಜೈ ಹನುಮಾನ್’ ಸಿನಿಮಾ ಶೂಟ್ ಆರಂಭಕ್ಕೂ ಮೊದಲೇ ಮಹತ್ವದ ಬದಲಾವಣೆ

ಕಾಂತಾರ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ 'ಜೈ ಹನುಮಾನ್' ಸಿನಿಮಾದಲ್ಲಿ ಹನುಮಾನ್ ಪಾತ್ರ ಮಾಡುತ್ತಿದ್ದಾರೆ. ಫೆಬ್ರವರಿಯಲ್ಲಿ ಮುಹೂರ್ತ ಕಂಡ ಈ ಚಿತ್ರದಲ್ಲಿ ಆಸ್ಕರ್ ವಿಜೇತ ಎಂಎಂ ಕೀರವಾಣಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನಿಮಿಷ್ ರವಿ ಬದಲಿಗೆ ಎಸ್ ತಿರುನವುಕ್ಕರಸು ಛಾಯಾಗ್ರಾಹಕರಾಗಿ ಸೇರ್ಪಡೆಯಾಗಿದ್ದಾರೆ.

ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯ ಮಗಳು ರಾಧ್ಯಾ ಬರ್ತ್​ಡೇ ವಿಡಿಯೋ ನೋಡಿ..

ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಂಪತಿಯ ಪುತ್ರಿ ರಾಧ್ಯಾ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಸಿನಿಮಾ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಮಗಳ ಹುಟ್ಟುಹಬ್ಬವನ್ನು ಆಚರಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ..

ಕೆರಾಡಿ ಫಿಲ್ಮ್​​ಸಿಟಿ ನಿರ್ಮಿಸಿದ ರಿಷಬ್ ಶೆಟ್ಟಿ; ಸಾಧ್ಯವಾಗಿದ್ದು ಹೇಗೆ?

ರಿಷಬ್ ಶೆಟ್ಟಿ ಅವರು ಕುಂದಾಪುರದ ಕೆರಾಡಿಯಲ್ಲಿ ‘ಕಾಂತಾರ 2’ ಚಿತ್ರಕ್ಕಾಗಿ ಭವ್ಯ ಸೆಟ್ ನಿರ್ಮಿಸಿ, ಅದನ್ನು ಇದೀಗ ಫಿಲ್ಮ್ ಸಿಟಿಯಾಗಿ ಪರಿವರ್ತಿಸಿದ್ದಾರೆ. ಈ ಸಾಧನೆಯಿಂದ ಕರಾವಳಿ ಭಾಗದಲ್ಲಿ ಚಿತ್ರೀಕರಣಕ್ಕೆ ಹೊಸ ಆಯಾಮ ಸಿಕ್ಕಿದೆ. ‘ಕಾಂತಾರ’ ಯಶಸ್ಸಿನ ನಂತರ ಕರಾವಳಿಯ ಸಂಸ್ಕೃತಿ ಮತ್ತು ಸೌಂದರ್ಯವನ್ನು ಬೆಳ್ಳಿತೆರೆಯಲ್ಲಿ ಸೆರೆಹಿಡಿಯಲು ಇದೊಂದು ದೊಡ್ಡ ಹೆಜ್ಜೆಯಾಗಿದೆ.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ರಿಷಬ್ ಶೆಟ್ಟಿ, ಆಶಿಕಾ ರಂಗನಾಥ್ ಮುಂತಾದವರು ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡರು. 25ಕ್ಕೂ ಹೆಚ್ಚು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಈ ಬಾರಿ ಯಾರಿಗೆಲ್ಲ ಪ್ರಶಸ್ತಿ ಸಿಕ್ಕಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ..

ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಗ್ಗೆ ರಣವೀರ್ ಸಿಂಗ್ ನೀಡಿದ ಹೇಳಿಕೆಯಿಂದ ವಿವಾದ ಆಗಿತ್ತು. ಆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಟನಿಗೆ ನೈಜ ಪಶ್ಚಾತ್ತಾಪ ಇರಬೇಕು ಎಂದು ಪಟ್ಟು ಹಿಡಿಯಲಾಗಿದೆ. ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 10ಕ್ಕೆ ಮುಂದೂಡಲಾಗಿದೆ. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

ಹೊಂಬಾಳೆ ಅನ್​​ಫಾಲೋ ಮಾಡಿದ ರಿಷಬ್; ತಮ್ಮದೇ ಬ್ಯಾನರ್​ ಅಲ್ಲಿ ‘ಚಾಪ್ಟರ್ 2’ ಘೋಷಣೆ

ರಿಷಬ್ ಶೆಟ್ಟಿ ಅವರು ಹೊಂಬಾಳೆ ಫಿಲ್ಮ್ಸ್ ಅನ್ನು ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿ, ತಮ್ಮದೇ ಬ್ಯಾನರ್ ಅಡಿಯಲ್ಲಿ "ಚಾಪ್ಟರ್ 2" ಘೋಷಿಸಿದ್ದಾರೆ. ಇದು "ಕಾಂತಾರ ಚಾಪ್ಟರ್ 2" ಅಥವಾ ಬೇರೆ ಚಿತ್ರವೇ ಎಂಬ ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯು ರಿಷಬ್ ಮತ್ತು ಹೊಂಬಾಳೆ ನಡುವಿನ ಸಂಬಂಧದ ಬಗ್ಗೆ ಹಲವು ಪ್ರಶ್ನೆಗಳನ್ನು ಸೃಷ್ಟಿಸಿದೆ.

ದೈವಕ್ಕೆ ಅವಮಾನ ಮಾಡಿದ ಕೇಸ್: ಮಾರ್ಚ್ 9ರ ತನಕ ರಣವೀರ್ ಸಿಂಗ್ ನಿರಾಳ

ಗೋವಾ ಚಲನಚಿತ್ರೋತ್ಸವದ ವೇದಿಕೆಯಲ್ಲಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ ಅವರು ದೈವದ ಅನುಕರಣೆ ಮಾಡಿದ್ದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಹೊಗಳುವ ಭರದಲ್ಲಿ ರಣವೀರ್ ಸಿಂಗ್ ಆ ರೀತಿ ಮಾಡಿದ್ದರು. ಅದರಿಂದಾಗಿ ವಿವಾದ ಸೃಷ್ಟಿ ಆಯಿತು.

ಶೆಟ್ಟಿ ಗ್ಯಾಂಗ್ ಬಿಟ್ಟು ಕನ್ನಡದ ಕೆಲವರಿಗೆ ಮಾತ್ರ ಮದುವೆ ಆಹ್ವಾನ ನೀಡಿದ ರಶ್ಮಿಕಾ

ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್​ ಅನ್ನು ಅವರು ಮರೆತಿದ್ದಾರೆ. ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ಮದುವೆಯ ಆಹ್​ವಾನ ತಲುಪಿದೆ.

ರಾಯರಲ್ಲಿ ತಾಯಿ ಹರಕೆ; ರಿಷಬ್ ಶೆಟ್ಟಿ ಜನಿಸಿದ್ದೇ ಗುರುವಾರ: ಅಚ್ಚರಿಯ ವಿಷಯ ತಿಳಿಸಿದ ನಟ

ಮಂತ್ರಾಲಯದಲ್ಲಿ ರಾಯರ ಗುರುವೈಭವೋತ್ಸವ ಕಾರ್ಯಕ್ರಮ ನಡೆದಿದೆ. ರಿಷಬ್ ಶೆಟ್ಟಿ, ಜಗ್ಗೇಶ್ ಮುಂತಾದವರು ಅದರಲ್ಲಿ ಭಾಗಿ ಆಗಿದ್ದಾರೆ. ಈ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ರಾಯರಲ್ಲಿ ತಾಯಿ ಹರಕೆ ಕಟ್ಟಿಕೊಂಡಿದ್ದರಿಂದ ತಾವು ಗುರುವಾರವೇ ಜನಿಸಿದ್ದು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು.

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ಹೆಮ್ಮೆಯಿಂದ ಹೇಳಿದ ರಿಷಬ್

ರಿಷಬ್ ಶೆಟ್ಟಿ ಅವರು ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಮುಹೂರ್ತ ಹಂಪಿಯ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಈ ಸಿನಿಮಾ ಬಗ್ಗೆ ರಾಮ ಹಾಗೂ ಹನುಮ ಭಕ್ತರು ಖುಷಿ ಪಡುತ್ತಾರೆ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.

‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ‘ಜೈ ಹನುಮಾನ್’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾಗೆ ತೆಲುಗಿನ ಪ್ರಶಾಂತ್ ವರ್ಮಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು (ಫೆ.22) ಕರ್ನಾಟಕದಲ್ಲಿ ಈ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ‘ಜೈ ಹನುಮಾನ್’ ಚಿತ್ರತಂಡ ಆಗಮಿಸಿದೆ.